Homeಚಳವಳಿಸ್ವಾರ್ಥಪರ ಯೋಗಿ - ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ಬಡಹೆಣ್ಣುಮಕ್ಕಳ ಶಾಲೆಯನ್ನು ನಾಶಗೊಳಿಸಿ ಸ್ಮಾರಕ ನಿರ್ಮಿಸುವ ಯೋಜನೆಗೆ ಸ್ವಾಮಿ ವಿವೇಕಾನಂದರ ಆತ್ಮ ಖಂಡಿತ ಸಮ್ಮತಿ ನೀಡುವುದಿಲ್ಲ.

- Advertisement -
- Advertisement -

ಮೈಸೂರಿನ ಮಹಾರಾಜ 10ನೇ ಚಾಮರಾಜ ಒಡೆಯರ ಆಳ್ವಿಕೆ ಸಮಯದಲ್ಲಿ 1890ನೇ ಇಸವಿಯಲ್ಲಿ ವೀರ ಸಂತ ವಿವೇಕಾನಂದರು ಮೈಸೂರಿಗೆ ನೀಡಿದ್ದ ಭೇಟಿ ಐತಿಹಾಸಿಕವಾದುದು. ವಾಸ್ತವವಾಗಿ ಅವರು ಚಿಕಾಗೋ ಧಾರ್ಮಿಕ ಸಮ್ಮೇಳನಕ್ಕೆ ಭಾರತದ ಪ್ರತಿನಿಧಿಯಾಗಿ ತೆರಳುವ ಸಲುವಾಗಿ ಮಹಾರಾಜರಿಂದ ಆರ್ಥಿಕ ನೆರವು ಯಾಚಿಸಿದರು. ಅಂದು ಶ್ರೇಷ್ಟ ಸಂತರು ಮತ್ತು ಸಾಧಕರಿಗೆ ರಾಜಾಶ್ರಯ ಭಾರತದ ಎಲ್ಲೆಡೆ ಲಭಿಸಿತ್ತು. ಮೈಸೂರಿನ ರಾಜಮನೆತನ ಅನೇಕ ಜ್ಞಾನಿಗಳು ಮತ್ತು ಅನುಭಾವಿಗಳಿಗೆ ಎಲ್ಲ ರೀತಿಯಲ್ಲೂ ಪ್ರೋತ್ಸಾಹಿಸಿದ ಉದಾಹರಣೆಗಳು ಬಹಳಷ್ಟಿವೆ. ವಿವೇಕಾನಂದರು ಮೈಸೂರಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆಗಿನ ದಿವಾನ್ ಶೇಷಾದ್ರಿ ಅಯ್ಯರ್ ಭವನದಲ್ಲಿ ತಂಗಿದ್ದು ಎನ್‌ಟಿಎಂ ಶಾಲೆಯ ಪಕ್ಕದಲ್ಲಿರುವ ನಿರಂಜನ ಮಠ ಮತ್ತು ಸದ್ವಿದ್ಯಾ ಶಾಲೆಗಳಲ್ಲಿ ಉಪನ್ಯಾಸಗಳನ್ನು ಮಾಡಿರುವುದಕ್ಕೆ ಐತಿಹಾಸಿಕ ದಾಖಲೆಗಳಿವೆ.

ಮೈಸೂರು ನಗರ ಹಲವಾರು ಪಾರಂಪರಿಕ ಕಟ್ಟಡಗಳನ್ನು ಹೊಂದಿದ್ದು ಪ್ರತಿ ವರ್ಷ ಲಕ್ಷಾಂತರ ದೇಶ ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತದೆ. ವಿಶೇಷವಾಗಿ ಐತಿಹಾಸಿಕ ಮೈಸೂರು ದಸರಾ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಟ್ಟು ಮೈಸೂರಿನ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಿದ್ದಾರೆ. ಸುಮಾರು 140 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಯನ್ನು ತೆರೆಯಬೇಕೆಂದು ಚಾಮರಾಜ ಒಡೆಯರಿಗೆ ಅತ್ಯಂತ ಕಳಕಳಿಯಿಂದ ಮನವಿ ಮಾಡಿದ್ದರು. ಇವರ ಮಾನವೀಯ ಕಳಕಳಿಯಿಂದ ಪ್ರಭಾವಿತರಾದ ಮಹಾರಾಣಿ ವಾಣಿವಿಲಾಸ ಅಮ್ಮಣ್ಣಿಯವರು ತಮ್ಮ ಮುಂದಾಲೋಚನೆಯಿಂದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮೈಸೂರು ನಗರದಲ್ಲಿ ಮರಿಮಲ್ಲಪ್ಪ ಕಾಲೇಜಿಗೆ ಹೊಂದಿಕೊಂಡಂತಿರುವ ಸ್ಥಳದಲ್ಲಿ ಎನ್‌ಟಿಎಂ ಶಾಲೆಯನ್ನು ಆರಂಭಿಸಿದರು. ಇದು ಭಾರತ ದೇಶದಲ್ಲಿ ಹೆಣ್ಣುಮಕ್ಕಳ ಪ್ರಪ್ರಥಮ ಶಾಲೆಯೆಂಬ ಹೆಗ್ಗಳಿಕೆಯನ್ನು ಹೊಂದಿದೆ. ಇಂತಹ ಐತಿಹಾಸಿಕ ಶಾಲೆಯನ್ನು ಉಳಿಸಿಕೊಳ್ಳುವುದು ಮೈಸೂರು ನಗರದ ಪ್ರಜ್ಞಾವಂತರ ಬಹುದೊಡ್ಡ ಸಾಮಾಜಿಕ ಜವಾಬ್ದಾರಿಯಾಗಿದೆ.

ಏಕೆಂದರೆ ಇತ್ತೀಚೆಗೆ ಮೈಸೂರಿನ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳು ಐತಿಹಾಸಿಕ ಎನ್‌ಟಿಎಂ ಶಾಲೆಯ ಆವರಣದಲ್ಲೇ ಸ್ವಾಮಿ ವಿವೇಕಾನಂದರ ಸ್ಮಾರಕವನ್ನು ನಿರ್ಮಿಸಬೇಕೆಂದು ಪಟ್ಟು ಹಿಡಿದಿರುವುದು ಇತಿಹಾಸ ಮತ್ತು ಲಿಂಗ ಸಮಾನತೆಗಳಿಗೆ ಬಗೆದಿರುವ ಅಪಚಾರವೇ ಆಗಿದೆ. ಈಗಾದಾಗ ಆ ಶಾಲೆಯನ್ನು ಮುಚ್ಚಬೇಕಾಗುತ್ತದೆ. ಎನ್‌ಟಿಎಂ ಶಾಲೆಯನ್ನು ಆರಂಭಿಸಲು ವಿವೇಕಾನಂದರು ಪ್ರೇರಣೆ ನೀಡಿದರೇ ಹೊರತು ಶಾಲೆಯ ಆವರಣದಲ್ಲಿ ಎಂದಿಗೂ ತಂಗಿರಲಿಲ್ಲ. ಅವರು ಉಳಿದುಕೊಂಡಿದ್ದ ದಿವಾನ್ ಶೇಷಾದ್ರಿ ಅಯ್ಯರ್ ಭವನ ಹಾಗೂ ನಿರಂಜನ ಮಠಗಳೊಂದಿಗೆ ಎನ್‌ಟಿಎಂ ಶಾಲೆ ಯಾವುದೇ ವಿಧದ ಸಂಬಂಧ ಹೊಂದಿಲ್ಲ. ಆದಾಗ್ಯೂ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳು ಶಾಲೆಯ ಆವರಣದಲ್ಲೇ ವಿವೇಕಾನಂದರ ಸ್ಮಾರಕ ನಿರ್ಮಿಸಿ ಶಾಲೆಯನ್ನು ಬೇರೊಂದು ಸಮೀಪದ ಸರ್ಕಾರಿ ಶಾಲೆಯೊಂದಿಗೆ ವಿಲೀನಗೊಳಿಸಬೇಕೆಂದು ಪಟ್ಟು ಹಿಡಿದಿರುವುದು ಅರ್ಥಹೀನವಾಗಿದೆ.

ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

1970ರ ದಶಕದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮೈಸೂರು ನಗರದ ಕೇಂದ್ರ ಭಾಗದಲ್ಲಿರುವ ಯಾದವಗಿರಿಯಲ್ಲಿ ಸುಮಾರು 60 ಎಕರೆಯಷ್ಟು ಕೋಟ್ಯಾಂತರ ಬೆಲೆ ಬಾಳುವ ಅಮೂಲ್ಯ ಭೂಮಿಯನ್ನು ರಾಮಕೃಷ್ಣ ಆಶ್ರಮದ ಸಾಂಸ್ಕೃತಿಕ-ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಮಂಜೂರು ಮಾಡಿತ್ತು. ಸುಮಾರು 2-3 ಎಕರೆ ಪ್ರದೇಶದಲ್ಲಿ ಧ್ಯಾನಕೇಂದ್ರ, ಗ್ರಂಥಾಲಯ, ಸಭಾಂಗಣ ಮೊದಲಾದ ಸೌಕರ್ಯಗಳನ್ನು ಒದಗಿಸಲಾಗಿದೆ. ಸುಮಾರು 57 ಎಕರೆಯಷ್ಟು ಅಮೂಲ್ಯ ಭೂಮಿ ಖಾಲಿ ಬಿದ್ದಿದ್ದು ಸರ್ಕಾರದ ನೆರವು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲದಿರುವ ಹಿನ್ನೆಲೆಯಲ್ಲಿ ವಿವೇಕಾನಂದ ಸ್ಮಾರಕವನ್ನು ಅಲ್ಲಿಯೇ ನಿರ್ಮಿಸುವುದು ಸೂಕ್ತವಾಗಿದೆ.

ಕಳೆದ ವರ್ಷ ಮೈಸೂರಿನ 106 ಮಂದಿ ಪ್ರಗತಿಪರ ಚಿಂತಕರು ಮತ್ತು ಎನ್‌ಟಿಎಂ ಶಾಲೆ ಹಿತೈಷಿಗಳು ಯಾವುದೇ ಕಾರಣಕ್ಕೂ ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯದಿಂದಾಗಿ ಎನ್‌ಟಿಎಂ ಶಾಲೆಯನ್ನು ಮುಚ್ಚಬಾರದೆಂದು ಸತ್ಯಾಗ್ರಹ ನಡೆಸಿ ಕರ್ನಾಟಕ ರಾಜ್ಯ ಸರ್ಕಾರದ ಗಮನ ಸೆಳೆದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅತ್ಯಂತ ಪ್ರೀತಿ ಮತ್ತು ಕಾಳಜಿಯಿಂದ ಎನ್‌ಟಿಎಂ ಶಾಲೆ ತಳ ಸಮುದಾಯಗಳ ಜ್ಞಾನ ದಾಸೋಹ ಕೇಂದ್ರವಾಗಿರುವ ಹಿನ್ನೆಲೆಯಲ್ಲಿ ಅಲ್ಲಿಯೇ ಮುಂದುವರೆಯಲಿ, ಸ್ವಾಮಿ ವಿವೇಕಾನಂದರ ಸ್ಮಾರಕ ಶಾಲೆಯ ಹೊರಗೆ ನಿರ್ಮಾಣವಾಗಲೆಂಬ ತೀರ್ಮಾನಕ್ಕೆ ಬಂದರು. ಆದಾಗ್ಯೂ ಮೇಲ್ಕಂಡ ಐತಿಹಾಸಿಕ – ಸಾಂಸ್ಕೃತಿಕ ವಿಚಾರಗಳಿಗೆ ಯಾವುದೇ ರೀತಿಯಲ್ಲೂ ಸಂಬಂಧವಿಲ್ಲದ ಎನ್‌ಟಿಎಂ ಶಾಲೆಯ ಆವರಣದಲ್ಲೇ ವಿವೇಕಾನಂದ ಸ್ಮಾರಕ ನಿರ್ಮಿಸಲು ರಾಮಕೃಷ್ಣ ಆಶ್ರಮದವರು ಒತ್ತಾಯಿಸುತ್ತಿರುವುದು ಅರ್ಥಹೀನ ಸಂಗತಿಯಾಗಿದೆ.

2019ರಲ್ಲಿ ಶಾಲೆ ಉಳಿಸಲು ಹೋರಾಟ

ಈ ಪ್ರಕರಣ ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗಿದ್ದು ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣವಾಗಬೇಕೆಂಬ ನಿಲುವನ್ನು ಹೊಂದಿರುವುದು ನೈಜ ಇತಿಹಾಸ ಮತ್ತು ಸಾಂವಿಧಾನಿಕ ಲಿಂಗ ಸಮಾನತೆ ಆಶಯಗಳಿಗೆ ವಿರುದ್ಧವಾಗಿದೆ. ಇಂತಹ ಅಪ್ರಸ್ತುತ ತೀರ್ಮಾನವನ್ನು ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅಧಿಕಾರ ನಮಗಿದೆ. ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಗಳು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಎನ್‌ಟಿಎಂ ಶಾಲೆ ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಒಟ್ಟಿಗೆ ಇರುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲವೆಂದು ತಿಳಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳು ಈ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಕರ್ನಾಟಕ ಉಚ್ಛನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಶಾಲೆಯನ್ನು ಉಳಿಸುವುದು ಅತ್ಯಂತ ಸೂಕ್ತ ಕ್ರಮವಾಗಿದೆ.

ರಾಮಕೃಷ್ಣ ಆಶ್ರಮದವರಿಗೆ ವಿವೇಕಾನಂದರ ಸ್ಮಾರಕ, ಶಾಪಿಂಗ್‌ಮಾಲ್, ವಾಣಿಜ್ಯ ಸಂಕೀರ್ಣ ಮೊದಲಾದವುಗಳನ್ನು ನಿರ್ಮಿಸಿ ಆರ್ಥಿಕವಾಗಿ ಲಾಭ ಗಳಿಸಬೇಕೆಂಬ ಧೋರಣೆ ಇರುವುದು ಖಂಡನೀಯ. ಐತಿಹಾಸಿಕ ಬಾಲಕಿಯರ ಶಾಲೆಯನ್ನು ಮುಚ್ಚಿಸಿ ವಿವೇಕಾನಂದರ ಸ್ಮಾರಕ ನಿರ್ಮಿಸಬೇಕೆಂದು ಇವರ ಜೊತೆಗೂಡಿ ಮೈಸೂರು ನಗರದ ಕೆಲವು ಸ್ಥಾಪಿತ ಹಿತಾಸಕ್ತಿಗಳು ವಾದಿಸುತ್ತಿರುವುದು ಅರ್ಥಹೀನ. ಆಶ್ರಮದ ಉಸ್ತುವಾರಿ ವಹಿಸಿರುವ ಧಾರ್ಮಿಕ ಮುಖಂಡರಿಗೆ ‘ಸ್ಥಾವರಕ್ಕೆ ಅಳಿವುಂಟು, ಜಂಗಮಕ್ಕೆ ಅಳಿವಿಲ್ಲ’ ಎಂಬ ಸತ್ಯದರ್ಶನ ಆಗಿಲ್ಲದಿರುವುದು ಬಹುದೊಡ್ಡ ವಿಪರ್ಯಾಸವಾಗಿದೆ. ಅಂದು ಆಶ್ರಮದ ಸ್ವಾಮೀಜಿಗಳೇ ಬರೆದಿರುವ ಪುಸ್ತಕದಲ್ಲಿ ‘ಬಡವರಿಗಾಗಿ ಶಾಲೆಯನ್ನು ತೆರೆಯಬೇಕೆಂದು ವಿವೇಕಾನಂದರು ಪತ್ರ ಬರೆದಿರುವುದು’ ನೆನಪಾಗುತ್ತಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ.

ಶಾಲೆ ಉಳಿವಿಗಾಗಿ ರೈತ ಸಂಘದಿಂದ ಹೋರಾಟ

ಶ್ರೀ ರಾಮಕೃಷ್ಣ ಆಶ್ರಮದವರು ಶಾಲೆಯನ್ನು ಉಳಿಸಿ ಸ್ಮಾರಕ ನಿರ್ಮಿಸಲು ಮುಂದಾಗಲಿ ಎಂಬುದು ಪ್ರಜ್ಞಾವಂತರ ನ್ಯಾಯೋಚಿತ ಆಶಯವಾಗಿದೆ. ಬಡಹೆಣ್ಣುಮಕ್ಕಳ ಶಾಲೆಯನ್ನು ನಾಶಗೊಳಿಸಿ ಸ್ಮಾರಕ ನಿರ್ಮಿಸುವ ಯೋಜನೆಗೆ ಸ್ವಾಮಿ ವಿವೇಕಾನಂದರ ಆತ್ಮ ಖಂಡಿತ ಸಮ್ಮತಿ ನೀಡುವುದಿಲ್ಲ. ಎನ್‌ಟಿಎಂ ಶಾಲೆ ಉಳಿಯಲಿ ಎಂಬ ನ್ಯಾಯೋಚಿತ ಬೇಡಿಕೆಗೆ ಸರ್ಕಾರ ಮತ್ತು ಆಶ್ರಮದವರು ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಶ್ರೀ ರಾಮಕೃಷ್ಣ ಆಶ್ರಮದ ಆವರಣದಲ್ಲಿ ಸದ್ಬಳಕೆಯಾಗದೇ ಉಳಿದಿರುವ ಸುಮಾರು 57 ಎಕರೆ ಭೂಮಿಯನ್ನು ಸರ್ಕಾರ ಹಿಂಪಡೆಯಲಿ ಎಂದು ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡುವುದು ಅನಿವಾರ್ಯವಾಗುತ್ತದೆ. ದೀನ ದುರ್ಬಲ ವರ್ಗಗಳಿಗೆ ಸೇರಿದ ಬಾಲಕಿಯರ ಶಾಲೆಯ ಗೋರಿಯ ಮೇಲೆ ವಿವೇಕಾನಂದರ ಭವ್ಯ ಸ್ಮಾರಕ ನಿರ್ಮಿಸಿ ವಾಣಿಜ್ಯ ಉದ್ದೇಶಗಳನ್ನು ಆಧ್ಯಾತ್ಮದ ಹೆಸರಿನಲ್ಲಿ ಈಡೇರಿಸುವ ಪ್ರಯತ್ನಗಳನ್ನು ಕಾನೂನುಬದ್ಧವಾಗಿ ನಿಷ್ಕ್ರಿಯಗೊಳಿಸಲು ಮೈಸೂರು ನಗರದ ಪ್ರಜ್ಞಾವಂತರು ಬದ್ಧರಾಗಿದ್ದಾರೆ.

  • ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೆಣ್ಣು ಮಕ್ಕಳ ಶಾಲೆಯನ್ನು ನಾಶಪಡಿಸಿ, ಅಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಿಸುವುದು ಕಂಡನಾರ್ಹ. ಪ್ರಜ್ಞಾವಂತರೆಲ್ಲರೂ ಇದನ್ನು ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...