Homeಮುಖಪುಟಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

- Advertisement -
- Advertisement -

ಮಂಗಳೂರು-ವಿಟ್ಲ ಭಾಗದ ಮುಸ್ಲಿಮರ ನರಮೇಧಕ್ಕೆ ಫೇಸ್ ಬುಕ್ ಪೋಸ್ಟ್ ಮೂಲಕ ಪ್ರಚೋದಿಸಿದ್ದ ಫೆಡರಲ್ ಬ್ಯಾಂಕ್ ಅಧಿಕಾರಿ ವಿಷ್ಣುಪ್ರಸಾದ್ ನಿಡ್ಡಾಜೆ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿಟ್ಲ ಬಳಿ ತಾನು ಫೆಡರಲ್ ಬ್ಯಾಂಕಿನ ಅಧಿಕಾರಿಯೆಂದು ತನ್ನ ಫೇಸ್ ಬುಕ್ ಪ್ರೋಫೈಲ್‌ನಲ್ಲಿ ಹೇಳಿಕೊಂಡಿರುವ ವಿಷ್ಣುಪ್ರಸಾದ್ ಎಂಬುವವರು ವಿಟ್ಲದ ಬಳಿಯ ಸಾಲೆತ್ತೂರಿನಲ್ಲಿ ಮುಸ್ಲಿಮ್ ಮದುಮಗನೊಬ್ಬ ಕೊರಗರ ಆರಾದ್ಯ ದೈವ ಕೊರಗಜ್ಜನ ಅಣಕಿಸುವ ವೇಷ ತೊಟ್ಟಿದ್ದನೆಂಬ ಆರೋಪಕ್ಕೆ ಸಂಬಂಧಿಸಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ. ಇದರ ವಿರುದ್ದ ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಟ್ವಿಟರ್ ಬಳಕೆದಾರರೊಬ್ಬರು ಫೆಡರಲ್ ಬ್ಯಾಂಕ್‌ನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ ಆರೋಪಿ ವಿರುದ್ದ ಪಿಎಫ್‌ಐ ಸಂಘಟನೆಯು ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿತ್ತು.

ಈಗ ಆರೋಪಿ ವಿಷ್ಣುಪ್ರಸಾದ್ ನಿಡ್ಡಾಜೆ ಮೇಲೆ ಐಪಿಸಿ ಸೆಕ್ಷನ್ 505ರಡಿ ಎಫ್‌ಐಆರ್ ದಾಖಲಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ನಮ್ಮದು ಕೃಷ್ಣನ ತತ್ವ, ಶಿಶುಪಾಲನ ನೂರು ಪೆಟ್ಟುಗಳನ್ನು ಸಹಿಸೋದು, ನೂರೊಂದನೆ ಪೆಟ್ಟಿಗೆ ಢಿಮ್… ಬಾಂಧವರ ಸಾವಿರ ಪೆಟ್ಟು ಸಹಿಸೋದು, ನಂತರ ಗೋಧ್ರಾ ತರದ ಒಂದು ಪೆಟ್ಟಿನಲ್ಲಿ 20 ವರ್ಷ ಗಪ್ ಚುಪ್… ಗುಜರಾತಿನ ಕೊನೆಯ ಕೋಮುಗಲಭೆ ಯಾವಾಗ ಎಲ್ಲಿ ಹೇಗೆ ನಡೆಯಿತು ಅನ್ನೂದನ್ನ ಸ್ವಲ್ಪ ಯೋಚಿಸಿ ನೋಡಿದರೆ ಇದು ಅರ್ಥವಾದೀತು… ಬಹುಶಃ ವಿಟ್ಲ, ಮಂಗಳೂರು ಕಡೆ ಇನ್ನೂ ಅವುಗಳ ಕೌಂಟ್ ಪೂರ್ತಿ ಆಗಿಲ್ಲ ಅನ್ಸುತ್ತೆ… ಬಂದೂ ಬಂದೂ ಕೆಣಕುತ್ತಿವೆ… ಎಂದು ಹಿಂಸಾತ್ಮಕ ಬರಹ ವಿಷ್ಣುಪ್ರಸಾದ್ ತನ್ನ ಫೇಸ್‌ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದ. ಮತ್ತೊಂದು ಪೋಸ್ಟ್‌ನಲ್ಲಿ-ಕೊರಗಜ್ಜನ ವೇಷ ಹಾಕಿದ್ದಾನೆಂದು ಆರೋಪಿಸಲಾಗಿರುವ ಮುಸ್ಲಿಮರ ಮದುಮಗನ ಮನೆ, ಕಾರು, ಅಂಗಡಿ ಧ್ವಂಸ ಮಾಡಬೇಕೆಂಬರ್ಥದಲ್ಲಿ ಬರೆದಿದ್ದ. ಈಗ ವಿಷ್ಣುಪ್ರಸಾದ್ ಫೇಸ್‌ಬುಕ್ ಖಾತೆ ಡಿಲೀಟ್ ಆಗಿದೆ.

ಇದೆಲ್ಲವನ್ನು ಜಾಲತಾಣಿಗರು ಟ್ವೀಟ್ ಮೂಲಕ ಫೆಡರಲ್ ಬ್ಯಾಂಕ್ ಗಮನಕ್ಕೆ ತಂದಿದ್ದರು. ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೀಡಾಗಿದ್ದ ಫೆಡರಲ್ ಬ್ಯಾಂಕ್ ಆಡಳಿತಗಾರರು ಪ್ರತಿಕಿಯಿಸುವುದು ಅನಿವಾರ್ಯವಾಯಿತು. ಒಂದು ಜವಾಬ್ದಾರಿಯುತ ಸಂಸ್ಥೆಯಾಗಿ ನಮ್ಮ ಉದ್ಯೋಗಿಗಳ ಕಡೆಯಿಂದ ಯಾವುದೆ ಅಸಭ್ಯ, ಅನಪೇಕ್ಷಿತ ಅಥವಾ ಹಿಂಸಾತ್ಮಕ, ಪ್ರಶ್ನಾತ್ಮಕ ಕೃತ್ಯಗಳನ್ನು ಎಂದಿಗೂ ಪ್ರೋತ್ಸಾಹಿಸುವುದಿಲ್ಲ. ಅಂತಹ ವರ್ತನೆಯನ್ನು ಸಂಸ್ಥೆ ಎಂದು ಸಹಿಸುವುದಿಲ್ಲ. ಇಂತಹ ಯಾವುದೇ ಪ್ರಚೋದನೆಗೂ ಸಂಸ್ಥೆಗೂ ಸಂಬಂಧವಿಲ್ಲ. ಈ ಕುರಿತು ಸೂಕ್ತ ಕ್ರಮಕ್ಕಾಗಿ ವಿಚಾರಣೆ ಪ್ರಾರಂಭಿಸಲಾಗಿದೆ ಎಂದು ಫೆಡರಲ್ ಬ್ಯಾಂಕ್ ಹೇಳಿತ್ತು.


ಇದನ್ನೂ ಓದಿ: ಮಂಗಳೂರು: ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ ಬ್ಯಾಂಕ್ ಅಧಿಕಾರಿ- ಕ್ರಮಕ್ಕೆ ಮುಂದಾದ ಬ್ಯಾಂಕ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...