Homeಕರ್ನಾಟಕಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

ಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

- Advertisement -
- Advertisement -

“ವಿಷ್ಣುವಿನ ಅವತಾರ ಭಗವಾನ್ ಬುದ್ಧ. ನಾನು ಕೂಡ ಬುದ್ಧನ ಅನುಯಾಯಿ” ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿಕೆ ನೀಡಿದ್ದು, ಈ ಕುರಿತು ವಿಡಿಯೊ ಬಿಡುಗಡೆ ಮಾಡಿದ್ದಾರೆ.

“ಬೌದ್ಧಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯರಿಗೆ ಸಲ್ಲುತ್ತದೆ” ಎಂದು ಸುಧಾ‌ಕರ್‌ ಹೇಳಿದ್ದು ಚರ್ಚೆಗೆ ಗ್ರಾಸವಾಗಿದೆ.

“ವಿಜ್ಞಾನಕ್ಕೂ ಮೊದಲು ಮಾನವ ಸಮಾಜಕ್ಕೆ ದಿಕ್ಕುದೆಸೆ ತೋರಿ ಆಚಾರ್ಯ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯ ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೂ ನೈತಿಕ ಬಲ ತುಂಬಿ ಆಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇಂದು ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಿದ್ದರೆ ಅದರ ಶ್ರೇಯ ಈ ಸಮುದಾಯಕ್ಕೆ ಸಲ್ಲಬೇಕು. ಈ ನಿಟ್ಟಿನಲ್ಲಿ ಸಾವಿರಾರು ವರ್ಷದಿಂದ ನಾಗರಿಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯವು ವಿಶೇಷ ಗೌರವ ಸ್ಥಾನವನ್ನು ಹೊಂದಿದೆ” ಎಂದು ಅವರು ಹೇಳಿದ್ದು ವಿವಿಧ ವೇದಿಕೆಗಳಲ್ಲಿ ವರದಿಯಾದ ಬಳಿಕ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ವಿಡಿಯೊ ಮೂಲಕ ಡಾ.ಸುಧಾಕರ್‌ ಸ್ಪಷ್ಟೀಕರಣ ನೀಡಿದ್ದಾರೆ.

ಡಾ.ಕೆ.ಸುಧಾಕರ್‌ ಸ್ಪಷ್ಟನೆ ಹೀಗಿದೆ:

“ಸನಾತನ ಧರ್ಮದ ಉಳಿವಿಗಾಗಿ, ಪುನರುತ್ಥಾನಕ್ಕಾಗಿ ಜಗದ್ಗುರು ಶಂಕರಾಚಾರ್ಯರ ಕೊಡುಗೆ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ನಾನು ಮಾತನಾಡುತ್ತಿರುವುದನ್ನು ತಿರುಚಿ ಬೌದ್ಧ ಮತಕ್ಕೆ, ಭಗವಾನ್ ಬುದ್ಧರಿಗೆ ಅಪಮಾನ ಎಸಗಿದ್ದೇನೆ ಎನ್ನುವಂತಹ ರೀತಿಯಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.”

“ಸನಾತನ ಹಿಂದೂ ಧರ್ಮದಲ್ಲಿ ಮಹಾ ವಿಷ್ಣುವಿನ ದಶವತಾರ ಕಲ್ಪನೆ ಇದೆ. ಮತ್ಸ್ಯಾವತಾರ, ಕೂರ್ಮಾವತಾರ, ವರಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ ಹಾಗೂ ಕಲ್ಕಿ. ಇವು ವಿಷ್ಣುವಿನ ದಶವತಾರಗಳು ಎಂಬುದು ಸಮಸ್ತ ಹಿಂದೂಗಳ ನಂಬಿಕೆ.”

“ಹಿಂದೂಗಳು ಪೂಜಿಸುವಂತಹ ನರಸಿಂಹ ದೇವರು, ರಾಮ, ಕೃಷ್ಣನಿಗೆ ಸಮನಾದ ಸ್ಥಾನವನ್ನು ನಾವು ಭಗವಾನ್‌ ಬುದ್ಧರಿಗೂ ಕೊಟ್ಟಿದ್ದೀವಿ. ಬುದ್ಧನನ್ನು ಸಾಕ್ಷಾತ್ ಮಹಾನ್ ವಿಷ್ಣುವಿನ ಅವತಾರವೆಂದು ನಂಬಿದ್ದೇವೆ. ಈ ರೀತಿಯ ನಂಬಿಕೆ ಉಳ್ಳವರು ಹಿಂದೂಗಳು.”

“ನಾನು ಸಹ ಬುದ್ಧನ ಅನುಯಾಯಿ. ನನ್ನ ಮನೆಗೆ ಭೇಟಿ ಕೊಟ್ಟರೆ ಗೊತ್ತಾಗುತ್ತದೆ ಅಥವಾ ಭೇಟಿ ಕೊಟ್ಟಿರುವಂತಹ ಪ್ರತಿಯೊಬ್ಬರೂ ನನ್ನ ಮನೆಯಲ್ಲಿರುವಂತಹ ಬುದ್ಧನ ಪ್ರತಿಮೆಗಳು, ಪುಸ್ತಕಗಳು, ಫೋಟೋಗಳನ್ನು ಗಮನಿಸಿದ್ದಾರೆಂದು ತಿಳಿದುಕೊಂಡಿದ್ದೇನೆ. ನಾನು ಎಂಬಿಬಿಎಸ್‌ ವ್ಯಾಸಂಗ ಮಾಡಿದ ಕಾಲೇಜು ಹೆಸರು ಕೂಡ ಗೌತಮ ಬುದ್ಧನ ಮತ್ತೊಂದು ಹೆಸರಿನದ್ದಾಗಿದೆ. ಸಿದ್ಧಾರ್ಥ ಮೆಡಿಕಲ್‌ ಕಾಲೇಜು ಎನ್ನುವುದು ನನ್ನ ಜೀವನ ಪರ್ಯಾಂತ ಹೆಮ್ಮೆ ಎನಿಸುವಂತಹ ವಿಷಯ.”

“ಬೌದ್ಧಮತ ಹಿಂದೂಧರ್ಮ ಎಂಬ ಹೆಮ್ಮರದ ಶಾಖೆ ಎಂಬುದು ಹಿಂದೂಗಳ ನಂಬಿಕೆ. ಹಿಂದೂ ಧರ್ಮ ಒಂದು ಪುಸ್ತಕವೋ, ಪ್ರವಾದಿಯೋ ಇರುವಂತಹ ಧರ್ಮ ಅಲ್ಲ. ಭಗವದ್ಗೀತೆಯಲ್ಲಿ ಶ್ರೀಕಷ್ಣ ‘ಸಂಭವಾಮಿ ಯುಗೇ ಯುಗೇ’ ಎಂದು.”

 – ಡಾ.ಕೆ.ಸುಧಾಕರ್‌‌, ಆರೋಗ್ಯ ಸಚಿವರು, ಕರ್ನಾಟಕ ಸರ್ಕಾರ

***

‘ಬೌದ್ಧಧರ್ಮವು ಹಿಂದೂ ಧರ್ಮದ ಭಾಗವಲ್ಲ’

ಬೌದ್ಧಧರ್ಮವನ್ನು ಹಿಂದೂ ಧರ್ಮದ ಒಂದು ಭಾಗ ಎಂದು ಅಪಪ್ರಚಾರ ಮಾಡುತ್ತಿರುವುದು ಮೊದಲಿನಿಂದಲೂ ನಡೆದು ಬಂದಿದೆ. ಹೀಗಾಗಿ ಸುಧಾಕರ್‌ ಅವರ ಹೇಳಿಕೆಗೆ ಅನೇಕರು ಕಟುವಾಗಿ ಟೀಕಿಸಿದ್ದಾರೆ.

“ಬುದ್ಧ ಸಾಮಾನ್ಯ ಮನುಷ್ಯನಾಗಿ ಬದುಕಿದ ದೊಡ್ಡ ಜ್ಞಾನಿ. ಮಾನವ ಜನಾಂಗಕ್ಕೆ ದಾರಿ ತೋರಿದ ಗುರು. ಯಾವ ವಿಷ್ಣುವಿನ ಅವತಾರವೂ ಅಲ್ಲ” ಎಂದು ಸ್ವಾಮಿ ಡಿ.ಎಸ್‌. ಪ್ರತಿಕ್ರಿಯೆ ನೀಡಿದ್ದಾರೆ.

“ಬುದ್ದದಮ್ಮ ವೈಜ್ಞಾನಿಕ ಹಿನ್ನೆಲೆ ಹೊಂದಿರುವ ಧರ್ಮ. ಈ ಧರ್ಮದಲ್ಲಿ ಮಾಟ, ಮಂತ್ರ, ತಂತ್ರ, ಮಂತ್ರ ಇಲ್ಲ. ಬುದ್ದ ಹೇಗೆ ಅವತಾರದಲ್ಲಿ ವಿಷ್ಣು ಆಗಲು ಸಾಧ್ಯ?” ಎಂದು ಶಿವಮೂರ್ತಿ ಎಂಬವರು ಪ್ರಶ್ನಿಸಿದ್ದಾರೆ.

ಕವಿ ಸಿದ್ದಲಿಂಗಯ್ಯನವರು ದಶಕಗಳ ಹಿಂದೆ ಬರೆದ ‘ಮಾತಿಗೆ ಮಾತು ಕೊಟ್ಟವನ’ ಹಾಡಿದ ಒಂದು ಸಾಲು ಹೀಗಿದೆ- “ದೇವರು ಇಲ್ಲ ಎಂದವನನ್ನು ದೇವರು ಮಾಡಿ ಬಿಟ್ಟರು. ಹತ್ತವತಾರ ಸುಳ್ಳೆಂದವನ ಹನ್ನೊಂದಕ್ಕೆ ಏರಿಸಿದರು…”


ಇದನ್ನೂ ಓದಿರಿ: ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬುದ್ಧಿಹೀನ ಅದ್ಹೇಗೆ ಬುದ್ಧನ ಅನುಯಾಯಿಯಾಗುತ್ತಾನೆ? ಕೊಳಕ ನೀಚ ಕೋಮುವಾದಿಗಳು ಮೋದಿಯ ಅನುಯಾಯಿಗಳೆನ್ನುವುದು ಸೂಕ್ತ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...