Homeಮುಖಪುಟಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

ಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

'ಗೋಡ್ಸೆ ಜ್ಞಾನ ಶಾಲೆ'ಯನ್ನು ದೌಲತ್ ಗಂಜ್‌ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಉದ್ಘಾಟಿಸಲಾಗಿದ್ದು, ಇಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯನ್ನು ಗೋಡ್ಸೆ ಹೇಗೆ ರೂಪಿಸಿದರು ಎನ್ನುವ ವಿವರ, ಅವರ ಲೇಖನಗಳು ಮತ್ತು ಅವರ ಭಾಷಣಗಳ ಕುರಿತ ಸಾಹಿತ್ಯವಿದೆ

- Advertisement -
- Advertisement -

ಅಖಿಲ ಭಾರತೀಯ ಹಿಂದೂ ಮಹಾಸಭಾ, ಮಹಾತ್ಮಾ ಗಾಂಧಿಯ ಹಂತಕ ನಾಥೂರಾಂ ಗೋಡ್ಸೆಯ ಹೆಸರಿನಲ್ಲಿ ಗ್ರಂಥಾಲಯವೊಂದನ್ನು ತೆರೆದಿದ್ದು, ಇದನ್ನು ಗೋಡ್ಸೆಯ ಜೀವನ ಮತ್ತು ಸಿದ್ಧಾಂತಕ್ಕೆ ಮೀಸಲಾಗಿರಿಸಿದೆ.

‘ವಿಶ್ವ ಹಿಂದಿ ದಿವಸ್’ ದಿನದ ಅಂಗವಾಗಿ ಗ್ವಾಲಿಯರ್‌ನಲ್ಲಿ ಈ ಗ್ರಂಥಾಲಯವನ್ನು ತೆರೆಯಲಾಗಿದ್ದು, ಗೋಡ್ಸೆ ಜ್ಞಾನ ಶಾಲೆ ಎಂದು ಹೆಸರಿಡಲಾಗಿದೆ.

‘ಗೋಡ್ಸೆ ಜ್ಞಾನ ಶಾಲೆ’ಯನ್ನು ದೌಲತ್ ಗಂಜ್‌ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಉದ್ಘಾಟಿಸಲಾಗಿದ್ದು, ಇಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯನ್ನು ಗೋಡ್ಸೆ ಹೇಗೆ ರೂಪಿಸಿದರು ಎನ್ನುವ ವಿವರ, ಅವರ ಲೇಖನಗಳು ಮತ್ತು ಅವರ ಭಾಷಣಗಳ ಕುರಿತ ಸಾಹಿತ್ಯವಿದೆ.

ಇದನ್ನೂ ಓದಿ: ಹೊಸ ಚರಿತ್ರೆ ಬರಿಯಲಿರುವ ಜನವರಿ 26ರ ರೈತ ಹೋರಾಟ: ಇದರಲ್ಲಿ ನಿಮ್ಮ ಪಾತ್ರವೇನು?

ಮಹಾಸಭಾದ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ಮಾತನಾಡಿ, “ಗೋಡ್ಸೆ ಎಂಬ ನಿಜವಾದ ರಾಷ್ಟ್ರೀಯತಾವಾದಿಯನ್ನು ಜಗತ್ತಿಗೆ ಪರಿಚಯಿಸಲು ಈ ಗ್ರಂಥಾಲಯವನ್ನು ತೆರೆಯಲಾಗಿದೆ. ಅವಿಭಜಿತ ಭಾರತಕ್ಕಾಗಿ ಅವರು ಹೋರಾಡಿ ಸತ್ತರು. ಗೋಡ್ಸೆಯ ನಿಜವಾದ ರಾಷ್ಟ್ರೀಯತೆಯನ್ನು ಇಂದಿನ ಅಜ್ಞಾನಿ ಯುವಕರಲ್ಲಿ ಹುಟ್ಟುಹಾಕುವುದು ಗ್ರಂಥಾಲಯದ ಉದ್ದೇಶ” ಎಂದು ಹೇಳಿದರು.

“ಜವಾಹರಲಾಲ್ ನೆಹರು ಮತ್ತು ಮೊಹಮ್ಮದ್ ಅಲಿ ಜಿನ್ನಾ ಅವರ ಆಕಾಂಕ್ಷೆಗಳನ್ನು ಈಡೇರಿಸಲು ಭಾರತವನ್ನು ವಿಭಜಿಸಲಾಗಿದೆ. ಇಬ್ಬರೂ ರಾಷ್ಟ್ರವನ್ನು ಆಳಲು ಬಯಸಿದ್ದರು, ಆದರೆ ಗೋಡ್ಸೆ ಅದನ್ನು ವಿರೋಧಿಸಿದರು” ಎಂದು ಭಾರದ್ವಾಜ್ ಹೇಳಿದರು.

ಇದನ್ನೂ ಓದಿ: ಮೋದಿಯವರು ಫಾಲೋ ಮಾಡುವ ಟ್ವಿಟ್ಟರ್‌ ಖಾತೆಗಳಿಂದ ‘ನಾಥೂರಾಮ್ ಗೋಡ್ಸೆ ಜಿಂದಾಬಾದ್’ ಟ್ರೆಂಡಿಂಗ್

“ಗಾಂಧಿಯ ಹತ್ಯೆ ಮಾಡಲು ಇಲ್ಲಿ ಸಂಚು ರೂಪಿಸಲಾಗಿದ್ದರಿಂದ ಗ್ವಾಲಿಯರ್‌ನಲ್ಲಿ ಗೋಡ್ಸೆಗೆ ಮೀಸಲಾಗಿರುವ ಗ್ರಂಥಾಲಯದ ನಿರ್ಮಿಸಲು ನಿರ್ಧರಿಸಲಾಗಿದೆ. ಅಲ್ಲಿ ಪಿಸ್ತೂಲ್ ಸಹ ಖರೀದಿಸಿಡಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಮಾಜಿ ಮುಖ್ಯಂತ್ರಿ ಕಮಲನಾಥ್, “ಬಿಜೆಪಿಯು ಗಾಂಧಿ ಸಿದ್ಧಾಂತದೊಂದಿಗಿದೆಯೋ ಅಥವಾ ಗೋಡ್ಸೆ ಸಿದ್ಧಾಂತದೊಂದೊಗಿದೆಯೋ ಎಂಬುದನ್ನು ಸ್ಪಷ್ಟಪಡಿಸಬೇಕು. ಗಾಂಧಿಯ ಹಂತಕರನ್ನು ಬಹಿರಂಗವಾಗಿ ಪೂಜಿಸಲಾಗುತ್ತಿದೆ. ವೀರರೆಂಬಂತೆ ಬಡ್ತಿ ನೀಡಲಾಗುತ್ತಿದೆ. ಆದರೆ ಬಿಜೆಪಿ ಸರ್ಕಾರ ಜಾಣ ಮೌನಕ್ಕೆ ಜಾರಿದೆ. ಇದು ನಾಚಿಕೆಗೇಡಿನ ವಿಷಯ. ಬಿಜೆಪಿ ಗಾಂಧಿಯ ಸಿದ್ಧಾಂತದೊಟ್ಟಿಗಿದ್ದರೆ, ಈ ಕೂಡಲೇ ಹಿಂದೂ ಮಹಾಸಭಾದ ಈ ಕೃತ್ಯವನ್ನು ತಡೆಗಟ್ಟಬೇಕು. ಇಲ್ಲದಿದ್ದರೆ ಬಿಜೆಪಿಯು ಗೋಡ್ಸೆ ಮತ್ತು ಅವನ ಸಿದ್ಧಾಂತವನ್ನು ಮುಕ್ತವಾಗಿ ರಕ್ಷಿಸುತ್ತಿದೆ ಎಂದು ಒಪ್ಪಿಕೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಮಹಾಸಭಾದ ಗ್ವಾಲಿಯರ್ ಕಚೇರಿಯಲ್ಲಿ ಗೋಡ್ಸೆಗೆ ದೇವಾಲಯವನ್ನು ಸ್ಥಾಪಿಸಲಾಗಿತ್ತು. ಕಾಂಗ್ರೆಸ್ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ ನಂತರ ಇದನ್ನು ತೆಗೆದುಹಾಕಲಾಗಿತ್ತು.


ಇದನ್ನೂ ಓದಿ: ಗೋಡ್ಸೆ ಮತ್ತು ಮೋದಿಯವರು ಒಂದೇ ಸಿದ್ಧಾಂತವನ್ನು ನಂಬುತ್ತಾರೆ : ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗಾಂಧಿ ಹಂತಕನನ್ನು ಅವರು ಅಂತ ಏಕೆ ಬರೆಯುವಿರಿ ಅವನು ಅಂತ ಬರೆಯಬೇಕು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...