Homeಮುಖಪುಟಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

ಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

'ಗೋಡ್ಸೆ ಜ್ಞಾನ ಶಾಲೆ'ಯನ್ನು ದೌಲತ್ ಗಂಜ್‌ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಉದ್ಘಾಟಿಸಲಾಗಿದ್ದು, ಇಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯನ್ನು ಗೋಡ್ಸೆ ಹೇಗೆ ರೂಪಿಸಿದರು ಎನ್ನುವ ವಿವರ, ಅವರ ಲೇಖನಗಳು ಮತ್ತು ಅವರ ಭಾಷಣಗಳ ಕುರಿತ ಸಾಹಿತ್ಯವಿದೆ

- Advertisement -
- Advertisement -

ಅಖಿಲ ಭಾರತೀಯ ಹಿಂದೂ ಮಹಾಸಭಾ, ಮಹಾತ್ಮಾ ಗಾಂಧಿಯ ಹಂತಕ ನಾಥೂರಾಂ ಗೋಡ್ಸೆಯ ಹೆಸರಿನಲ್ಲಿ ಗ್ರಂಥಾಲಯವೊಂದನ್ನು ತೆರೆದಿದ್ದು, ಇದನ್ನು ಗೋಡ್ಸೆಯ ಜೀವನ ಮತ್ತು ಸಿದ್ಧಾಂತಕ್ಕೆ ಮೀಸಲಾಗಿರಿಸಿದೆ.

‘ವಿಶ್ವ ಹಿಂದಿ ದಿವಸ್’ ದಿನದ ಅಂಗವಾಗಿ ಗ್ವಾಲಿಯರ್‌ನಲ್ಲಿ ಈ ಗ್ರಂಥಾಲಯವನ್ನು ತೆರೆಯಲಾಗಿದ್ದು, ಗೋಡ್ಸೆ ಜ್ಞಾನ ಶಾಲೆ ಎಂದು ಹೆಸರಿಡಲಾಗಿದೆ.

‘ಗೋಡ್ಸೆ ಜ್ಞಾನ ಶಾಲೆ’ಯನ್ನು ದೌಲತ್ ಗಂಜ್‌ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಉದ್ಘಾಟಿಸಲಾಗಿದ್ದು, ಇಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯನ್ನು ಗೋಡ್ಸೆ ಹೇಗೆ ರೂಪಿಸಿದರು ಎನ್ನುವ ವಿವರ, ಅವರ ಲೇಖನಗಳು ಮತ್ತು ಅವರ ಭಾಷಣಗಳ ಕುರಿತ ಸಾಹಿತ್ಯವಿದೆ.

ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಮಹಾಸಭಾದ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ಮಾತನಾಡಿ, “ಗೋಡ್ಸೆ ಎಂಬ ನಿಜವಾದ ರಾಷ್ಟ್ರೀಯತಾವಾದಿಯನ್ನು ಜಗತ್ತಿಗೆ ಪರಿಚಯಿಸಲು ಈ ಗ್ರಂಥಾಲಯವನ್ನು ತೆರೆಯಲಾಗಿದೆ. ಅವಿಭಜಿತ ಭಾರತಕ್ಕಾಗಿ ಅವರು ಹೋರಾಡಿ ಸತ್ತರು. ಗೋಡ್ಸೆಯ ನಿಜವಾದ ರಾಷ್ಟ್ರೀಯತೆಯನ್ನು ಇಂದಿನ ಅಜ್ಞಾನಿ ಯುವಕರಲ್ಲಿ ಹುಟ್ಟುಹಾಕುವುದು ಗ್ರಂಥಾಲಯದ ಉದ್ದೇಶ” ಎಂದು ಹೇಳಿದರು.

“ಜವಾಹರಲಾಲ್ ನೆಹರು ಮತ್ತು ಮೊಹಮ್ಮದ್ ಅಲಿ ಜಿನ್ನಾ ಅವರ ಆಕಾಂಕ್ಷೆಗಳನ್ನು ಈಡೇರಿಸಲು ಭಾರತವನ್ನು ವಿಭಜಿಸಲಾಗಿದೆ. ಇಬ್ಬರೂ ರಾಷ್ಟ್ರವನ್ನು ಆಳಲು ಬಯಸಿದ್ದರು, ಆದರೆ ಗೋಡ್ಸೆ ಅದನ್ನು ವಿರೋಧಿಸಿದರು” ಎಂದು ಭಾರದ್ವಾಜ್ ಹೇಳಿದರು.

ಇದನ್ನೂ ಓದಿ: ಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್

“ಗಾಂಧಿಯ ಹತ್ಯೆ ಮಾಡಲು ಇಲ್ಲಿ ಸಂಚು ರೂಪಿಸಲಾಗಿದ್ದರಿಂದ ಗ್ವಾಲಿಯರ್‌ನಲ್ಲಿ ಗೋಡ್ಸೆಗೆ ಮೀಸಲಾಗಿರುವ ಗ್ರಂಥಾಲಯದ ನಿರ್ಮಿಸಲು ನಿರ್ಧರಿಸಲಾಗಿದೆ. ಅಲ್ಲಿ ಪಿಸ್ತೂಲ್ ಸಹ ಖರೀದಿಸಿಡಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮಾಜಿ ಮುಖ್ಯಂತ್ರಿ ಕಮಲನಾಥ್, “ಬಿಜೆಪಿಯು ಗಾಂಧಿ ಸಿದ್ಧಾಂತದೊಂದಿಗಿದೆಯೋ ಅಥವಾ ಗೋಡ್ಸೆ ಸಿದ್ಧಾಂತದೊಂದೊಗಿದೆಯೋ ಎಂಬುದನ್ನು ಸ್ಪಷ್ಟಪಡಿಸಬೇಕು. ಗಾಂಧಿಯ ಹಂತಕರನ್ನು ಬಹಿರಂಗವಾಗಿ ಪೂಜಿಸಲಾಗುತ್ತಿದೆ. ವೀರರೆಂಬಂತೆ ಬಡ್ತಿ ನೀಡಲಾಗುತ್ತಿದೆ. ಆದರೆ ಬಿಜೆಪಿ ಸರ್ಕಾರ ಜಾಣ ಮೌನಕ್ಕೆ ಜಾರಿದೆ. ಇದು ನಾಚಿಕೆಗೇಡಿನ ವಿಷಯ. ಬಿಜೆಪಿ ಗಾಂಧಿಯ ಸಿದ್ಧಾಂತದೊಟ್ಟಿಗಿದ್ದರೆ, ಈ ಕೂಡಲೇ ಹಿಂದೂ ಮಹಾಸಭಾದ ಈ ಕೃತ್ಯವನ್ನು ತಡೆಗಟ್ಟಬೇಕು. ಇಲ್ಲದಿದ್ದರೆ ಬಿಜೆಪಿಯು ಗೋಡ್ಸೆ ಮತ್ತು ಅವನ ಸಿದ್ಧಾಂತವನ್ನು ಮುಕ್ತವಾಗಿ ರಕ್ಷಿಸುತ್ತಿದೆ ಎಂದು ಒಪ್ಪಿಕೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಮಹಾಸಭಾದ ಗ್ವಾಲಿಯರ್ ಕಚೇರಿಯಲ್ಲಿ ಗೋಡ್ಸೆಗೆ ದೇವಾಲಯವನ್ನು ಸ್ಥಾಪಿಸಲಾಗಿತ್ತು. ಕಾಂಗ್ರೆಸ್ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ ನಂತರ ಇದನ್ನು ತೆಗೆದುಹಾಕಲಾಗಿತ್ತು.


ಇದನ್ನೂ ಓದಿ: ಗೋಡ್ಸೆ ಮತ್ತು ಮೋದಿಯವರು ಒಂದೇ ಸಿದ್ಧಾಂತವನ್ನು ನಂಬುತ್ತಾರೆ : ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗಾಂಧಿ ಹಂತಕನನ್ನು ಅವರು ಅಂತ ಏಕೆ ಬರೆಯುವಿರಿ ಅವನು ಅಂತ ಬರೆಯಬೇಕು

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...