Homeಅಂಕಣಗಳುಇತಿಹಾಸ ಇಷ್ಟು ಬೇಗ ಮರುಕಳಿಸಿತಲ್ಲಾ ಥೂತ್ತೇರಿ!!

ಇತಿಹಾಸ ಇಷ್ಟು ಬೇಗ ಮರುಕಳಿಸಿತಲ್ಲಾ ಥೂತ್ತೇರಿ!!

- Advertisement -
- Advertisement -

ಕರ್ನಾಟಕದಲ್ಲಿ ಅದರಲ್ಲೂ ನಮ್ಮ ಪ್ರಭುತ್ವದ ಕೇಂದ್ರ ಸ್ಥಾನದಲ್ಲಿ ನಡೆದಿರುವ ಹೇಸಿಗೆ ಪ್ರಹಸನದ ಉದ್ಘಾಟಕರೇ ಕುಮಾರಣ್ಣನವರಂತಲ್ಲಾ. ಅಂದು ಧರ್ಮಸಿಂಗ್ ಸರಕಾರ ಗಜಗಾಂಭೀರ್ಯದಿಂದ ಸಾಗುತ್ತಿದ್ದಾಗ, ಕುಮಾರಣ್ಣನವರು ಜಮೀರ್ ಅಹಮದ್‍ನ ಕಾರಾಸ್ಥಾನದಲ್ಲಿ ತಯಾರಿಸಿದ ರೂಪುರೇಷೆಯಂತೆ ಜೆ.ಡಿ.ಎಸ್‍ಗೆ ಅಷ್ಟೂ ಶಾಸಕರನ್ನು ರೆಸಾರ್ಟ್‍ಗೆ ಹೊತ್ತೊಯ್ದರು. ಆ ಸಂದರ್ಭದ ದುಷ್ಟ ಚತುಷ್ಟಯರಲ್ಲಿ ಪ್ರಮುಖರಾದ ಬಾಲಕೃಷ್ಣ, ಚಲುವರಾಯ, ಜಮೀರು ಹೊತ್ತೊಯ್ದವರ ಬೇಕು, ಬೇಡಗಳು, ಜಿಹ್ವಾಚಾಪಲ್ಯ ಮತ್ತು ಗರ್ಮಿ ಪದಾರ್ಥಗಳ ಸೇವನೆಯಿಂದುಂಟಾದ ದೈಹಿಕ ಬಾಧೆಗಳನ್ನು ಪೂರೈಸಿದ್ದರಂತಲ್ಲಾ. ನಂತರ ಅವರನ್ನೆಲ್ಲ ಸುಸೂತ್ರವಾಗಿ ಕರೆದುಕೊಂಡು ಬಂದು, ವಿಧಾನಸೌಧದ ಎದುರು ಸುರಿದು ಕುಮಾರಣ್ಣ ಮುಖ್ಯಮಂತ್ರಿಯಾಗಿ ಮಾನ್ಯ ಎಡೂರಪ್ಪ ಉಪಮುಖ್ಯಮಂತ್ರಿಯಾಗುವಂತಹ ಪ್ರಹಸನವನ್ನು ನಿರೂಪಿಸಿದ್ದರಲ್ಲಾ. ಆದರೆ ಇಂತಹ ಸಾಹಸವೊಂದನ್ನು ಕಣ್ಣಲ್ಲಿ ನೋಡಲಾಗದೆ ಕಡು ದುಃಖದ ಮುಖಭಾವದಲ್ಲಿ ದೇವೇಗೌಡರು ಮನೆಯಲ್ಲೇ ಕುಳಿತಿದ್ದರಂತಲ್ಲಾ, ಥೂತ್ತೇರಿ…!

*****

ಕುಮಾರಣ್ಣನವರು ಮುಖ್ಯಮಂತ್ರಿಯಾಗಲು ಕ್ಷಣಗಣನೆ ನಡೆಯುತ್ತಿರುವಾಗ ಇತ್ತ ಪದ್ಮನಾಭನಗರದಲ್ಲಿ ದೇವೇಗೌಡರು ಬದುಕುಳಿಯುವುದೇ ಕಷ್ಟವೆಂಬ ಸ್ಥಿತಿಯಲ್ಲಿ ಕುಳಿತಿರಬೇಕಾದರೆ, ಕರ್ನಾಟಕದ ರಾಜಕಾರಣದ ಇನ್‍ಚಾರ್ಜ್ ಹೊತ್ತಿದ್ದ ಆಂಟೋನಿ ಜೊತೆಗೆ ಪಿ.ಜಿ.ಆರ್. ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ್ ಕೂಡ ದುರಂತವಾರ್ತೆ ವಿಧಾನಸೌಧದ ಕಡೆಯಿಂದ ಬರುತ್ತದೋ ಅಥವಾ ಪದ್ಮನಾಭನಗರ ಕಡೆಯಿಂದ ಹೊರಡುತ್ತದೋ ಎಂಬ ಆತಂಕದಲ್ಲೇ ಆಸೀನರಾಗಿದ್ದರಂತಲ್ಲಾ. ಆ ಯಾರೊಬ್ಬರಿಗೂ ಗೌಡರ ಮಹಾನಾಟಕ ಅರಿವಿಗೇ ಬರಲಿಲ್ಲವಂತಲ್ಲಾ. ಆ ನಾಟಕ ಯಾವುದೆಂದರೆ, ಮಗನ ಸಿಂಹಾಸನಕ್ಕೆ ತೊಂದರೆ ಕೊಡಬಹುದಾದ ಸಿದ್ದರಾಮಯ್ಯನನ್ನ ತೆಗೆದು ಬಿಸಾಡಿ, ಆ ಜಾಗಕ್ಕೆ ತಿಪ್ಪೇಮೇಗಲ ಒಣ ಸಗಣಿಯಂತ ತಿಪ್ಪಣ್ಣನನ್ನ ತಂದು ಕೂರಿಸಲಾಗಿತ್ತು. ಆತ ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರ ಮೌಖಿಕ ಆದೇಶದಂತೆ, ಕುಮಾರಣ್ಣನೇ ನಮ್ಮ ನಾಯಕ ಅನ್ನುವ ಲೆಟರನ್ನು ರಾಜ್ಯಪಾಲರಿಗೆ ಕೊಡುತ್ತಾರೆ. ರಾಜ್ಯಪಾಲ ಅದನ್ನು ಊರ್ಜಿತ ಮಾಡುತ್ತಾರೆ. ದೇವೇಗೌಡರೇ ನೇಮಿಸಿದ ಕೆ.ಆರ್.ಪೇಟೆ ಕೃಷ್ಣ ಸದನದ ಸ್ಪೀಕರ್ ಆಗಿದ್ದು ಗೌಡರ ಋಣವನ್ನು ತೀರಿಸಿದ್ದರಂತಲ್ಲ ಥೂತ್ತೇರಿ…!!

*****

ಅಂತೂ ಕುಮಾರಣ್ಣನ ಸಭಾ ಪರ್ವ ಆರಂಭವಾಗಿ ಸಿಂಧ್ಯ ಎದ್ದು ನಿಂತು ನಮ್ಮ ಸಭಾ ನಾಯಕರು ಎಂ.ಪಿ.ಪ್ರಕಾಶ್ ಎಂದಾಗ ಆ ಗುಂಡಿಗೆಯನ್ನು ಹಲವರು ಮೆಚ್ಚಿದರು. ಆದರೇ ಅಂದೇ ಅಪ್ಪಮಕ್ಕಳು ಸಿಂಧ್ಯನ ಕತೆ ಮುಗಿಸಲು ಪಣತೊಟ್ಟರು. ಸಿಂಧ್ಯನ ಗಂಡು ಮಾತಿಗೆ ತಕ್ಕ ಉತ್ತರ ಕೊಡುವ ಅವಕಾಶ ಒದಗಿ ಬಂದಾಗ ಎಂ.ಪಿ.ಪ್ರಕಾಶರು, ಕುಮಾರ ಅಲ್ಲ ನಾನೇ ಸಭಾ ನಾಯಕ ಅಂದಿದ್ದರೆ ಆ ಕತೆಯೇ ಬೇರೆಯಾಗಿ ಕರ್ನಾಟಕದ ಇಂದಿನ ಪ್ರಹಸನಕ್ಕೂ ಅವಕಾಶವಿರಲಿಲ್ಲ. ಆದರೆ ಪ್ರಕಾಶ್ ಹಿಂಜರಿದರು. ಆದರೂ ಕುಮಾರಣ್ಣನ ಸರಕಾರ ಅವರಿಗೆ ಗೃಹಸಚಿವರ ಸ್ಥಾನ ನೀಡಿದ್ದಲ್ಲದೆ ಸದನದಲ್ಲಿ ಸರಕಾರದ ಎಲ್ಲಾ ಸಮಸ್ಯೆಗಳಿಗೆ ಸಮಂಜಸ ಉತ್ತರ ನೀಡುವ ಜವಾಬ್ದಾರಿ ವಹಿಸಿತ್ತು. ಆದರೇನು, ಪ್ರಕಾಶ್ ಅವರು ಅಪ್ಪಮಗನ ಗಾಣದಲ್ಲಿ ಸಿಕ್ಕು ನಜ್ಜುಗುಜ್ಜಾಗಿ ಹೋಗಿದ್ದರು. ಕಡೆಗೆ ಇವರ ಸಹವಾಸವೇ ಸಾಕು ಎಂದು ತಮ್ಮ ಜೀವಿತಾವಧಿಯಲ್ಲಿ ಟೀಕೆ ಮಾಡಿಕೊಂಡು ಬಂದ ಕಾಂಗ್ರೆಸ್‍ಗೆ ಹೋದರು, ಅಲ್ಲಿ ಸೋತರು. ಏಕೆಂದರೆ ಗೌಡರು ಅವರ ವಿರುದ್ಧವೂ ಅಭ್ಯರ್ಥಿ ಹಾಕಿದ್ದರು. ಅಂತೂ ಪ್ರಕಾಶರ ಅವನತಿಗೆ ಗೌಡರು ಕಾರಣರಾಗಿ ಹೋದರಲ್ಲಾ ಥೂತ್ತೇರಿ…!!!

*****

ಇತಿಹಾಸ ಒಂದು ದಶಕದಲ್ಲೇ ಮರುಕಳಿಸಿ ಹೋಯ್ತಲ್ಲ! ದುಷ್ಟ ಚತುಷ್ಟರ ಪೈಕಿ, ಕುಮಾರಣ್ಣನ ಬಳಿ ಯಾರೂ ಇಲ್ಲ. ಇದ್ದರೂ ಜಮೀರನನ್ನ ಪೂರಾ ನಂಬುವಂತಿಲ್ಲ. ಇತ್ತ ಎಡೂರಪ್ಪನ ಮುಖದಲ್ಲಿ ಅಂತಹ ಗೆಲುವಿಲ್ಲ. ಇಡೀ ಬಿ.ಜೆ.ಪಿ.ಯಲ್ಲೇ ಎಡೂರಪ್ಪ ಮತ್ತೆ ವಕ್ಕರಿಸುವ ಬಗ್ಗೆ, ಹೇಳಿಕೊಳ್ಳುವ ಹುಮ್ಮಸ್ಸಿಲ್ಲ. ಅದರಲ್ಲೂ ಈಶ್ವರಪ್ಪ ದಿಕ್ಕೇ ತೋಚದಂತಾಗಿದ್ದಾರೆ. ಏಕೆಂದರೆ ಎಡೂರಪ್ಪ ಮತ್ತು ಈಶ್ವರಪ್ಪನ ದಾಯಾದಿ ಕಲಹಕ್ಕೆ ಇತಿಹಾಸವೇ ಇದೆ. ಆದ್ದರಿಂದ ಎಡೂರಪ್ಪ ಮುಖ್ಯಮಂತ್ರಿಯಾದ ಕೂಡಲೇ ಅವರ ತಲೆನೋವಾಗಿ ಪರಿಣಮಿಸಲಿದ್ದಾರೆ. ಎಡೂರಪ್ಪ ಯಾವುದಕ್ಕೂ ಬಗ್ಗದಿದ್ದರೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬದಲು, ಕನಕದಾಸ ಸಮರಸೇನೆ ಹುಟ್ಟು ಹಾಕಿದರೂ ಅಚ್ಚರಿಯಿಲ್ಲವಂತಲ್ಲಾ. ಏಕೆಂದರೆ ಕನಕದಾಸರು ಬರೀ ದಾಸರಷ್ಟೇ ಅಲ್ಲ. ಅದಕ್ಕೂ ಮೊದಲು ಬಾಡದ ನಾಯಕರಾಗಿ ಕಾದಾಡಿ, ವಿಜಯನಗರದ ಅರಸರ ಜೀತಕ್ಕಿಂತ ತಂಬೂರಿಯೇ ಲೇಸೆಂದು ಹೊರಟವರು. ಇದನ್ನೆಲ್ಲಾ ಬಿ.ಜೆ.ಪಿ ವಿದ್ವಾಂಸರಿಂದ ಸಂಗ್ರಹಿಸಿಕೊಂಡು ಮತ್ತೆ ಎಡೂರಪ್ಪನ ಎದುರು ಹೋರಾಟ ಆರಂಭಿಸುವುದಿಲ್ಲ ಎಂಬುದು ಯಾವ ಗ್ಯಾರಂಟಿ… ಥೂತ್ತೇರಿ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...