Homeಕರ್ನಾಟಕಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

ಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

- Advertisement -
- Advertisement -


ಉತ್ತರ ಕನ್ನಡದ ಪ್ರಸಿದ್ದ ಪ್ರವಾಸಿ ಮತ್ತು ಧಾರ್ಮಿಕ ತಾಣ ಮುರುಡೇಶ್ವರದ ಪ್ರಮುಖ ಆಕರ್ಷಣೆಯರನಿಸಿರುವ ಶಿವನ ಪ್ರತಿಮೆಯನ್ನು ವಿರೂಪಗೊಳಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಉಗ್ರವಾದಿ ಸಂಘಟನೆ ಐಎಸ್‌ಐಎಸ್ ಇಂಥದೊಂದು ಚಿತ್ರ ತನ್ನ ಆನ್ ಲೈನ್ ಮುಖವಾಣಿ ವಾಯ್ಸ್ ಆಪ್ ಹಿಂದ್‌ನಲ್ಲಿ ಪ್ರಕಟಿಸಿದೆಯೆಂದು ವ್ಯವಸ್ಥಿತವಾಗಿ ಪುಕಾರು ಹಬ್ಬಿಸಲಾಗಿತ್ತು. ಆದರೆ ವಿಶ್ವ ಪ್ರಸಿದ್ದ ಮುರುಡೇಶ್ವನ ವಿಗ್ರಹ ಭಗ್ನಗೊಳಿಸಿದ ಚಿತ್ರ ಐಸಿಸ್ ಪತ್ರಿಕೆಯಲ್ಲಿ ಬಂದಿಲ್ಲವೆಂಬುದು ಬಹಿರಂಗವಾಗಿದೆ. ಕಳೆದ ಅಸೆಂಬ್ಲಿ ಚುನಾವಣೆ ಬಳಿಕ ಶಾಂತವಾಗಿರುವ ಕರಾವಳಿಯನ್ನು ಕದಡಿ ಮುಂಬರುವ ಚುನಾವಣೆಗೆ ತಯಾರಿಗೆ ಮತಾಂಧ ಶಕ್ತಿಗಳು ನಡೆಸಿರುವ ಹುನ್ನಾರವಿದು ಎಂಬ ಅಭಿಪ್ರಾಯ ವ್ಯಾಪಕವಾಗಿ ಮೂಡಿದೆ.

ಇದಕ್ಕೊಂದು ಹಿನ್ನಲೆಯೂ ಇದೆ. ಕೆಲ ತಿಂಗಳ ಹಿಂದೆ ಭಾರತದಲ್ಲಿ ಐಸಿಸ್‌ನ ಮುಖವಾಣಿಯಾಗಿರುವ ವಾಯ್ಸ್ ಆಫ್ ಹಿಂದ್‌ನ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದಲ್ಲಿ ದೇಶದ ಹಲವೆಡೆ ದಾಳಿ ಮಾಡಿ ಕೆಲವರನ್ನು ಬಂಧಿಸಲಾಗಿತ್ತು. ಇದರಲ್ಲಿ ಭಟ್ಕಳದ ಯುವಕನೊಬ್ಬನಿದ್ದ. ಇದನ್ನು ಬಳಸಿಕೊಂಡು ಭಟ್ಕಳ ತಾಲೂಕಿನ ಮುರುಡೇಶ್ವರದ ಶಿವನ ಮೂರ್ತಿಯನ್ನು ಐಸಿಸ್‌ನವರು ವಿಕಾರಗೊಳಿಸಿ ಪ್ರಕಟಿಸಿದ್ದಾರೆಂದು ಸುಳ್ಳು ಪ್ರಚಾರ ಮಾಡಲು ಪ್ರಯತ್ನಿಸಲಾಗಿದೆ ಎನ್ನಲಾಗಿದೆ. ವಾಯ್ಸ್ ಆಫ್ ಹಿಂದ್‌ನಲ್ಲಿ ಬಂದಿದೆಯೆಂಬಂತೆ ‘ಸೃಷ್ಟಿಸಲಾದ’ ಚಿತ್ರದಲ್ಲಿ ಶಿವನ ಶಿರವನ್ನು ಛೇದಗೊಳಿಸಿ ಅಲ್ಲಿ ಐಸಿಸ್ ಬಾವುಟ ಹಾರಿಸಲಾಗಿತ್ತು. ಅಲ್ಲದೆ ತಪ್ಪು ದೇವರನ್ನು ಒಡೆಯುವ ಸಮಯ ಬಂದಿದೆಯೆಂದು ಬರೆಯಲಾಗಿತ್ತು. ಆದರೆ ಅಂತಹ ಯಾವ ಘಟನೆಯೂ ಮುರುಡೇಶ್ವರದಲ್ಲಿ ನಡೆದಿಲ್ಲ. ಕೇವಲ ಫೋಟೊಶಾಪ್ ಮಾಡಿ ಹರಿಯಬಿಡಲಾಗಿತ್ತು.

ವಾಯ್ಸ್ ಆಫ್ ಹಿಂದ್‌ನಲ್ಲಿ ಇಂತಹ ಫೋಟೋ ಆಗಲಿ ಒಕ್ಕಣಿಕೆಯಾಗಲಿ ಬಂದಿಲ್ಲವೆಂದು ಉತ್ತರ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಧೃಡಪಡಿಸದ್ದಾರೆ. ಯಾವ ಮೂಲದಿಂದ ಇದನ್ನು ಹರಿಬಿಡಲಾಗಿದೆಯೆಂಬುದನ್ನು ಹುಡುಕಲಾಗುತ್ತಿದೆ: ಸೈಬರ್ ಕ್ರೈಮ್ ಪೊಲೀಸರ ನೆರವು ಪಡೆಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮುರುಡೇಶ್ವರದ ವಿಶ್ವ ವಿಖ್ಯಾತ 123 ಅಡಿಯ ಶಿವ ಪ್ರತಿಮೆಯನ್ನು ವಿರೂಪಗೊಳಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಷ್ಠಾಪಿಸಲಾಗಿತ್ತೆಂಬ ಮಾಹಿತಿ ಪೊಲೀಸರಿಗೆ ದೊರಕಿದೆ ಎನ್ನಲಾಗಿದೆ. ಶಿವನ ಮೂರ್ತಿ ಭಗ್ನಗೊಳಿಸಿದಂತೆ ಚಿತ್ರ ರೂಪಿಸಿ, ಪ್ರಚೋದನಾತ್ಮಕ ಬರಹ ಹಾಕಿದ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗಿದು ಪಕ್ಕಾ ಆಗಿದೆ.

ಕೆಲವು ದಿನಗಳ ಹಿಂದೆ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯೊಂದರ ಹೊತ್ತಲ್ಲಿ “ಅಂಬೇಡ್ಕರ್ ಜಿಂದಾಬಾದ್ ಎಂದು ಹಾಕಿದ ಘೋಷಣೆಯನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್” ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಓರ್ವ ಪತ್ರಕರ್ತನೂ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಇದರ ಬೆನ್ನಿಗೆ ಮುರುಡೇಶ್ವರ ಪ್ರತಿಮೆ ವಿರೂಪ ಪ್ರಕರಣ ನಡೆದಿರುವುದರ ಹಿಂದೆ ರಾಜಕೀಯ ಹಿಕಮತ್ತು ಅಡಗಿದೆಯೆಂಬ ಚರ್ಚೆ ಹಟ್ಟುಹಾಕಿದೆ. ಮುಂದಿನ ಒಂದು ವರ್ಷ ಚುನಾವಣಾ ವರ್ಷವಾಗಿರುವುದರಿಂದ ಕರಾವಳಿಯಲ್ಲಿ ಆತಂಕ ಶುರುವಾಗಿದೆ.

ಮೊದಲು ವಿವಿಧ ಜಾತಿ-ಕೋಮುಗಳ ನಡುವೆ ಮನಸ್ತಾಪ ಉಂಟಾಗುವಂತ ಕೃತಕ ಚಿತ್ರ, ಪ್ರಚೋದನಾತ್ಮಕ ಬರಹ ತಯಾರಿಸಿ ಅದನ್ನು ನೈಜವೆಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ನಂತರ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಸುದ್ದಿ ಬರುವಂತೆ ನೋಡಿಕೊಳ್ಳುವುದು ಎಲೆಕ್ಷನ್ ತಂತ್ರಗಾರಿಕೆ ಎಂಬ ಮಾತು ಕೇಳಿಬರುತ್ತಿದೆ!


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...