Homeಚಳವಳಿಸ್ವಾರ್ಥಪರ ಯೋಗಿ - ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ಬಡಹೆಣ್ಣುಮಕ್ಕಳ ಶಾಲೆಯನ್ನು ನಾಶಗೊಳಿಸಿ ಸ್ಮಾರಕ ನಿರ್ಮಿಸುವ ಯೋಜನೆಗೆ ಸ್ವಾಮಿ ವಿವೇಕಾನಂದರ ಆತ್ಮ ಖಂಡಿತ ಸಮ್ಮತಿ ನೀಡುವುದಿಲ್ಲ.

- Advertisement -
- Advertisement -

ಮೈಸೂರಿನ ಮಹಾರಾಜ 10ನೇ ಚಾಮರಾಜ ಒಡೆಯರ ಆಳ್ವಿಕೆ ಸಮಯದಲ್ಲಿ 1890ನೇ ಇಸವಿಯಲ್ಲಿ ವೀರ ಸಂತ ವಿವೇಕಾನಂದರು ಮೈಸೂರಿಗೆ ನೀಡಿದ್ದ ಭೇಟಿ ಐತಿಹಾಸಿಕವಾದುದು. ವಾಸ್ತವವಾಗಿ ಅವರು ಚಿಕಾಗೋ ಧಾರ್ಮಿಕ ಸಮ್ಮೇಳನಕ್ಕೆ ಭಾರತದ ಪ್ರತಿನಿಧಿಯಾಗಿ ತೆರಳುವ ಸಲುವಾಗಿ ಮಹಾರಾಜರಿಂದ ಆರ್ಥಿಕ ನೆರವು ಯಾಚಿಸಿದರು. ಅಂದು ಶ್ರೇಷ್ಟ ಸಂತರು ಮತ್ತು ಸಾಧಕರಿಗೆ ರಾಜಾಶ್ರಯ ಭಾರತದ ಎಲ್ಲೆಡೆ ಲಭಿಸಿತ್ತು. ಮೈಸೂರಿನ ರಾಜಮನೆತನ ಅನೇಕ ಜ್ಞಾನಿಗಳು ಮತ್ತು ಅನುಭಾವಿಗಳಿಗೆ ಎಲ್ಲ ರೀತಿಯಲ್ಲೂ ಪ್ರೋತ್ಸಾಹಿಸಿದ ಉದಾಹರಣೆಗಳು ಬಹಳಷ್ಟಿವೆ. ವಿವೇಕಾನಂದರು ಮೈಸೂರಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆಗಿನ ದಿವಾನ್ ಶೇಷಾದ್ರಿ ಅಯ್ಯರ್ ಭವನದಲ್ಲಿ ತಂಗಿದ್ದು ಎನ್‌ಟಿಎಂ ಶಾಲೆಯ ಪಕ್ಕದಲ್ಲಿರುವ ನಿರಂಜನ ಮಠ ಮತ್ತು ಸದ್ವಿದ್ಯಾ ಶಾಲೆಗಳಲ್ಲಿ ಉಪನ್ಯಾಸಗಳನ್ನು ಮಾಡಿರುವುದಕ್ಕೆ ಐತಿಹಾಸಿಕ ದಾಖಲೆಗಳಿವೆ.

ಮೈಸೂರು ನಗರ ಹಲವಾರು ಪಾರಂಪರಿಕ ಕಟ್ಟಡಗಳನ್ನು ಹೊಂದಿದ್ದು ಪ್ರತಿ ವರ್ಷ ಲಕ್ಷಾಂತರ ದೇಶ ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತದೆ. ವಿಶೇಷವಾಗಿ ಐತಿಹಾಸಿಕ ಮೈಸೂರು ದಸರಾ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಟ್ಟು ಮೈಸೂರಿನ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಿದ್ದಾರೆ. ಸುಮಾರು 140 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಯನ್ನು ತೆರೆಯಬೇಕೆಂದು ಚಾಮರಾಜ ಒಡೆಯರಿಗೆ ಅತ್ಯಂತ ಕಳಕಳಿಯಿಂದ ಮನವಿ ಮಾಡಿದ್ದರು. ಇವರ ಮಾನವೀಯ ಕಳಕಳಿಯಿಂದ ಪ್ರಭಾವಿತರಾದ ಮಹಾರಾಣಿ ವಾಣಿವಿಲಾಸ ಅಮ್ಮಣ್ಣಿಯವರು ತಮ್ಮ ಮುಂದಾಲೋಚನೆಯಿಂದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮೈಸೂರು ನಗರದಲ್ಲಿ ಮರಿಮಲ್ಲಪ್ಪ ಕಾಲೇಜಿಗೆ ಹೊಂದಿಕೊಂಡಂತಿರುವ ಸ್ಥಳದಲ್ಲಿ ಎನ್‌ಟಿಎಂ ಶಾಲೆಯನ್ನು ಆರಂಭಿಸಿದರು. ಇದು ಭಾರತ ದೇಶದಲ್ಲಿ ಹೆಣ್ಣುಮಕ್ಕಳ ಪ್ರಪ್ರಥಮ ಶಾಲೆಯೆಂಬ ಹೆಗ್ಗಳಿಕೆಯನ್ನು ಹೊಂದಿದೆ. ಇಂತಹ ಐತಿಹಾಸಿಕ ಶಾಲೆಯನ್ನು ಉಳಿಸಿಕೊಳ್ಳುವುದು ಮೈಸೂರು ನಗರದ ಪ್ರಜ್ಞಾವಂತರ ಬಹುದೊಡ್ಡ ಸಾಮಾಜಿಕ ಜವಾಬ್ದಾರಿಯಾಗಿದೆ.

ಏಕೆಂದರೆ ಇತ್ತೀಚೆಗೆ ಮೈಸೂರಿನ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳು ಐತಿಹಾಸಿಕ ಎನ್‌ಟಿಎಂ ಶಾಲೆಯ ಆವರಣದಲ್ಲೇ ಸ್ವಾಮಿ ವಿವೇಕಾನಂದರ ಸ್ಮಾರಕವನ್ನು ನಿರ್ಮಿಸಬೇಕೆಂದು ಪಟ್ಟು ಹಿಡಿದಿರುವುದು ಇತಿಹಾಸ ಮತ್ತು ಲಿಂಗ ಸಮಾನತೆಗಳಿಗೆ ಬಗೆದಿರುವ ಅಪಚಾರವೇ ಆಗಿದೆ. ಈಗಾದಾಗ ಆ ಶಾಲೆಯನ್ನು ಮುಚ್ಚಬೇಕಾಗುತ್ತದೆ. ಎನ್‌ಟಿಎಂ ಶಾಲೆಯನ್ನು ಆರಂಭಿಸಲು ವಿವೇಕಾನಂದರು ಪ್ರೇರಣೆ ನೀಡಿದರೇ ಹೊರತು ಶಾಲೆಯ ಆವರಣದಲ್ಲಿ ಎಂದಿಗೂ ತಂಗಿರಲಿಲ್ಲ. ಅವರು ಉಳಿದುಕೊಂಡಿದ್ದ ದಿವಾನ್ ಶೇಷಾದ್ರಿ ಅಯ್ಯರ್ ಭವನ ಹಾಗೂ ನಿರಂಜನ ಮಠಗಳೊಂದಿಗೆ ಎನ್‌ಟಿಎಂ ಶಾಲೆ ಯಾವುದೇ ವಿಧದ ಸಂಬಂಧ ಹೊಂದಿಲ್ಲ. ಆದಾಗ್ಯೂ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳು ಶಾಲೆಯ ಆವರಣದಲ್ಲೇ ವಿವೇಕಾನಂದರ ಸ್ಮಾರಕ ನಿರ್ಮಿಸಿ ಶಾಲೆಯನ್ನು ಬೇರೊಂದು ಸಮೀಪದ ಸರ್ಕಾರಿ ಶಾಲೆಯೊಂದಿಗೆ ವಿಲೀನಗೊಳಿಸಬೇಕೆಂದು ಪಟ್ಟು ಹಿಡಿದಿರುವುದು ಅರ್ಥಹೀನವಾಗಿದೆ.

ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

1970ರ ದಶಕದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮೈಸೂರು ನಗರದ ಕೇಂದ್ರ ಭಾಗದಲ್ಲಿರುವ ಯಾದವಗಿರಿಯಲ್ಲಿ ಸುಮಾರು 60 ಎಕರೆಯಷ್ಟು ಕೋಟ್ಯಾಂತರ ಬೆಲೆ ಬಾಳುವ ಅಮೂಲ್ಯ ಭೂಮಿಯನ್ನು ರಾಮಕೃಷ್ಣ ಆಶ್ರಮದ ಸಾಂಸ್ಕೃತಿಕ-ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಮಂಜೂರು ಮಾಡಿತ್ತು. ಸುಮಾರು 2-3 ಎಕರೆ ಪ್ರದೇಶದಲ್ಲಿ ಧ್ಯಾನಕೇಂದ್ರ, ಗ್ರಂಥಾಲಯ, ಸಭಾಂಗಣ ಮೊದಲಾದ ಸೌಕರ್ಯಗಳನ್ನು ಒದಗಿಸಲಾಗಿದೆ. ಸುಮಾರು 57 ಎಕರೆಯಷ್ಟು ಅಮೂಲ್ಯ ಭೂಮಿ ಖಾಲಿ ಬಿದ್ದಿದ್ದು ಸರ್ಕಾರದ ನೆರವು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲದಿರುವ ಹಿನ್ನೆಲೆಯಲ್ಲಿ ವಿವೇಕಾನಂದ ಸ್ಮಾರಕವನ್ನು ಅಲ್ಲಿಯೇ ನಿರ್ಮಿಸುವುದು ಸೂಕ್ತವಾಗಿದೆ.

ಕಳೆದ ವರ್ಷ ಮೈಸೂರಿನ 106 ಮಂದಿ ಪ್ರಗತಿಪರ ಚಿಂತಕರು ಮತ್ತು ಎನ್‌ಟಿಎಂ ಶಾಲೆ ಹಿತೈಷಿಗಳು ಯಾವುದೇ ಕಾರಣಕ್ಕೂ ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯದಿಂದಾಗಿ ಎನ್‌ಟಿಎಂ ಶಾಲೆಯನ್ನು ಮುಚ್ಚಬಾರದೆಂದು ಸತ್ಯಾಗ್ರಹ ನಡೆಸಿ ಕರ್ನಾಟಕ ರಾಜ್ಯ ಸರ್ಕಾರದ ಗಮನ ಸೆಳೆದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅತ್ಯಂತ ಪ್ರೀತಿ ಮತ್ತು ಕಾಳಜಿಯಿಂದ ಎನ್‌ಟಿಎಂ ಶಾಲೆ ತಳ ಸಮುದಾಯಗಳ ಜ್ಞಾನ ದಾಸೋಹ ಕೇಂದ್ರವಾಗಿರುವ ಹಿನ್ನೆಲೆಯಲ್ಲಿ ಅಲ್ಲಿಯೇ ಮುಂದುವರೆಯಲಿ, ಸ್ವಾಮಿ ವಿವೇಕಾನಂದರ ಸ್ಮಾರಕ ಶಾಲೆಯ ಹೊರಗೆ ನಿರ್ಮಾಣವಾಗಲೆಂಬ ತೀರ್ಮಾನಕ್ಕೆ ಬಂದರು. ಆದಾಗ್ಯೂ ಮೇಲ್ಕಂಡ ಐತಿಹಾಸಿಕ – ಸಾಂಸ್ಕೃತಿಕ ವಿಚಾರಗಳಿಗೆ ಯಾವುದೇ ರೀತಿಯಲ್ಲೂ ಸಂಬಂಧವಿಲ್ಲದ ಎನ್‌ಟಿಎಂ ಶಾಲೆಯ ಆವರಣದಲ್ಲೇ ವಿವೇಕಾನಂದ ಸ್ಮಾರಕ ನಿರ್ಮಿಸಲು ರಾಮಕೃಷ್ಣ ಆಶ್ರಮದವರು ಒತ್ತಾಯಿಸುತ್ತಿರುವುದು ಅರ್ಥಹೀನ ಸಂಗತಿಯಾಗಿದೆ.

2019ರಲ್ಲಿ ಶಾಲೆ ಉಳಿಸಲು ಹೋರಾಟ

ಈ ಪ್ರಕರಣ ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗಿದ್ದು ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣವಾಗಬೇಕೆಂಬ ನಿಲುವನ್ನು ಹೊಂದಿರುವುದು ನೈಜ ಇತಿಹಾಸ ಮತ್ತು ಸಾಂವಿಧಾನಿಕ ಲಿಂಗ ಸಮಾನತೆ ಆಶಯಗಳಿಗೆ ವಿರುದ್ಧವಾಗಿದೆ. ಇಂತಹ ಅಪ್ರಸ್ತುತ ತೀರ್ಮಾನವನ್ನು ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅಧಿಕಾರ ನಮಗಿದೆ. ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಗಳು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಎನ್‌ಟಿಎಂ ಶಾಲೆ ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಒಟ್ಟಿಗೆ ಇರುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲವೆಂದು ತಿಳಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳು ಈ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಕರ್ನಾಟಕ ಉಚ್ಛನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಶಾಲೆಯನ್ನು ಉಳಿಸುವುದು ಅತ್ಯಂತ ಸೂಕ್ತ ಕ್ರಮವಾಗಿದೆ.

ರಾಮಕೃಷ್ಣ ಆಶ್ರಮದವರಿಗೆ ವಿವೇಕಾನಂದರ ಸ್ಮಾರಕ, ಶಾಪಿಂಗ್‌ಮಾಲ್, ವಾಣಿಜ್ಯ ಸಂಕೀರ್ಣ ಮೊದಲಾದವುಗಳನ್ನು ನಿರ್ಮಿಸಿ ಆರ್ಥಿಕವಾಗಿ ಲಾಭ ಗಳಿಸಬೇಕೆಂಬ ಧೋರಣೆ ಇರುವುದು ಖಂಡನೀಯ. ಐತಿಹಾಸಿಕ ಬಾಲಕಿಯರ ಶಾಲೆಯನ್ನು ಮುಚ್ಚಿಸಿ ವಿವೇಕಾನಂದರ ಸ್ಮಾರಕ ನಿರ್ಮಿಸಬೇಕೆಂದು ಇವರ ಜೊತೆಗೂಡಿ ಮೈಸೂರು ನಗರದ ಕೆಲವು ಸ್ಥಾಪಿತ ಹಿತಾಸಕ್ತಿಗಳು ವಾದಿಸುತ್ತಿರುವುದು ಅರ್ಥಹೀನ. ಆಶ್ರಮದ ಉಸ್ತುವಾರಿ ವಹಿಸಿರುವ ಧಾರ್ಮಿಕ ಮುಖಂಡರಿಗೆ ‘ಸ್ಥಾವರಕ್ಕೆ ಅಳಿವುಂಟು, ಜಂಗಮಕ್ಕೆ ಅಳಿವಿಲ್ಲ’ ಎಂಬ ಸತ್ಯದರ್ಶನ ಆಗಿಲ್ಲದಿರುವುದು ಬಹುದೊಡ್ಡ ವಿಪರ್ಯಾಸವಾಗಿದೆ. ಅಂದು ಆಶ್ರಮದ ಸ್ವಾಮೀಜಿಗಳೇ ಬರೆದಿರುವ ಪುಸ್ತಕದಲ್ಲಿ ‘ಬಡವರಿಗಾಗಿ ಶಾಲೆಯನ್ನು ತೆರೆಯಬೇಕೆಂದು ವಿವೇಕಾನಂದರು ಪತ್ರ ಬರೆದಿರುವುದು’ ನೆನಪಾಗುತ್ತಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ.

ಶಾಲೆ ಉಳಿವಿಗಾಗಿ ರೈತ ಸಂಘದಿಂದ ಹೋರಾಟ

ಶ್ರೀ ರಾಮಕೃಷ್ಣ ಆಶ್ರಮದವರು ಶಾಲೆಯನ್ನು ಉಳಿಸಿ ಸ್ಮಾರಕ ನಿರ್ಮಿಸಲು ಮುಂದಾಗಲಿ ಎಂಬುದು ಪ್ರಜ್ಞಾವಂತರ ನ್ಯಾಯೋಚಿತ ಆಶಯವಾಗಿದೆ. ಬಡಹೆಣ್ಣುಮಕ್ಕಳ ಶಾಲೆಯನ್ನು ನಾಶಗೊಳಿಸಿ ಸ್ಮಾರಕ ನಿರ್ಮಿಸುವ ಯೋಜನೆಗೆ ಸ್ವಾಮಿ ವಿವೇಕಾನಂದರ ಆತ್ಮ ಖಂಡಿತ ಸಮ್ಮತಿ ನೀಡುವುದಿಲ್ಲ. ಎನ್‌ಟಿಎಂ ಶಾಲೆ ಉಳಿಯಲಿ ಎಂಬ ನ್ಯಾಯೋಚಿತ ಬೇಡಿಕೆಗೆ ಸರ್ಕಾರ ಮತ್ತು ಆಶ್ರಮದವರು ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಶ್ರೀ ರಾಮಕೃಷ್ಣ ಆಶ್ರಮದ ಆವರಣದಲ್ಲಿ ಸದ್ಬಳಕೆಯಾಗದೇ ಉಳಿದಿರುವ ಸುಮಾರು 57 ಎಕರೆ ಭೂಮಿಯನ್ನು ಸರ್ಕಾರ ಹಿಂಪಡೆಯಲಿ ಎಂದು ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡುವುದು ಅನಿವಾರ್ಯವಾಗುತ್ತದೆ. ದೀನ ದುರ್ಬಲ ವರ್ಗಗಳಿಗೆ ಸೇರಿದ ಬಾಲಕಿಯರ ಶಾಲೆಯ ಗೋರಿಯ ಮೇಲೆ ವಿವೇಕಾನಂದರ ಭವ್ಯ ಸ್ಮಾರಕ ನಿರ್ಮಿಸಿ ವಾಣಿಜ್ಯ ಉದ್ದೇಶಗಳನ್ನು ಆಧ್ಯಾತ್ಮದ ಹೆಸರಿನಲ್ಲಿ ಈಡೇರಿಸುವ ಪ್ರಯತ್ನಗಳನ್ನು ಕಾನೂನುಬದ್ಧವಾಗಿ ನಿಷ್ಕ್ರಿಯಗೊಳಿಸಲು ಮೈಸೂರು ನಗರದ ಪ್ರಜ್ಞಾವಂತರು ಬದ್ಧರಾಗಿದ್ದಾರೆ.

  • ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೆಣ್ಣು ಮಕ್ಕಳ ಶಾಲೆಯನ್ನು ನಾಶಪಡಿಸಿ, ಅಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಿಸುವುದು ಕಂಡನಾರ್ಹ. ಪ್ರಜ್ಞಾವಂತರೆಲ್ಲರೂ ಇದನ್ನು ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...