Homeಕರೋನಾ ತಲ್ಲಣಈ ಆರೋಗ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ: ಡಾ. ಪರಕಾಲ ಪ್ರಭಾಕರ್

ಈ ಆರೋಗ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ: ಡಾ. ಪರಕಾಲ ಪ್ರಭಾಕರ್

ಕೋವಿಡ್ ಬಿಕ್ಕಟ್ಟು ನಿರ್ವಹಣೆಯಲ್ಲಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ ಪರಕಾಲ ಪ್ರಭಾಕರ್ (ದೇಶದ ಅರ್ಥ ಸಚಿವರ ಪತಿ): ವಿಡಿಯೋ ನೋಡಿ..

- Advertisement -
- Advertisement -

ದೇಶದಲ್ಲಿ ಉದ್ಭವಿಸಿರುವ ಕೋವಿಡ್ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್‌ರವರ ಪತಿ ಡಾ. ಪರಕಾಲ ಪ್ರಭಾಕರ್ ಆರೋಪಿಸಿದ್ದಾರೆ. ‘ಮಿಡ್‌ವೀಕ್‌ ಮ್ಯಾಟರ್ಸ್‌’ ಎಂಬ ತಮ್ಮ ಯೂಟ್ಯೂಬ್‌ ವಿಡಿಯೋದಲ್ಲಿ ಮಾತನಾಡಿರುವ ಅವರು ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿದ್ದಾರೆ.

ಈ ಸರ್ಕಾರದ ಅಸಮರ್ಥತೆ, ಅನುಚಿತತೆ, ಹೃದಯಹೀನತೆ ಮತ್ತು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಪ್ರಧಾನ ಮಂತ್ರಿ ಮೋದಿಯ ಜನಪ್ರಿಯತೆ, ರಾಜಕೀಯ ಬಂಡವಾಳ ಮತ್ತು ಸಂವಹನ ಕೌಶಲ್ಯಗಳು ಕಾರಣವಾಗಿವೆ. ಆಡಳಿತ ಪಕ್ಷವು ಈಗ ಕೋವಿಡ್ ಕಾರಣಕ್ಕೆ ಎದ್ದಿರುವ ಆಕ್ರೋಶ ನಿರ್ವಹಣೆಯಲ್ಲಿ ಪ್ರವೀಣವಾಗಿದೆ. ಪಾರದರ್ಶಕ ಆಡಳಿತ ನೀಡುವಲ್ಲಿ ನರೇಂದ್ರ ಮೋದಿ ವಿಫಲರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಮೊದಲ ಅಲೆಗೆ ದೇಶದ ಬಹಳಷ್ಟು ಜನ ತಮ್ಮ ಜೀವನೋಪಾಯ ಮತ್ತು ಆದಾಯವನ್ನು ಕಳೆದುಕೊಂಡಿದ್ದಾರೆ. ಬಹಳಷ್ಟು ಜನ ಭಯಭೀತರಾಗಿದ್ದಾರೆ. ಹೆಚ್ಚಿನವರು ತಮ್ಮ ಆರ್ಥಿಕ ನಷ್ಟದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಏಕೆಂದರೆ, ಅನೇಕರಿಗೆ ತಮ್ಮ ಉದ್ಯೋಗಗಳು ಮರಳಿ ಸಿಕ್ಕಿಲ್ಲ. ಸರ್ಕಾರದ ಯಾವುದೇ ಯೋಜನೆಗಳು ಅವರ ಸಹಾಯಕ್ಕೆ ಬಂದಿಲ್ಲ. ಇಂತಹ ಸಂದರ್ಭದಲ್ಲಿ ಎರಡನೇ ಅಲೆ ಬಂದಿದೆ. ಇದು ತಿವ್ರ ಬಿಕ್ಕಟ್ಟು. ಆರೋಗ್ಯ ತುರ್ತು ಮತ್ತು ಯಾವುದಕ್ಕೂ ಕಡಿಮೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪ್ರಕರಣಗಳ ತೀವ್ರ ಏರುವಿಕೆಯನ್ನು ನೀವೆಲ್ಲ ಗಮನಿಸಿದ್ದೀರಿ. ಆದರೆ ನೈಜ ಪ್ರಕರಣಗಳಿಗಿಂತ ಕಡಿಮೆ ವರದಿ ಮಾಡಲಾಗುತ್ತಿದೆ, ಸಾವುಗಳನ್ನು ಸಹ ಕಡಿಮೆ ತೋರಿಸಲಾಗುತ್ತಿದೆ. ಆಸ್ಪತ್ರೆಗಳ ಉಸ್ತುವಾರಿ ವೈದ್ಯರು ಪರಿಸ್ಥಿತಿ ಹೆಚ್ಚು ಗಂಭೀರವಾಗಿದೆ ಎಂದು ಖಾಸಗಿಯಾಗಿ ಹೇಳುತ್ತಾರೆ. ಸಮರ್ಪಕ ಪರೀಕ್ಷೆ ಮಾಡುವ ಸಾಮರ್ಥ್ಯವೂ ನಮಗಿಲ್ಲ. ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೆ, ಆಕ್ಸಿಜನ ಮತ್ತು ಔಷಧ ಸಿಗದೆ ಒದ್ದಾಡುತ್ತಿರುವ ದೃಶ್ಯಗಳು ನಮ್ಮನ್ನು ಉಸಿರುಗಟ್ಟಿಸುತ್ತಿವೆ. ಆದರೆ ನಮ್ಮ ರಾಜಕೀಯ ಮತ್ತು ಧಾರ್ಮಿಕ ಮುಖಂಡರು ಈ ಸಂಕಟವನ್ನು ಗಮನಿಸುವುದಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ನಮ್ಮ ರಾಜಕೀಯ ನಾಯಕರಿಗೆ ಚುನಾವಣೆ ಮುಖ್ಯ. ಧಾರ್ಮಿಕ ಮುಖಂಡರಿಗೆ ಅವರ ಆಚರಣೆಗಳು ಮುಖ್ಯವಾಗಿದೆ. ಅವರ್ಯಾರಿಗೂ ಸಾರ್ವಜನಿಕ ಆರೋಗ್ಯ, ಜನರ ಜೀವನ ಅಷ್ಟೇನೂ ಮುಖ್ಯವಲ್ಲ. ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು ಯಾವುದೇ ಮಾರ್ಗಸೂಚಿಗಳನ್ನು ಪಾಲಿಸದೇ ಬೃಹತ್ ಚುನಾವಣಾ ರ್ಯಾಲಿಗಳನ್ನು ನಡೆಸುತ್ತಾರೆ. ಕುಂಭಮೇಳದಲ್ಲಿ ಲಕ್ಷಾಂತರ ಜನ ಸೇರಿ ಶಾಹಿ ಸ್ನಾನ ಮಾಡುತ್ತಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತ್ರ ತಮ್ಮ ರ್ಯಾಲಿಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರೆ, ಉಳಿದವರು ಚುನಾವಣಾ ರ್ಯಾಲಿ ನಡೆಸಿದರು. ಬಿಕ್ಕಟ್ಟಿನ ಸಮಯದಲ್ಲಿಯೂ ಚುನಾವಣಾ ರ್ಯಾಲಿಗಳು ಮತ್ತು ಕುಂಭಮೇಳವನ್ನು ಸಮರ್ಥಿಸುವ ತಜ್ಞರು, ವಿಶ್ಲೇಷಕರು ಮತ್ತು ರಾಜಕೀಯ ನಾಯಕರು ಇದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೆಲ್ಲಾ ನೋಡುತ್ತಿರುವಾಗ ಕೋಪ, ಬೇಸರ, ಅಸಹ್ಯ ಎನಿಸುತ್ತದೆ. ಬೇರೆ ದೇಶಗಳಿಗೆ ಹೋಲಿಸಿಕೊಂಡರೆ ನಮ್ಮಲ್ಲಿ ಒಟ್ಟು ಜನಸಂಖ್ಯೆಗನುಗುಣವಾಗಿ ಸೋಂಕು ಕಡಿಮೆ, ಪ್ರತಿ ಮಿಲಿಯನ್‌ಗೆ ಸಾವು ಕಡಿಮೆ ಎಂದು ಸಮರ್ಥಿಸಿಕೊಳ್ಳುವವರು ಇದ್ದಾರೆ. ಅವರು ಹೃದಯಹೀನ, ಅರ್ಥಹೀನ, ಆಯ್ದ ಹೋಲಿಕೆಗಳಲ್ಲಿ ಮುಳುಗಿದ್ದಾರೆ ಎಂದು ಕಿಡಿಕಾರಿದ್ದಾರೆ. ನಿಮ್ಮ ಈ ಹೋಲಿಕೆಯು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಮತ್ತು ಅಪಾಯದಲ್ಲಿರುವವರಿಗೆ ಏನೂ ಅಲ್ಲ ಎಂಬುದನ್ನು ಮರೆಯಬೇಡಿ ಎಂದಿದ್ದಾರೆ.

ನಮ್ಮ ದೇಶದಲ್ಲಿ ಮಕ್ಕಳು ಮತ್ತು ಗರ್ಭಿಣಿಯರನ್ನು ಹೊರತುಪಡಿಸಿ ಸುಮಾರು 70 ಕೋಟಿ ಜನರಿಗೆ ಲಸಿಕೆ ಹಾಕಬೇಕಿದೆ. ಅಂದರೆ 140 ಕೋಟಿ ಲಸಿಕೆಗಳು ಬೇಕಾಗಿವೆ. ಇದೆಲ್ಲದಕ್ಕೂ ನಾವು ಸಿದ್ದರಾಗಿದ್ದೇವೆಯೇ? ಸಿದ್ಧತೆಯ ಬಗ್ಗೆ ಏನೇ ಕೇಳಿದರೂ ಉತ್ತರಿಸುವ ಮನಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಇಲ್ಲ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಜವಾಬ್ದಾರಿಯುತ ಮತ್ತು ರಚನಾತ್ಮಕ ಸಲಹೆಗಳಿಗೆ ಕೇಂದ್ರ ಆರೋಗ್ಯ ಸಚಿವರು ನೀಡಿದ ಅನೈತಿಕ ಮತ್ತು ಬೆರಗುಗೊಳಿಸುವ ಪ್ರತಿಕ್ರಿಯೆ ಸರ್ಕಾರವು ತಾನು ಜನರಿಂದ ಎಷ್ಟು ದೂರವಿದ್ದೇವೆ ಎಂಬುದನ್ನು ತಿಳಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಕಳೆದ ವರ್ಷ ಲಾಕ್‌ಡೌನ್ ಹೇರಿದಾಗ ದೇಶಾದ್ಯಂತ ವಲಸೆ ಕಾರ್ಮಿಕರ ಸುದೀರ್ಘ ಮೆರವಣಿಗೆಗಳು ಆಡಳಿತದ ಹೃದಯಹೀನತೆಯನ್ನು ಬಹಿರಂಗಪಡಿಸಿದವು. ಲಾಕ್‌ಡೌನ್‌ ಕೊರೊನಾ ತಡೆಯುವುದಲ್ಲ. ಅದು ಹರಡುವಿಕೆಯನ್ನು ಕಡಿಮೆ ಮಾಡುತ್ತದೆ. ಆದರೆ ಈ ಅವಧಿಯಲ್ಲಿ ಭಾರತ ಸರ್ಕಾರ ಎಷ್ಟು ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಿತು? ಎಷ್ಟು ಆಸ್ಪತ್ರೆಗಳನ್ನು, ವೆಂಟಿಲೇಟರ್ ಬೆಡ್‌ಗಳನ್ನು ನಿರ್ಮಿಸಿತು? ಅದರ ಬದಲು ನಮ್ಮ ಸರ್ಕಾರ ಚಪ್ಪಾಳೆ ಮತ್ತು ದೀಪ ಹಚ್ಚುವಲ್ಲಿ ನಿರತವಾಗಿತ್ತು ಎಂದು ಕಿಡಿಕಾರಿದ್ದಾರೆ.

ಸರ್ಕಾರದ ಆರ್ಥಿಕ ಪ್ಯಾಕೇಜ್‌ನಿಂದ ದುರ್ಬಲ ವರ್ಗಗಳಿಗೆ ಯಾವುದೇ ಗಣನೀಯ ಸಹಾಯವಾಗಿಲ್ಲ. ಸರ್ಕಾರವು ಆಕರ್ಷಕ ಹೆಡ್ಡಿಂಗ್ ಕೊಡುವುದರಲ್ಲಿ ಹೆಚ್ಚು ಆಸಕ್ತಿ ಹೊಂದಿತ್ತು. ಇದು ಅಸಹಾಯಕ ರಾಷ್ಟ್ರದ ಮೇಲೆ ನಕಲಿ ಪ್ರಚೋದನೆಯನ್ನು ಉಂಟುಮಾಡಿತು. ಬೇಡಿಕೆಯ ಭಾಗವನ್ನು ಬಿಡಿ, ಸರಬರಾಜು ಭಾಗವನ್ನು ಸಹ ಪರಿಹರಿಸಲು ಇದು ಅಸಮರ್ಪಕವಾಗಿದೆ ಎಂದು ಅವರು ಮೋದಿಯವರ 20 ಲಕ್ಷಗಳ ಪ್ಯಾಕೇಜ್ ಅನ್ನು ಟೀಕಿಸಿದ್ದಾರೆ.

ಪ್ರಧಾನಿಯವರು ಮಾತಿನ ವೈಖರಿ, ಚಾಣಾಕ್ಷತನಗಳ ಮೂಲಕ ಜವಾಬ್ದಾರಿಯಿಂದ ನುಣುಸಿಕೊಳ್ಳುವ ಪ್ರಾವಿಣ್ಯತೆ ಪಡೆದುಕೊಂಡಿದ್ದಾರೆ. ಆದರೆ ಮಾನವೀಯ ಮತ್ತು ಸಹಾನುಭೂತಿಯ ಆಡಳಿತ, ಪಾರದರ್ಶಕತೆ, ಹೊಣೆಗಾರಿಕೆ, ಅನುಭೂತಿ ಮಾತ್ರವೇ ಉಳಿಯುತ್ತವೆ. ಇವು ಮಾತ್ರ ರಾಷ್ಟ್ರದ ಇತಿಹಾಸದಲ್ಲಿ ನಾಯಕರಿಗೆ ಸುರಕ್ಷಿತ ಮತ್ತು ಗೌರವಾನ್ವಿತ ಸ್ಥಾನವನ್ನು ಗಳಿಸಬಹುದು. ಪ್ರಧಾನಮಂತ್ರಿಯವರು ಈಗಲಾದರೂ ಸೂಕ್ತ ಮಾರ್ಗದಲ್ಲಿ ಆಡಳಿತ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅವರ ವಿಡಿಯೋ ನೋಡಿ


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...