Homeಕರ್ನಾಟಕಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

ಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

- Advertisement -
- Advertisement -

ತುಂಗಾಭದ್ರ ಅಣೆಕಟ್ಟಿನಿಂದ ನದಿಯು ಉಕ್ಕಿ ಹರಿಯುತ್ತಿರುವುದರಿಂದ ಹಂಪಿಯ ಪುರಂದರ ಮಂಟಪ ಕಳೆದ ಒಂದು ವರ್ಷದಲ್ಲಿ 11 ಬಾರಿ ಮುಳುಗಡೆಯಾಗಿದೆ. 14ನೇ ಶತಮಾನದ ಈ ಸ್ಮಾರಕದಲ್ಲಿ ಇಷ್ಟೊಂದು ಬಾರಿ ನೀರು ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಭಾರತದ ಪುರಾತತ್ವ ಇಲಾಖೆ(ಎಎಸ್‌ಐ)ಯು ತುಂಗಭದ್ರಾ ನದಿಯ ದಡದಲ್ಲಿರುವ ಪುರಂದರ ಮಂಟಪಕ್ಕೆ 2021 ರ ಮಾನ್ಸೂನ್ ಪ್ರಾರಂಭವಾಗುವ ಮೊದಲು ಜಲನಿರೋಧಕವನ್ನು ಅಳವಡಿಸಿತ್ತು. ಜೊತೆಗೆ, ಅಣೆಕಟ್ಟಿನಿಂದ ಮೇಲಕ್ಕೆ ಬಿಡುವ ನೀರಿನ ಹರಿವನ್ನು ತಡೆದುಕೊಳ್ಳಲು ಪಿಲ್ಲರ್‌ಗಳನ್ನು ಬಲಪಡಿಸಲಾಗಿತ್ತು.

ಸ್ಮಾರಕವೂ ಯಾವ ಮಟ್ಟಿಗೆ ಹಾನಿಯಾಗಿದೆ ಎಂದು ತಿಳಿದುಕೊಳ್ಳಬೇಕಾಗದರೆ, ನೀರಿನ ಪ್ರಮಾಣ ಕಡಿಮೆಯಾಗಬೇಕು ಎಂದು ಹಂಪಿ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“600 ವರ್ಷಗಳ ಹಿಂದೆ ನಿರ್ಮಿಸಲಾದ ಪುರಂದರ ಮಂಟಪದ ಕಂಬಗಳ ನಿರ್ವಹಣೆಯನ್ನು ‘ಎಎಸ್‌ಐ’ ವಹಿಸಿಕೊಂಡಿದ್ದು, ಕಂಬಗಳು ಗಟ್ಟಿಯಾಗಿ ನಿಂತಿವೆ. ಆದರೆ ಕಳೆದ ಕೆಲವು ವರ್ಷಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ ಮಂಟಪವು ಮೊದಲಿಗಿಂತ ಹೆಚ್ಚು ಮುಳುಗಡೆಯಾಗುತ್ತಿದೆ. ನೀರಿನ ಮಟ್ಟ ಕಡಿಮೆಯಾದ ನಂತರ ಎಎಸ್‌ಐ ತಂಡವು ಪರಿಸ್ಥಿತಿಯನ್ನು ಅವಲೋಕಿಸುತ್ತದೆ. ಅಗತ್ಯಕ್ಕೆ ಅನುಗುಣವಾಗಿ ಮರುಸ್ಥಾಪನೆ ಕೆಲಸ ಅದು ಮಾಡಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

“ಹಂಪಿ ಯುನೆಸ್ಕೋ ಪಾರಂಪರಿಕ ತಾಣವಾಗಿರುವುದರಿಂದ ಯಾವುದೇ ಸ್ಮಾರಕಗಳನ್ನು ಪುನಃಸ್ಥಾಪಿಸಲು ನಾವು ಸಿಮೆಂಟ್ ಸೇರಿದಂತೆ ಕೃತಕ ವಸ್ತುಗಳನ್ನು ಬಳಸುವುದಿಲ್ಲ. ಅಗತ್ಯವಿರುವ ಯಾವುದೇ ಕಟ್ಟಡವನ್ನು ಬಲಪಡಿಸಲು ಕಲ್ಲು ಮತ್ತು ಕಲ್ಲಿನ ಚಪ್ಪಡಿಗಳನ್ನು ಬಳಸಲಾಗುತ್ತದೆ. ಕಳೆದ ವರ್ಷ ಭಾರಿ ಮಳೆಯಿಂದಾಗಿ ಹಂಪಿಯಲ್ಲಿ ಮೂರು ಕಟ್ಟಡಗಳು ಭಾಗಶಃ ಹಾನಿಗೊಳಗಾಗಿದ್ದವು. ಪುನಃಸ್ಥಾಪನೆಯ ಕೆಲಸ ನಡೆಯುತ್ತಿದೆ, ಶಿಥಿಲಗೊಂಡಿರುವ ಇತರ ಸ್ಮಾರಕಗಳೂ ಇವೆ ಮತ್ತು ಅವುಗಳ ಸ್ಥಿರತೆಗಾಗಿ ನಿಯಮಿತವಾಗಿ ಪರಿಶೀಲಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

“ಪುರಂದರ ಮಂಟಪವು ಹಂಪಿಯಲ್ಲಿ ಛಾಯಾಚಿತ್ರಕ್ಕೆ ಬಲು ಬೇಡಿಕೆಯಿರುವ ತಾಣವಾಗಿದೆ. ಹಂಪಿಯಲ್ಲಿ ಹಲವಾರು ಪ್ರಮುಖ ಸ್ಮಾರಕಗಳಿದ್ದರೂ, ನೀರಿನ ಮಟ್ಟವು ಸಾಮಾನ್ಯವಾಗಿದ್ದರೆ ಹೆಚ್ಚಿನ ಪ್ರವಾಸಿಗರು ಇಲ್ಲಿ ಸೆಲ್ಫಿ ತೆಗೆದುಕೊಳ್ಳದೆ ಹಿಂತಿರುಗುವುದಿಲ್ಲ” ಎಂದು ಹಂಪಿಯ ಪ್ರವಾಸಿ ಗೈಡ್‌ ಒಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...