Homeಕರ್ನಾಟಕಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

ಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

- Advertisement -
- Advertisement -


ಉತ್ತರ ಕನ್ನಡದ ಪ್ರಸಿದ್ದ ಪ್ರವಾಸಿ ಮತ್ತು ಧಾರ್ಮಿಕ ತಾಣ ಮುರುಡೇಶ್ವರದ ಪ್ರಮುಖ ಆಕರ್ಷಣೆಯರನಿಸಿರುವ ಶಿವನ ಪ್ರತಿಮೆಯನ್ನು ವಿರೂಪಗೊಳಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಉಗ್ರವಾದಿ ಸಂಘಟನೆ ಐಎಸ್‌ಐಎಸ್ ಇಂಥದೊಂದು ಚಿತ್ರ ತನ್ನ ಆನ್ ಲೈನ್ ಮುಖವಾಣಿ ವಾಯ್ಸ್ ಆಪ್ ಹಿಂದ್‌ನಲ್ಲಿ ಪ್ರಕಟಿಸಿದೆಯೆಂದು ವ್ಯವಸ್ಥಿತವಾಗಿ ಪುಕಾರು ಹಬ್ಬಿಸಲಾಗಿತ್ತು. ಆದರೆ ವಿಶ್ವ ಪ್ರಸಿದ್ದ ಮುರುಡೇಶ್ವನ ವಿಗ್ರಹ ಭಗ್ನಗೊಳಿಸಿದ ಚಿತ್ರ ಐಸಿಸ್ ಪತ್ರಿಕೆಯಲ್ಲಿ ಬಂದಿಲ್ಲವೆಂಬುದು ಬಹಿರಂಗವಾಗಿದೆ. ಕಳೆದ ಅಸೆಂಬ್ಲಿ ಚುನಾವಣೆ ಬಳಿಕ ಶಾಂತವಾಗಿರುವ ಕರಾವಳಿಯನ್ನು ಕದಡಿ ಮುಂಬರುವ ಚುನಾವಣೆಗೆ ತಯಾರಿಗೆ ಮತಾಂಧ ಶಕ್ತಿಗಳು ನಡೆಸಿರುವ ಹುನ್ನಾರವಿದು ಎಂಬ ಅಭಿಪ್ರಾಯ ವ್ಯಾಪಕವಾಗಿ ಮೂಡಿದೆ.

ಇದಕ್ಕೊಂದು ಹಿನ್ನಲೆಯೂ ಇದೆ. ಕೆಲ ತಿಂಗಳ ಹಿಂದೆ ಭಾರತದಲ್ಲಿ ಐಸಿಸ್‌ನ ಮುಖವಾಣಿಯಾಗಿರುವ ವಾಯ್ಸ್ ಆಫ್ ಹಿಂದ್‌ನ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದಲ್ಲಿ ದೇಶದ ಹಲವೆಡೆ ದಾಳಿ ಮಾಡಿ ಕೆಲವರನ್ನು ಬಂಧಿಸಲಾಗಿತ್ತು. ಇದರಲ್ಲಿ ಭಟ್ಕಳದ ಯುವಕನೊಬ್ಬನಿದ್ದ. ಇದನ್ನು ಬಳಸಿಕೊಂಡು ಭಟ್ಕಳ ತಾಲೂಕಿನ ಮುರುಡೇಶ್ವರದ ಶಿವನ ಮೂರ್ತಿಯನ್ನು ಐಸಿಸ್‌ನವರು ವಿಕಾರಗೊಳಿಸಿ ಪ್ರಕಟಿಸಿದ್ದಾರೆಂದು ಸುಳ್ಳು ಪ್ರಚಾರ ಮಾಡಲು ಪ್ರಯತ್ನಿಸಲಾಗಿದೆ ಎನ್ನಲಾಗಿದೆ. ವಾಯ್ಸ್ ಆಫ್ ಹಿಂದ್‌ನಲ್ಲಿ ಬಂದಿದೆಯೆಂಬಂತೆ ‘ಸೃಷ್ಟಿಸಲಾದ’ ಚಿತ್ರದಲ್ಲಿ ಶಿವನ ಶಿರವನ್ನು ಛೇದಗೊಳಿಸಿ ಅಲ್ಲಿ ಐಸಿಸ್ ಬಾವುಟ ಹಾರಿಸಲಾಗಿತ್ತು. ಅಲ್ಲದೆ ತಪ್ಪು ದೇವರನ್ನು ಒಡೆಯುವ ಸಮಯ ಬಂದಿದೆಯೆಂದು ಬರೆಯಲಾಗಿತ್ತು. ಆದರೆ ಅಂತಹ ಯಾವ ಘಟನೆಯೂ ಮುರುಡೇಶ್ವರದಲ್ಲಿ ನಡೆದಿಲ್ಲ. ಕೇವಲ ಫೋಟೊಶಾಪ್ ಮಾಡಿ ಹರಿಯಬಿಡಲಾಗಿತ್ತು.

ವಾಯ್ಸ್ ಆಫ್ ಹಿಂದ್‌ನಲ್ಲಿ ಇಂತಹ ಫೋಟೋ ಆಗಲಿ ಒಕ್ಕಣಿಕೆಯಾಗಲಿ ಬಂದಿಲ್ಲವೆಂದು ಉತ್ತರ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಧೃಡಪಡಿಸದ್ದಾರೆ. ಯಾವ ಮೂಲದಿಂದ ಇದನ್ನು ಹರಿಬಿಡಲಾಗಿದೆಯೆಂಬುದನ್ನು ಹುಡುಕಲಾಗುತ್ತಿದೆ: ಸೈಬರ್ ಕ್ರೈಮ್ ಪೊಲೀಸರ ನೆರವು ಪಡೆಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮುರುಡೇಶ್ವರದ ವಿಶ್ವ ವಿಖ್ಯಾತ 123 ಅಡಿಯ ಶಿವ ಪ್ರತಿಮೆಯನ್ನು ವಿರೂಪಗೊಳಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಷ್ಠಾಪಿಸಲಾಗಿತ್ತೆಂಬ ಮಾಹಿತಿ ಪೊಲೀಸರಿಗೆ ದೊರಕಿದೆ ಎನ್ನಲಾಗಿದೆ. ಶಿವನ ಮೂರ್ತಿ ಭಗ್ನಗೊಳಿಸಿದಂತೆ ಚಿತ್ರ ರೂಪಿಸಿ, ಪ್ರಚೋದನಾತ್ಮಕ ಬರಹ ಹಾಕಿದ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗಿದು ಪಕ್ಕಾ ಆಗಿದೆ.

ಕೆಲವು ದಿನಗಳ ಹಿಂದೆ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯೊಂದರ ಹೊತ್ತಲ್ಲಿ “ಅಂಬೇಡ್ಕರ್ ಜಿಂದಾಬಾದ್ ಎಂದು ಹಾಕಿದ ಘೋಷಣೆಯನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್” ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಓರ್ವ ಪತ್ರಕರ್ತನೂ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಇದರ ಬೆನ್ನಿಗೆ ಮುರುಡೇಶ್ವರ ಪ್ರತಿಮೆ ವಿರೂಪ ಪ್ರಕರಣ ನಡೆದಿರುವುದರ ಹಿಂದೆ ರಾಜಕೀಯ ಹಿಕಮತ್ತು ಅಡಗಿದೆಯೆಂಬ ಚರ್ಚೆ ಹಟ್ಟುಹಾಕಿದೆ. ಮುಂದಿನ ಒಂದು ವರ್ಷ ಚುನಾವಣಾ ವರ್ಷವಾಗಿರುವುದರಿಂದ ಕರಾವಳಿಯಲ್ಲಿ ಆತಂಕ ಶುರುವಾಗಿದೆ.

ಮೊದಲು ವಿವಿಧ ಜಾತಿ-ಕೋಮುಗಳ ನಡುವೆ ಮನಸ್ತಾಪ ಉಂಟಾಗುವಂತ ಕೃತಕ ಚಿತ್ರ, ಪ್ರಚೋದನಾತ್ಮಕ ಬರಹ ತಯಾರಿಸಿ ಅದನ್ನು ನೈಜವೆಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ನಂತರ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಸುದ್ದಿ ಬರುವಂತೆ ನೋಡಿಕೊಳ್ಳುವುದು ಎಲೆಕ್ಷನ್ ತಂತ್ರಗಾರಿಕೆ ಎಂಬ ಮಾತು ಕೇಳಿಬರುತ್ತಿದೆ!


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...