Homeಕರ್ನಾಟಕಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

- Advertisement -
- Advertisement -

ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲ, ಪಾದಯಾತ್ರೆ ಮಾಡಿದರೆ ಕಾಂಗ್ರೆಸ್ ನಾಯಕರನ್ನು ಬಂಧಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಗೆ ಗುರುವಾರ ತಿರುಗೇಟು ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘‘ಜನರ ನೀರಿಗಾಗಿ, ರಾಜ್ಯದ ಹಿತಕ್ಕಾಗಿ ಕಾಂಗ್ರೆಸ್ ಪಕ್ಷ ನಡಿಗೆ ಮಾಡುತ್ತಿದ್ದು, ಇದನ್ನು ತಡೆಯಲು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮತ್ತೊಂದು ಜನ್ಮ ಹುಟ್ಟಿ ಬರಬೇಕು’’ ಎಂದು ಹೇಳಿದ್ದಾರೆ.

‘‘ಅವರು ಯಾರನ್ನು ಬೇಕಾದರೂ ಬಂಧಿಸಲಿ, ನನ್ನನ್ನು ಬೇಕಾದರೂ ಬಂಧಿಸಲಿ, ಸಿದ್ದರಾಮಯ್ಯ ಅವರನ್ನಾದರೂ ಬಂಧಿಸಲಿ, ಶಾಸಕರನ್ನಾದರೂ ಬಂಧಿಸಲಿ. ನಾವು ಕೋವಿಡ್ ನಿಯಮ ಗೌರವಿಸಿ ಕಾರ್ಯಕ್ರಮ ಮಾಡುತ್ತೇವೆ. ರಾಜ್ಯದಲ್ಲಿ ಕೋವಿಡ್ ಇದೆ ಎಂದು ನಿರ್ಬಂಧ ಹಾಕಿದ್ದರೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನಲ್ಲಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. ಅಲ್ಲಿ ಸಾವಿರಾರು ಜನ ಸೇರಿದ್ದಾರೆ. ಸರ್ಕಾರ ಏನು ಮಾಡುತ್ತಿದೆ. ಗೃಹ ಮಂತ್ರಿಗಳು ಇಲ್ಲಿರುವ ಯಾರನ್ನಾದರೂ ಮುಟ್ಟಲು ಸಾಧ್ಯವೇ? ಇವರ ಮೇಲೆ ಯಾಕೆ ಪ್ರಕರಣ ದಾಖಲಿಸಿಲ್ಲ? ಇದು ಸಭೆ, ಸಮಾರಂಭವಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:‘ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

“ವಿಧಾನ ಪರಿಷತ್ ನೂತನ ಸದಸ್ಯರು ಚುನಾವಣೆಯಲ್ಲಿ ಗೌರವದಿಂದ ಗೆದ್ದಿದ್ದಾರೆ. ಅವರು ಬರಬಾರದು ಎಂದು ಹೇಳುತ್ತಿಲ್ಲ. ನೂತನ ಸದಸ್ಯರಿಗೆ ಪ್ರಮಾಣ ವಚನ ನೀಡುವುದಾದರೆ ವರ್ಚುವಲ್ ಸಭೆ ಮಾಡಬೇಕಿತ್ತು. ಅಥವಾ ಪರಿಷತ್ ಒಳಗೆ ಪ್ರಮಾಣ ಬೋಧಿಸಬೇಕಿತ್ತು. ಆದರೆ ಇಲ್ಲಿ ಈ ರೀತಿ ಮಾಡುತ್ತಿರುವುದು ಯಾವ ಆಟ? ಗೃಹ ಸಚಿವರು ಏನು ಮಾಡುತ್ತಿದ್ದಾರೆ? ನಮ್ಮನ್ನು ಹೆದರಿಸುತ್ತಾರಾ? ಇಂತಹ ಗೊಡ್ಡು ಬೆದರಿಕೆಗೆ ಕಾಂಗ್ರೆಸ್ ಹೆದರುವುದಿಲ್ಲ. ನಾನು ಜೈಲಿಗೆ ಹೋಗಿ ಹೋರಾಡಲು ಸಿದ್ಧ. ಈ ರಾಜ್ಯದ ಜನರಿಗಾಗಿ ಹೋರಾಟ ಮಾಡುತ್ತಿದ್ದು, ನಾವು ನಡಿಗೆ ಮಾಡುತ್ತೇವೆ. ರಾಜ್ಯದ ಜನ, ಪಕ್ಷಾತೀತವಾಗಿ ನಾಯಕರು ಬರುತ್ತಾರೆ. ಗೃಹ ಸಚಿವರು ಈ ಬೆದರಿಕೆಯನ್ನು ದೂರದಲ್ಲಿ ಎಲ್ಲಾದರೂ ಇಟ್ಟುಕೊಳ್ಳಲಿ, ಇಲ್ಲಲ್ಲ” ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೃಹ ಸಚಿವರು ಹೇಗೆ ಅನುಮತಿ ಕೊಟ್ಟರು? ಯಾವುದೇ ಸಭೆ ಸಮಾರಂಭ ಮಾಡುವಂತಿಲ್ಲ ಎಂದು ನಿರ್ಬಂಧ ಹಾಕಿದ ಮೇಲೆ ಪ್ರಮಾಣ ವಚನ ಕಾರ್ಯಕ್ರಮವನ್ನು ಪರಿಷತ್‌ನಲ್ಲಿ ಮಾಡಬೇಕಾಗಿತ್ತು. ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಷ್ಟು ಜನ ಸೇರಿದ್ದಾರೆ, ಇಲ್ಲಿ ಕೋವಿಡ್ ಹರಡುವುದಿಲ್ಲವೇ? ಗೃಹ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಗೃಹ ಸಚಿವರು ಈ ಕಾರ್ಯಕ್ರಮ ಆಧಾರದ ಮೇಲೆ ಮೊದಲು ಪ್ರಕರಣ ದಾಖಲಿಸಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ:‘ನಮ್ಮ ಜಿಲ್ಲೆಯನ್ನು ಹಾಳು ಮಾಡಿಬಿಟ್ಟ’: ಸಚಿವ ಮಾಧುಸ್ವಾಮಿ ವಿರುದ್ಧ ಕಿಡಿಕಾರಿದ ಬಿಜೆಪಿ ಸಂಸದ ಜಿ.ಎಸ್. ಬಸವರಾಜ್

“ನಾವು 40 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಅವರು ಯಾರನ್ನು ಹೆದರಿಸುತ್ತಿದ್ದಾರೆ? ನಾವು ನಾಡಿನ ಜನರ ನೀರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಅವರು ರಾಜ್ಯದ ಜನರಿಗೆ ನ್ಯಾಯ ಒದಗಿಸದಿದ್ದಾಗ, ನ್ಯಾಯ ಒದಗಿಸುವಂತೆ ಮನವಿ ಮಾಡಿ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಂದು ಜನ್ಮ ಹುಟ್ಟಬೇಕು. ನಮ್ಮನ್ನು ಬಂಧಿಸಲಿ, ಅವರ ತಾಕತ್ತು ತೋರಿಸಲಿ, ನಂತರ ನಾವು ಏನು ಮಾಡುತ್ತೇವೆ ಎಂಬುದನ್ನು ನಾವು ತೋರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

“ಸರ್ಕಾರ ಜನರಿಗೆ ತೊಂದರೆ ನೀಡಬೇಕು ಎನ್ನುವ ಉದ್ದೇಶದಿಂದಲೇ ನಿರ್ಬಂಧ ಹಾಕುತ್ತಿದೆ. ಮುಖ್ಯಮಂತ್ರಿಗಳು ಈ ವಿಚಾರವಾಗಿ ಏನು ಹೇಳುತ್ತಾರೆ ನೋಡಿಕೊಂಡು ನಂತರ ನಾನು ಮಾತನಾಡುತ್ತೇನೆ. ಹರಿಯೋ ನದಿ, ಬೀಸೋ ಗಾಳಿ, ಉದಯಿಸುವ ಸೂರ್ಯನನ್ನು ತಡೆಯಲು ಹೇಗೆ ಸಾಧ್ಯವಿಲ್ಲವೋ ಅದೇ ರೀತಿ ನೀರಿಗಾಗಿ ನಡಿಗೆ ತಡೆಯಲು ಗೃಹಮಂತ್ರಿ ಕೈಯಿಂದ ಸಾಧ್ಯವಿಲ್ಲ. ಇವರಿಗೆ, ಇವರ ಪಕ್ಷಕ್ಕೆ ಅನುಕೂಲವಾಗುವಂತೆ ಬೇಕಾದಂತೆ ನಿಯಮ ಮಾಡಿಕೊಂಡರೆ ಆಗುವುದಿಲ್ಲ. ಅವರು ತಮಗೆ ಬೇಕಾದ ಅಧಿಕಾರಿ ಹಾಕಿಸಿಕೊಂಡು, ನಮ್ಮನ್ನು ಬಂಧಿಸಿಸಲಿ. ಆಮೇಲೆ ನಮ್ಮ ಮಾತು. ಪಾದಯಾತ್ರೆ ನಡೆಯುತ್ತದೆ, ಬಸವನಗುಡಿ ತಲುಪುತ್ತೇವೆ” ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ:‘ನಾನು 11 ಬಾರಿ ಲಸಿಕೆ ಪಡೆದಿದ್ದೇನೆ’ ಎಂದ ವ್ಯಕ್ತಿ: ತನಿಖೆಗೆ ಆದೇಶಿಸಿದ ಬಿಹಾರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...