Homeಕರ್ನಾಟಕಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

- Advertisement -
- Advertisement -

ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲ, ಪಾದಯಾತ್ರೆ ಮಾಡಿದರೆ ಕಾಂಗ್ರೆಸ್ ನಾಯಕರನ್ನು ಬಂಧಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಗೆ ಗುರುವಾರ ತಿರುಗೇಟು ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘‘ಜನರ ನೀರಿಗಾಗಿ, ರಾಜ್ಯದ ಹಿತಕ್ಕಾಗಿ ಕಾಂಗ್ರೆಸ್ ಪಕ್ಷ ನಡಿಗೆ ಮಾಡುತ್ತಿದ್ದು, ಇದನ್ನು ತಡೆಯಲು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮತ್ತೊಂದು ಜನ್ಮ ಹುಟ್ಟಿ ಬರಬೇಕು’’ ಎಂದು ಹೇಳಿದ್ದಾರೆ.

‘‘ಅವರು ಯಾರನ್ನು ಬೇಕಾದರೂ ಬಂಧಿಸಲಿ, ನನ್ನನ್ನು ಬೇಕಾದರೂ ಬಂಧಿಸಲಿ, ಸಿದ್ದರಾಮಯ್ಯ ಅವರನ್ನಾದರೂ ಬಂಧಿಸಲಿ, ಶಾಸಕರನ್ನಾದರೂ ಬಂಧಿಸಲಿ. ನಾವು ಕೋವಿಡ್ ನಿಯಮ ಗೌರವಿಸಿ ಕಾರ್ಯಕ್ರಮ ಮಾಡುತ್ತೇವೆ. ರಾಜ್ಯದಲ್ಲಿ ಕೋವಿಡ್ ಇದೆ ಎಂದು ನಿರ್ಬಂಧ ಹಾಕಿದ್ದರೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನಲ್ಲಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. ಅಲ್ಲಿ ಸಾವಿರಾರು ಜನ ಸೇರಿದ್ದಾರೆ. ಸರ್ಕಾರ ಏನು ಮಾಡುತ್ತಿದೆ. ಗೃಹ ಮಂತ್ರಿಗಳು ಇಲ್ಲಿರುವ ಯಾರನ್ನಾದರೂ ಮುಟ್ಟಲು ಸಾಧ್ಯವೇ? ಇವರ ಮೇಲೆ ಯಾಕೆ ಪ್ರಕರಣ ದಾಖಲಿಸಿಲ್ಲ? ಇದು ಸಭೆ, ಸಮಾರಂಭವಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:‘ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

“ವಿಧಾನ ಪರಿಷತ್ ನೂತನ ಸದಸ್ಯರು ಚುನಾವಣೆಯಲ್ಲಿ ಗೌರವದಿಂದ ಗೆದ್ದಿದ್ದಾರೆ. ಅವರು ಬರಬಾರದು ಎಂದು ಹೇಳುತ್ತಿಲ್ಲ. ನೂತನ ಸದಸ್ಯರಿಗೆ ಪ್ರಮಾಣ ವಚನ ನೀಡುವುದಾದರೆ ವರ್ಚುವಲ್ ಸಭೆ ಮಾಡಬೇಕಿತ್ತು. ಅಥವಾ ಪರಿಷತ್ ಒಳಗೆ ಪ್ರಮಾಣ ಬೋಧಿಸಬೇಕಿತ್ತು. ಆದರೆ ಇಲ್ಲಿ ಈ ರೀತಿ ಮಾಡುತ್ತಿರುವುದು ಯಾವ ಆಟ? ಗೃಹ ಸಚಿವರು ಏನು ಮಾಡುತ್ತಿದ್ದಾರೆ? ನಮ್ಮನ್ನು ಹೆದರಿಸುತ್ತಾರಾ? ಇಂತಹ ಗೊಡ್ಡು ಬೆದರಿಕೆಗೆ ಕಾಂಗ್ರೆಸ್ ಹೆದರುವುದಿಲ್ಲ. ನಾನು ಜೈಲಿಗೆ ಹೋಗಿ ಹೋರಾಡಲು ಸಿದ್ಧ. ಈ ರಾಜ್ಯದ ಜನರಿಗಾಗಿ ಹೋರಾಟ ಮಾಡುತ್ತಿದ್ದು, ನಾವು ನಡಿಗೆ ಮಾಡುತ್ತೇವೆ. ರಾಜ್ಯದ ಜನ, ಪಕ್ಷಾತೀತವಾಗಿ ನಾಯಕರು ಬರುತ್ತಾರೆ. ಗೃಹ ಸಚಿವರು ಈ ಬೆದರಿಕೆಯನ್ನು ದೂರದಲ್ಲಿ ಎಲ್ಲಾದರೂ ಇಟ್ಟುಕೊಳ್ಳಲಿ, ಇಲ್ಲಲ್ಲ” ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೃಹ ಸಚಿವರು ಹೇಗೆ ಅನುಮತಿ ಕೊಟ್ಟರು? ಯಾವುದೇ ಸಭೆ ಸಮಾರಂಭ ಮಾಡುವಂತಿಲ್ಲ ಎಂದು ನಿರ್ಬಂಧ ಹಾಕಿದ ಮೇಲೆ ಪ್ರಮಾಣ ವಚನ ಕಾರ್ಯಕ್ರಮವನ್ನು ಪರಿಷತ್‌ನಲ್ಲಿ ಮಾಡಬೇಕಾಗಿತ್ತು. ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಷ್ಟು ಜನ ಸೇರಿದ್ದಾರೆ, ಇಲ್ಲಿ ಕೋವಿಡ್ ಹರಡುವುದಿಲ್ಲವೇ? ಗೃಹ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ? ಗೃಹ ಸಚಿವರು ಈ ಕಾರ್ಯಕ್ರಮ ಆಧಾರದ ಮೇಲೆ ಮೊದಲು ಪ್ರಕರಣ ದಾಖಲಿಸಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ:‘ನಮ್ಮ ಜಿಲ್ಲೆಯನ್ನು ಹಾಳು ಮಾಡಿಬಿಟ್ಟ’: ಸಚಿವ ಮಾಧುಸ್ವಾಮಿ ವಿರುದ್ಧ ಕಿಡಿಕಾರಿದ ಬಿಜೆಪಿ ಸಂಸದ ಜಿ.ಎಸ್. ಬಸವರಾಜ್

“ನಾವು 40 ವರ್ಷಗಳಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ಅವರು ಯಾರನ್ನು ಹೆದರಿಸುತ್ತಿದ್ದಾರೆ? ನಾವು ನಾಡಿನ ಜನರ ನೀರಿಗಾಗಿ ಹೋರಾಟ ಮಾಡುತ್ತಿದ್ದೇವೆ. ಅವರು ರಾಜ್ಯದ ಜನರಿಗೆ ನ್ಯಾಯ ಒದಗಿಸದಿದ್ದಾಗ, ನ್ಯಾಯ ಒದಗಿಸುವಂತೆ ಮನವಿ ಮಾಡಿ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಂದು ಜನ್ಮ ಹುಟ್ಟಬೇಕು. ನಮ್ಮನ್ನು ಬಂಧಿಸಲಿ, ಅವರ ತಾಕತ್ತು ತೋರಿಸಲಿ, ನಂತರ ನಾವು ಏನು ಮಾಡುತ್ತೇವೆ ಎಂಬುದನ್ನು ನಾವು ತೋರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

“ಸರ್ಕಾರ ಜನರಿಗೆ ತೊಂದರೆ ನೀಡಬೇಕು ಎನ್ನುವ ಉದ್ದೇಶದಿಂದಲೇ ನಿರ್ಬಂಧ ಹಾಕುತ್ತಿದೆ. ಮುಖ್ಯಮಂತ್ರಿಗಳು ಈ ವಿಚಾರವಾಗಿ ಏನು ಹೇಳುತ್ತಾರೆ ನೋಡಿಕೊಂಡು ನಂತರ ನಾನು ಮಾತನಾಡುತ್ತೇನೆ. ಹರಿಯೋ ನದಿ, ಬೀಸೋ ಗಾಳಿ, ಉದಯಿಸುವ ಸೂರ್ಯನನ್ನು ತಡೆಯಲು ಹೇಗೆ ಸಾಧ್ಯವಿಲ್ಲವೋ ಅದೇ ರೀತಿ ನೀರಿಗಾಗಿ ನಡಿಗೆ ತಡೆಯಲು ಗೃಹಮಂತ್ರಿ ಕೈಯಿಂದ ಸಾಧ್ಯವಿಲ್ಲ. ಇವರಿಗೆ, ಇವರ ಪಕ್ಷಕ್ಕೆ ಅನುಕೂಲವಾಗುವಂತೆ ಬೇಕಾದಂತೆ ನಿಯಮ ಮಾಡಿಕೊಂಡರೆ ಆಗುವುದಿಲ್ಲ. ಅವರು ತಮಗೆ ಬೇಕಾದ ಅಧಿಕಾರಿ ಹಾಕಿಸಿಕೊಂಡು, ನಮ್ಮನ್ನು ಬಂಧಿಸಿಸಲಿ. ಆಮೇಲೆ ನಮ್ಮ ಮಾತು. ಪಾದಯಾತ್ರೆ ನಡೆಯುತ್ತದೆ, ಬಸವನಗುಡಿ ತಲುಪುತ್ತೇವೆ” ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ:‘ನಾನು 11 ಬಾರಿ ಲಸಿಕೆ ಪಡೆದಿದ್ದೇನೆ’ ಎಂದ ವ್ಯಕ್ತಿ: ತನಿಖೆಗೆ ಆದೇಶಿಸಿದ ಬಿಹಾರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...