Homeಮುಖಪುಟವಿರೋಧಕ್ಕೆ ಮಣಿದ ಹಿಂದೂ ಮಹಾಸಭಾ - 'ಗೋಡ್ಸೆ ಜ್ಞಾನ ಶಾಲೆ' ಒಂದೇ ದಿನದಲ್ಲಿ ಕ್ಲೋಸ್!

ವಿರೋಧಕ್ಕೆ ಮಣಿದ ಹಿಂದೂ ಮಹಾಸಭಾ – ‘ಗೋಡ್ಸೆ ಜ್ಞಾನ ಶಾಲೆ’ ಒಂದೇ ದಿನದಲ್ಲಿ ಕ್ಲೋಸ್!

ಬಿಜೆಪಿ ಗಾಂಧಿಯ ಸಿದ್ಧಾಂತದೊಟ್ಟಿಗಿದ್ದರೆ, ಈ ಕೂಡಲೇ ಹಿಂದೂ ಮಹಾಸಭಾದ ಈ ಕೃತ್ಯವನ್ನು ತಡೆಗಟ್ಟಬೇಕು. ಇಲ್ಲದಿದ್ದರೆ ಬಿಜೆಪಿಯು ಗೋಡ್ಸೆ ಮತ್ತು ಅವನ ಸಿದ್ಧಾಂತವನ್ನು ಮುಕ್ತವಾಗಿ ರಕ್ಷಿಸುತ್ತಿದೆ ಎಂದು ಒಪ್ಪಿಕೊಳ್ಳಬೇಕು- ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್

- Advertisement -
- Advertisement -

ಮಹಾತ್ಮಾ ಗಾಂಧಿ ಹಂತಕ ನಾಥೂರಾಂ ಗೋಡ್ಸೆ ಹೆಸರಿನಲ್ಲಿ ತೆರೆದಿದ್ದ ಗ್ರಂಥಾಲಯ ಮತ್ತು ಅಧ್ಯಯನ ಕೇಂದ್ರವನ್ನು ಉದ್ಘಾಟನೆಯಾದ ಒಂದೇ ದಿನದಲ್ಲಿ ಮುಚ್ಚಲಾಗಿದೆ. ಬಿಜೆಪಿ ಆಡಳಿತದ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಹಿಂದೂ ಮಹಾಸಭಾ ಗೋಡ್ಸೆ ಜ್ಞಾನಶಾಲೆಯನ್ನು ತೆರೆದಿತ್ತು. ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದನ್ನು ಈಗ ಮುಚ್ಚಲಾಗಿದೆ.

ಈ ಕ್ರಮವನ್ನು ಗ್ವಾಲಿಯರ್ ಜಿಲ್ಲಾಡಳಿತ ಮತ್ತು ಪೊಲೀಸರು ಸೆಕ್ಷನ್ 144 ರ ಅಡಿಯಲ್ಲಿ ತೆಗೆದುಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಅಮಿತ್ ಸಂಘಿ ಹೇಳಿದ್ದಾರೆ. ಇದರ ಭಾಗವಾಗಿ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸುವ ಯಾವುದೇ ಕ್ರಿಯೆಯನ್ನು ಈ ಕೂಡಲೆ ನಿಷೇಧಿಸಬೇಕು ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಗಾಂಧಿ ಹಂತಕ ಗೋಡ್ಸೆ ಹೆಸರಿನಲ್ಲಿ ಗ್ರಂಥಾಲಯ ನಿರ್ಮಿಸಿದ ಹಿಂದೂ ಮಹಾಸಭಾ!

ಭಾನುವಾರ ಅಖಿಲ ಭಾರತೀಯ ಹಿಂದೂ ಮಹಾಸಭಾ, ಮಹಾತ್ಮಾ ಗಾಂಧಿಯ ಹಂತಕ ನಾಥೂರಾಂ ಗೋಡ್ಸೆಯ ಹೆಸರಿನಲ್ಲಿ ಗ್ರಂಥಾಲಯವೊಂದನ್ನು ತೆರೆದು, ಇದನ್ನು ಗೋಡ್ಸೆಯ ಜೀವನ ಮತ್ತು ಸಿದ್ಧಾಂತಕ್ಕೆ ಮೀಸಲಾಗಿರಿಸಿತ್ತು. ‘ವಿಶ್ವ ಹಿಂದಿ ದಿವಸ್’ ದಿನದ ಅಂಗವಾಗಿ ಗ್ವಾಲಿಯರ್‌ನಲ್ಲಿ ಈ ಗ್ರಂಥಾಲಯವನ್ನು ತೆರೆಯಲಾಗಿದ್ದು, ಗೋಡ್ಸೆ ಜ್ಞಾನ ಶಾಲೆ ಎಂದು ಹೆಸರಿಡಲಾಗಿತ್ತು.

‘ಗೋಡ್ಸೆ ಜ್ಞಾನ ಶಾಲೆ’ಯನ್ನು ದೌಲತ್ ಗಂಜ್‌ನಲ್ಲಿರುವ ಮಹಾಸಭಾ ಕಚೇರಿಯಲ್ಲಿ ಉದ್ಘಾಟಿಸಲಾಗಿದ್ದು, ಇಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯನ್ನು ಗೋಡ್ಸೆ ಹೇಗೆ ರೂಪಿಸಿದ್ದ ಎನ್ನುವ ವಿವರ, ಅವರ ಲೇಖನಗಳು ಮತ್ತು ಅವರ ಭಾಷಣಗಳ ಕುರಿತ ಸಾಹಿತ್ಯವಿದೆ ಎಂದು ಹೇಳಲಾಗಿತ್ತು. ಇದು ವಿರೋಧ ಪಕ್ಷಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ್ದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ನ ಕಮಲನಾಥ್, “ಬಿಜೆಪಿಯು ಗಾಂಧಿ ಸಿದ್ಧಾಂತದೊಂದಿಗಿದೆಯೋ ಅಥವಾ ಗೋಡ್ಸೆ ಸಿದ್ಧಾಂತದೊಂದೊಗಿದೆಯೋ ಎಂಬುದನ್ನು ಸ್ಪಷ್ಟಪಡಿಸಬೇಕು. ಗಾಂಧಿಯ ಹಂತಕರನ್ನು ಬಹಿರಂಗವಾಗಿ ಪೂಜಿಸಲಾಗುತ್ತಿದೆ. ವೀರರೆಂಬಂತೆ ಬಡ್ತಿ ನೀಡಲಾಗುತ್ತಿದೆ. ಆದರೆ ಬಿಜೆಪಿ ಸರ್ಕಾರ ಜಾಣ ಮೌನಕ್ಕೆ ಜಾರಿದೆ. ಇದು ನಾಚಿಕೆಗೇಡಿನ ವಿಷಯ. ಬಿಜೆಪಿ ಗಾಂಧಿಯ ಸಿದ್ಧಾಂತದೊಟ್ಟಿಗಿದ್ದರೆ, ಈ ಕೂಡಲೇ ಹಿಂದೂ ಮಹಾಸಭಾದ ಈ ಕೃತ್ಯವನ್ನು ತಡೆಗಟ್ಟಬೇಕು. ಇಲ್ಲದಿದ್ದರೆ ಬಿಜೆಪಿಯು ಗೋಡ್ಸೆ ಮತ್ತು ಅವನ ಸಿದ್ಧಾಂತವನ್ನು ಮುಕ್ತವಾಗಿ ರಕ್ಷಿಸುತ್ತಿದೆ ಎಂದು ಒಪ್ಪಿಕೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಗೋಡ್ಸೆ ಬೆಂಗಳೂರಿಗೆ ಬಂದ ಸುದ್ದಿಯೂ ಕೂಡಾ… ಪರ್ತಕರ್ತನಾಗಿ ನನ್ನ ಪಾಲಿಗೆ News is Sacred

ಮಹಾಸಭಾದ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ಮಾತನಾಡಿ, “ಗೋಡ್ಸೆ ಎಂಬ ನಿಜವಾದ ರಾಷ್ಟ್ರೀಯತಾವಾದಿಯನ್ನು ಜಗತ್ತಿಗೆ ಪರಿಚಯಿಸಲು ಈ ಗ್ರಂಥಾಲಯವನ್ನು ತೆರೆಯಲಾಗಿದೆ. ಅವಿಭಜಿತ ಭಾರತಕ್ಕಾಗಿ ಅವರು ಹೋರಾಡಿ ಸತ್ತರು. ಗೋಡ್ಸೆಯ ನಿಜವಾದ ರಾಷ್ಟ್ರೀಯತೆಯನ್ನು ಇಂದಿನ ಅಜ್ಞಾನಿ ಯುವಕರಲ್ಲಿ ಹುಟ್ಟುಹಾಕುವುದು ಗ್ರಂಥಾಲಯದ ಉದ್ದೇಶ” ಎಂದು ಹೇಳಿದರು.

“ಜವಾಹರಲಾಲ್ ನೆಹರು ಮತ್ತು ಮೊಹಮ್ಮದ್ ಅಲಿ ಜಿನ್ನಾ ಅವರ ಆಕಾಂಕ್ಷೆಗಳನ್ನು ಈಡೇರಿಸಲು ಭಾರತವನ್ನು ವಿಭಜಿಸಲಾಗಿದೆ. ಇಬ್ಬರೂ ರಾಷ್ಟ್ರವನ್ನು ಆಳಲು ಬಯಸಿದ್ದರು, ಆದರೆ ಗೋಡ್ಸೆ ಅದನ್ನು ವಿರೋಧಿಸಿದರು” ಎಂದು ಭಾರದ್ವಾಜ್ ಹೇಳಿದರು.

“ಗಾಂಧಿಯ ಹತ್ಯೆ ಮಾಡಲು ಇಲ್ಲಿ ಸಂಚು ರೂಪಿಸಲಾಗಿದ್ದರಿಂದ ಗ್ವಾಲಿಯರ್‌ನಲ್ಲಿ ಗೋಡ್ಸೆಗೆ ಮೀಸಲಾಗಿರುವ ಗ್ರಂಥಾಲಯದ ನಿರ್ಮಿಸಲು ನಿರ್ಧರಿಸಲಾಗಿದೆ. ಅಲ್ಲಿ ಪಿಸ್ತೂಲ್ ಸಹ ಖರೀದಿಸಿಡಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಗೋಡ್ಸೆ ಮತ್ತು ಮೋದಿಯವರು ಒಂದೇ ಸಿದ್ಧಾಂತವನ್ನು ನಂಬುತ್ತಾರೆ : ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...