Homeಮುಖಪುಟಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

- Advertisement -
- Advertisement -

ಮಂಗಳೂರು-ವಿಟ್ಲ ಭಾಗದ ಮುಸ್ಲಿಮರ ನರಮೇಧಕ್ಕೆ ಫೇಸ್ ಬುಕ್ ಪೋಸ್ಟ್ ಮೂಲಕ ಪ್ರಚೋದಿಸಿದ್ದ ಫೆಡರಲ್ ಬ್ಯಾಂಕ್ ಅಧಿಕಾರಿ ವಿಷ್ಣುಪ್ರಸಾದ್ ನಿಡ್ಡಾಜೆ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿಟ್ಲ ಬಳಿ ತಾನು ಫೆಡರಲ್ ಬ್ಯಾಂಕಿನ ಅಧಿಕಾರಿಯೆಂದು ತನ್ನ ಫೇಸ್ ಬುಕ್ ಪ್ರೋಫೈಲ್‌ನಲ್ಲಿ ಹೇಳಿಕೊಂಡಿರುವ ವಿಷ್ಣುಪ್ರಸಾದ್ ಎಂಬುವವರು ವಿಟ್ಲದ ಬಳಿಯ ಸಾಲೆತ್ತೂರಿನಲ್ಲಿ ಮುಸ್ಲಿಮ್ ಮದುಮಗನೊಬ್ಬ ಕೊರಗರ ಆರಾದ್ಯ ದೈವ ಕೊರಗಜ್ಜನ ಅಣಕಿಸುವ ವೇಷ ತೊಟ್ಟಿದ್ದನೆಂಬ ಆರೋಪಕ್ಕೆ ಸಂಬಂಧಿಸಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ. ಇದರ ವಿರುದ್ದ ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಟ್ವಿಟರ್ ಬಳಕೆದಾರರೊಬ್ಬರು ಫೆಡರಲ್ ಬ್ಯಾಂಕ್‌ನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ ಆರೋಪಿ ವಿರುದ್ದ ಪಿಎಫ್‌ಐ ಸಂಘಟನೆಯು ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿತ್ತು.

ಈಗ ಆರೋಪಿ ವಿಷ್ಣುಪ್ರಸಾದ್ ನಿಡ್ಡಾಜೆ ಮೇಲೆ ಐಪಿಸಿ ಸೆಕ್ಷನ್ 505ರಡಿ ಎಫ್‌ಐಆರ್ ದಾಖಲಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ನಮ್ಮದು ಕೃಷ್ಣನ ತತ್ವ, ಶಿಶುಪಾಲನ ನೂರು ಪೆಟ್ಟುಗಳನ್ನು ಸಹಿಸೋದು, ನೂರೊಂದನೆ ಪೆಟ್ಟಿಗೆ ಢಿಮ್… ಬಾಂಧವರ ಸಾವಿರ ಪೆಟ್ಟು ಸಹಿಸೋದು, ನಂತರ ಗೋಧ್ರಾ ತರದ ಒಂದು ಪೆಟ್ಟಿನಲ್ಲಿ 20 ವರ್ಷ ಗಪ್ ಚುಪ್… ಗುಜರಾತಿನ ಕೊನೆಯ ಕೋಮುಗಲಭೆ ಯಾವಾಗ ಎಲ್ಲಿ ಹೇಗೆ ನಡೆಯಿತು ಅನ್ನೂದನ್ನ ಸ್ವಲ್ಪ ಯೋಚಿಸಿ ನೋಡಿದರೆ ಇದು ಅರ್ಥವಾದೀತು… ಬಹುಶಃ ವಿಟ್ಲ, ಮಂಗಳೂರು ಕಡೆ ಇನ್ನೂ ಅವುಗಳ ಕೌಂಟ್ ಪೂರ್ತಿ ಆಗಿಲ್ಲ ಅನ್ಸುತ್ತೆ… ಬಂದೂ ಬಂದೂ ಕೆಣಕುತ್ತಿವೆ… ಎಂದು ಹಿಂಸಾತ್ಮಕ ಬರಹ ವಿಷ್ಣುಪ್ರಸಾದ್ ತನ್ನ ಫೇಸ್‌ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದ. ಮತ್ತೊಂದು ಪೋಸ್ಟ್‌ನಲ್ಲಿ-ಕೊರಗಜ್ಜನ ವೇಷ ಹಾಕಿದ್ದಾನೆಂದು ಆರೋಪಿಸಲಾಗಿರುವ ಮುಸ್ಲಿಮರ ಮದುಮಗನ ಮನೆ, ಕಾರು, ಅಂಗಡಿ ಧ್ವಂಸ ಮಾಡಬೇಕೆಂಬರ್ಥದಲ್ಲಿ ಬರೆದಿದ್ದ. ಈಗ ವಿಷ್ಣುಪ್ರಸಾದ್ ಫೇಸ್‌ಬುಕ್ ಖಾತೆ ಡಿಲೀಟ್ ಆಗಿದೆ.

ಇದೆಲ್ಲವನ್ನು ಜಾಲತಾಣಿಗರು ಟ್ವೀಟ್ ಮೂಲಕ ಫೆಡರಲ್ ಬ್ಯಾಂಕ್ ಗಮನಕ್ಕೆ ತಂದಿದ್ದರು. ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೀಡಾಗಿದ್ದ ಫೆಡರಲ್ ಬ್ಯಾಂಕ್ ಆಡಳಿತಗಾರರು ಪ್ರತಿಕಿಯಿಸುವುದು ಅನಿವಾರ್ಯವಾಯಿತು. ಒಂದು ಜವಾಬ್ದಾರಿಯುತ ಸಂಸ್ಥೆಯಾಗಿ ನಮ್ಮ ಉದ್ಯೋಗಿಗಳ ಕಡೆಯಿಂದ ಯಾವುದೆ ಅಸಭ್ಯ, ಅನಪೇಕ್ಷಿತ ಅಥವಾ ಹಿಂಸಾತ್ಮಕ, ಪ್ರಶ್ನಾತ್ಮಕ ಕೃತ್ಯಗಳನ್ನು ಎಂದಿಗೂ ಪ್ರೋತ್ಸಾಹಿಸುವುದಿಲ್ಲ. ಅಂತಹ ವರ್ತನೆಯನ್ನು ಸಂಸ್ಥೆ ಎಂದು ಸಹಿಸುವುದಿಲ್ಲ. ಇಂತಹ ಯಾವುದೇ ಪ್ರಚೋದನೆಗೂ ಸಂಸ್ಥೆಗೂ ಸಂಬಂಧವಿಲ್ಲ. ಈ ಕುರಿತು ಸೂಕ್ತ ಕ್ರಮಕ್ಕಾಗಿ ವಿಚಾರಣೆ ಪ್ರಾರಂಭಿಸಲಾಗಿದೆ ಎಂದು ಫೆಡರಲ್ ಬ್ಯಾಂಕ್ ಹೇಳಿತ್ತು.


ಇದನ್ನೂ ಓದಿ: ಮಂಗಳೂರು: ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ ಬ್ಯಾಂಕ್ ಅಧಿಕಾರಿ- ಕ್ರಮಕ್ಕೆ ಮುಂದಾದ ಬ್ಯಾಂಕ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...