Homeಮುಖಪುಟಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

ಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

'ಗೋಡ್ಸೆ ಜ್ಞಾನ ಶಾಲೆ'ಯನ್ನು ದೌಲತ್ ಗಂಜ್‌ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಉದ್ಘಾಟಿಸಲಾಗಿದ್ದು, ಇಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯನ್ನು ಗೋಡ್ಸೆ ಹೇಗೆ ರೂಪಿಸಿದರು ಎನ್ನುವ ವಿವರ, ಅವರ ಲೇಖನಗಳು ಮತ್ತು ಅವರ ಭಾಷಣಗಳ ಕುರಿತ ಸಾಹಿತ್ಯವಿದೆ

- Advertisement -
- Advertisement -

ಅಖಿಲ ಭಾರತೀಯ ಹಿಂದೂ ಮಹಾಸಭಾ, ಮಹಾತ್ಮಾ ಗಾಂಧಿಯ ಹಂತಕ ನಾಥೂರಾಂ ಗೋಡ್ಸೆಯ ಹೆಸರಿನಲ್ಲಿ ಗ್ರಂಥಾಲಯವೊಂದನ್ನು ತೆರೆದಿದ್ದು, ಇದನ್ನು ಗೋಡ್ಸೆಯ ಜೀವನ ಮತ್ತು ಸಿದ್ಧಾಂತಕ್ಕೆ ಮೀಸಲಾಗಿರಿಸಿದೆ.

‘ವಿಶ್ವ ಹಿಂದಿ ದಿವಸ್’ ದಿನದ ಅಂಗವಾಗಿ ಗ್ವಾಲಿಯರ್‌ನಲ್ಲಿ ಈ ಗ್ರಂಥಾಲಯವನ್ನು ತೆರೆಯಲಾಗಿದ್ದು, ಗೋಡ್ಸೆ ಜ್ಞಾನ ಶಾಲೆ ಎಂದು ಹೆಸರಿಡಲಾಗಿದೆ.

‘ಗೋಡ್ಸೆ ಜ್ಞಾನ ಶಾಲೆ’ಯನ್ನು ದೌಲತ್ ಗಂಜ್‌ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಉದ್ಘಾಟಿಸಲಾಗಿದ್ದು, ಇಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯನ್ನು ಗೋಡ್ಸೆ ಹೇಗೆ ರೂಪಿಸಿದರು ಎನ್ನುವ ವಿವರ, ಅವರ ಲೇಖನಗಳು ಮತ್ತು ಅವರ ಭಾಷಣಗಳ ಕುರಿತ ಸಾಹಿತ್ಯವಿದೆ.

ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಮಹಾಸಭಾದ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ಮಾತನಾಡಿ, “ಗೋಡ್ಸೆ ಎಂಬ ನಿಜವಾದ ರಾಷ್ಟ್ರೀಯತಾವಾದಿಯನ್ನು ಜಗತ್ತಿಗೆ ಪರಿಚಯಿಸಲು ಈ ಗ್ರಂಥಾಲಯವನ್ನು ತೆರೆಯಲಾಗಿದೆ. ಅವಿಭಜಿತ ಭಾರತಕ್ಕಾಗಿ ಅವರು ಹೋರಾಡಿ ಸತ್ತರು. ಗೋಡ್ಸೆಯ ನಿಜವಾದ ರಾಷ್ಟ್ರೀಯತೆಯನ್ನು ಇಂದಿನ ಅಜ್ಞಾನಿ ಯುವಕರಲ್ಲಿ ಹುಟ್ಟುಹಾಕುವುದು ಗ್ರಂಥಾಲಯದ ಉದ್ದೇಶ” ಎಂದು ಹೇಳಿದರು.

“ಜವಾಹರಲಾಲ್ ನೆಹರು ಮತ್ತು ಮೊಹಮ್ಮದ್ ಅಲಿ ಜಿನ್ನಾ ಅವರ ಆಕಾಂಕ್ಷೆಗಳನ್ನು ಈಡೇರಿಸಲು ಭಾರತವನ್ನು ವಿಭಜಿಸಲಾಗಿದೆ. ಇಬ್ಬರೂ ರಾಷ್ಟ್ರವನ್ನು ಆಳಲು ಬಯಸಿದ್ದರು, ಆದರೆ ಗೋಡ್ಸೆ ಅದನ್ನು ವಿರೋಧಿಸಿದರು” ಎಂದು ಭಾರದ್ವಾಜ್ ಹೇಳಿದರು.

ಇದನ್ನೂ ಓದಿ: ಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್

“ಗಾಂಧಿಯ ಹತ್ಯೆ ಮಾಡಲು ಇಲ್ಲಿ ಸಂಚು ರೂಪಿಸಲಾಗಿದ್ದರಿಂದ ಗ್ವಾಲಿಯರ್‌ನಲ್ಲಿ ಗೋಡ್ಸೆಗೆ ಮೀಸಲಾಗಿರುವ ಗ್ರಂಥಾಲಯದ ನಿರ್ಮಿಸಲು ನಿರ್ಧರಿಸಲಾಗಿದೆ. ಅಲ್ಲಿ ಪಿಸ್ತೂಲ್ ಸಹ ಖರೀದಿಸಿಡಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮಾಜಿ ಮುಖ್ಯಂತ್ರಿ ಕಮಲನಾಥ್, “ಬಿಜೆಪಿಯು ಗಾಂಧಿ ಸಿದ್ಧಾಂತದೊಂದಿಗಿದೆಯೋ ಅಥವಾ ಗೋಡ್ಸೆ ಸಿದ್ಧಾಂತದೊಂದೊಗಿದೆಯೋ ಎಂಬುದನ್ನು ಸ್ಪಷ್ಟಪಡಿಸಬೇಕು. ಗಾಂಧಿಯ ಹಂತಕರನ್ನು ಬಹಿರಂಗವಾಗಿ ಪೂಜಿಸಲಾಗುತ್ತಿದೆ. ವೀರರೆಂಬಂತೆ ಬಡ್ತಿ ನೀಡಲಾಗುತ್ತಿದೆ. ಆದರೆ ಬಿಜೆಪಿ ಸರ್ಕಾರ ಜಾಣ ಮೌನಕ್ಕೆ ಜಾರಿದೆ. ಇದು ನಾಚಿಕೆಗೇಡಿನ ವಿಷಯ. ಬಿಜೆಪಿ ಗಾಂಧಿಯ ಸಿದ್ಧಾಂತದೊಟ್ಟಿಗಿದ್ದರೆ, ಈ ಕೂಡಲೇ ಹಿಂದೂ ಮಹಾಸಭಾದ ಈ ಕೃತ್ಯವನ್ನು ತಡೆಗಟ್ಟಬೇಕು. ಇಲ್ಲದಿದ್ದರೆ ಬಿಜೆಪಿಯು ಗೋಡ್ಸೆ ಮತ್ತು ಅವನ ಸಿದ್ಧಾಂತವನ್ನು ಮುಕ್ತವಾಗಿ ರಕ್ಷಿಸುತ್ತಿದೆ ಎಂದು ಒಪ್ಪಿಕೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಮಹಾಸಭಾದ ಗ್ವಾಲಿಯರ್ ಕಚೇರಿಯಲ್ಲಿ ಗೋಡ್ಸೆಗೆ ದೇವಾಲಯವನ್ನು ಸ್ಥಾಪಿಸಲಾಗಿತ್ತು. ಕಾಂಗ್ರೆಸ್ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ ನಂತರ ಇದನ್ನು ತೆಗೆದುಹಾಕಲಾಗಿತ್ತು.


ಇದನ್ನೂ ಓದಿ: ಗೋಡ್ಸೆ ಮತ್ತು ಮೋದಿಯವರು ಒಂದೇ ಸಿದ್ಧಾಂತವನ್ನು ನಂಬುತ್ತಾರೆ : ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗಾಂಧಿ ಹಂತಕನನ್ನು ಅವರು ಅಂತ ಏಕೆ ಬರೆಯುವಿರಿ ಅವನು ಅಂತ ಬರೆಯಬೇಕು

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...