Homeಚಳವಳಿಸ್ವಾರ್ಥಪರ ಯೋಗಿ - ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ಬಡಹೆಣ್ಣುಮಕ್ಕಳ ಶಾಲೆಯನ್ನು ನಾಶಗೊಳಿಸಿ ಸ್ಮಾರಕ ನಿರ್ಮಿಸುವ ಯೋಜನೆಗೆ ಸ್ವಾಮಿ ವಿವೇಕಾನಂದರ ಆತ್ಮ ಖಂಡಿತ ಸಮ್ಮತಿ ನೀಡುವುದಿಲ್ಲ.

- Advertisement -
- Advertisement -

ಮೈಸೂರಿನ ಮಹಾರಾಜ 10ನೇ ಚಾಮರಾಜ ಒಡೆಯರ ಆಳ್ವಿಕೆ ಸಮಯದಲ್ಲಿ 1890ನೇ ಇಸವಿಯಲ್ಲಿ ವೀರ ಸಂತ ವಿವೇಕಾನಂದರು ಮೈಸೂರಿಗೆ ನೀಡಿದ್ದ ಭೇಟಿ ಐತಿಹಾಸಿಕವಾದುದು. ವಾಸ್ತವವಾಗಿ ಅವರು ಚಿಕಾಗೋ ಧಾರ್ಮಿಕ ಸಮ್ಮೇಳನಕ್ಕೆ ಭಾರತದ ಪ್ರತಿನಿಧಿಯಾಗಿ ತೆರಳುವ ಸಲುವಾಗಿ ಮಹಾರಾಜರಿಂದ ಆರ್ಥಿಕ ನೆರವು ಯಾಚಿಸಿದರು. ಅಂದು ಶ್ರೇಷ್ಟ ಸಂತರು ಮತ್ತು ಸಾಧಕರಿಗೆ ರಾಜಾಶ್ರಯ ಭಾರತದ ಎಲ್ಲೆಡೆ ಲಭಿಸಿತ್ತು. ಮೈಸೂರಿನ ರಾಜಮನೆತನ ಅನೇಕ ಜ್ಞಾನಿಗಳು ಮತ್ತು ಅನುಭಾವಿಗಳಿಗೆ ಎಲ್ಲ ರೀತಿಯಲ್ಲೂ ಪ್ರೋತ್ಸಾಹಿಸಿದ ಉದಾಹರಣೆಗಳು ಬಹಳಷ್ಟಿವೆ. ವಿವೇಕಾನಂದರು ಮೈಸೂರಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆಗಿನ ದಿವಾನ್ ಶೇಷಾದ್ರಿ ಅಯ್ಯರ್ ಭವನದಲ್ಲಿ ತಂಗಿದ್ದು ಎನ್‌ಟಿಎಂ ಶಾಲೆಯ ಪಕ್ಕದಲ್ಲಿರುವ ನಿರಂಜನ ಮಠ ಮತ್ತು ಸದ್ವಿದ್ಯಾ ಶಾಲೆಗಳಲ್ಲಿ ಉಪನ್ಯಾಸಗಳನ್ನು ಮಾಡಿರುವುದಕ್ಕೆ ಐತಿಹಾಸಿಕ ದಾಖಲೆಗಳಿವೆ.

ಮೈಸೂರು ನಗರ ಹಲವಾರು ಪಾರಂಪರಿಕ ಕಟ್ಟಡಗಳನ್ನು ಹೊಂದಿದ್ದು ಪ್ರತಿ ವರ್ಷ ಲಕ್ಷಾಂತರ ದೇಶ ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತದೆ. ವಿಶೇಷವಾಗಿ ಐತಿಹಾಸಿಕ ಮೈಸೂರು ದಸರಾ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಟ್ಟು ಮೈಸೂರಿನ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಿದ್ದಾರೆ. ಸುಮಾರು 140 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಯನ್ನು ತೆರೆಯಬೇಕೆಂದು ಚಾಮರಾಜ ಒಡೆಯರಿಗೆ ಅತ್ಯಂತ ಕಳಕಳಿಯಿಂದ ಮನವಿ ಮಾಡಿದ್ದರು. ಇವರ ಮಾನವೀಯ ಕಳಕಳಿಯಿಂದ ಪ್ರಭಾವಿತರಾದ ಮಹಾರಾಣಿ ವಾಣಿವಿಲಾಸ ಅಮ್ಮಣ್ಣಿಯವರು ತಮ್ಮ ಮುಂದಾಲೋಚನೆಯಿಂದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮೈಸೂರು ನಗರದಲ್ಲಿ ಮರಿಮಲ್ಲಪ್ಪ ಕಾಲೇಜಿಗೆ ಹೊಂದಿಕೊಂಡಂತಿರುವ ಸ್ಥಳದಲ್ಲಿ ಎನ್‌ಟಿಎಂ ಶಾಲೆಯನ್ನು ಆರಂಭಿಸಿದರು. ಇದು ಭಾರತ ದೇಶದಲ್ಲಿ ಹೆಣ್ಣುಮಕ್ಕಳ ಪ್ರಪ್ರಥಮ ಶಾಲೆಯೆಂಬ ಹೆಗ್ಗಳಿಕೆಯನ್ನು ಹೊಂದಿದೆ. ಇಂತಹ ಐತಿಹಾಸಿಕ ಶಾಲೆಯನ್ನು ಉಳಿಸಿಕೊಳ್ಳುವುದು ಮೈಸೂರು ನಗರದ ಪ್ರಜ್ಞಾವಂತರ ಬಹುದೊಡ್ಡ ಸಾಮಾಜಿಕ ಜವಾಬ್ದಾರಿಯಾಗಿದೆ.

ಏಕೆಂದರೆ ಇತ್ತೀಚೆಗೆ ಮೈಸೂರಿನ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳು ಐತಿಹಾಸಿಕ ಎನ್‌ಟಿಎಂ ಶಾಲೆಯ ಆವರಣದಲ್ಲೇ ಸ್ವಾಮಿ ವಿವೇಕಾನಂದರ ಸ್ಮಾರಕವನ್ನು ನಿರ್ಮಿಸಬೇಕೆಂದು ಪಟ್ಟು ಹಿಡಿದಿರುವುದು ಇತಿಹಾಸ ಮತ್ತು ಲಿಂಗ ಸಮಾನತೆಗಳಿಗೆ ಬಗೆದಿರುವ ಅಪಚಾರವೇ ಆಗಿದೆ. ಈಗಾದಾಗ ಆ ಶಾಲೆಯನ್ನು ಮುಚ್ಚಬೇಕಾಗುತ್ತದೆ. ಎನ್‌ಟಿಎಂ ಶಾಲೆಯನ್ನು ಆರಂಭಿಸಲು ವಿವೇಕಾನಂದರು ಪ್ರೇರಣೆ ನೀಡಿದರೇ ಹೊರತು ಶಾಲೆಯ ಆವರಣದಲ್ಲಿ ಎಂದಿಗೂ ತಂಗಿರಲಿಲ್ಲ. ಅವರು ಉಳಿದುಕೊಂಡಿದ್ದ ದಿವಾನ್ ಶೇಷಾದ್ರಿ ಅಯ್ಯರ್ ಭವನ ಹಾಗೂ ನಿರಂಜನ ಮಠಗಳೊಂದಿಗೆ ಎನ್‌ಟಿಎಂ ಶಾಲೆ ಯಾವುದೇ ವಿಧದ ಸಂಬಂಧ ಹೊಂದಿಲ್ಲ. ಆದಾಗ್ಯೂ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳು ಶಾಲೆಯ ಆವರಣದಲ್ಲೇ ವಿವೇಕಾನಂದರ ಸ್ಮಾರಕ ನಿರ್ಮಿಸಿ ಶಾಲೆಯನ್ನು ಬೇರೊಂದು ಸಮೀಪದ ಸರ್ಕಾರಿ ಶಾಲೆಯೊಂದಿಗೆ ವಿಲೀನಗೊಳಿಸಬೇಕೆಂದು ಪಟ್ಟು ಹಿಡಿದಿರುವುದು ಅರ್ಥಹೀನವಾಗಿದೆ.

ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

1970ರ ದಶಕದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮೈಸೂರು ನಗರದ ಕೇಂದ್ರ ಭಾಗದಲ್ಲಿರುವ ಯಾದವಗಿರಿಯಲ್ಲಿ ಸುಮಾರು 60 ಎಕರೆಯಷ್ಟು ಕೋಟ್ಯಾಂತರ ಬೆಲೆ ಬಾಳುವ ಅಮೂಲ್ಯ ಭೂಮಿಯನ್ನು ರಾಮಕೃಷ್ಣ ಆಶ್ರಮದ ಸಾಂಸ್ಕೃತಿಕ-ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಮಂಜೂರು ಮಾಡಿತ್ತು. ಸುಮಾರು 2-3 ಎಕರೆ ಪ್ರದೇಶದಲ್ಲಿ ಧ್ಯಾನಕೇಂದ್ರ, ಗ್ರಂಥಾಲಯ, ಸಭಾಂಗಣ ಮೊದಲಾದ ಸೌಕರ್ಯಗಳನ್ನು ಒದಗಿಸಲಾಗಿದೆ. ಸುಮಾರು 57 ಎಕರೆಯಷ್ಟು ಅಮೂಲ್ಯ ಭೂಮಿ ಖಾಲಿ ಬಿದ್ದಿದ್ದು ಸರ್ಕಾರದ ನೆರವು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲದಿರುವ ಹಿನ್ನೆಲೆಯಲ್ಲಿ ವಿವೇಕಾನಂದ ಸ್ಮಾರಕವನ್ನು ಅಲ್ಲಿಯೇ ನಿರ್ಮಿಸುವುದು ಸೂಕ್ತವಾಗಿದೆ.

ಕಳೆದ ವರ್ಷ ಮೈಸೂರಿನ 106 ಮಂದಿ ಪ್ರಗತಿಪರ ಚಿಂತಕರು ಮತ್ತು ಎನ್‌ಟಿಎಂ ಶಾಲೆ ಹಿತೈಷಿಗಳು ಯಾವುದೇ ಕಾರಣಕ್ಕೂ ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯದಿಂದಾಗಿ ಎನ್‌ಟಿಎಂ ಶಾಲೆಯನ್ನು ಮುಚ್ಚಬಾರದೆಂದು ಸತ್ಯಾಗ್ರಹ ನಡೆಸಿ ಕರ್ನಾಟಕ ರಾಜ್ಯ ಸರ್ಕಾರದ ಗಮನ ಸೆಳೆದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅತ್ಯಂತ ಪ್ರೀತಿ ಮತ್ತು ಕಾಳಜಿಯಿಂದ ಎನ್‌ಟಿಎಂ ಶಾಲೆ ತಳ ಸಮುದಾಯಗಳ ಜ್ಞಾನ ದಾಸೋಹ ಕೇಂದ್ರವಾಗಿರುವ ಹಿನ್ನೆಲೆಯಲ್ಲಿ ಅಲ್ಲಿಯೇ ಮುಂದುವರೆಯಲಿ, ಸ್ವಾಮಿ ವಿವೇಕಾನಂದರ ಸ್ಮಾರಕ ಶಾಲೆಯ ಹೊರಗೆ ನಿರ್ಮಾಣವಾಗಲೆಂಬ ತೀರ್ಮಾನಕ್ಕೆ ಬಂದರು. ಆದಾಗ್ಯೂ ಮೇಲ್ಕಂಡ ಐತಿಹಾಸಿಕ – ಸಾಂಸ್ಕೃತಿಕ ವಿಚಾರಗಳಿಗೆ ಯಾವುದೇ ರೀತಿಯಲ್ಲೂ ಸಂಬಂಧವಿಲ್ಲದ ಎನ್‌ಟಿಎಂ ಶಾಲೆಯ ಆವರಣದಲ್ಲೇ ವಿವೇಕಾನಂದ ಸ್ಮಾರಕ ನಿರ್ಮಿಸಲು ರಾಮಕೃಷ್ಣ ಆಶ್ರಮದವರು ಒತ್ತಾಯಿಸುತ್ತಿರುವುದು ಅರ್ಥಹೀನ ಸಂಗತಿಯಾಗಿದೆ.

2019ರಲ್ಲಿ ಶಾಲೆ ಉಳಿಸಲು ಹೋರಾಟ

ಈ ಪ್ರಕರಣ ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗಿದ್ದು ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣವಾಗಬೇಕೆಂಬ ನಿಲುವನ್ನು ಹೊಂದಿರುವುದು ನೈಜ ಇತಿಹಾಸ ಮತ್ತು ಸಾಂವಿಧಾನಿಕ ಲಿಂಗ ಸಮಾನತೆ ಆಶಯಗಳಿಗೆ ವಿರುದ್ಧವಾಗಿದೆ. ಇಂತಹ ಅಪ್ರಸ್ತುತ ತೀರ್ಮಾನವನ್ನು ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅಧಿಕಾರ ನಮಗಿದೆ. ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಗಳು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಎನ್‌ಟಿಎಂ ಶಾಲೆ ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಒಟ್ಟಿಗೆ ಇರುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲವೆಂದು ತಿಳಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳು ಈ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಕರ್ನಾಟಕ ಉಚ್ಛನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಶಾಲೆಯನ್ನು ಉಳಿಸುವುದು ಅತ್ಯಂತ ಸೂಕ್ತ ಕ್ರಮವಾಗಿದೆ.

ರಾಮಕೃಷ್ಣ ಆಶ್ರಮದವರಿಗೆ ವಿವೇಕಾನಂದರ ಸ್ಮಾರಕ, ಶಾಪಿಂಗ್‌ಮಾಲ್, ವಾಣಿಜ್ಯ ಸಂಕೀರ್ಣ ಮೊದಲಾದವುಗಳನ್ನು ನಿರ್ಮಿಸಿ ಆರ್ಥಿಕವಾಗಿ ಲಾಭ ಗಳಿಸಬೇಕೆಂಬ ಧೋರಣೆ ಇರುವುದು ಖಂಡನೀಯ. ಐತಿಹಾಸಿಕ ಬಾಲಕಿಯರ ಶಾಲೆಯನ್ನು ಮುಚ್ಚಿಸಿ ವಿವೇಕಾನಂದರ ಸ್ಮಾರಕ ನಿರ್ಮಿಸಬೇಕೆಂದು ಇವರ ಜೊತೆಗೂಡಿ ಮೈಸೂರು ನಗರದ ಕೆಲವು ಸ್ಥಾಪಿತ ಹಿತಾಸಕ್ತಿಗಳು ವಾದಿಸುತ್ತಿರುವುದು ಅರ್ಥಹೀನ. ಆಶ್ರಮದ ಉಸ್ತುವಾರಿ ವಹಿಸಿರುವ ಧಾರ್ಮಿಕ ಮುಖಂಡರಿಗೆ ‘ಸ್ಥಾವರಕ್ಕೆ ಅಳಿವುಂಟು, ಜಂಗಮಕ್ಕೆ ಅಳಿವಿಲ್ಲ’ ಎಂಬ ಸತ್ಯದರ್ಶನ ಆಗಿಲ್ಲದಿರುವುದು ಬಹುದೊಡ್ಡ ವಿಪರ್ಯಾಸವಾಗಿದೆ. ಅಂದು ಆಶ್ರಮದ ಸ್ವಾಮೀಜಿಗಳೇ ಬರೆದಿರುವ ಪುಸ್ತಕದಲ್ಲಿ ‘ಬಡವರಿಗಾಗಿ ಶಾಲೆಯನ್ನು ತೆರೆಯಬೇಕೆಂದು ವಿವೇಕಾನಂದರು ಪತ್ರ ಬರೆದಿರುವುದು’ ನೆನಪಾಗುತ್ತಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ.

ಶಾಲೆ ಉಳಿವಿಗಾಗಿ ರೈತ ಸಂಘದಿಂದ ಹೋರಾಟ

ಶ್ರೀ ರಾಮಕೃಷ್ಣ ಆಶ್ರಮದವರು ಶಾಲೆಯನ್ನು ಉಳಿಸಿ ಸ್ಮಾರಕ ನಿರ್ಮಿಸಲು ಮುಂದಾಗಲಿ ಎಂಬುದು ಪ್ರಜ್ಞಾವಂತರ ನ್ಯಾಯೋಚಿತ ಆಶಯವಾಗಿದೆ. ಬಡಹೆಣ್ಣುಮಕ್ಕಳ ಶಾಲೆಯನ್ನು ನಾಶಗೊಳಿಸಿ ಸ್ಮಾರಕ ನಿರ್ಮಿಸುವ ಯೋಜನೆಗೆ ಸ್ವಾಮಿ ವಿವೇಕಾನಂದರ ಆತ್ಮ ಖಂಡಿತ ಸಮ್ಮತಿ ನೀಡುವುದಿಲ್ಲ. ಎನ್‌ಟಿಎಂ ಶಾಲೆ ಉಳಿಯಲಿ ಎಂಬ ನ್ಯಾಯೋಚಿತ ಬೇಡಿಕೆಗೆ ಸರ್ಕಾರ ಮತ್ತು ಆಶ್ರಮದವರು ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಶ್ರೀ ರಾಮಕೃಷ್ಣ ಆಶ್ರಮದ ಆವರಣದಲ್ಲಿ ಸದ್ಬಳಕೆಯಾಗದೇ ಉಳಿದಿರುವ ಸುಮಾರು 57 ಎಕರೆ ಭೂಮಿಯನ್ನು ಸರ್ಕಾರ ಹಿಂಪಡೆಯಲಿ ಎಂದು ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡುವುದು ಅನಿವಾರ್ಯವಾಗುತ್ತದೆ. ದೀನ ದುರ್ಬಲ ವರ್ಗಗಳಿಗೆ ಸೇರಿದ ಬಾಲಕಿಯರ ಶಾಲೆಯ ಗೋರಿಯ ಮೇಲೆ ವಿವೇಕಾನಂದರ ಭವ್ಯ ಸ್ಮಾರಕ ನಿರ್ಮಿಸಿ ವಾಣಿಜ್ಯ ಉದ್ದೇಶಗಳನ್ನು ಆಧ್ಯಾತ್ಮದ ಹೆಸರಿನಲ್ಲಿ ಈಡೇರಿಸುವ ಪ್ರಯತ್ನಗಳನ್ನು ಕಾನೂನುಬದ್ಧವಾಗಿ ನಿಷ್ಕ್ರಿಯಗೊಳಿಸಲು ಮೈಸೂರು ನಗರದ ಪ್ರಜ್ಞಾವಂತರು ಬದ್ಧರಾಗಿದ್ದಾರೆ.

  • ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೆಣ್ಣು ಮಕ್ಕಳ ಶಾಲೆಯನ್ನು ನಾಶಪಡಿಸಿ, ಅಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಿಸುವುದು ಕಂಡನಾರ್ಹ. ಪ್ರಜ್ಞಾವಂತರೆಲ್ಲರೂ ಇದನ್ನು ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...