Homeಅಂತರಾಷ್ಟ್ರೀಯಕರ್ತಾರ್‌ಪುರ ಕಾರಿಡಾರ್‌‌ ಉದ್ಘಾಟಿಸಿ, ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ಗೆ ಧನ್ಯವಾದ ತಿಳಿಸಿದ ಮೋದಿ

ಕರ್ತಾರ್‌ಪುರ ಕಾರಿಡಾರ್‌‌ ಉದ್ಘಾಟಿಸಿ, ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ಗೆ ಧನ್ಯವಾದ ತಿಳಿಸಿದ ಮೋದಿ

- Advertisement -
- Advertisement -

ಸಿಖ್ಖರ ಪವಿತ್ರ ಯಾತ್ರಾ ಸ್ಥಳಕ್ಕೆ ಪ್ರಯಾಣ ಬೆಳೆಸುವ ಕರ್ತಾರ್‍ಪುರ ಕಾರಿಡಾರ್‌ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್ ಅವರ 550ನೇ ವಾರ್ಷಿಕೋತ್ಸವದ ಅಂಗವಾಗಿ ಮೊದಲ ಹಂತವಾಗಿ 550 ಸಿಖ್ ಯಾತ್ರಾರ್ಥಿಗಳು ಕರ್ತಾರ್‌ಪುರ ಕಾರಿಡಾರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಕರ್ತಾರ್‌ಪುರ ಸಾಹೀಬ್ ಗುರುದ್ವಾರ್‌ಗೆ ಸಂಚಾರ ಕಲ್ಪಿಸುವ ಕಾರಿಡಾರ್‌ನ್ನು ಚೆಕ್‍ಪೋಸ್ಟ್ ಬಳಿ ಪ್ರಧಾನಿ ಮೋದಿ ಚಾಲನೆ ನೀಡಿದರು. ಸಿಖ್ಖರ ಪವಿತ್ರ ಯಾತ್ರಾ ಸ್ಥಳ ಡೇರಾಬಾದ್ ನಾನಕ್ ಪ್ರವೇಶಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಭಾರತ ಮತ್ತು ಪಾಕಿಸ್ತಾನ ಜಂಟಿಯಾಗಿ ಕಾರಿಡಾರ್‌ನ್ನು ಅಭಿವೃದ್ಧಿಪಡಿಸಿದೆ. ಸುಮಾರು 4.7 ಕಿ.ಮೀ ದೂರದವರೆಗೆ ಕಾರಿಡಾರ್ ನಿರ್ಮಾಣ ಮಾಡಲಾಗಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೊದಲು ಪ್ರಧಾನಿ ಮೋದಿ, ಲೋದಿಯ ಸುಲ್ತಾನ್‍ಪುರದಲ್ಲಿರುವ ಬೇರ್ ಸಾಹೀಬ್ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮೊದಲ ಹಂತವಾಗಿ ಗುರುದ್ವಾರಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಅಕಾಲಿ ತಖ್ತ್‍ನ ಗಿಯಾನಿ ಹರ್‍ಪ್ರೀತ್ ಸಿಂಗ್, ಹರ್‍ಸಿಮ್ರತ್ ಕೌರ್ ಬಾದಲ್, ಶಿರೋಮನಿ ಅಕಾಲಿ ದಳ ಮುಖ್ಯಸ್ಥ ಸುಖ್‍ಬೀರ್ ಬಾದಲ್ ಸೇರಿದಂತೆ ಅನೇಕ ಶಾಸಕರು, ಸಂಸದರು ಪ್ರಯಾಣ ಬೆಳೆಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಗುರುನಾನಕ್ ದೇವ್ ಜೀ ಎಲ್ಲರಿಗೂ ಸಂತಸ ನೀಡಲಿ. ಭಾರತೀಯರ ಭಾವನೆಗಳನ್ನು ಗೌರವಿಸಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಕರ್ತಾರ್‌ಪುರಗೆ ತೆರಳುವಾಗ ನಿಮ್ಮಲ್ಲಿ ಮೂಡುವ ಭಾವನೆಗಳೇ ನನ್ನಲ್ಲೂ ಮೂಡುತ್ತವೆ. ಇದು ನಮ್ಮ ಸಂತ ಪರಂಪರೆಯ ಪ್ರಸಾದ. ಈ ಸನ್ಮಾನವನ್ನು ಗುರುನಾನಕ್‍ರ ಚರಣಗಳಿಗೆ ಅರ್ಪಿಸುತ್ತೇನೆ. ಕಾರ್ತಿಕ ಪೂರ್ಣಿಮೆಯ ಪರ್ವದಲ್ಲಿ ಕಾರಿಡಾರ್ ತೆರೆಯುತ್ತಿದ್ದು, ಮತ್ತಷ್ಟು ಝಗಮಗಿಸಲಿದೆ ಎಂದು ಹೇಳಿದರು.

ಅತ್ತ ಪಾಕಿಸ್ತಾನದಲ್ಲಿ ಪ್ರಧಾನಿ ಇಮ್ರಾನ್ ಖಾನ್ ಕಾರಿಡಾರ್ ಉದ್ಘಾಟಿಸಿದ್ದು, ಯಾತ್ರಾರ್ಥಿಗಳನ್ನು ಬರಮಾಡಿಕೊಳ್ಳಲಿದ್ದಾರೆ. ಇನ್ನು ಪ್ರಯಾಣಿಸುವ ಭಾರತೀಯರು ಪಾಸ್‍ಪೋರ್ಟ್ ಹೊಂದಿರುವುದು ಕಡ್ಡಾಯವಾಗಿದೆ. 72 ವರ್ಷಗಳಿಂದ ಪವಿತ್ರ ಸ್ಥಳಕ್ಕೆ ಭೇಟಿ ನೀಡಲು ವ್ಯವಸ್ಥೆ ಕಲ್ಪಿಸುವಂತೆ ಮಾಡಿ ಎನ್ನುವುದು ಸಿಖ್ಖ್ ಸಮುದಾಯದ ಮನವಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...