Homeಕರ್ನಾಟಕಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

ಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

- Advertisement -
- Advertisement -

“ವಿಷ್ಣುವಿನ ಅವತಾರ ಭಗವಾನ್ ಬುದ್ಧ. ನಾನು ಕೂಡ ಬುದ್ಧನ ಅನುಯಾಯಿ” ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿಕೆ ನೀಡಿದ್ದು, ಈ ಕುರಿತು ವಿಡಿಯೊ ಬಿಡುಗಡೆ ಮಾಡಿದ್ದಾರೆ.

“ಬೌದ್ಧಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯರಿಗೆ ಸಲ್ಲುತ್ತದೆ” ಎಂದು ಸುಧಾ‌ಕರ್‌ ಹೇಳಿದ್ದು ಚರ್ಚೆಗೆ ಗ್ರಾಸವಾಗಿದೆ.

“ವಿಜ್ಞಾನಕ್ಕೂ ಮೊದಲು ಮಾನವ ಸಮಾಜಕ್ಕೆ ದಿಕ್ಕುದೆಸೆ ತೋರಿ ಆಚಾರ್ಯ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯ ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೂ ನೈತಿಕ ಬಲ ತುಂಬಿ ಆಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇಂದು ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಿದ್ದರೆ ಅದರ ಶ್ರೇಯ ಈ ಸಮುದಾಯಕ್ಕೆ ಸಲ್ಲಬೇಕು. ಈ ನಿಟ್ಟಿನಲ್ಲಿ ಸಾವಿರಾರು ವರ್ಷದಿಂದ ನಾಗರಿಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯವು ವಿಶೇಷ ಗೌರವ ಸ್ಥಾನವನ್ನು ಹೊಂದಿದೆ” ಎಂದು ಅವರು ಹೇಳಿದ್ದು ವಿವಿಧ ವೇದಿಕೆಗಳಲ್ಲಿ ವರದಿಯಾದ ಬಳಿಕ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ವಿಡಿಯೊ ಮೂಲಕ ಡಾ.ಸುಧಾಕರ್‌ ಸ್ಪಷ್ಟೀಕರಣ ನೀಡಿದ್ದಾರೆ.

ಡಾ.ಕೆ.ಸುಧಾಕರ್‌ ಸ್ಪಷ್ಟನೆ ಹೀಗಿದೆ:

“ಸನಾತನ ಧರ್ಮದ ಉಳಿವಿಗಾಗಿ, ಪುನರುತ್ಥಾನಕ್ಕಾಗಿ ಜಗದ್ಗುರು ಶಂಕರಾಚಾರ್ಯರ ಕೊಡುಗೆ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ನಾನು ಮಾತನಾಡುತ್ತಿರುವುದನ್ನು ತಿರುಚಿ ಬೌದ್ಧ ಮತಕ್ಕೆ, ಭಗವಾನ್ ಬುದ್ಧರಿಗೆ ಅಪಮಾನ ಎಸಗಿದ್ದೇನೆ ಎನ್ನುವಂತಹ ರೀತಿಯಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.”

“ಸನಾತನ ಹಿಂದೂ ಧರ್ಮದಲ್ಲಿ ಮಹಾ ವಿಷ್ಣುವಿನ ದಶವತಾರ ಕಲ್ಪನೆ ಇದೆ. ಮತ್ಸ್ಯಾವತಾರ, ಕೂರ್ಮಾವತಾರ, ವರಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ ಹಾಗೂ ಕಲ್ಕಿ. ಇವು ವಿಷ್ಣುವಿನ ದಶವತಾರಗಳು ಎಂಬುದು ಸಮಸ್ತ ಹಿಂದೂಗಳ ನಂಬಿಕೆ.”

“ಹಿಂದೂಗಳು ಪೂಜಿಸುವಂತಹ ನರಸಿಂಹ ದೇವರು, ರಾಮ, ಕೃಷ್ಣನಿಗೆ ಸಮನಾದ ಸ್ಥಾನವನ್ನು ನಾವು ಭಗವಾನ್‌ ಬುದ್ಧರಿಗೂ ಕೊಟ್ಟಿದ್ದೀವಿ. ಬುದ್ಧನನ್ನು ಸಾಕ್ಷಾತ್ ಮಹಾನ್ ವಿಷ್ಣುವಿನ ಅವತಾರವೆಂದು ನಂಬಿದ್ದೇವೆ. ಈ ರೀತಿಯ ನಂಬಿಕೆ ಉಳ್ಳವರು ಹಿಂದೂಗಳು.”

“ನಾನು ಸಹ ಬುದ್ಧನ ಅನುಯಾಯಿ. ನನ್ನ ಮನೆಗೆ ಭೇಟಿ ಕೊಟ್ಟರೆ ಗೊತ್ತಾಗುತ್ತದೆ ಅಥವಾ ಭೇಟಿ ಕೊಟ್ಟಿರುವಂತಹ ಪ್ರತಿಯೊಬ್ಬರೂ ನನ್ನ ಮನೆಯಲ್ಲಿರುವಂತಹ ಬುದ್ಧನ ಪ್ರತಿಮೆಗಳು, ಪುಸ್ತಕಗಳು, ಫೋಟೋಗಳನ್ನು ಗಮನಿಸಿದ್ದಾರೆಂದು ತಿಳಿದುಕೊಂಡಿದ್ದೇನೆ. ನಾನು ಎಂಬಿಬಿಎಸ್‌ ವ್ಯಾಸಂಗ ಮಾಡಿದ ಕಾಲೇಜು ಹೆಸರು ಕೂಡ ಗೌತಮ ಬುದ್ಧನ ಮತ್ತೊಂದು ಹೆಸರಿನದ್ದಾಗಿದೆ. ಸಿದ್ಧಾರ್ಥ ಮೆಡಿಕಲ್‌ ಕಾಲೇಜು ಎನ್ನುವುದು ನನ್ನ ಜೀವನ ಪರ್ಯಾಂತ ಹೆಮ್ಮೆ ಎನಿಸುವಂತಹ ವಿಷಯ.”

“ಬೌದ್ಧಮತ ಹಿಂದೂಧರ್ಮ ಎಂಬ ಹೆಮ್ಮರದ ಶಾಖೆ ಎಂಬುದು ಹಿಂದೂಗಳ ನಂಬಿಕೆ. ಹಿಂದೂ ಧರ್ಮ ಒಂದು ಪುಸ್ತಕವೋ, ಪ್ರವಾದಿಯೋ ಇರುವಂತಹ ಧರ್ಮ ಅಲ್ಲ. ಭಗವದ್ಗೀತೆಯಲ್ಲಿ ಶ್ರೀಕಷ್ಣ ‘ಸಂಭವಾಮಿ ಯುಗೇ ಯುಗೇ’ ಎಂದು.”

 – ಡಾ.ಕೆ.ಸುಧಾಕರ್‌‌, ಆರೋಗ್ಯ ಸಚಿವರು, ಕರ್ನಾಟಕ ಸರ್ಕಾರ

***

‘ಬೌದ್ಧಧರ್ಮವು ಹಿಂದೂ ಧರ್ಮದ ಭಾಗವಲ್ಲ’

ಬೌದ್ಧಧರ್ಮವನ್ನು ಹಿಂದೂ ಧರ್ಮದ ಒಂದು ಭಾಗ ಎಂದು ಅಪಪ್ರಚಾರ ಮಾಡುತ್ತಿರುವುದು ಮೊದಲಿನಿಂದಲೂ ನಡೆದು ಬಂದಿದೆ. ಹೀಗಾಗಿ ಸುಧಾಕರ್‌ ಅವರ ಹೇಳಿಕೆಗೆ ಅನೇಕರು ಕಟುವಾಗಿ ಟೀಕಿಸಿದ್ದಾರೆ.

“ಬುದ್ಧ ಸಾಮಾನ್ಯ ಮನುಷ್ಯನಾಗಿ ಬದುಕಿದ ದೊಡ್ಡ ಜ್ಞಾನಿ. ಮಾನವ ಜನಾಂಗಕ್ಕೆ ದಾರಿ ತೋರಿದ ಗುರು. ಯಾವ ವಿಷ್ಣುವಿನ ಅವತಾರವೂ ಅಲ್ಲ” ಎಂದು ಸ್ವಾಮಿ ಡಿ.ಎಸ್‌. ಪ್ರತಿಕ್ರಿಯೆ ನೀಡಿದ್ದಾರೆ.

“ಬುದ್ದದಮ್ಮ ವೈಜ್ಞಾನಿಕ ಹಿನ್ನೆಲೆ ಹೊಂದಿರುವ ಧರ್ಮ. ಈ ಧರ್ಮದಲ್ಲಿ ಮಾಟ, ಮಂತ್ರ, ತಂತ್ರ, ಮಂತ್ರ ಇಲ್ಲ. ಬುದ್ದ ಹೇಗೆ ಅವತಾರದಲ್ಲಿ ವಿಷ್ಣು ಆಗಲು ಸಾಧ್ಯ?” ಎಂದು ಶಿವಮೂರ್ತಿ ಎಂಬವರು ಪ್ರಶ್ನಿಸಿದ್ದಾರೆ.

ಕವಿ ಸಿದ್ದಲಿಂಗಯ್ಯನವರು ದಶಕಗಳ ಹಿಂದೆ ಬರೆದ ‘ಮಾತಿಗೆ ಮಾತು ಕೊಟ್ಟವನ’ ಹಾಡಿದ ಒಂದು ಸಾಲು ಹೀಗಿದೆ- “ದೇವರು ಇಲ್ಲ ಎಂದವನನ್ನು ದೇವರು ಮಾಡಿ ಬಿಟ್ಟರು. ಹತ್ತವತಾರ ಸುಳ್ಳೆಂದವನ ಹನ್ನೊಂದಕ್ಕೆ ಏರಿಸಿದರು…”


ಇದನ್ನೂ ಓದಿರಿ: ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬುದ್ಧಿಹೀನ ಅದ್ಹೇಗೆ ಬುದ್ಧನ ಅನುಯಾಯಿಯಾಗುತ್ತಾನೆ? ಕೊಳಕ ನೀಚ ಕೋಮುವಾದಿಗಳು ಮೋದಿಯ ಅನುಯಾಯಿಗಳೆನ್ನುವುದು ಸೂಕ್ತ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...