Homeಕರ್ನಾಟಕಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

ಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

- Advertisement -
- Advertisement -

“ವಿಷ್ಣುವಿನ ಅವತಾರ ಭಗವಾನ್ ಬುದ್ಧ. ನಾನು ಕೂಡ ಬುದ್ಧನ ಅನುಯಾಯಿ” ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿಕೆ ನೀಡಿದ್ದು, ಈ ಕುರಿತು ವಿಡಿಯೊ ಬಿಡುಗಡೆ ಮಾಡಿದ್ದಾರೆ.

“ಬೌದ್ಧಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯರಿಗೆ ಸಲ್ಲುತ್ತದೆ” ಎಂದು ಸುಧಾ‌ಕರ್‌ ಹೇಳಿದ್ದು ಚರ್ಚೆಗೆ ಗ್ರಾಸವಾಗಿದೆ.

“ವಿಜ್ಞಾನಕ್ಕೂ ಮೊದಲು ಮಾನವ ಸಮಾಜಕ್ಕೆ ದಿಕ್ಕುದೆಸೆ ತೋರಿ ಆಚಾರ್ಯ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯ ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೂ ನೈತಿಕ ಬಲ ತುಂಬಿ ಆಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇಂದು ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಿದ್ದರೆ ಅದರ ಶ್ರೇಯ ಈ ಸಮುದಾಯಕ್ಕೆ ಸಲ್ಲಬೇಕು. ಈ ನಿಟ್ಟಿನಲ್ಲಿ ಸಾವಿರಾರು ವರ್ಷದಿಂದ ನಾಗರಿಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯವು ವಿಶೇಷ ಗೌರವ ಸ್ಥಾನವನ್ನು ಹೊಂದಿದೆ” ಎಂದು ಅವರು ಹೇಳಿದ್ದು ವಿವಿಧ ವೇದಿಕೆಗಳಲ್ಲಿ ವರದಿಯಾದ ಬಳಿಕ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ವಿಡಿಯೊ ಮೂಲಕ ಡಾ.ಸುಧಾಕರ್‌ ಸ್ಪಷ್ಟೀಕರಣ ನೀಡಿದ್ದಾರೆ.

ಡಾ.ಕೆ.ಸುಧಾಕರ್‌ ಸ್ಪಷ್ಟನೆ ಹೀಗಿದೆ:

“ಸನಾತನ ಧರ್ಮದ ಉಳಿವಿಗಾಗಿ, ಪುನರುತ್ಥಾನಕ್ಕಾಗಿ ಜಗದ್ಗುರು ಶಂಕರಾಚಾರ್ಯರ ಕೊಡುಗೆ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ನಾನು ಮಾತನಾಡುತ್ತಿರುವುದನ್ನು ತಿರುಚಿ ಬೌದ್ಧ ಮತಕ್ಕೆ, ಭಗವಾನ್ ಬುದ್ಧರಿಗೆ ಅಪಮಾನ ಎಸಗಿದ್ದೇನೆ ಎನ್ನುವಂತಹ ರೀತಿಯಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.”

“ಸನಾತನ ಹಿಂದೂ ಧರ್ಮದಲ್ಲಿ ಮಹಾ ವಿಷ್ಣುವಿನ ದಶವತಾರ ಕಲ್ಪನೆ ಇದೆ. ಮತ್ಸ್ಯಾವತಾರ, ಕೂರ್ಮಾವತಾರ, ವರಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ ಹಾಗೂ ಕಲ್ಕಿ. ಇವು ವಿಷ್ಣುವಿನ ದಶವತಾರಗಳು ಎಂಬುದು ಸಮಸ್ತ ಹಿಂದೂಗಳ ನಂಬಿಕೆ.”

“ಹಿಂದೂಗಳು ಪೂಜಿಸುವಂತಹ ನರಸಿಂಹ ದೇವರು, ರಾಮ, ಕೃಷ್ಣನಿಗೆ ಸಮನಾದ ಸ್ಥಾನವನ್ನು ನಾವು ಭಗವಾನ್‌ ಬುದ್ಧರಿಗೂ ಕೊಟ್ಟಿದ್ದೀವಿ. ಬುದ್ಧನನ್ನು ಸಾಕ್ಷಾತ್ ಮಹಾನ್ ವಿಷ್ಣುವಿನ ಅವತಾರವೆಂದು ನಂಬಿದ್ದೇವೆ. ಈ ರೀತಿಯ ನಂಬಿಕೆ ಉಳ್ಳವರು ಹಿಂದೂಗಳು.”

“ನಾನು ಸಹ ಬುದ್ಧನ ಅನುಯಾಯಿ. ನನ್ನ ಮನೆಗೆ ಭೇಟಿ ಕೊಟ್ಟರೆ ಗೊತ್ತಾಗುತ್ತದೆ ಅಥವಾ ಭೇಟಿ ಕೊಟ್ಟಿರುವಂತಹ ಪ್ರತಿಯೊಬ್ಬರೂ ನನ್ನ ಮನೆಯಲ್ಲಿರುವಂತಹ ಬುದ್ಧನ ಪ್ರತಿಮೆಗಳು, ಪುಸ್ತಕಗಳು, ಫೋಟೋಗಳನ್ನು ಗಮನಿಸಿದ್ದಾರೆಂದು ತಿಳಿದುಕೊಂಡಿದ್ದೇನೆ. ನಾನು ಎಂಬಿಬಿಎಸ್‌ ವ್ಯಾಸಂಗ ಮಾಡಿದ ಕಾಲೇಜು ಹೆಸರು ಕೂಡ ಗೌತಮ ಬುದ್ಧನ ಮತ್ತೊಂದು ಹೆಸರಿನದ್ದಾಗಿದೆ. ಸಿದ್ಧಾರ್ಥ ಮೆಡಿಕಲ್‌ ಕಾಲೇಜು ಎನ್ನುವುದು ನನ್ನ ಜೀವನ ಪರ್ಯಾಂತ ಹೆಮ್ಮೆ ಎನಿಸುವಂತಹ ವಿಷಯ.”

“ಬೌದ್ಧಮತ ಹಿಂದೂಧರ್ಮ ಎಂಬ ಹೆಮ್ಮರದ ಶಾಖೆ ಎಂಬುದು ಹಿಂದೂಗಳ ನಂಬಿಕೆ. ಹಿಂದೂ ಧರ್ಮ ಒಂದು ಪುಸ್ತಕವೋ, ಪ್ರವಾದಿಯೋ ಇರುವಂತಹ ಧರ್ಮ ಅಲ್ಲ. ಭಗವದ್ಗೀತೆಯಲ್ಲಿ ಶ್ರೀಕಷ್ಣ ‘ಸಂಭವಾಮಿ ಯುಗೇ ಯುಗೇ’ ಎಂದು.”

 – ಡಾ.ಕೆ.ಸುಧಾಕರ್‌‌, ಆರೋಗ್ಯ ಸಚಿವರು, ಕರ್ನಾಟಕ ಸರ್ಕಾರ

***

‘ಬೌದ್ಧಧರ್ಮವು ಹಿಂದೂ ಧರ್ಮದ ಭಾಗವಲ್ಲ’

ಬೌದ್ಧಧರ್ಮವನ್ನು ಹಿಂದೂ ಧರ್ಮದ ಒಂದು ಭಾಗ ಎಂದು ಅಪಪ್ರಚಾರ ಮಾಡುತ್ತಿರುವುದು ಮೊದಲಿನಿಂದಲೂ ನಡೆದು ಬಂದಿದೆ. ಹೀಗಾಗಿ ಸುಧಾಕರ್‌ ಅವರ ಹೇಳಿಕೆಗೆ ಅನೇಕರು ಕಟುವಾಗಿ ಟೀಕಿಸಿದ್ದಾರೆ.

“ಬುದ್ಧ ಸಾಮಾನ್ಯ ಮನುಷ್ಯನಾಗಿ ಬದುಕಿದ ದೊಡ್ಡ ಜ್ಞಾನಿ. ಮಾನವ ಜನಾಂಗಕ್ಕೆ ದಾರಿ ತೋರಿದ ಗುರು. ಯಾವ ವಿಷ್ಣುವಿನ ಅವತಾರವೂ ಅಲ್ಲ” ಎಂದು ಸ್ವಾಮಿ ಡಿ.ಎಸ್‌. ಪ್ರತಿಕ್ರಿಯೆ ನೀಡಿದ್ದಾರೆ.

“ಬುದ್ದದಮ್ಮ ವೈಜ್ಞಾನಿಕ ಹಿನ್ನೆಲೆ ಹೊಂದಿರುವ ಧರ್ಮ. ಈ ಧರ್ಮದಲ್ಲಿ ಮಾಟ, ಮಂತ್ರ, ತಂತ್ರ, ಮಂತ್ರ ಇಲ್ಲ. ಬುದ್ದ ಹೇಗೆ ಅವತಾರದಲ್ಲಿ ವಿಷ್ಣು ಆಗಲು ಸಾಧ್ಯ?” ಎಂದು ಶಿವಮೂರ್ತಿ ಎಂಬವರು ಪ್ರಶ್ನಿಸಿದ್ದಾರೆ.

ಕವಿ ಸಿದ್ದಲಿಂಗಯ್ಯನವರು ದಶಕಗಳ ಹಿಂದೆ ಬರೆದ ‘ಮಾತಿಗೆ ಮಾತು ಕೊಟ್ಟವನ’ ಹಾಡಿದ ಒಂದು ಸಾಲು ಹೀಗಿದೆ- “ದೇವರು ಇಲ್ಲ ಎಂದವನನ್ನು ದೇವರು ಮಾಡಿ ಬಿಟ್ಟರು. ಹತ್ತವತಾರ ಸುಳ್ಳೆಂದವನ ಹನ್ನೊಂದಕ್ಕೆ ಏರಿಸಿದರು…”


ಇದನ್ನೂ ಓದಿರಿ: ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬುದ್ಧಿಹೀನ ಅದ್ಹೇಗೆ ಬುದ್ಧನ ಅನುಯಾಯಿಯಾಗುತ್ತಾನೆ? ಕೊಳಕ ನೀಚ ಕೋಮುವಾದಿಗಳು ಮೋದಿಯ ಅನುಯಾಯಿಗಳೆನ್ನುವುದು ಸೂಕ್ತ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...