Homeಕರ್ನಾಟಕಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

ಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

- Advertisement -
- Advertisement -


ಉತ್ತರ ಕನ್ನಡದ ಪ್ರಸಿದ್ದ ಪ್ರವಾಸಿ ಮತ್ತು ಧಾರ್ಮಿಕ ತಾಣ ಮುರುಡೇಶ್ವರದ ಪ್ರಮುಖ ಆಕರ್ಷಣೆಯರನಿಸಿರುವ ಶಿವನ ಪ್ರತಿಮೆಯನ್ನು ವಿರೂಪಗೊಳಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಉಗ್ರವಾದಿ ಸಂಘಟನೆ ಐಎಸ್‌ಐಎಸ್ ಇಂಥದೊಂದು ಚಿತ್ರ ತನ್ನ ಆನ್ ಲೈನ್ ಮುಖವಾಣಿ ವಾಯ್ಸ್ ಆಪ್ ಹಿಂದ್‌ನಲ್ಲಿ ಪ್ರಕಟಿಸಿದೆಯೆಂದು ವ್ಯವಸ್ಥಿತವಾಗಿ ಪುಕಾರು ಹಬ್ಬಿಸಲಾಗಿತ್ತು. ಆದರೆ ವಿಶ್ವ ಪ್ರಸಿದ್ದ ಮುರುಡೇಶ್ವನ ವಿಗ್ರಹ ಭಗ್ನಗೊಳಿಸಿದ ಚಿತ್ರ ಐಸಿಸ್ ಪತ್ರಿಕೆಯಲ್ಲಿ ಬಂದಿಲ್ಲವೆಂಬುದು ಬಹಿರಂಗವಾಗಿದೆ. ಕಳೆದ ಅಸೆಂಬ್ಲಿ ಚುನಾವಣೆ ಬಳಿಕ ಶಾಂತವಾಗಿರುವ ಕರಾವಳಿಯನ್ನು ಕದಡಿ ಮುಂಬರುವ ಚುನಾವಣೆಗೆ ತಯಾರಿಗೆ ಮತಾಂಧ ಶಕ್ತಿಗಳು ನಡೆಸಿರುವ ಹುನ್ನಾರವಿದು ಎಂಬ ಅಭಿಪ್ರಾಯ ವ್ಯಾಪಕವಾಗಿ ಮೂಡಿದೆ.

ಇದಕ್ಕೊಂದು ಹಿನ್ನಲೆಯೂ ಇದೆ. ಕೆಲ ತಿಂಗಳ ಹಿಂದೆ ಭಾರತದಲ್ಲಿ ಐಸಿಸ್‌ನ ಮುಖವಾಣಿಯಾಗಿರುವ ವಾಯ್ಸ್ ಆಫ್ ಹಿಂದ್‌ನ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದಲ್ಲಿ ದೇಶದ ಹಲವೆಡೆ ದಾಳಿ ಮಾಡಿ ಕೆಲವರನ್ನು ಬಂಧಿಸಲಾಗಿತ್ತು. ಇದರಲ್ಲಿ ಭಟ್ಕಳದ ಯುವಕನೊಬ್ಬನಿದ್ದ. ಇದನ್ನು ಬಳಸಿಕೊಂಡು ಭಟ್ಕಳ ತಾಲೂಕಿನ ಮುರುಡೇಶ್ವರದ ಶಿವನ ಮೂರ್ತಿಯನ್ನು ಐಸಿಸ್‌ನವರು ವಿಕಾರಗೊಳಿಸಿ ಪ್ರಕಟಿಸಿದ್ದಾರೆಂದು ಸುಳ್ಳು ಪ್ರಚಾರ ಮಾಡಲು ಪ್ರಯತ್ನಿಸಲಾಗಿದೆ ಎನ್ನಲಾಗಿದೆ. ವಾಯ್ಸ್ ಆಫ್ ಹಿಂದ್‌ನಲ್ಲಿ ಬಂದಿದೆಯೆಂಬಂತೆ ‘ಸೃಷ್ಟಿಸಲಾದ’ ಚಿತ್ರದಲ್ಲಿ ಶಿವನ ಶಿರವನ್ನು ಛೇದಗೊಳಿಸಿ ಅಲ್ಲಿ ಐಸಿಸ್ ಬಾವುಟ ಹಾರಿಸಲಾಗಿತ್ತು. ಅಲ್ಲದೆ ತಪ್ಪು ದೇವರನ್ನು ಒಡೆಯುವ ಸಮಯ ಬಂದಿದೆಯೆಂದು ಬರೆಯಲಾಗಿತ್ತು. ಆದರೆ ಅಂತಹ ಯಾವ ಘಟನೆಯೂ ಮುರುಡೇಶ್ವರದಲ್ಲಿ ನಡೆದಿಲ್ಲ. ಕೇವಲ ಫೋಟೊಶಾಪ್ ಮಾಡಿ ಹರಿಯಬಿಡಲಾಗಿತ್ತು.

ವಾಯ್ಸ್ ಆಫ್ ಹಿಂದ್‌ನಲ್ಲಿ ಇಂತಹ ಫೋಟೋ ಆಗಲಿ ಒಕ್ಕಣಿಕೆಯಾಗಲಿ ಬಂದಿಲ್ಲವೆಂದು ಉತ್ತರ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಧೃಡಪಡಿಸದ್ದಾರೆ. ಯಾವ ಮೂಲದಿಂದ ಇದನ್ನು ಹರಿಬಿಡಲಾಗಿದೆಯೆಂಬುದನ್ನು ಹುಡುಕಲಾಗುತ್ತಿದೆ: ಸೈಬರ್ ಕ್ರೈಮ್ ಪೊಲೀಸರ ನೆರವು ಪಡೆಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮುರುಡೇಶ್ವರದ ವಿಶ್ವ ವಿಖ್ಯಾತ 123 ಅಡಿಯ ಶಿವ ಪ್ರತಿಮೆಯನ್ನು ವಿರೂಪಗೊಳಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಷ್ಠಾಪಿಸಲಾಗಿತ್ತೆಂಬ ಮಾಹಿತಿ ಪೊಲೀಸರಿಗೆ ದೊರಕಿದೆ ಎನ್ನಲಾಗಿದೆ. ಶಿವನ ಮೂರ್ತಿ ಭಗ್ನಗೊಳಿಸಿದಂತೆ ಚಿತ್ರ ರೂಪಿಸಿ, ಪ್ರಚೋದನಾತ್ಮಕ ಬರಹ ಹಾಕಿದ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗಿದು ಪಕ್ಕಾ ಆಗಿದೆ.

ಕೆಲವು ದಿನಗಳ ಹಿಂದೆ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯೊಂದರ ಹೊತ್ತಲ್ಲಿ “ಅಂಬೇಡ್ಕರ್ ಜಿಂದಾಬಾದ್ ಎಂದು ಹಾಕಿದ ಘೋಷಣೆಯನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್” ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಓರ್ವ ಪತ್ರಕರ್ತನೂ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಇದರ ಬೆನ್ನಿಗೆ ಮುರುಡೇಶ್ವರ ಪ್ರತಿಮೆ ವಿರೂಪ ಪ್ರಕರಣ ನಡೆದಿರುವುದರ ಹಿಂದೆ ರಾಜಕೀಯ ಹಿಕಮತ್ತು ಅಡಗಿದೆಯೆಂಬ ಚರ್ಚೆ ಹಟ್ಟುಹಾಕಿದೆ. ಮುಂದಿನ ಒಂದು ವರ್ಷ ಚುನಾವಣಾ ವರ್ಷವಾಗಿರುವುದರಿಂದ ಕರಾವಳಿಯಲ್ಲಿ ಆತಂಕ ಶುರುವಾಗಿದೆ.

ಮೊದಲು ವಿವಿಧ ಜಾತಿ-ಕೋಮುಗಳ ನಡುವೆ ಮನಸ್ತಾಪ ಉಂಟಾಗುವಂತ ಕೃತಕ ಚಿತ್ರ, ಪ್ರಚೋದನಾತ್ಮಕ ಬರಹ ತಯಾರಿಸಿ ಅದನ್ನು ನೈಜವೆಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ನಂತರ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಸುದ್ದಿ ಬರುವಂತೆ ನೋಡಿಕೊಳ್ಳುವುದು ಎಲೆಕ್ಷನ್ ತಂತ್ರಗಾರಿಕೆ ಎಂಬ ಮಾತು ಕೇಳಿಬರುತ್ತಿದೆ!


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...