Homeಚಳವಳಿಸ್ವಾರ್ಥಪರ ಯೋಗಿ - ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ಬಡಹೆಣ್ಣುಮಕ್ಕಳ ಶಾಲೆಯನ್ನು ನಾಶಗೊಳಿಸಿ ಸ್ಮಾರಕ ನಿರ್ಮಿಸುವ ಯೋಜನೆಗೆ ಸ್ವಾಮಿ ವಿವೇಕಾನಂದರ ಆತ್ಮ ಖಂಡಿತ ಸಮ್ಮತಿ ನೀಡುವುದಿಲ್ಲ.

- Advertisement -
- Advertisement -

ಮೈಸೂರಿನ ಮಹಾರಾಜ 10ನೇ ಚಾಮರಾಜ ಒಡೆಯರ ಆಳ್ವಿಕೆ ಸಮಯದಲ್ಲಿ 1890ನೇ ಇಸವಿಯಲ್ಲಿ ವೀರ ಸಂತ ವಿವೇಕಾನಂದರು ಮೈಸೂರಿಗೆ ನೀಡಿದ್ದ ಭೇಟಿ ಐತಿಹಾಸಿಕವಾದುದು. ವಾಸ್ತವವಾಗಿ ಅವರು ಚಿಕಾಗೋ ಧಾರ್ಮಿಕ ಸಮ್ಮೇಳನಕ್ಕೆ ಭಾರತದ ಪ್ರತಿನಿಧಿಯಾಗಿ ತೆರಳುವ ಸಲುವಾಗಿ ಮಹಾರಾಜರಿಂದ ಆರ್ಥಿಕ ನೆರವು ಯಾಚಿಸಿದರು. ಅಂದು ಶ್ರೇಷ್ಟ ಸಂತರು ಮತ್ತು ಸಾಧಕರಿಗೆ ರಾಜಾಶ್ರಯ ಭಾರತದ ಎಲ್ಲೆಡೆ ಲಭಿಸಿತ್ತು. ಮೈಸೂರಿನ ರಾಜಮನೆತನ ಅನೇಕ ಜ್ಞಾನಿಗಳು ಮತ್ತು ಅನುಭಾವಿಗಳಿಗೆ ಎಲ್ಲ ರೀತಿಯಲ್ಲೂ ಪ್ರೋತ್ಸಾಹಿಸಿದ ಉದಾಹರಣೆಗಳು ಬಹಳಷ್ಟಿವೆ. ವಿವೇಕಾನಂದರು ಮೈಸೂರಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆಗಿನ ದಿವಾನ್ ಶೇಷಾದ್ರಿ ಅಯ್ಯರ್ ಭವನದಲ್ಲಿ ತಂಗಿದ್ದು ಎನ್‌ಟಿಎಂ ಶಾಲೆಯ ಪಕ್ಕದಲ್ಲಿರುವ ನಿರಂಜನ ಮಠ ಮತ್ತು ಸದ್ವಿದ್ಯಾ ಶಾಲೆಗಳಲ್ಲಿ ಉಪನ್ಯಾಸಗಳನ್ನು ಮಾಡಿರುವುದಕ್ಕೆ ಐತಿಹಾಸಿಕ ದಾಖಲೆಗಳಿವೆ.

ಮೈಸೂರು ನಗರ ಹಲವಾರು ಪಾರಂಪರಿಕ ಕಟ್ಟಡಗಳನ್ನು ಹೊಂದಿದ್ದು ಪ್ರತಿ ವರ್ಷ ಲಕ್ಷಾಂತರ ದೇಶ ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತದೆ. ವಿಶೇಷವಾಗಿ ಐತಿಹಾಸಿಕ ಮೈಸೂರು ದಸರಾ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಟ್ಟು ಮೈಸೂರಿನ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಿದ್ದಾರೆ. ಸುಮಾರು 140 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಯನ್ನು ತೆರೆಯಬೇಕೆಂದು ಚಾಮರಾಜ ಒಡೆಯರಿಗೆ ಅತ್ಯಂತ ಕಳಕಳಿಯಿಂದ ಮನವಿ ಮಾಡಿದ್ದರು. ಇವರ ಮಾನವೀಯ ಕಳಕಳಿಯಿಂದ ಪ್ರಭಾವಿತರಾದ ಮಹಾರಾಣಿ ವಾಣಿವಿಲಾಸ ಅಮ್ಮಣ್ಣಿಯವರು ತಮ್ಮ ಮುಂದಾಲೋಚನೆಯಿಂದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮೈಸೂರು ನಗರದಲ್ಲಿ ಮರಿಮಲ್ಲಪ್ಪ ಕಾಲೇಜಿಗೆ ಹೊಂದಿಕೊಂಡಂತಿರುವ ಸ್ಥಳದಲ್ಲಿ ಎನ್‌ಟಿಎಂ ಶಾಲೆಯನ್ನು ಆರಂಭಿಸಿದರು. ಇದು ಭಾರತ ದೇಶದಲ್ಲಿ ಹೆಣ್ಣುಮಕ್ಕಳ ಪ್ರಪ್ರಥಮ ಶಾಲೆಯೆಂಬ ಹೆಗ್ಗಳಿಕೆಯನ್ನು ಹೊಂದಿದೆ. ಇಂತಹ ಐತಿಹಾಸಿಕ ಶಾಲೆಯನ್ನು ಉಳಿಸಿಕೊಳ್ಳುವುದು ಮೈಸೂರು ನಗರದ ಪ್ರಜ್ಞಾವಂತರ ಬಹುದೊಡ್ಡ ಸಾಮಾಜಿಕ ಜವಾಬ್ದಾರಿಯಾಗಿದೆ.

ಏಕೆಂದರೆ ಇತ್ತೀಚೆಗೆ ಮೈಸೂರಿನ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳು ಐತಿಹಾಸಿಕ ಎನ್‌ಟಿಎಂ ಶಾಲೆಯ ಆವರಣದಲ್ಲೇ ಸ್ವಾಮಿ ವಿವೇಕಾನಂದರ ಸ್ಮಾರಕವನ್ನು ನಿರ್ಮಿಸಬೇಕೆಂದು ಪಟ್ಟು ಹಿಡಿದಿರುವುದು ಇತಿಹಾಸ ಮತ್ತು ಲಿಂಗ ಸಮಾನತೆಗಳಿಗೆ ಬಗೆದಿರುವ ಅಪಚಾರವೇ ಆಗಿದೆ. ಈಗಾದಾಗ ಆ ಶಾಲೆಯನ್ನು ಮುಚ್ಚಬೇಕಾಗುತ್ತದೆ. ಎನ್‌ಟಿಎಂ ಶಾಲೆಯನ್ನು ಆರಂಭಿಸಲು ವಿವೇಕಾನಂದರು ಪ್ರೇರಣೆ ನೀಡಿದರೇ ಹೊರತು ಶಾಲೆಯ ಆವರಣದಲ್ಲಿ ಎಂದಿಗೂ ತಂಗಿರಲಿಲ್ಲ. ಅವರು ಉಳಿದುಕೊಂಡಿದ್ದ ದಿವಾನ್ ಶೇಷಾದ್ರಿ ಅಯ್ಯರ್ ಭವನ ಹಾಗೂ ನಿರಂಜನ ಮಠಗಳೊಂದಿಗೆ ಎನ್‌ಟಿಎಂ ಶಾಲೆ ಯಾವುದೇ ವಿಧದ ಸಂಬಂಧ ಹೊಂದಿಲ್ಲ. ಆದಾಗ್ಯೂ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳು ಶಾಲೆಯ ಆವರಣದಲ್ಲೇ ವಿವೇಕಾನಂದರ ಸ್ಮಾರಕ ನಿರ್ಮಿಸಿ ಶಾಲೆಯನ್ನು ಬೇರೊಂದು ಸಮೀಪದ ಸರ್ಕಾರಿ ಶಾಲೆಯೊಂದಿಗೆ ವಿಲೀನಗೊಳಿಸಬೇಕೆಂದು ಪಟ್ಟು ಹಿಡಿದಿರುವುದು ಅರ್ಥಹೀನವಾಗಿದೆ.

ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

1970ರ ದಶಕದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮೈಸೂರು ನಗರದ ಕೇಂದ್ರ ಭಾಗದಲ್ಲಿರುವ ಯಾದವಗಿರಿಯಲ್ಲಿ ಸುಮಾರು 60 ಎಕರೆಯಷ್ಟು ಕೋಟ್ಯಾಂತರ ಬೆಲೆ ಬಾಳುವ ಅಮೂಲ್ಯ ಭೂಮಿಯನ್ನು ರಾಮಕೃಷ್ಣ ಆಶ್ರಮದ ಸಾಂಸ್ಕೃತಿಕ-ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಮಂಜೂರು ಮಾಡಿತ್ತು. ಸುಮಾರು 2-3 ಎಕರೆ ಪ್ರದೇಶದಲ್ಲಿ ಧ್ಯಾನಕೇಂದ್ರ, ಗ್ರಂಥಾಲಯ, ಸಭಾಂಗಣ ಮೊದಲಾದ ಸೌಕರ್ಯಗಳನ್ನು ಒದಗಿಸಲಾಗಿದೆ. ಸುಮಾರು 57 ಎಕರೆಯಷ್ಟು ಅಮೂಲ್ಯ ಭೂಮಿ ಖಾಲಿ ಬಿದ್ದಿದ್ದು ಸರ್ಕಾರದ ನೆರವು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲದಿರುವ ಹಿನ್ನೆಲೆಯಲ್ಲಿ ವಿವೇಕಾನಂದ ಸ್ಮಾರಕವನ್ನು ಅಲ್ಲಿಯೇ ನಿರ್ಮಿಸುವುದು ಸೂಕ್ತವಾಗಿದೆ.

ಕಳೆದ ವರ್ಷ ಮೈಸೂರಿನ 106 ಮಂದಿ ಪ್ರಗತಿಪರ ಚಿಂತಕರು ಮತ್ತು ಎನ್‌ಟಿಎಂ ಶಾಲೆ ಹಿತೈಷಿಗಳು ಯಾವುದೇ ಕಾರಣಕ್ಕೂ ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯದಿಂದಾಗಿ ಎನ್‌ಟಿಎಂ ಶಾಲೆಯನ್ನು ಮುಚ್ಚಬಾರದೆಂದು ಸತ್ಯಾಗ್ರಹ ನಡೆಸಿ ಕರ್ನಾಟಕ ರಾಜ್ಯ ಸರ್ಕಾರದ ಗಮನ ಸೆಳೆದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅತ್ಯಂತ ಪ್ರೀತಿ ಮತ್ತು ಕಾಳಜಿಯಿಂದ ಎನ್‌ಟಿಎಂ ಶಾಲೆ ತಳ ಸಮುದಾಯಗಳ ಜ್ಞಾನ ದಾಸೋಹ ಕೇಂದ್ರವಾಗಿರುವ ಹಿನ್ನೆಲೆಯಲ್ಲಿ ಅಲ್ಲಿಯೇ ಮುಂದುವರೆಯಲಿ, ಸ್ವಾಮಿ ವಿವೇಕಾನಂದರ ಸ್ಮಾರಕ ಶಾಲೆಯ ಹೊರಗೆ ನಿರ್ಮಾಣವಾಗಲೆಂಬ ತೀರ್ಮಾನಕ್ಕೆ ಬಂದರು. ಆದಾಗ್ಯೂ ಮೇಲ್ಕಂಡ ಐತಿಹಾಸಿಕ – ಸಾಂಸ್ಕೃತಿಕ ವಿಚಾರಗಳಿಗೆ ಯಾವುದೇ ರೀತಿಯಲ್ಲೂ ಸಂಬಂಧವಿಲ್ಲದ ಎನ್‌ಟಿಎಂ ಶಾಲೆಯ ಆವರಣದಲ್ಲೇ ವಿವೇಕಾನಂದ ಸ್ಮಾರಕ ನಿರ್ಮಿಸಲು ರಾಮಕೃಷ್ಣ ಆಶ್ರಮದವರು ಒತ್ತಾಯಿಸುತ್ತಿರುವುದು ಅರ್ಥಹೀನ ಸಂಗತಿಯಾಗಿದೆ.

2019ರಲ್ಲಿ ಶಾಲೆ ಉಳಿಸಲು ಹೋರಾಟ

ಈ ಪ್ರಕರಣ ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗಿದ್ದು ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣವಾಗಬೇಕೆಂಬ ನಿಲುವನ್ನು ಹೊಂದಿರುವುದು ನೈಜ ಇತಿಹಾಸ ಮತ್ತು ಸಾಂವಿಧಾನಿಕ ಲಿಂಗ ಸಮಾನತೆ ಆಶಯಗಳಿಗೆ ವಿರುದ್ಧವಾಗಿದೆ. ಇಂತಹ ಅಪ್ರಸ್ತುತ ತೀರ್ಮಾನವನ್ನು ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅಧಿಕಾರ ನಮಗಿದೆ. ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಗಳು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಎನ್‌ಟಿಎಂ ಶಾಲೆ ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಒಟ್ಟಿಗೆ ಇರುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲವೆಂದು ತಿಳಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳು ಈ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಕರ್ನಾಟಕ ಉಚ್ಛನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಶಾಲೆಯನ್ನು ಉಳಿಸುವುದು ಅತ್ಯಂತ ಸೂಕ್ತ ಕ್ರಮವಾಗಿದೆ.

ರಾಮಕೃಷ್ಣ ಆಶ್ರಮದವರಿಗೆ ವಿವೇಕಾನಂದರ ಸ್ಮಾರಕ, ಶಾಪಿಂಗ್‌ಮಾಲ್, ವಾಣಿಜ್ಯ ಸಂಕೀರ್ಣ ಮೊದಲಾದವುಗಳನ್ನು ನಿರ್ಮಿಸಿ ಆರ್ಥಿಕವಾಗಿ ಲಾಭ ಗಳಿಸಬೇಕೆಂಬ ಧೋರಣೆ ಇರುವುದು ಖಂಡನೀಯ. ಐತಿಹಾಸಿಕ ಬಾಲಕಿಯರ ಶಾಲೆಯನ್ನು ಮುಚ್ಚಿಸಿ ವಿವೇಕಾನಂದರ ಸ್ಮಾರಕ ನಿರ್ಮಿಸಬೇಕೆಂದು ಇವರ ಜೊತೆಗೂಡಿ ಮೈಸೂರು ನಗರದ ಕೆಲವು ಸ್ಥಾಪಿತ ಹಿತಾಸಕ್ತಿಗಳು ವಾದಿಸುತ್ತಿರುವುದು ಅರ್ಥಹೀನ. ಆಶ್ರಮದ ಉಸ್ತುವಾರಿ ವಹಿಸಿರುವ ಧಾರ್ಮಿಕ ಮುಖಂಡರಿಗೆ ‘ಸ್ಥಾವರಕ್ಕೆ ಅಳಿವುಂಟು, ಜಂಗಮಕ್ಕೆ ಅಳಿವಿಲ್ಲ’ ಎಂಬ ಸತ್ಯದರ್ಶನ ಆಗಿಲ್ಲದಿರುವುದು ಬಹುದೊಡ್ಡ ವಿಪರ್ಯಾಸವಾಗಿದೆ. ಅಂದು ಆಶ್ರಮದ ಸ್ವಾಮೀಜಿಗಳೇ ಬರೆದಿರುವ ಪುಸ್ತಕದಲ್ಲಿ ‘ಬಡವರಿಗಾಗಿ ಶಾಲೆಯನ್ನು ತೆರೆಯಬೇಕೆಂದು ವಿವೇಕಾನಂದರು ಪತ್ರ ಬರೆದಿರುವುದು’ ನೆನಪಾಗುತ್ತಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ.

ಶಾಲೆ ಉಳಿವಿಗಾಗಿ ರೈತ ಸಂಘದಿಂದ ಹೋರಾಟ

ಶ್ರೀ ರಾಮಕೃಷ್ಣ ಆಶ್ರಮದವರು ಶಾಲೆಯನ್ನು ಉಳಿಸಿ ಸ್ಮಾರಕ ನಿರ್ಮಿಸಲು ಮುಂದಾಗಲಿ ಎಂಬುದು ಪ್ರಜ್ಞಾವಂತರ ನ್ಯಾಯೋಚಿತ ಆಶಯವಾಗಿದೆ. ಬಡಹೆಣ್ಣುಮಕ್ಕಳ ಶಾಲೆಯನ್ನು ನಾಶಗೊಳಿಸಿ ಸ್ಮಾರಕ ನಿರ್ಮಿಸುವ ಯೋಜನೆಗೆ ಸ್ವಾಮಿ ವಿವೇಕಾನಂದರ ಆತ್ಮ ಖಂಡಿತ ಸಮ್ಮತಿ ನೀಡುವುದಿಲ್ಲ. ಎನ್‌ಟಿಎಂ ಶಾಲೆ ಉಳಿಯಲಿ ಎಂಬ ನ್ಯಾಯೋಚಿತ ಬೇಡಿಕೆಗೆ ಸರ್ಕಾರ ಮತ್ತು ಆಶ್ರಮದವರು ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಶ್ರೀ ರಾಮಕೃಷ್ಣ ಆಶ್ರಮದ ಆವರಣದಲ್ಲಿ ಸದ್ಬಳಕೆಯಾಗದೇ ಉಳಿದಿರುವ ಸುಮಾರು 57 ಎಕರೆ ಭೂಮಿಯನ್ನು ಸರ್ಕಾರ ಹಿಂಪಡೆಯಲಿ ಎಂದು ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡುವುದು ಅನಿವಾರ್ಯವಾಗುತ್ತದೆ. ದೀನ ದುರ್ಬಲ ವರ್ಗಗಳಿಗೆ ಸೇರಿದ ಬಾಲಕಿಯರ ಶಾಲೆಯ ಗೋರಿಯ ಮೇಲೆ ವಿವೇಕಾನಂದರ ಭವ್ಯ ಸ್ಮಾರಕ ನಿರ್ಮಿಸಿ ವಾಣಿಜ್ಯ ಉದ್ದೇಶಗಳನ್ನು ಆಧ್ಯಾತ್ಮದ ಹೆಸರಿನಲ್ಲಿ ಈಡೇರಿಸುವ ಪ್ರಯತ್ನಗಳನ್ನು ಕಾನೂನುಬದ್ಧವಾಗಿ ನಿಷ್ಕ್ರಿಯಗೊಳಿಸಲು ಮೈಸೂರು ನಗರದ ಪ್ರಜ್ಞಾವಂತರು ಬದ್ಧರಾಗಿದ್ದಾರೆ.

  • ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೆಣ್ಣು ಮಕ್ಕಳ ಶಾಲೆಯನ್ನು ನಾಶಪಡಿಸಿ, ಅಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಿಸುವುದು ಕಂಡನಾರ್ಹ. ಪ್ರಜ್ಞಾವಂತರೆಲ್ಲರೂ ಇದನ್ನು ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...