Homeಕರ್ನಾಟಕಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

ಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

- Advertisement -
- Advertisement -

ತುಂಗಾಭದ್ರ ಅಣೆಕಟ್ಟಿನಿಂದ ನದಿಯು ಉಕ್ಕಿ ಹರಿಯುತ್ತಿರುವುದರಿಂದ ಹಂಪಿಯ ಪುರಂದರ ಮಂಟಪ ಕಳೆದ ಒಂದು ವರ್ಷದಲ್ಲಿ 11 ಬಾರಿ ಮುಳುಗಡೆಯಾಗಿದೆ. 14ನೇ ಶತಮಾನದ ಈ ಸ್ಮಾರಕದಲ್ಲಿ ಇಷ್ಟೊಂದು ಬಾರಿ ನೀರು ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಭಾರತದ ಪುರಾತತ್ವ ಇಲಾಖೆ(ಎಎಸ್‌ಐ)ಯು ತುಂಗಭದ್ರಾ ನದಿಯ ದಡದಲ್ಲಿರುವ ಪುರಂದರ ಮಂಟಪಕ್ಕೆ 2021 ರ ಮಾನ್ಸೂನ್ ಪ್ರಾರಂಭವಾಗುವ ಮೊದಲು ಜಲನಿರೋಧಕವನ್ನು ಅಳವಡಿಸಿತ್ತು. ಜೊತೆಗೆ, ಅಣೆಕಟ್ಟಿನಿಂದ ಮೇಲಕ್ಕೆ ಬಿಡುವ ನೀರಿನ ಹರಿವನ್ನು ತಡೆದುಕೊಳ್ಳಲು ಪಿಲ್ಲರ್‌ಗಳನ್ನು ಬಲಪಡಿಸಲಾಗಿತ್ತು.

ಸ್ಮಾರಕವೂ ಯಾವ ಮಟ್ಟಿಗೆ ಹಾನಿಯಾಗಿದೆ ಎಂದು ತಿಳಿದುಕೊಳ್ಳಬೇಕಾಗದರೆ, ನೀರಿನ ಪ್ರಮಾಣ ಕಡಿಮೆಯಾಗಬೇಕು ಎಂದು ಹಂಪಿ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“600 ವರ್ಷಗಳ ಹಿಂದೆ ನಿರ್ಮಿಸಲಾದ ಪುರಂದರ ಮಂಟಪದ ಕಂಬಗಳ ನಿರ್ವಹಣೆಯನ್ನು ‘ಎಎಸ್‌ಐ’ ವಹಿಸಿಕೊಂಡಿದ್ದು, ಕಂಬಗಳು ಗಟ್ಟಿಯಾಗಿ ನಿಂತಿವೆ. ಆದರೆ ಕಳೆದ ಕೆಲವು ವರ್ಷಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ ಮಂಟಪವು ಮೊದಲಿಗಿಂತ ಹೆಚ್ಚು ಮುಳುಗಡೆಯಾಗುತ್ತಿದೆ. ನೀರಿನ ಮಟ್ಟ ಕಡಿಮೆಯಾದ ನಂತರ ಎಎಸ್‌ಐ ತಂಡವು ಪರಿಸ್ಥಿತಿಯನ್ನು ಅವಲೋಕಿಸುತ್ತದೆ. ಅಗತ್ಯಕ್ಕೆ ಅನುಗುಣವಾಗಿ ಮರುಸ್ಥಾಪನೆ ಕೆಲಸ ಅದು ಮಾಡಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

“ಹಂಪಿ ಯುನೆಸ್ಕೋ ಪಾರಂಪರಿಕ ತಾಣವಾಗಿರುವುದರಿಂದ ಯಾವುದೇ ಸ್ಮಾರಕಗಳನ್ನು ಪುನಃಸ್ಥಾಪಿಸಲು ನಾವು ಸಿಮೆಂಟ್ ಸೇರಿದಂತೆ ಕೃತಕ ವಸ್ತುಗಳನ್ನು ಬಳಸುವುದಿಲ್ಲ. ಅಗತ್ಯವಿರುವ ಯಾವುದೇ ಕಟ್ಟಡವನ್ನು ಬಲಪಡಿಸಲು ಕಲ್ಲು ಮತ್ತು ಕಲ್ಲಿನ ಚಪ್ಪಡಿಗಳನ್ನು ಬಳಸಲಾಗುತ್ತದೆ. ಕಳೆದ ವರ್ಷ ಭಾರಿ ಮಳೆಯಿಂದಾಗಿ ಹಂಪಿಯಲ್ಲಿ ಮೂರು ಕಟ್ಟಡಗಳು ಭಾಗಶಃ ಹಾನಿಗೊಳಗಾಗಿದ್ದವು. ಪುನಃಸ್ಥಾಪನೆಯ ಕೆಲಸ ನಡೆಯುತ್ತಿದೆ, ಶಿಥಿಲಗೊಂಡಿರುವ ಇತರ ಸ್ಮಾರಕಗಳೂ ಇವೆ ಮತ್ತು ಅವುಗಳ ಸ್ಥಿರತೆಗಾಗಿ ನಿಯಮಿತವಾಗಿ ಪರಿಶೀಲಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

“ಪುರಂದರ ಮಂಟಪವು ಹಂಪಿಯಲ್ಲಿ ಛಾಯಾಚಿತ್ರಕ್ಕೆ ಬಲು ಬೇಡಿಕೆಯಿರುವ ತಾಣವಾಗಿದೆ. ಹಂಪಿಯಲ್ಲಿ ಹಲವಾರು ಪ್ರಮುಖ ಸ್ಮಾರಕಗಳಿದ್ದರೂ, ನೀರಿನ ಮಟ್ಟವು ಸಾಮಾನ್ಯವಾಗಿದ್ದರೆ ಹೆಚ್ಚಿನ ಪ್ರವಾಸಿಗರು ಇಲ್ಲಿ ಸೆಲ್ಫಿ ತೆಗೆದುಕೊಳ್ಳದೆ ಹಿಂತಿರುಗುವುದಿಲ್ಲ” ಎಂದು ಹಂಪಿಯ ಪ್ರವಾಸಿ ಗೈಡ್‌ ಒಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...