Homeಅಂಕಣಗಳುಇತಿಹಾಸ ಇಷ್ಟು ಬೇಗ ಮರುಕಳಿಸಿತಲ್ಲಾ ಥೂತ್ತೇರಿ!!

ಇತಿಹಾಸ ಇಷ್ಟು ಬೇಗ ಮರುಕಳಿಸಿತಲ್ಲಾ ಥೂತ್ತೇರಿ!!

- Advertisement -
- Advertisement -

ಕರ್ನಾಟಕದಲ್ಲಿ ಅದರಲ್ಲೂ ನಮ್ಮ ಪ್ರಭುತ್ವದ ಕೇಂದ್ರ ಸ್ಥಾನದಲ್ಲಿ ನಡೆದಿರುವ ಹೇಸಿಗೆ ಪ್ರಹಸನದ ಉದ್ಘಾಟಕರೇ ಕುಮಾರಣ್ಣನವರಂತಲ್ಲಾ. ಅಂದು ಧರ್ಮಸಿಂಗ್ ಸರಕಾರ ಗಜಗಾಂಭೀರ್ಯದಿಂದ ಸಾಗುತ್ತಿದ್ದಾಗ, ಕುಮಾರಣ್ಣನವರು ಜಮೀರ್ ಅಹಮದ್‍ನ ಕಾರಾಸ್ಥಾನದಲ್ಲಿ ತಯಾರಿಸಿದ ರೂಪುರೇಷೆಯಂತೆ ಜೆ.ಡಿ.ಎಸ್‍ಗೆ ಅಷ್ಟೂ ಶಾಸಕರನ್ನು ರೆಸಾರ್ಟ್‍ಗೆ ಹೊತ್ತೊಯ್ದರು. ಆ ಸಂದರ್ಭದ ದುಷ್ಟ ಚತುಷ್ಟಯರಲ್ಲಿ ಪ್ರಮುಖರಾದ ಬಾಲಕೃಷ್ಣ, ಚಲುವರಾಯ, ಜಮೀರು ಹೊತ್ತೊಯ್ದವರ ಬೇಕು, ಬೇಡಗಳು, ಜಿಹ್ವಾಚಾಪಲ್ಯ ಮತ್ತು ಗರ್ಮಿ ಪದಾರ್ಥಗಳ ಸೇವನೆಯಿಂದುಂಟಾದ ದೈಹಿಕ ಬಾಧೆಗಳನ್ನು ಪೂರೈಸಿದ್ದರಂತಲ್ಲಾ. ನಂತರ ಅವರನ್ನೆಲ್ಲ ಸುಸೂತ್ರವಾಗಿ ಕರೆದುಕೊಂಡು ಬಂದು, ವಿಧಾನಸೌಧದ ಎದುರು ಸುರಿದು ಕುಮಾರಣ್ಣ ಮುಖ್ಯಮಂತ್ರಿಯಾಗಿ ಮಾನ್ಯ ಎಡೂರಪ್ಪ ಉಪಮುಖ್ಯಮಂತ್ರಿಯಾಗುವಂತಹ ಪ್ರಹಸನವನ್ನು ನಿರೂಪಿಸಿದ್ದರಲ್ಲಾ. ಆದರೆ ಇಂತಹ ಸಾಹಸವೊಂದನ್ನು ಕಣ್ಣಲ್ಲಿ ನೋಡಲಾಗದೆ ಕಡು ದುಃಖದ ಮುಖಭಾವದಲ್ಲಿ ದೇವೇಗೌಡರು ಮನೆಯಲ್ಲೇ ಕುಳಿತಿದ್ದರಂತಲ್ಲಾ, ಥೂತ್ತೇರಿ…!

*****

ಕುಮಾರಣ್ಣನವರು ಮುಖ್ಯಮಂತ್ರಿಯಾಗಲು ಕ್ಷಣಗಣನೆ ನಡೆಯುತ್ತಿರುವಾಗ ಇತ್ತ ಪದ್ಮನಾಭನಗರದಲ್ಲಿ ದೇವೇಗೌಡರು ಬದುಕುಳಿಯುವುದೇ ಕಷ್ಟವೆಂಬ ಸ್ಥಿತಿಯಲ್ಲಿ ಕುಳಿತಿರಬೇಕಾದರೆ, ಕರ್ನಾಟಕದ ರಾಜಕಾರಣದ ಇನ್‍ಚಾರ್ಜ್ ಹೊತ್ತಿದ್ದ ಆಂಟೋನಿ ಜೊತೆಗೆ ಪಿ.ಜಿ.ಆರ್. ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ್ ಕೂಡ ದುರಂತವಾರ್ತೆ ವಿಧಾನಸೌಧದ ಕಡೆಯಿಂದ ಬರುತ್ತದೋ ಅಥವಾ ಪದ್ಮನಾಭನಗರ ಕಡೆಯಿಂದ ಹೊರಡುತ್ತದೋ ಎಂಬ ಆತಂಕದಲ್ಲೇ ಆಸೀನರಾಗಿದ್ದರಂತಲ್ಲಾ. ಆ ಯಾರೊಬ್ಬರಿಗೂ ಗೌಡರ ಮಹಾನಾಟಕ ಅರಿವಿಗೇ ಬರಲಿಲ್ಲವಂತಲ್ಲಾ. ಆ ನಾಟಕ ಯಾವುದೆಂದರೆ, ಮಗನ ಸಿಂಹಾಸನಕ್ಕೆ ತೊಂದರೆ ಕೊಡಬಹುದಾದ ಸಿದ್ದರಾಮಯ್ಯನನ್ನ ತೆಗೆದು ಬಿಸಾಡಿ, ಆ ಜಾಗಕ್ಕೆ ತಿಪ್ಪೇಮೇಗಲ ಒಣ ಸಗಣಿಯಂತ ತಿಪ್ಪಣ್ಣನನ್ನ ತಂದು ಕೂರಿಸಲಾಗಿತ್ತು. ಆತ ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರ ಮೌಖಿಕ ಆದೇಶದಂತೆ, ಕುಮಾರಣ್ಣನೇ ನಮ್ಮ ನಾಯಕ ಅನ್ನುವ ಲೆಟರನ್ನು ರಾಜ್ಯಪಾಲರಿಗೆ ಕೊಡುತ್ತಾರೆ. ರಾಜ್ಯಪಾಲ ಅದನ್ನು ಊರ್ಜಿತ ಮಾಡುತ್ತಾರೆ. ದೇವೇಗೌಡರೇ ನೇಮಿಸಿದ ಕೆ.ಆರ್.ಪೇಟೆ ಕೃಷ್ಣ ಸದನದ ಸ್ಪೀಕರ್ ಆಗಿದ್ದು ಗೌಡರ ಋಣವನ್ನು ತೀರಿಸಿದ್ದರಂತಲ್ಲ ಥೂತ್ತೇರಿ…!!

*****

ಅಂತೂ ಕುಮಾರಣ್ಣನ ಸಭಾ ಪರ್ವ ಆರಂಭವಾಗಿ ಸಿಂಧ್ಯ ಎದ್ದು ನಿಂತು ನಮ್ಮ ಸಭಾ ನಾಯಕರು ಎಂ.ಪಿ.ಪ್ರಕಾಶ್ ಎಂದಾಗ ಆ ಗುಂಡಿಗೆಯನ್ನು ಹಲವರು ಮೆಚ್ಚಿದರು. ಆದರೇ ಅಂದೇ ಅಪ್ಪಮಕ್ಕಳು ಸಿಂಧ್ಯನ ಕತೆ ಮುಗಿಸಲು ಪಣತೊಟ್ಟರು. ಸಿಂಧ್ಯನ ಗಂಡು ಮಾತಿಗೆ ತಕ್ಕ ಉತ್ತರ ಕೊಡುವ ಅವಕಾಶ ಒದಗಿ ಬಂದಾಗ ಎಂ.ಪಿ.ಪ್ರಕಾಶರು, ಕುಮಾರ ಅಲ್ಲ ನಾನೇ ಸಭಾ ನಾಯಕ ಅಂದಿದ್ದರೆ ಆ ಕತೆಯೇ ಬೇರೆಯಾಗಿ ಕರ್ನಾಟಕದ ಇಂದಿನ ಪ್ರಹಸನಕ್ಕೂ ಅವಕಾಶವಿರಲಿಲ್ಲ. ಆದರೆ ಪ್ರಕಾಶ್ ಹಿಂಜರಿದರು. ಆದರೂ ಕುಮಾರಣ್ಣನ ಸರಕಾರ ಅವರಿಗೆ ಗೃಹಸಚಿವರ ಸ್ಥಾನ ನೀಡಿದ್ದಲ್ಲದೆ ಸದನದಲ್ಲಿ ಸರಕಾರದ ಎಲ್ಲಾ ಸಮಸ್ಯೆಗಳಿಗೆ ಸಮಂಜಸ ಉತ್ತರ ನೀಡುವ ಜವಾಬ್ದಾರಿ ವಹಿಸಿತ್ತು. ಆದರೇನು, ಪ್ರಕಾಶ್ ಅವರು ಅಪ್ಪಮಗನ ಗಾಣದಲ್ಲಿ ಸಿಕ್ಕು ನಜ್ಜುಗುಜ್ಜಾಗಿ ಹೋಗಿದ್ದರು. ಕಡೆಗೆ ಇವರ ಸಹವಾಸವೇ ಸಾಕು ಎಂದು ತಮ್ಮ ಜೀವಿತಾವಧಿಯಲ್ಲಿ ಟೀಕೆ ಮಾಡಿಕೊಂಡು ಬಂದ ಕಾಂಗ್ರೆಸ್‍ಗೆ ಹೋದರು, ಅಲ್ಲಿ ಸೋತರು. ಏಕೆಂದರೆ ಗೌಡರು ಅವರ ವಿರುದ್ಧವೂ ಅಭ್ಯರ್ಥಿ ಹಾಕಿದ್ದರು. ಅಂತೂ ಪ್ರಕಾಶರ ಅವನತಿಗೆ ಗೌಡರು ಕಾರಣರಾಗಿ ಹೋದರಲ್ಲಾ ಥೂತ್ತೇರಿ…!!!

*****

ಇತಿಹಾಸ ಒಂದು ದಶಕದಲ್ಲೇ ಮರುಕಳಿಸಿ ಹೋಯ್ತಲ್ಲ! ದುಷ್ಟ ಚತುಷ್ಟರ ಪೈಕಿ, ಕುಮಾರಣ್ಣನ ಬಳಿ ಯಾರೂ ಇಲ್ಲ. ಇದ್ದರೂ ಜಮೀರನನ್ನ ಪೂರಾ ನಂಬುವಂತಿಲ್ಲ. ಇತ್ತ ಎಡೂರಪ್ಪನ ಮುಖದಲ್ಲಿ ಅಂತಹ ಗೆಲುವಿಲ್ಲ. ಇಡೀ ಬಿ.ಜೆ.ಪಿ.ಯಲ್ಲೇ ಎಡೂರಪ್ಪ ಮತ್ತೆ ವಕ್ಕರಿಸುವ ಬಗ್ಗೆ, ಹೇಳಿಕೊಳ್ಳುವ ಹುಮ್ಮಸ್ಸಿಲ್ಲ. ಅದರಲ್ಲೂ ಈಶ್ವರಪ್ಪ ದಿಕ್ಕೇ ತೋಚದಂತಾಗಿದ್ದಾರೆ. ಏಕೆಂದರೆ ಎಡೂರಪ್ಪ ಮತ್ತು ಈಶ್ವರಪ್ಪನ ದಾಯಾದಿ ಕಲಹಕ್ಕೆ ಇತಿಹಾಸವೇ ಇದೆ. ಆದ್ದರಿಂದ ಎಡೂರಪ್ಪ ಮುಖ್ಯಮಂತ್ರಿಯಾದ ಕೂಡಲೇ ಅವರ ತಲೆನೋವಾಗಿ ಪರಿಣಮಿಸಲಿದ್ದಾರೆ. ಎಡೂರಪ್ಪ ಯಾವುದಕ್ಕೂ ಬಗ್ಗದಿದ್ದರೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬದಲು, ಕನಕದಾಸ ಸಮರಸೇನೆ ಹುಟ್ಟು ಹಾಕಿದರೂ ಅಚ್ಚರಿಯಿಲ್ಲವಂತಲ್ಲಾ. ಏಕೆಂದರೆ ಕನಕದಾಸರು ಬರೀ ದಾಸರಷ್ಟೇ ಅಲ್ಲ. ಅದಕ್ಕೂ ಮೊದಲು ಬಾಡದ ನಾಯಕರಾಗಿ ಕಾದಾಡಿ, ವಿಜಯನಗರದ ಅರಸರ ಜೀತಕ್ಕಿಂತ ತಂಬೂರಿಯೇ ಲೇಸೆಂದು ಹೊರಟವರು. ಇದನ್ನೆಲ್ಲಾ ಬಿ.ಜೆ.ಪಿ ವಿದ್ವಾಂಸರಿಂದ ಸಂಗ್ರಹಿಸಿಕೊಂಡು ಮತ್ತೆ ಎಡೂರಪ್ಪನ ಎದುರು ಹೋರಾಟ ಆರಂಭಿಸುವುದಿಲ್ಲ ಎಂಬುದು ಯಾವ ಗ್ಯಾರಂಟಿ… ಥೂತ್ತೇರಿ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...