Homeಕರ್ನಾಟಕಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

ಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

- Advertisement -
- Advertisement -

ತುಂಗಾಭದ್ರ ಅಣೆಕಟ್ಟಿನಿಂದ ನದಿಯು ಉಕ್ಕಿ ಹರಿಯುತ್ತಿರುವುದರಿಂದ ಹಂಪಿಯ ಪುರಂದರ ಮಂಟಪ ಕಳೆದ ಒಂದು ವರ್ಷದಲ್ಲಿ 11 ಬಾರಿ ಮುಳುಗಡೆಯಾಗಿದೆ. 14ನೇ ಶತಮಾನದ ಈ ಸ್ಮಾರಕದಲ್ಲಿ ಇಷ್ಟೊಂದು ಬಾರಿ ನೀರು ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಭಾರತದ ಪುರಾತತ್ವ ಇಲಾಖೆ(ಎಎಸ್‌ಐ)ಯು ತುಂಗಭದ್ರಾ ನದಿಯ ದಡದಲ್ಲಿರುವ ಪುರಂದರ ಮಂಟಪಕ್ಕೆ 2021 ರ ಮಾನ್ಸೂನ್ ಪ್ರಾರಂಭವಾಗುವ ಮೊದಲು ಜಲನಿರೋಧಕವನ್ನು ಅಳವಡಿಸಿತ್ತು. ಜೊತೆಗೆ, ಅಣೆಕಟ್ಟಿನಿಂದ ಮೇಲಕ್ಕೆ ಬಿಡುವ ನೀರಿನ ಹರಿವನ್ನು ತಡೆದುಕೊಳ್ಳಲು ಪಿಲ್ಲರ್‌ಗಳನ್ನು ಬಲಪಡಿಸಲಾಗಿತ್ತು.

ಸ್ಮಾರಕವೂ ಯಾವ ಮಟ್ಟಿಗೆ ಹಾನಿಯಾಗಿದೆ ಎಂದು ತಿಳಿದುಕೊಳ್ಳಬೇಕಾಗದರೆ, ನೀರಿನ ಪ್ರಮಾಣ ಕಡಿಮೆಯಾಗಬೇಕು ಎಂದು ಹಂಪಿ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“600 ವರ್ಷಗಳ ಹಿಂದೆ ನಿರ್ಮಿಸಲಾದ ಪುರಂದರ ಮಂಟಪದ ಕಂಬಗಳ ನಿರ್ವಹಣೆಯನ್ನು ‘ಎಎಸ್‌ಐ’ ವಹಿಸಿಕೊಂಡಿದ್ದು, ಕಂಬಗಳು ಗಟ್ಟಿಯಾಗಿ ನಿಂತಿವೆ. ಆದರೆ ಕಳೆದ ಕೆಲವು ವರ್ಷಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ ಮಂಟಪವು ಮೊದಲಿಗಿಂತ ಹೆಚ್ಚು ಮುಳುಗಡೆಯಾಗುತ್ತಿದೆ. ನೀರಿನ ಮಟ್ಟ ಕಡಿಮೆಯಾದ ನಂತರ ಎಎಸ್‌ಐ ತಂಡವು ಪರಿಸ್ಥಿತಿಯನ್ನು ಅವಲೋಕಿಸುತ್ತದೆ. ಅಗತ್ಯಕ್ಕೆ ಅನುಗುಣವಾಗಿ ಮರುಸ್ಥಾಪನೆ ಕೆಲಸ ಅದು ಮಾಡಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

“ಹಂಪಿ ಯುನೆಸ್ಕೋ ಪಾರಂಪರಿಕ ತಾಣವಾಗಿರುವುದರಿಂದ ಯಾವುದೇ ಸ್ಮಾರಕಗಳನ್ನು ಪುನಃಸ್ಥಾಪಿಸಲು ನಾವು ಸಿಮೆಂಟ್ ಸೇರಿದಂತೆ ಕೃತಕ ವಸ್ತುಗಳನ್ನು ಬಳಸುವುದಿಲ್ಲ. ಅಗತ್ಯವಿರುವ ಯಾವುದೇ ಕಟ್ಟಡವನ್ನು ಬಲಪಡಿಸಲು ಕಲ್ಲು ಮತ್ತು ಕಲ್ಲಿನ ಚಪ್ಪಡಿಗಳನ್ನು ಬಳಸಲಾಗುತ್ತದೆ. ಕಳೆದ ವರ್ಷ ಭಾರಿ ಮಳೆಯಿಂದಾಗಿ ಹಂಪಿಯಲ್ಲಿ ಮೂರು ಕಟ್ಟಡಗಳು ಭಾಗಶಃ ಹಾನಿಗೊಳಗಾಗಿದ್ದವು. ಪುನಃಸ್ಥಾಪನೆಯ ಕೆಲಸ ನಡೆಯುತ್ತಿದೆ, ಶಿಥಿಲಗೊಂಡಿರುವ ಇತರ ಸ್ಮಾರಕಗಳೂ ಇವೆ ಮತ್ತು ಅವುಗಳ ಸ್ಥಿರತೆಗಾಗಿ ನಿಯಮಿತವಾಗಿ ಪರಿಶೀಲಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

“ಪುರಂದರ ಮಂಟಪವು ಹಂಪಿಯಲ್ಲಿ ಛಾಯಾಚಿತ್ರಕ್ಕೆ ಬಲು ಬೇಡಿಕೆಯಿರುವ ತಾಣವಾಗಿದೆ. ಹಂಪಿಯಲ್ಲಿ ಹಲವಾರು ಪ್ರಮುಖ ಸ್ಮಾರಕಗಳಿದ್ದರೂ, ನೀರಿನ ಮಟ್ಟವು ಸಾಮಾನ್ಯವಾಗಿದ್ದರೆ ಹೆಚ್ಚಿನ ಪ್ರವಾಸಿಗರು ಇಲ್ಲಿ ಸೆಲ್ಫಿ ತೆಗೆದುಕೊಳ್ಳದೆ ಹಿಂತಿರುಗುವುದಿಲ್ಲ” ಎಂದು ಹಂಪಿಯ ಪ್ರವಾಸಿ ಗೈಡ್‌ ಒಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...