Homeಅಂಕಣಗಳುಇತಿಹಾಸ ಇಷ್ಟು ಬೇಗ ಮರುಕಳಿಸಿತಲ್ಲಾ ಥೂತ್ತೇರಿ!!

ಇತಿಹಾಸ ಇಷ್ಟು ಬೇಗ ಮರುಕಳಿಸಿತಲ್ಲಾ ಥೂತ್ತೇರಿ!!

- Advertisement -
- Advertisement -

ಕರ್ನಾಟಕದಲ್ಲಿ ಅದರಲ್ಲೂ ನಮ್ಮ ಪ್ರಭುತ್ವದ ಕೇಂದ್ರ ಸ್ಥಾನದಲ್ಲಿ ನಡೆದಿರುವ ಹೇಸಿಗೆ ಪ್ರಹಸನದ ಉದ್ಘಾಟಕರೇ ಕುಮಾರಣ್ಣನವರಂತಲ್ಲಾ. ಅಂದು ಧರ್ಮಸಿಂಗ್ ಸರಕಾರ ಗಜಗಾಂಭೀರ್ಯದಿಂದ ಸಾಗುತ್ತಿದ್ದಾಗ, ಕುಮಾರಣ್ಣನವರು ಜಮೀರ್ ಅಹಮದ್‍ನ ಕಾರಾಸ್ಥಾನದಲ್ಲಿ ತಯಾರಿಸಿದ ರೂಪುರೇಷೆಯಂತೆ ಜೆ.ಡಿ.ಎಸ್‍ಗೆ ಅಷ್ಟೂ ಶಾಸಕರನ್ನು ರೆಸಾರ್ಟ್‍ಗೆ ಹೊತ್ತೊಯ್ದರು. ಆ ಸಂದರ್ಭದ ದುಷ್ಟ ಚತುಷ್ಟಯರಲ್ಲಿ ಪ್ರಮುಖರಾದ ಬಾಲಕೃಷ್ಣ, ಚಲುವರಾಯ, ಜಮೀರು ಹೊತ್ತೊಯ್ದವರ ಬೇಕು, ಬೇಡಗಳು, ಜಿಹ್ವಾಚಾಪಲ್ಯ ಮತ್ತು ಗರ್ಮಿ ಪದಾರ್ಥಗಳ ಸೇವನೆಯಿಂದುಂಟಾದ ದೈಹಿಕ ಬಾಧೆಗಳನ್ನು ಪೂರೈಸಿದ್ದರಂತಲ್ಲಾ. ನಂತರ ಅವರನ್ನೆಲ್ಲ ಸುಸೂತ್ರವಾಗಿ ಕರೆದುಕೊಂಡು ಬಂದು, ವಿಧಾನಸೌಧದ ಎದುರು ಸುರಿದು ಕುಮಾರಣ್ಣ ಮುಖ್ಯಮಂತ್ರಿಯಾಗಿ ಮಾನ್ಯ ಎಡೂರಪ್ಪ ಉಪಮುಖ್ಯಮಂತ್ರಿಯಾಗುವಂತಹ ಪ್ರಹಸನವನ್ನು ನಿರೂಪಿಸಿದ್ದರಲ್ಲಾ. ಆದರೆ ಇಂತಹ ಸಾಹಸವೊಂದನ್ನು ಕಣ್ಣಲ್ಲಿ ನೋಡಲಾಗದೆ ಕಡು ದುಃಖದ ಮುಖಭಾವದಲ್ಲಿ ದೇವೇಗೌಡರು ಮನೆಯಲ್ಲೇ ಕುಳಿತಿದ್ದರಂತಲ್ಲಾ, ಥೂತ್ತೇರಿ…!

*****

ಕುಮಾರಣ್ಣನವರು ಮುಖ್ಯಮಂತ್ರಿಯಾಗಲು ಕ್ಷಣಗಣನೆ ನಡೆಯುತ್ತಿರುವಾಗ ಇತ್ತ ಪದ್ಮನಾಭನಗರದಲ್ಲಿ ದೇವೇಗೌಡರು ಬದುಕುಳಿಯುವುದೇ ಕಷ್ಟವೆಂಬ ಸ್ಥಿತಿಯಲ್ಲಿ ಕುಳಿತಿರಬೇಕಾದರೆ, ಕರ್ನಾಟಕದ ರಾಜಕಾರಣದ ಇನ್‍ಚಾರ್ಜ್ ಹೊತ್ತಿದ್ದ ಆಂಟೋನಿ ಜೊತೆಗೆ ಪಿ.ಜಿ.ಆರ್. ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ್ ಕೂಡ ದುರಂತವಾರ್ತೆ ವಿಧಾನಸೌಧದ ಕಡೆಯಿಂದ ಬರುತ್ತದೋ ಅಥವಾ ಪದ್ಮನಾಭನಗರ ಕಡೆಯಿಂದ ಹೊರಡುತ್ತದೋ ಎಂಬ ಆತಂಕದಲ್ಲೇ ಆಸೀನರಾಗಿದ್ದರಂತಲ್ಲಾ. ಆ ಯಾರೊಬ್ಬರಿಗೂ ಗೌಡರ ಮಹಾನಾಟಕ ಅರಿವಿಗೇ ಬರಲಿಲ್ಲವಂತಲ್ಲಾ. ಆ ನಾಟಕ ಯಾವುದೆಂದರೆ, ಮಗನ ಸಿಂಹಾಸನಕ್ಕೆ ತೊಂದರೆ ಕೊಡಬಹುದಾದ ಸಿದ್ದರಾಮಯ್ಯನನ್ನ ತೆಗೆದು ಬಿಸಾಡಿ, ಆ ಜಾಗಕ್ಕೆ ತಿಪ್ಪೇಮೇಗಲ ಒಣ ಸಗಣಿಯಂತ ತಿಪ್ಪಣ್ಣನನ್ನ ತಂದು ಕೂರಿಸಲಾಗಿತ್ತು. ಆತ ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರ ಮೌಖಿಕ ಆದೇಶದಂತೆ, ಕುಮಾರಣ್ಣನೇ ನಮ್ಮ ನಾಯಕ ಅನ್ನುವ ಲೆಟರನ್ನು ರಾಜ್ಯಪಾಲರಿಗೆ ಕೊಡುತ್ತಾರೆ. ರಾಜ್ಯಪಾಲ ಅದನ್ನು ಊರ್ಜಿತ ಮಾಡುತ್ತಾರೆ. ದೇವೇಗೌಡರೇ ನೇಮಿಸಿದ ಕೆ.ಆರ್.ಪೇಟೆ ಕೃಷ್ಣ ಸದನದ ಸ್ಪೀಕರ್ ಆಗಿದ್ದು ಗೌಡರ ಋಣವನ್ನು ತೀರಿಸಿದ್ದರಂತಲ್ಲ ಥೂತ್ತೇರಿ…!!

*****

ಅಂತೂ ಕುಮಾರಣ್ಣನ ಸಭಾ ಪರ್ವ ಆರಂಭವಾಗಿ ಸಿಂಧ್ಯ ಎದ್ದು ನಿಂತು ನಮ್ಮ ಸಭಾ ನಾಯಕರು ಎಂ.ಪಿ.ಪ್ರಕಾಶ್ ಎಂದಾಗ ಆ ಗುಂಡಿಗೆಯನ್ನು ಹಲವರು ಮೆಚ್ಚಿದರು. ಆದರೇ ಅಂದೇ ಅಪ್ಪಮಕ್ಕಳು ಸಿಂಧ್ಯನ ಕತೆ ಮುಗಿಸಲು ಪಣತೊಟ್ಟರು. ಸಿಂಧ್ಯನ ಗಂಡು ಮಾತಿಗೆ ತಕ್ಕ ಉತ್ತರ ಕೊಡುವ ಅವಕಾಶ ಒದಗಿ ಬಂದಾಗ ಎಂ.ಪಿ.ಪ್ರಕಾಶರು, ಕುಮಾರ ಅಲ್ಲ ನಾನೇ ಸಭಾ ನಾಯಕ ಅಂದಿದ್ದರೆ ಆ ಕತೆಯೇ ಬೇರೆಯಾಗಿ ಕರ್ನಾಟಕದ ಇಂದಿನ ಪ್ರಹಸನಕ್ಕೂ ಅವಕಾಶವಿರಲಿಲ್ಲ. ಆದರೆ ಪ್ರಕಾಶ್ ಹಿಂಜರಿದರು. ಆದರೂ ಕುಮಾರಣ್ಣನ ಸರಕಾರ ಅವರಿಗೆ ಗೃಹಸಚಿವರ ಸ್ಥಾನ ನೀಡಿದ್ದಲ್ಲದೆ ಸದನದಲ್ಲಿ ಸರಕಾರದ ಎಲ್ಲಾ ಸಮಸ್ಯೆಗಳಿಗೆ ಸಮಂಜಸ ಉತ್ತರ ನೀಡುವ ಜವಾಬ್ದಾರಿ ವಹಿಸಿತ್ತು. ಆದರೇನು, ಪ್ರಕಾಶ್ ಅವರು ಅಪ್ಪಮಗನ ಗಾಣದಲ್ಲಿ ಸಿಕ್ಕು ನಜ್ಜುಗುಜ್ಜಾಗಿ ಹೋಗಿದ್ದರು. ಕಡೆಗೆ ಇವರ ಸಹವಾಸವೇ ಸಾಕು ಎಂದು ತಮ್ಮ ಜೀವಿತಾವಧಿಯಲ್ಲಿ ಟೀಕೆ ಮಾಡಿಕೊಂಡು ಬಂದ ಕಾಂಗ್ರೆಸ್‍ಗೆ ಹೋದರು, ಅಲ್ಲಿ ಸೋತರು. ಏಕೆಂದರೆ ಗೌಡರು ಅವರ ವಿರುದ್ಧವೂ ಅಭ್ಯರ್ಥಿ ಹಾಕಿದ್ದರು. ಅಂತೂ ಪ್ರಕಾಶರ ಅವನತಿಗೆ ಗೌಡರು ಕಾರಣರಾಗಿ ಹೋದರಲ್ಲಾ ಥೂತ್ತೇರಿ…!!!

*****

ಇತಿಹಾಸ ಒಂದು ದಶಕದಲ್ಲೇ ಮರುಕಳಿಸಿ ಹೋಯ್ತಲ್ಲ! ದುಷ್ಟ ಚತುಷ್ಟರ ಪೈಕಿ, ಕುಮಾರಣ್ಣನ ಬಳಿ ಯಾರೂ ಇಲ್ಲ. ಇದ್ದರೂ ಜಮೀರನನ್ನ ಪೂರಾ ನಂಬುವಂತಿಲ್ಲ. ಇತ್ತ ಎಡೂರಪ್ಪನ ಮುಖದಲ್ಲಿ ಅಂತಹ ಗೆಲುವಿಲ್ಲ. ಇಡೀ ಬಿ.ಜೆ.ಪಿ.ಯಲ್ಲೇ ಎಡೂರಪ್ಪ ಮತ್ತೆ ವಕ್ಕರಿಸುವ ಬಗ್ಗೆ, ಹೇಳಿಕೊಳ್ಳುವ ಹುಮ್ಮಸ್ಸಿಲ್ಲ. ಅದರಲ್ಲೂ ಈಶ್ವರಪ್ಪ ದಿಕ್ಕೇ ತೋಚದಂತಾಗಿದ್ದಾರೆ. ಏಕೆಂದರೆ ಎಡೂರಪ್ಪ ಮತ್ತು ಈಶ್ವರಪ್ಪನ ದಾಯಾದಿ ಕಲಹಕ್ಕೆ ಇತಿಹಾಸವೇ ಇದೆ. ಆದ್ದರಿಂದ ಎಡೂರಪ್ಪ ಮುಖ್ಯಮಂತ್ರಿಯಾದ ಕೂಡಲೇ ಅವರ ತಲೆನೋವಾಗಿ ಪರಿಣಮಿಸಲಿದ್ದಾರೆ. ಎಡೂರಪ್ಪ ಯಾವುದಕ್ಕೂ ಬಗ್ಗದಿದ್ದರೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬದಲು, ಕನಕದಾಸ ಸಮರಸೇನೆ ಹುಟ್ಟು ಹಾಕಿದರೂ ಅಚ್ಚರಿಯಿಲ್ಲವಂತಲ್ಲಾ. ಏಕೆಂದರೆ ಕನಕದಾಸರು ಬರೀ ದಾಸರಷ್ಟೇ ಅಲ್ಲ. ಅದಕ್ಕೂ ಮೊದಲು ಬಾಡದ ನಾಯಕರಾಗಿ ಕಾದಾಡಿ, ವಿಜಯನಗರದ ಅರಸರ ಜೀತಕ್ಕಿಂತ ತಂಬೂರಿಯೇ ಲೇಸೆಂದು ಹೊರಟವರು. ಇದನ್ನೆಲ್ಲಾ ಬಿ.ಜೆ.ಪಿ ವಿದ್ವಾಂಸರಿಂದ ಸಂಗ್ರಹಿಸಿಕೊಂಡು ಮತ್ತೆ ಎಡೂರಪ್ಪನ ಎದುರು ಹೋರಾಟ ಆರಂಭಿಸುವುದಿಲ್ಲ ಎಂಬುದು ಯಾವ ಗ್ಯಾರಂಟಿ… ಥೂತ್ತೇರಿ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...