Homeಅಂಕಣಗಳುಇತಿಹಾಸ ಇಷ್ಟು ಬೇಗ ಮರುಕಳಿಸಿತಲ್ಲಾ ಥೂತ್ತೇರಿ!!

ಇತಿಹಾಸ ಇಷ್ಟು ಬೇಗ ಮರುಕಳಿಸಿತಲ್ಲಾ ಥೂತ್ತೇರಿ!!

- Advertisement -
- Advertisement -

ಕರ್ನಾಟಕದಲ್ಲಿ ಅದರಲ್ಲೂ ನಮ್ಮ ಪ್ರಭುತ್ವದ ಕೇಂದ್ರ ಸ್ಥಾನದಲ್ಲಿ ನಡೆದಿರುವ ಹೇಸಿಗೆ ಪ್ರಹಸನದ ಉದ್ಘಾಟಕರೇ ಕುಮಾರಣ್ಣನವರಂತಲ್ಲಾ. ಅಂದು ಧರ್ಮಸಿಂಗ್ ಸರಕಾರ ಗಜಗಾಂಭೀರ್ಯದಿಂದ ಸಾಗುತ್ತಿದ್ದಾಗ, ಕುಮಾರಣ್ಣನವರು ಜಮೀರ್ ಅಹಮದ್‍ನ ಕಾರಾಸ್ಥಾನದಲ್ಲಿ ತಯಾರಿಸಿದ ರೂಪುರೇಷೆಯಂತೆ ಜೆ.ಡಿ.ಎಸ್‍ಗೆ ಅಷ್ಟೂ ಶಾಸಕರನ್ನು ರೆಸಾರ್ಟ್‍ಗೆ ಹೊತ್ತೊಯ್ದರು. ಆ ಸಂದರ್ಭದ ದುಷ್ಟ ಚತುಷ್ಟಯರಲ್ಲಿ ಪ್ರಮುಖರಾದ ಬಾಲಕೃಷ್ಣ, ಚಲುವರಾಯ, ಜಮೀರು ಹೊತ್ತೊಯ್ದವರ ಬೇಕು, ಬೇಡಗಳು, ಜಿಹ್ವಾಚಾಪಲ್ಯ ಮತ್ತು ಗರ್ಮಿ ಪದಾರ್ಥಗಳ ಸೇವನೆಯಿಂದುಂಟಾದ ದೈಹಿಕ ಬಾಧೆಗಳನ್ನು ಪೂರೈಸಿದ್ದರಂತಲ್ಲಾ. ನಂತರ ಅವರನ್ನೆಲ್ಲ ಸುಸೂತ್ರವಾಗಿ ಕರೆದುಕೊಂಡು ಬಂದು, ವಿಧಾನಸೌಧದ ಎದುರು ಸುರಿದು ಕುಮಾರಣ್ಣ ಮುಖ್ಯಮಂತ್ರಿಯಾಗಿ ಮಾನ್ಯ ಎಡೂರಪ್ಪ ಉಪಮುಖ್ಯಮಂತ್ರಿಯಾಗುವಂತಹ ಪ್ರಹಸನವನ್ನು ನಿರೂಪಿಸಿದ್ದರಲ್ಲಾ. ಆದರೆ ಇಂತಹ ಸಾಹಸವೊಂದನ್ನು ಕಣ್ಣಲ್ಲಿ ನೋಡಲಾಗದೆ ಕಡು ದುಃಖದ ಮುಖಭಾವದಲ್ಲಿ ದೇವೇಗೌಡರು ಮನೆಯಲ್ಲೇ ಕುಳಿತಿದ್ದರಂತಲ್ಲಾ, ಥೂತ್ತೇರಿ…!

*****

ಕುಮಾರಣ್ಣನವರು ಮುಖ್ಯಮಂತ್ರಿಯಾಗಲು ಕ್ಷಣಗಣನೆ ನಡೆಯುತ್ತಿರುವಾಗ ಇತ್ತ ಪದ್ಮನಾಭನಗರದಲ್ಲಿ ದೇವೇಗೌಡರು ಬದುಕುಳಿಯುವುದೇ ಕಷ್ಟವೆಂಬ ಸ್ಥಿತಿಯಲ್ಲಿ ಕುಳಿತಿರಬೇಕಾದರೆ, ಕರ್ನಾಟಕದ ರಾಜಕಾರಣದ ಇನ್‍ಚಾರ್ಜ್ ಹೊತ್ತಿದ್ದ ಆಂಟೋನಿ ಜೊತೆಗೆ ಪಿ.ಜಿ.ಆರ್. ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ್ ಕೂಡ ದುರಂತವಾರ್ತೆ ವಿಧಾನಸೌಧದ ಕಡೆಯಿಂದ ಬರುತ್ತದೋ ಅಥವಾ ಪದ್ಮನಾಭನಗರ ಕಡೆಯಿಂದ ಹೊರಡುತ್ತದೋ ಎಂಬ ಆತಂಕದಲ್ಲೇ ಆಸೀನರಾಗಿದ್ದರಂತಲ್ಲಾ. ಆ ಯಾರೊಬ್ಬರಿಗೂ ಗೌಡರ ಮಹಾನಾಟಕ ಅರಿವಿಗೇ ಬರಲಿಲ್ಲವಂತಲ್ಲಾ. ಆ ನಾಟಕ ಯಾವುದೆಂದರೆ, ಮಗನ ಸಿಂಹಾಸನಕ್ಕೆ ತೊಂದರೆ ಕೊಡಬಹುದಾದ ಸಿದ್ದರಾಮಯ್ಯನನ್ನ ತೆಗೆದು ಬಿಸಾಡಿ, ಆ ಜಾಗಕ್ಕೆ ತಿಪ್ಪೇಮೇಗಲ ಒಣ ಸಗಣಿಯಂತ ತಿಪ್ಪಣ್ಣನನ್ನ ತಂದು ಕೂರಿಸಲಾಗಿತ್ತು. ಆತ ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರ ಮೌಖಿಕ ಆದೇಶದಂತೆ, ಕುಮಾರಣ್ಣನೇ ನಮ್ಮ ನಾಯಕ ಅನ್ನುವ ಲೆಟರನ್ನು ರಾಜ್ಯಪಾಲರಿಗೆ ಕೊಡುತ್ತಾರೆ. ರಾಜ್ಯಪಾಲ ಅದನ್ನು ಊರ್ಜಿತ ಮಾಡುತ್ತಾರೆ. ದೇವೇಗೌಡರೇ ನೇಮಿಸಿದ ಕೆ.ಆರ್.ಪೇಟೆ ಕೃಷ್ಣ ಸದನದ ಸ್ಪೀಕರ್ ಆಗಿದ್ದು ಗೌಡರ ಋಣವನ್ನು ತೀರಿಸಿದ್ದರಂತಲ್ಲ ಥೂತ್ತೇರಿ…!!

*****

ಅಂತೂ ಕುಮಾರಣ್ಣನ ಸಭಾ ಪರ್ವ ಆರಂಭವಾಗಿ ಸಿಂಧ್ಯ ಎದ್ದು ನಿಂತು ನಮ್ಮ ಸಭಾ ನಾಯಕರು ಎಂ.ಪಿ.ಪ್ರಕಾಶ್ ಎಂದಾಗ ಆ ಗುಂಡಿಗೆಯನ್ನು ಹಲವರು ಮೆಚ್ಚಿದರು. ಆದರೇ ಅಂದೇ ಅಪ್ಪಮಕ್ಕಳು ಸಿಂಧ್ಯನ ಕತೆ ಮುಗಿಸಲು ಪಣತೊಟ್ಟರು. ಸಿಂಧ್ಯನ ಗಂಡು ಮಾತಿಗೆ ತಕ್ಕ ಉತ್ತರ ಕೊಡುವ ಅವಕಾಶ ಒದಗಿ ಬಂದಾಗ ಎಂ.ಪಿ.ಪ್ರಕಾಶರು, ಕುಮಾರ ಅಲ್ಲ ನಾನೇ ಸಭಾ ನಾಯಕ ಅಂದಿದ್ದರೆ ಆ ಕತೆಯೇ ಬೇರೆಯಾಗಿ ಕರ್ನಾಟಕದ ಇಂದಿನ ಪ್ರಹಸನಕ್ಕೂ ಅವಕಾಶವಿರಲಿಲ್ಲ. ಆದರೆ ಪ್ರಕಾಶ್ ಹಿಂಜರಿದರು. ಆದರೂ ಕುಮಾರಣ್ಣನ ಸರಕಾರ ಅವರಿಗೆ ಗೃಹಸಚಿವರ ಸ್ಥಾನ ನೀಡಿದ್ದಲ್ಲದೆ ಸದನದಲ್ಲಿ ಸರಕಾರದ ಎಲ್ಲಾ ಸಮಸ್ಯೆಗಳಿಗೆ ಸಮಂಜಸ ಉತ್ತರ ನೀಡುವ ಜವಾಬ್ದಾರಿ ವಹಿಸಿತ್ತು. ಆದರೇನು, ಪ್ರಕಾಶ್ ಅವರು ಅಪ್ಪಮಗನ ಗಾಣದಲ್ಲಿ ಸಿಕ್ಕು ನಜ್ಜುಗುಜ್ಜಾಗಿ ಹೋಗಿದ್ದರು. ಕಡೆಗೆ ಇವರ ಸಹವಾಸವೇ ಸಾಕು ಎಂದು ತಮ್ಮ ಜೀವಿತಾವಧಿಯಲ್ಲಿ ಟೀಕೆ ಮಾಡಿಕೊಂಡು ಬಂದ ಕಾಂಗ್ರೆಸ್‍ಗೆ ಹೋದರು, ಅಲ್ಲಿ ಸೋತರು. ಏಕೆಂದರೆ ಗೌಡರು ಅವರ ವಿರುದ್ಧವೂ ಅಭ್ಯರ್ಥಿ ಹಾಕಿದ್ದರು. ಅಂತೂ ಪ್ರಕಾಶರ ಅವನತಿಗೆ ಗೌಡರು ಕಾರಣರಾಗಿ ಹೋದರಲ್ಲಾ ಥೂತ್ತೇರಿ…!!!

*****

ಇತಿಹಾಸ ಒಂದು ದಶಕದಲ್ಲೇ ಮರುಕಳಿಸಿ ಹೋಯ್ತಲ್ಲ! ದುಷ್ಟ ಚತುಷ್ಟರ ಪೈಕಿ, ಕುಮಾರಣ್ಣನ ಬಳಿ ಯಾರೂ ಇಲ್ಲ. ಇದ್ದರೂ ಜಮೀರನನ್ನ ಪೂರಾ ನಂಬುವಂತಿಲ್ಲ. ಇತ್ತ ಎಡೂರಪ್ಪನ ಮುಖದಲ್ಲಿ ಅಂತಹ ಗೆಲುವಿಲ್ಲ. ಇಡೀ ಬಿ.ಜೆ.ಪಿ.ಯಲ್ಲೇ ಎಡೂರಪ್ಪ ಮತ್ತೆ ವಕ್ಕರಿಸುವ ಬಗ್ಗೆ, ಹೇಳಿಕೊಳ್ಳುವ ಹುಮ್ಮಸ್ಸಿಲ್ಲ. ಅದರಲ್ಲೂ ಈಶ್ವರಪ್ಪ ದಿಕ್ಕೇ ತೋಚದಂತಾಗಿದ್ದಾರೆ. ಏಕೆಂದರೆ ಎಡೂರಪ್ಪ ಮತ್ತು ಈಶ್ವರಪ್ಪನ ದಾಯಾದಿ ಕಲಹಕ್ಕೆ ಇತಿಹಾಸವೇ ಇದೆ. ಆದ್ದರಿಂದ ಎಡೂರಪ್ಪ ಮುಖ್ಯಮಂತ್ರಿಯಾದ ಕೂಡಲೇ ಅವರ ತಲೆನೋವಾಗಿ ಪರಿಣಮಿಸಲಿದ್ದಾರೆ. ಎಡೂರಪ್ಪ ಯಾವುದಕ್ಕೂ ಬಗ್ಗದಿದ್ದರೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬದಲು, ಕನಕದಾಸ ಸಮರಸೇನೆ ಹುಟ್ಟು ಹಾಕಿದರೂ ಅಚ್ಚರಿಯಿಲ್ಲವಂತಲ್ಲಾ. ಏಕೆಂದರೆ ಕನಕದಾಸರು ಬರೀ ದಾಸರಷ್ಟೇ ಅಲ್ಲ. ಅದಕ್ಕೂ ಮೊದಲು ಬಾಡದ ನಾಯಕರಾಗಿ ಕಾದಾಡಿ, ವಿಜಯನಗರದ ಅರಸರ ಜೀತಕ್ಕಿಂತ ತಂಬೂರಿಯೇ ಲೇಸೆಂದು ಹೊರಟವರು. ಇದನ್ನೆಲ್ಲಾ ಬಿ.ಜೆ.ಪಿ ವಿದ್ವಾಂಸರಿಂದ ಸಂಗ್ರಹಿಸಿಕೊಂಡು ಮತ್ತೆ ಎಡೂರಪ್ಪನ ಎದುರು ಹೋರಾಟ ಆರಂಭಿಸುವುದಿಲ್ಲ ಎಂಬುದು ಯಾವ ಗ್ಯಾರಂಟಿ… ಥೂತ್ತೇರಿ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...