Homeಕರ್ನಾಟಕಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

ಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

- Advertisement -
- Advertisement -

ತುಂಗಾಭದ್ರ ಅಣೆಕಟ್ಟಿನಿಂದ ನದಿಯು ಉಕ್ಕಿ ಹರಿಯುತ್ತಿರುವುದರಿಂದ ಹಂಪಿಯ ಪುರಂದರ ಮಂಟಪ ಕಳೆದ ಒಂದು ವರ್ಷದಲ್ಲಿ 11 ಬಾರಿ ಮುಳುಗಡೆಯಾಗಿದೆ. 14ನೇ ಶತಮಾನದ ಈ ಸ್ಮಾರಕದಲ್ಲಿ ಇಷ್ಟೊಂದು ಬಾರಿ ನೀರು ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಭಾರತದ ಪುರಾತತ್ವ ಇಲಾಖೆ(ಎಎಸ್‌ಐ)ಯು ತುಂಗಭದ್ರಾ ನದಿಯ ದಡದಲ್ಲಿರುವ ಪುರಂದರ ಮಂಟಪಕ್ಕೆ 2021 ರ ಮಾನ್ಸೂನ್ ಪ್ರಾರಂಭವಾಗುವ ಮೊದಲು ಜಲನಿರೋಧಕವನ್ನು ಅಳವಡಿಸಿತ್ತು. ಜೊತೆಗೆ, ಅಣೆಕಟ್ಟಿನಿಂದ ಮೇಲಕ್ಕೆ ಬಿಡುವ ನೀರಿನ ಹರಿವನ್ನು ತಡೆದುಕೊಳ್ಳಲು ಪಿಲ್ಲರ್‌ಗಳನ್ನು ಬಲಪಡಿಸಲಾಗಿತ್ತು.

ಸ್ಮಾರಕವೂ ಯಾವ ಮಟ್ಟಿಗೆ ಹಾನಿಯಾಗಿದೆ ಎಂದು ತಿಳಿದುಕೊಳ್ಳಬೇಕಾಗದರೆ, ನೀರಿನ ಪ್ರಮಾಣ ಕಡಿಮೆಯಾಗಬೇಕು ಎಂದು ಹಂಪಿ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“600 ವರ್ಷಗಳ ಹಿಂದೆ ನಿರ್ಮಿಸಲಾದ ಪುರಂದರ ಮಂಟಪದ ಕಂಬಗಳ ನಿರ್ವಹಣೆಯನ್ನು ‘ಎಎಸ್‌ಐ’ ವಹಿಸಿಕೊಂಡಿದ್ದು, ಕಂಬಗಳು ಗಟ್ಟಿಯಾಗಿ ನಿಂತಿವೆ. ಆದರೆ ಕಳೆದ ಕೆಲವು ವರ್ಷಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ ಮಂಟಪವು ಮೊದಲಿಗಿಂತ ಹೆಚ್ಚು ಮುಳುಗಡೆಯಾಗುತ್ತಿದೆ. ನೀರಿನ ಮಟ್ಟ ಕಡಿಮೆಯಾದ ನಂತರ ಎಎಸ್‌ಐ ತಂಡವು ಪರಿಸ್ಥಿತಿಯನ್ನು ಅವಲೋಕಿಸುತ್ತದೆ. ಅಗತ್ಯಕ್ಕೆ ಅನುಗುಣವಾಗಿ ಮರುಸ್ಥಾಪನೆ ಕೆಲಸ ಅದು ಮಾಡಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

“ಹಂಪಿ ಯುನೆಸ್ಕೋ ಪಾರಂಪರಿಕ ತಾಣವಾಗಿರುವುದರಿಂದ ಯಾವುದೇ ಸ್ಮಾರಕಗಳನ್ನು ಪುನಃಸ್ಥಾಪಿಸಲು ನಾವು ಸಿಮೆಂಟ್ ಸೇರಿದಂತೆ ಕೃತಕ ವಸ್ತುಗಳನ್ನು ಬಳಸುವುದಿಲ್ಲ. ಅಗತ್ಯವಿರುವ ಯಾವುದೇ ಕಟ್ಟಡವನ್ನು ಬಲಪಡಿಸಲು ಕಲ್ಲು ಮತ್ತು ಕಲ್ಲಿನ ಚಪ್ಪಡಿಗಳನ್ನು ಬಳಸಲಾಗುತ್ತದೆ. ಕಳೆದ ವರ್ಷ ಭಾರಿ ಮಳೆಯಿಂದಾಗಿ ಹಂಪಿಯಲ್ಲಿ ಮೂರು ಕಟ್ಟಡಗಳು ಭಾಗಶಃ ಹಾನಿಗೊಳಗಾಗಿದ್ದವು. ಪುನಃಸ್ಥಾಪನೆಯ ಕೆಲಸ ನಡೆಯುತ್ತಿದೆ, ಶಿಥಿಲಗೊಂಡಿರುವ ಇತರ ಸ್ಮಾರಕಗಳೂ ಇವೆ ಮತ್ತು ಅವುಗಳ ಸ್ಥಿರತೆಗಾಗಿ ನಿಯಮಿತವಾಗಿ ಪರಿಶೀಲಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

“ಪುರಂದರ ಮಂಟಪವು ಹಂಪಿಯಲ್ಲಿ ಛಾಯಾಚಿತ್ರಕ್ಕೆ ಬಲು ಬೇಡಿಕೆಯಿರುವ ತಾಣವಾಗಿದೆ. ಹಂಪಿಯಲ್ಲಿ ಹಲವಾರು ಪ್ರಮುಖ ಸ್ಮಾರಕಗಳಿದ್ದರೂ, ನೀರಿನ ಮಟ್ಟವು ಸಾಮಾನ್ಯವಾಗಿದ್ದರೆ ಹೆಚ್ಚಿನ ಪ್ರವಾಸಿಗರು ಇಲ್ಲಿ ಸೆಲ್ಫಿ ತೆಗೆದುಕೊಳ್ಳದೆ ಹಿಂತಿರುಗುವುದಿಲ್ಲ” ಎಂದು ಹಂಪಿಯ ಪ್ರವಾಸಿ ಗೈಡ್‌ ಒಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...