Homeಕರ್ನಾಟಕಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

ಮುರುಡೇಶ್ವರದ ಶಿವನ ವಿಗ್ರಹ ವಿರೂಪ: ಚುನಾವಣೆಗಾಗಿ ಐಸಿಸ್ ಹೆಸರಲ್ಲಿ ಕೋಮು ಗಲಭೆಗೆ ಹುನ್ನಾರ?

- Advertisement -
- Advertisement -


ಉತ್ತರ ಕನ್ನಡದ ಪ್ರಸಿದ್ದ ಪ್ರವಾಸಿ ಮತ್ತು ಧಾರ್ಮಿಕ ತಾಣ ಮುರುಡೇಶ್ವರದ ಪ್ರಮುಖ ಆಕರ್ಷಣೆಯರನಿಸಿರುವ ಶಿವನ ಪ್ರತಿಮೆಯನ್ನು ವಿರೂಪಗೊಳಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಉಗ್ರವಾದಿ ಸಂಘಟನೆ ಐಎಸ್‌ಐಎಸ್ ಇಂಥದೊಂದು ಚಿತ್ರ ತನ್ನ ಆನ್ ಲೈನ್ ಮುಖವಾಣಿ ವಾಯ್ಸ್ ಆಪ್ ಹಿಂದ್‌ನಲ್ಲಿ ಪ್ರಕಟಿಸಿದೆಯೆಂದು ವ್ಯವಸ್ಥಿತವಾಗಿ ಪುಕಾರು ಹಬ್ಬಿಸಲಾಗಿತ್ತು. ಆದರೆ ವಿಶ್ವ ಪ್ರಸಿದ್ದ ಮುರುಡೇಶ್ವನ ವಿಗ್ರಹ ಭಗ್ನಗೊಳಿಸಿದ ಚಿತ್ರ ಐಸಿಸ್ ಪತ್ರಿಕೆಯಲ್ಲಿ ಬಂದಿಲ್ಲವೆಂಬುದು ಬಹಿರಂಗವಾಗಿದೆ. ಕಳೆದ ಅಸೆಂಬ್ಲಿ ಚುನಾವಣೆ ಬಳಿಕ ಶಾಂತವಾಗಿರುವ ಕರಾವಳಿಯನ್ನು ಕದಡಿ ಮುಂಬರುವ ಚುನಾವಣೆಗೆ ತಯಾರಿಗೆ ಮತಾಂಧ ಶಕ್ತಿಗಳು ನಡೆಸಿರುವ ಹುನ್ನಾರವಿದು ಎಂಬ ಅಭಿಪ್ರಾಯ ವ್ಯಾಪಕವಾಗಿ ಮೂಡಿದೆ.

ಇದಕ್ಕೊಂದು ಹಿನ್ನಲೆಯೂ ಇದೆ. ಕೆಲ ತಿಂಗಳ ಹಿಂದೆ ಭಾರತದಲ್ಲಿ ಐಸಿಸ್‌ನ ಮುಖವಾಣಿಯಾಗಿರುವ ವಾಯ್ಸ್ ಆಫ್ ಹಿಂದ್‌ನ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದಲ್ಲಿ ದೇಶದ ಹಲವೆಡೆ ದಾಳಿ ಮಾಡಿ ಕೆಲವರನ್ನು ಬಂಧಿಸಲಾಗಿತ್ತು. ಇದರಲ್ಲಿ ಭಟ್ಕಳದ ಯುವಕನೊಬ್ಬನಿದ್ದ. ಇದನ್ನು ಬಳಸಿಕೊಂಡು ಭಟ್ಕಳ ತಾಲೂಕಿನ ಮುರುಡೇಶ್ವರದ ಶಿವನ ಮೂರ್ತಿಯನ್ನು ಐಸಿಸ್‌ನವರು ವಿಕಾರಗೊಳಿಸಿ ಪ್ರಕಟಿಸಿದ್ದಾರೆಂದು ಸುಳ್ಳು ಪ್ರಚಾರ ಮಾಡಲು ಪ್ರಯತ್ನಿಸಲಾಗಿದೆ ಎನ್ನಲಾಗಿದೆ. ವಾಯ್ಸ್ ಆಫ್ ಹಿಂದ್‌ನಲ್ಲಿ ಬಂದಿದೆಯೆಂಬಂತೆ ‘ಸೃಷ್ಟಿಸಲಾದ’ ಚಿತ್ರದಲ್ಲಿ ಶಿವನ ಶಿರವನ್ನು ಛೇದಗೊಳಿಸಿ ಅಲ್ಲಿ ಐಸಿಸ್ ಬಾವುಟ ಹಾರಿಸಲಾಗಿತ್ತು. ಅಲ್ಲದೆ ತಪ್ಪು ದೇವರನ್ನು ಒಡೆಯುವ ಸಮಯ ಬಂದಿದೆಯೆಂದು ಬರೆಯಲಾಗಿತ್ತು. ಆದರೆ ಅಂತಹ ಯಾವ ಘಟನೆಯೂ ಮುರುಡೇಶ್ವರದಲ್ಲಿ ನಡೆದಿಲ್ಲ. ಕೇವಲ ಫೋಟೊಶಾಪ್ ಮಾಡಿ ಹರಿಯಬಿಡಲಾಗಿತ್ತು.

ವಾಯ್ಸ್ ಆಫ್ ಹಿಂದ್‌ನಲ್ಲಿ ಇಂತಹ ಫೋಟೋ ಆಗಲಿ ಒಕ್ಕಣಿಕೆಯಾಗಲಿ ಬಂದಿಲ್ಲವೆಂದು ಉತ್ತರ ಕನ್ನಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಧೃಡಪಡಿಸದ್ದಾರೆ. ಯಾವ ಮೂಲದಿಂದ ಇದನ್ನು ಹರಿಬಿಡಲಾಗಿದೆಯೆಂಬುದನ್ನು ಹುಡುಕಲಾಗುತ್ತಿದೆ: ಸೈಬರ್ ಕ್ರೈಮ್ ಪೊಲೀಸರ ನೆರವು ಪಡೆಲಾಗುತ್ತಿದೆ ಎಂದು ಹೇಳಿದ್ದಾರೆ. ಕಳೆದ ಫೆಬ್ರವರಿಯಲ್ಲೇ ಮುರುಡೇಶ್ವರದ ವಿಶ್ವ ವಿಖ್ಯಾತ 123 ಅಡಿಯ ಶಿವ ಪ್ರತಿಮೆಯನ್ನು ವಿರೂಪಗೊಳಿಸಿದಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಷ್ಠಾಪಿಸಲಾಗಿತ್ತೆಂಬ ಮಾಹಿತಿ ಪೊಲೀಸರಿಗೆ ದೊರಕಿದೆ ಎನ್ನಲಾಗಿದೆ. ಶಿವನ ಮೂರ್ತಿ ಭಗ್ನಗೊಳಿಸಿದಂತೆ ಚಿತ್ರ ರೂಪಿಸಿ, ಪ್ರಚೋದನಾತ್ಮಕ ಬರಹ ಹಾಕಿದ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗಿದು ಪಕ್ಕಾ ಆಗಿದೆ.

ಕೆಲವು ದಿನಗಳ ಹಿಂದೆ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯೊಂದರ ಹೊತ್ತಲ್ಲಿ “ಅಂಬೇಡ್ಕರ್ ಜಿಂದಾಬಾದ್ ಎಂದು ಹಾಕಿದ ಘೋಷಣೆಯನ್ನು ತಿರುಚಿ ಪಾಕಿಸ್ತಾನ್ ಜಿಂದಾಬಾದ್” ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಓರ್ವ ಪತ್ರಕರ್ತನೂ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ಇದರ ಬೆನ್ನಿಗೆ ಮುರುಡೇಶ್ವರ ಪ್ರತಿಮೆ ವಿರೂಪ ಪ್ರಕರಣ ನಡೆದಿರುವುದರ ಹಿಂದೆ ರಾಜಕೀಯ ಹಿಕಮತ್ತು ಅಡಗಿದೆಯೆಂಬ ಚರ್ಚೆ ಹಟ್ಟುಹಾಕಿದೆ. ಮುಂದಿನ ಒಂದು ವರ್ಷ ಚುನಾವಣಾ ವರ್ಷವಾಗಿರುವುದರಿಂದ ಕರಾವಳಿಯಲ್ಲಿ ಆತಂಕ ಶುರುವಾಗಿದೆ.

ಮೊದಲು ವಿವಿಧ ಜಾತಿ-ಕೋಮುಗಳ ನಡುವೆ ಮನಸ್ತಾಪ ಉಂಟಾಗುವಂತ ಕೃತಕ ಚಿತ್ರ, ಪ್ರಚೋದನಾತ್ಮಕ ಬರಹ ತಯಾರಿಸಿ ಅದನ್ನು ನೈಜವೆಂಬಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು, ನಂತರ ಮುಖ್ಯವಾಹಿನಿಯ ಮಾದ್ಯಮಗಳಲ್ಲಿ ಸುದ್ದಿ ಬರುವಂತೆ ನೋಡಿಕೊಳ್ಳುವುದು ಎಲೆಕ್ಷನ್ ತಂತ್ರಗಾರಿಕೆ ಎಂಬ ಮಾತು ಕೇಳಿಬರುತ್ತಿದೆ!


ಇದನ್ನೂ ಓದಿ: ಕೋಮುಗಲಭೆಗೆ ಹುನ್ನಾರ: ಕನ್ನಡ ಪ್ರಭ ಪತ್ರಕರ್ತ ಸೇರಿದಂತೆ ಇಬ್ಬರು ಬಿಜೆಪಿ ನಾಯಕರ ವಿರುದ್ದ ಸ್ವಯಂ ಪ್ರೇರಿತ ಪ್ರಕರಣದ ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...