Homeಕರ್ನಾಟಕಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

ಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

- Advertisement -
- Advertisement -


ಉತ್ತರ ಕನ್ನಡದ ಪ್ರಸಿದ್ದ ಪ್ರವಾಸಿ ಮತ್ತು ಧಾರ್ಮಿಕ ತಾಣ ಮುರುಡೇಶ್ವರದ ಪ್ರಮುಖ ಆಕರ್ಷಣೆಯರನಿಸಿರುವ ಶಿವನ ಪ್ರತಿಮೆಯನ್ನು ವಿರೂಪಗೊಳಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಉಗ್ರವಾದಿ ಸಂಘಟನೆ ಐಎಸ್‌ಐಎಸ್ ಇಂಥದೊಂದು ಚಿತ್ರ ತನ್ನ ಆನ್ ಲೈನ್ ಮುಖವಾಣಿ ವಾಯ್ಸ್ ಆಪ್ ಹಿಂದ್‌ನಲ್ಲಿ ಪ್ರಕಟಿಸಿದೆಯೆಂದು ವ್ಯವಸ್ಥಿತವಾಗಿ ಪುಕಾರು ಹಬ್ಬಿಸಲಾಗಿತ್ತು. ಆದರೆ ವಿಶ್ವ ಪ್ರಸಿದ್ದ ಮುರುಡೇಶ್ವನ ವಿಗ್ರಹ ಭಗ್ನಗೊಳಿಸಿದ ಚಿತ್ರ ಐಸಿಸ್ ಪತ್ರಿಕೆಯಲ್ಲಿ ಬಂದಿಲ್ಲವೆಂಬುದು ಬಹಿರಂಗವಾಗಿದೆ. ಕಳೆದ ಅಸೆಂಬ್ಲಿ ಚುನಾವಣೆ ಬಳಿಕ ಶಾಂತವಾಗಿರುವ ಕರಾವಳಿಯನ್ನು ಕದಡಿ ಮುಂಬರುವ ಚುನಾವಣೆಗೆ ತಯಾರಿಗೆ ಮತಾಂಧ ಶಕ್ತಿಗಳು ನಡೆಸಿರುವ ಹುನ್ನಾರವಿದು ಎಂಬ ಅಭಿಪ್ರಾಯ ವ್ಯಾಪಕವಾಗಿ ಮೂಡಿದೆ.

ಇದಕ್ಕೊಂದು ಹಿನ್ನಲೆಯೂ ಇದೆ. ಕೆಲ ತಿಂಗಳ ಹಿಂದೆ ಭಾರತದಲ್ಲಿ ಐಸಿಸ್‌ನ ಮುಖವಾಣಿಯಾಗಿರುವ ವಾಯ್ಸ್ ಆಫ್ ಹಿಂದ್‌ನ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದಲ್ಲಿ ದೇಶದ ಹಲವೆಡೆ ದಾಳಿ ಮಾಡಿ ಕೆಲವರನ್ನು ಬಂಧಿಸಲಾಗಿತ್ತು. ಇದರಲ್ಲಿ ಭಟ್ಕಳದ ಯುವಕನೊಬ್ಬನಿದ್ದ. ಇದನ್ನು ಬಳಸಿಕೊಂಡು ಭಟ್ಕಳ ತಾಲೂಕಿನ ಮುರುಡೇಶ್ವರದ ಶಿವನ ಮೂರ್ತಿಯನ್ನು ಐಸಿಸ್‌ನವರು ವಿಕಾರಗೊಳಿಸಿ ಪ್ರಕಟಿಸಿದ್ದಾರೆಂದು ಸುಳ್ಳು ಪ್ರಚಾರ ಮಾಡಲು ಪ್ರಯತ್ನಿಸಲಾಗಿದೆ ಎನ್ನಲಾಗಿದೆ. ವಾಯ್ಸ್ ಆಫ್ ಹಿಂದ್‌ನಲ್ಲಿ ಬಂದಿದೆಯೆಂಬಂತೆ ‘ಸೃಷ್ಟಿಸಲಾದ’ ಚಿತ್ರದಲ್ಲಿ ಶಿವನ ಶಿರವನ್ನು ಛೇದಗೊಳಿಸಿ ಅಲ್ಲಿ ಐಸಿಸ್ ಬಾವುಟ ಹಾರಿಸಲಾಗಿತ್ತು. ಅಲ್ಲದೆ ತಪ್ಪು ದೇವರನ್ನು ಒಡೆಯುವ ಸಮಯ ಬಂದಿದೆಯೆಂದು ಬರೆಯಲಾಗಿತ್ತು. ಆದರೆ ಅಂತಹ ಯಾವ ಘಟನೆಯೂ ಮುರುಡೇಶ್ವರದಲ್ಲಿ ನಡೆದಿಲ್ಲ. ಕೇವಲ ಫೋಟೊಶಾಪ್ ಮಾಡಿ ಹರಿಯಬಿಡಲಾಗಿತ್ತು.

ವಾಯ್ಸ್ ಆಫ್ ಹಿಂದ್‌ನಲ್ಲಿ ಇಂತಹ ಫೋಟೋ ಆಗಲಿ ಒಕ್ಕಣಿಕೆಯಾಗಲಿ ಬಂದಿಲ್ಲವೆಂದು ಉತ್ತರ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಧೃಡಪಡಿಸದ್ದಾರೆ. ಯಾವ ಮೂಲದಿಂದ ಇದನ್ನು ಹರಿಬಿಡಲಾಗಿದೆಯೆಂಬುದನ್ನು ಹುಡುಕಲಾಗುತ್ತಿದೆ: ಸೈಬರ್ ಕ್ರೈಮ್ ಪೊಲೀಸರ ನೆರವು ಪಡೆಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮುರುಡೇಶ್ವರದ ವಿಶ್ವ ವಿಖ್ಯಾತ 123 ಅಡಿಯ ಶಿವ ಪ್ರತಿಮೆಯನ್ನು ವಿರೂಪಗೊಳಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಷ್ಠಾಪಿಸಲಾಗಿತ್ತೆಂಬ ಮಾಹಿತಿ ಪೊಲೀಸರಿಗೆ ದೊರಕಿದೆ ಎನ್ನಲಾಗಿದೆ. ಶಿವನ ಮೂರ್ತಿ ಭಗ್ನಗೊಳಿಸಿದಂತೆ ಚಿತ್ರ ರೂಪಿಸಿ, ಪ್ರಚೋದನಾತ್ಮಕ ಬರಹ ಹಾಕಿದ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗಿದು ಪಕ್ಕಾ ಆಗಿದೆ.

ಕೆಲವು ದಿನಗಳ ಹಿಂದೆ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯೊಂದರ ಹೊತ್ತಲ್ಲಿ “ಅಂಬೇಡ್ಕರ್ ಜಿಂದಾಬಾದ್ ಎಂದು ಹಾಕಿದ ಘೋಷಣೆಯನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್” ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಓರ್ವ ಪತ್ರಕರ್ತನೂ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಇದರ ಬೆನ್ನಿಗೆ ಮುರುಡೇಶ್ವರ ಪ್ರತಿಮೆ ವಿರೂಪ ಪ್ರಕರಣ ನಡೆದಿರುವುದರ ಹಿಂದೆ ರಾಜಕೀಯ ಹಿಕಮತ್ತು ಅಡಗಿದೆಯೆಂಬ ಚರ್ಚೆ ಹಟ್ಟುಹಾಕಿದೆ. ಮುಂದಿನ ಒಂದು ವರ್ಷ ಚುನಾವಣಾ ವರ್ಷವಾಗಿರುವುದರಿಂದ ಕರಾವಳಿಯಲ್ಲಿ ಆತಂಕ ಶುರುವಾಗಿದೆ.

ಮೊದಲು ವಿವಿಧ ಜಾತಿ-ಕೋಮುಗಳ ನಡುವೆ ಮನಸ್ತಾಪ ಉಂಟಾಗುವಂತ ಕೃತಕ ಚಿತ್ರ, ಪ್ರಚೋದನಾತ್ಮಕ ಬರಹ ತಯಾರಿಸಿ ಅದನ್ನು ನೈಜವೆಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ನಂತರ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಸುದ್ದಿ ಬರುವಂತೆ ನೋಡಿಕೊಳ್ಳುವುದು ಎಲೆಕ್ಷನ್ ತಂತ್ರಗಾರಿಕೆ ಎಂಬ ಮಾತು ಕೇಳಿಬರುತ್ತಿದೆ!


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...