Homeಕರ್ನಾಟಕಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

ಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

- Advertisement -
- Advertisement -


ಉತ್ತರ ಕನ್ನಡದ ಪ್ರಸಿದ್ದ ಪ್ರವಾಸಿ ಮತ್ತು ಧಾರ್ಮಿಕ ತಾಣ ಮುರುಡೇಶ್ವರದ ಪ್ರಮುಖ ಆಕರ್ಷಣೆಯರನಿಸಿರುವ ಶಿವನ ಪ್ರತಿಮೆಯನ್ನು ವಿರೂಪಗೊಳಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಉಗ್ರವಾದಿ ಸಂಘಟನೆ ಐಎಸ್‌ಐಎಸ್ ಇಂಥದೊಂದು ಚಿತ್ರ ತನ್ನ ಆನ್ ಲೈನ್ ಮುಖವಾಣಿ ವಾಯ್ಸ್ ಆಪ್ ಹಿಂದ್‌ನಲ್ಲಿ ಪ್ರಕಟಿಸಿದೆಯೆಂದು ವ್ಯವಸ್ಥಿತವಾಗಿ ಪುಕಾರು ಹಬ್ಬಿಸಲಾಗಿತ್ತು. ಆದರೆ ವಿಶ್ವ ಪ್ರಸಿದ್ದ ಮುರುಡೇಶ್ವನ ವಿಗ್ರಹ ಭಗ್ನಗೊಳಿಸಿದ ಚಿತ್ರ ಐಸಿಸ್ ಪತ್ರಿಕೆಯಲ್ಲಿ ಬಂದಿಲ್ಲವೆಂಬುದು ಬಹಿರಂಗವಾಗಿದೆ. ಕಳೆದ ಅಸೆಂಬ್ಲಿ ಚುನಾವಣೆ ಬಳಿಕ ಶಾಂತವಾಗಿರುವ ಕರಾವಳಿಯನ್ನು ಕದಡಿ ಮುಂಬರುವ ಚುನಾವಣೆಗೆ ತಯಾರಿಗೆ ಮತಾಂಧ ಶಕ್ತಿಗಳು ನಡೆಸಿರುವ ಹುನ್ನಾರವಿದು ಎಂಬ ಅಭಿಪ್ರಾಯ ವ್ಯಾಪಕವಾಗಿ ಮೂಡಿದೆ.

ಇದಕ್ಕೊಂದು ಹಿನ್ನಲೆಯೂ ಇದೆ. ಕೆಲ ತಿಂಗಳ ಹಿಂದೆ ಭಾರತದಲ್ಲಿ ಐಸಿಸ್‌ನ ಮುಖವಾಣಿಯಾಗಿರುವ ವಾಯ್ಸ್ ಆಫ್ ಹಿಂದ್‌ನ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದಲ್ಲಿ ದೇಶದ ಹಲವೆಡೆ ದಾಳಿ ಮಾಡಿ ಕೆಲವರನ್ನು ಬಂಧಿಸಲಾಗಿತ್ತು. ಇದರಲ್ಲಿ ಭಟ್ಕಳದ ಯುವಕನೊಬ್ಬನಿದ್ದ. ಇದನ್ನು ಬಳಸಿಕೊಂಡು ಭಟ್ಕಳ ತಾಲೂಕಿನ ಮುರುಡೇಶ್ವರದ ಶಿವನ ಮೂರ್ತಿಯನ್ನು ಐಸಿಸ್‌ನವರು ವಿಕಾರಗೊಳಿಸಿ ಪ್ರಕಟಿಸಿದ್ದಾರೆಂದು ಸುಳ್ಳು ಪ್ರಚಾರ ಮಾಡಲು ಪ್ರಯತ್ನಿಸಲಾಗಿದೆ ಎನ್ನಲಾಗಿದೆ. ವಾಯ್ಸ್ ಆಫ್ ಹಿಂದ್‌ನಲ್ಲಿ ಬಂದಿದೆಯೆಂಬಂತೆ ‘ಸೃಷ್ಟಿಸಲಾದ’ ಚಿತ್ರದಲ್ಲಿ ಶಿವನ ಶಿರವನ್ನು ಛೇದಗೊಳಿಸಿ ಅಲ್ಲಿ ಐಸಿಸ್ ಬಾವುಟ ಹಾರಿಸಲಾಗಿತ್ತು. ಅಲ್ಲದೆ ತಪ್ಪು ದೇವರನ್ನು ಒಡೆಯುವ ಸಮಯ ಬಂದಿದೆಯೆಂದು ಬರೆಯಲಾಗಿತ್ತು. ಆದರೆ ಅಂತಹ ಯಾವ ಘಟನೆಯೂ ಮುರುಡೇಶ್ವರದಲ್ಲಿ ನಡೆದಿಲ್ಲ. ಕೇವಲ ಫೋಟೊಶಾಪ್ ಮಾಡಿ ಹರಿಯಬಿಡಲಾಗಿತ್ತು.

ವಾಯ್ಸ್ ಆಫ್ ಹಿಂದ್‌ನಲ್ಲಿ ಇಂತಹ ಫೋಟೋ ಆಗಲಿ ಒಕ್ಕಣಿಕೆಯಾಗಲಿ ಬಂದಿಲ್ಲವೆಂದು ಉತ್ತರ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಧೃಡಪಡಿಸದ್ದಾರೆ. ಯಾವ ಮೂಲದಿಂದ ಇದನ್ನು ಹರಿಬಿಡಲಾಗಿದೆಯೆಂಬುದನ್ನು ಹುಡುಕಲಾಗುತ್ತಿದೆ: ಸೈಬರ್ ಕ್ರೈಮ್ ಪೊಲೀಸರ ನೆರವು ಪಡೆಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮುರುಡೇಶ್ವರದ ವಿಶ್ವ ವಿಖ್ಯಾತ 123 ಅಡಿಯ ಶಿವ ಪ್ರತಿಮೆಯನ್ನು ವಿರೂಪಗೊಳಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಷ್ಠಾಪಿಸಲಾಗಿತ್ತೆಂಬ ಮಾಹಿತಿ ಪೊಲೀಸರಿಗೆ ದೊರಕಿದೆ ಎನ್ನಲಾಗಿದೆ. ಶಿವನ ಮೂರ್ತಿ ಭಗ್ನಗೊಳಿಸಿದಂತೆ ಚಿತ್ರ ರೂಪಿಸಿ, ಪ್ರಚೋದನಾತ್ಮಕ ಬರಹ ಹಾಕಿದ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗಿದು ಪಕ್ಕಾ ಆಗಿದೆ.

ಕೆಲವು ದಿನಗಳ ಹಿಂದೆ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯೊಂದರ ಹೊತ್ತಲ್ಲಿ “ಅಂಬೇಡ್ಕರ್ ಜಿಂದಾಬಾದ್ ಎಂದು ಹಾಕಿದ ಘೋಷಣೆಯನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್” ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಓರ್ವ ಪತ್ರಕರ್ತನೂ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಇದರ ಬೆನ್ನಿಗೆ ಮುರುಡೇಶ್ವರ ಪ್ರತಿಮೆ ವಿರೂಪ ಪ್ರಕರಣ ನಡೆದಿರುವುದರ ಹಿಂದೆ ರಾಜಕೀಯ ಹಿಕಮತ್ತು ಅಡಗಿದೆಯೆಂಬ ಚರ್ಚೆ ಹಟ್ಟುಹಾಕಿದೆ. ಮುಂದಿನ ಒಂದು ವರ್ಷ ಚುನಾವಣಾ ವರ್ಷವಾಗಿರುವುದರಿಂದ ಕರಾವಳಿಯಲ್ಲಿ ಆತಂಕ ಶುರುವಾಗಿದೆ.

ಮೊದಲು ವಿವಿಧ ಜಾತಿ-ಕೋಮುಗಳ ನಡುವೆ ಮನಸ್ತಾಪ ಉಂಟಾಗುವಂತ ಕೃತಕ ಚಿತ್ರ, ಪ್ರಚೋದನಾತ್ಮಕ ಬರಹ ತಯಾರಿಸಿ ಅದನ್ನು ನೈಜವೆಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ನಂತರ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಸುದ್ದಿ ಬರುವಂತೆ ನೋಡಿಕೊಳ್ಳುವುದು ಎಲೆಕ್ಷನ್ ತಂತ್ರಗಾರಿಕೆ ಎಂಬ ಮಾತು ಕೇಳಿಬರುತ್ತಿದೆ!


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...