Homeಕರ್ನಾಟಕಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

ಒಂದು ವರ್ಷದಲ್ಲಿ ಹನ್ನೊಂದನೇ ಬಾರಿ ಮುಳುಗಡೆಯಾದ ಐತಿಹಾಸಿಕ ‘ಪುರಂದರ ಮಂಟಪ’

- Advertisement -
- Advertisement -

ತುಂಗಾಭದ್ರ ಅಣೆಕಟ್ಟಿನಿಂದ ನದಿಯು ಉಕ್ಕಿ ಹರಿಯುತ್ತಿರುವುದರಿಂದ ಹಂಪಿಯ ಪುರಂದರ ಮಂಟಪ ಕಳೆದ ಒಂದು ವರ್ಷದಲ್ಲಿ 11 ಬಾರಿ ಮುಳುಗಡೆಯಾಗಿದೆ. 14ನೇ ಶತಮಾನದ ಈ ಸ್ಮಾರಕದಲ್ಲಿ ಇಷ್ಟೊಂದು ಬಾರಿ ನೀರು ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಮಾಧ್ಯಮಗಳು ಉಲ್ಲೇಖಿಸಿವೆ.

ಭಾರತದ ಪುರಾತತ್ವ ಇಲಾಖೆ(ಎಎಸ್‌ಐ)ಯು ತುಂಗಭದ್ರಾ ನದಿಯ ದಡದಲ್ಲಿರುವ ಪುರಂದರ ಮಂಟಪಕ್ಕೆ 2021 ರ ಮಾನ್ಸೂನ್ ಪ್ರಾರಂಭವಾಗುವ ಮೊದಲು ಜಲನಿರೋಧಕವನ್ನು ಅಳವಡಿಸಿತ್ತು. ಜೊತೆಗೆ, ಅಣೆಕಟ್ಟಿನಿಂದ ಮೇಲಕ್ಕೆ ಬಿಡುವ ನೀರಿನ ಹರಿವನ್ನು ತಡೆದುಕೊಳ್ಳಲು ಪಿಲ್ಲರ್‌ಗಳನ್ನು ಬಲಪಡಿಸಲಾಗಿತ್ತು.

ಸ್ಮಾರಕವೂ ಯಾವ ಮಟ್ಟಿಗೆ ಹಾನಿಯಾಗಿದೆ ಎಂದು ತಿಳಿದುಕೊಳ್ಳಬೇಕಾಗದರೆ, ನೀರಿನ ಪ್ರಮಾಣ ಕಡಿಮೆಯಾಗಬೇಕು ಎಂದು ಹಂಪಿ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“600 ವರ್ಷಗಳ ಹಿಂದೆ ನಿರ್ಮಿಸಲಾದ ಪುರಂದರ ಮಂಟಪದ ಕಂಬಗಳ ನಿರ್ವಹಣೆಯನ್ನು ‘ಎಎಸ್‌ಐ’ ವಹಿಸಿಕೊಂಡಿದ್ದು, ಕಂಬಗಳು ಗಟ್ಟಿಯಾಗಿ ನಿಂತಿವೆ. ಆದರೆ ಕಳೆದ ಕೆಲವು ವರ್ಷಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದರಿಂದ ಮಂಟಪವು ಮೊದಲಿಗಿಂತ ಹೆಚ್ಚು ಮುಳುಗಡೆಯಾಗುತ್ತಿದೆ. ನೀರಿನ ಮಟ್ಟ ಕಡಿಮೆಯಾದ ನಂತರ ಎಎಸ್‌ಐ ತಂಡವು ಪರಿಸ್ಥಿತಿಯನ್ನು ಅವಲೋಕಿಸುತ್ತದೆ. ಅಗತ್ಯಕ್ಕೆ ಅನುಗುಣವಾಗಿ ಮರುಸ್ಥಾಪನೆ ಕೆಲಸ ಅದು ಮಾಡಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

“ಹಂಪಿ ಯುನೆಸ್ಕೋ ಪಾರಂಪರಿಕ ತಾಣವಾಗಿರುವುದರಿಂದ ಯಾವುದೇ ಸ್ಮಾರಕಗಳನ್ನು ಪುನಃಸ್ಥಾಪಿಸಲು ನಾವು ಸಿಮೆಂಟ್ ಸೇರಿದಂತೆ ಕೃತಕ ವಸ್ತುಗಳನ್ನು ಬಳಸುವುದಿಲ್ಲ. ಅಗತ್ಯವಿರುವ ಯಾವುದೇ ಕಟ್ಟಡವನ್ನು ಬಲಪಡಿಸಲು ಕಲ್ಲು ಮತ್ತು ಕಲ್ಲಿನ ಚಪ್ಪಡಿಗಳನ್ನು ಬಳಸಲಾಗುತ್ತದೆ. ಕಳೆದ ವರ್ಷ ಭಾರಿ ಮಳೆಯಿಂದಾಗಿ ಹಂಪಿಯಲ್ಲಿ ಮೂರು ಕಟ್ಟಡಗಳು ಭಾಗಶಃ ಹಾನಿಗೊಳಗಾಗಿದ್ದವು. ಪುನಃಸ್ಥಾಪನೆಯ ಕೆಲಸ ನಡೆಯುತ್ತಿದೆ, ಶಿಥಿಲಗೊಂಡಿರುವ ಇತರ ಸ್ಮಾರಕಗಳೂ ಇವೆ ಮತ್ತು ಅವುಗಳ ಸ್ಥಿರತೆಗಾಗಿ ನಿಯಮಿತವಾಗಿ ಪರಿಶೀಲಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

“ಪುರಂದರ ಮಂಟಪವು ಹಂಪಿಯಲ್ಲಿ ಛಾಯಾಚಿತ್ರಕ್ಕೆ ಬಲು ಬೇಡಿಕೆಯಿರುವ ತಾಣವಾಗಿದೆ. ಹಂಪಿಯಲ್ಲಿ ಹಲವಾರು ಪ್ರಮುಖ ಸ್ಮಾರಕಗಳಿದ್ದರೂ, ನೀರಿನ ಮಟ್ಟವು ಸಾಮಾನ್ಯವಾಗಿದ್ದರೆ ಹೆಚ್ಚಿನ ಪ್ರವಾಸಿಗರು ಇಲ್ಲಿ ಸೆಲ್ಫಿ ತೆಗೆದುಕೊಳ್ಳದೆ ಹಿಂತಿರುಗುವುದಿಲ್ಲ” ಎಂದು ಹಂಪಿಯ ಪ್ರವಾಸಿ ಗೈಡ್‌ ಒಬ್ಬರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...