Homeಕರ್ನಾಟಕಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

ಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

- Advertisement -
- Advertisement -

“ವಿಷ್ಣುವಿನ ಅವತಾರ ಭಗವಾನ್ ಬುದ್ಧ. ನಾನು ಕೂಡ ಬುದ್ಧನ ಅನುಯಾಯಿ” ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿಕೆ ನೀಡಿದ್ದು, ಈ ಕುರಿತು ವಿಡಿಯೊ ಬಿಡುಗಡೆ ಮಾಡಿದ್ದಾರೆ.

“ಬೌದ್ಧಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯರಿಗೆ ಸಲ್ಲುತ್ತದೆ” ಎಂದು ಸುಧಾ‌ಕರ್‌ ಹೇಳಿದ್ದು ಚರ್ಚೆಗೆ ಗ್ರಾಸವಾಗಿದೆ.

“ವಿಜ್ಞಾನಕ್ಕೂ ಮೊದಲು ಮಾನವ ಸಮಾಜಕ್ಕೆ ದಿಕ್ಕುದೆಸೆ ತೋರಿ ಆಚಾರ್ಯ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯ ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೂ ನೈತಿಕ ಬಲ ತುಂಬಿ ಆಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇಂದು ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಿದ್ದರೆ ಅದರ ಶ್ರೇಯ ಈ ಸಮುದಾಯಕ್ಕೆ ಸಲ್ಲಬೇಕು. ಈ ನಿಟ್ಟಿನಲ್ಲಿ ಸಾವಿರಾರು ವರ್ಷದಿಂದ ನಾಗರಿಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯವು ವಿಶೇಷ ಗೌರವ ಸ್ಥಾನವನ್ನು ಹೊಂದಿದೆ” ಎಂದು ಅವರು ಹೇಳಿದ್ದು ವಿವಿಧ ವೇದಿಕೆಗಳಲ್ಲಿ ವರದಿಯಾದ ಬಳಿಕ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ವಿಡಿಯೊ ಮೂಲಕ ಡಾ.ಸುಧಾಕರ್‌ ಸ್ಪಷ್ಟೀಕರಣ ನೀಡಿದ್ದಾರೆ.

ಡಾ.ಕೆ.ಸುಧಾಕರ್‌ ಸ್ಪಷ್ಟನೆ ಹೀಗಿದೆ:

“ಸನಾತನ ಧರ್ಮದ ಉಳಿವಿಗಾಗಿ, ಪುನರುತ್ಥಾನಕ್ಕಾಗಿ ಜಗದ್ಗುರು ಶಂಕರಾಚಾರ್ಯರ ಕೊಡುಗೆ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ನಾನು ಮಾತನಾಡುತ್ತಿರುವುದನ್ನು ತಿರುಚಿ ಬೌದ್ಧ ಮತಕ್ಕೆ, ಭಗವಾನ್ ಬುದ್ಧರಿಗೆ ಅಪಮಾನ ಎಸಗಿದ್ದೇನೆ ಎನ್ನುವಂತಹ ರೀತಿಯಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.”

“ಸನಾತನ ಹಿಂದೂ ಧರ್ಮದಲ್ಲಿ ಮಹಾ ವಿಷ್ಣುವಿನ ದಶವತಾರ ಕಲ್ಪನೆ ಇದೆ. ಮತ್ಸ್ಯಾವತಾರ, ಕೂರ್ಮಾವತಾರ, ವರಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ ಹಾಗೂ ಕಲ್ಕಿ. ಇವು ವಿಷ್ಣುವಿನ ದಶವತಾರಗಳು ಎಂಬುದು ಸಮಸ್ತ ಹಿಂದೂಗಳ ನಂಬಿಕೆ.”

“ಹಿಂದೂಗಳು ಪೂಜಿಸುವಂತಹ ನರಸಿಂಹ ದೇವರು, ರಾಮ, ಕೃಷ್ಣನಿಗೆ ಸಮನಾದ ಸ್ಥಾನವನ್ನು ನಾವು ಭಗವಾನ್‌ ಬುದ್ಧರಿಗೂ ಕೊಟ್ಟಿದ್ದೀವಿ. ಬುದ್ಧನನ್ನು ಸಾಕ್ಷಾತ್ ಮಹಾನ್ ವಿಷ್ಣುವಿನ ಅವತಾರವೆಂದು ನಂಬಿದ್ದೇವೆ. ಈ ರೀತಿಯ ನಂಬಿಕೆ ಉಳ್ಳವರು ಹಿಂದೂಗಳು.”

“ನಾನು ಸಹ ಬುದ್ಧನ ಅನುಯಾಯಿ. ನನ್ನ ಮನೆಗೆ ಭೇಟಿ ಕೊಟ್ಟರೆ ಗೊತ್ತಾಗುತ್ತದೆ ಅಥವಾ ಭೇಟಿ ಕೊಟ್ಟಿರುವಂತಹ ಪ್ರತಿಯೊಬ್ಬರೂ ನನ್ನ ಮನೆಯಲ್ಲಿರುವಂತಹ ಬುದ್ಧನ ಪ್ರತಿಮೆಗಳು, ಪುಸ್ತಕಗಳು, ಫೋಟೋಗಳನ್ನು ಗಮನಿಸಿದ್ದಾರೆಂದು ತಿಳಿದುಕೊಂಡಿದ್ದೇನೆ. ನಾನು ಎಂಬಿಬಿಎಸ್‌ ವ್ಯಾಸಂಗ ಮಾಡಿದ ಕಾಲೇಜು ಹೆಸರು ಕೂಡ ಗೌತಮ ಬುದ್ಧನ ಮತ್ತೊಂದು ಹೆಸರಿನದ್ದಾಗಿದೆ. ಸಿದ್ಧಾರ್ಥ ಮೆಡಿಕಲ್‌ ಕಾಲೇಜು ಎನ್ನುವುದು ನನ್ನ ಜೀವನ ಪರ್ಯಾಂತ ಹೆಮ್ಮೆ ಎನಿಸುವಂತಹ ವಿಷಯ.”

“ಬೌದ್ಧಮತ ಹಿಂದೂಧರ್ಮ ಎಂಬ ಹೆಮ್ಮರದ ಶಾಖೆ ಎಂಬುದು ಹಿಂದೂಗಳ ನಂಬಿಕೆ. ಹಿಂದೂ ಧರ್ಮ ಒಂದು ಪುಸ್ತಕವೋ, ಪ್ರವಾದಿಯೋ ಇರುವಂತಹ ಧರ್ಮ ಅಲ್ಲ. ಭಗವದ್ಗೀತೆಯಲ್ಲಿ ಶ್ರೀಕಷ್ಣ ‘ಸಂಭವಾಮಿ ಯುಗೇ ಯುಗೇ’ ಎಂದು.”

 – ಡಾ.ಕೆ.ಸುಧಾಕರ್‌‌, ಆರೋಗ್ಯ ಸಚಿವರು, ಕರ್ನಾಟಕ ಸರ್ಕಾರ

***

‘ಬೌದ್ಧಧರ್ಮವು ಹಿಂದೂ ಧರ್ಮದ ಭಾಗವಲ್ಲ’

ಬೌದ್ಧಧರ್ಮವನ್ನು ಹಿಂದೂ ಧರ್ಮದ ಒಂದು ಭಾಗ ಎಂದು ಅಪಪ್ರಚಾರ ಮಾಡುತ್ತಿರುವುದು ಮೊದಲಿನಿಂದಲೂ ನಡೆದು ಬಂದಿದೆ. ಹೀಗಾಗಿ ಸುಧಾಕರ್‌ ಅವರ ಹೇಳಿಕೆಗೆ ಅನೇಕರು ಕಟುವಾಗಿ ಟೀಕಿಸಿದ್ದಾರೆ.

“ಬುದ್ಧ ಸಾಮಾನ್ಯ ಮನುಷ್ಯನಾಗಿ ಬದುಕಿದ ದೊಡ್ಡ ಜ್ಞಾನಿ. ಮಾನವ ಜನಾಂಗಕ್ಕೆ ದಾರಿ ತೋರಿದ ಗುರು. ಯಾವ ವಿಷ್ಣುವಿನ ಅವತಾರವೂ ಅಲ್ಲ” ಎಂದು ಸ್ವಾಮಿ ಡಿ.ಎಸ್‌. ಪ್ರತಿಕ್ರಿಯೆ ನೀಡಿದ್ದಾರೆ.

“ಬುದ್ದದಮ್ಮ ವೈಜ್ಞಾನಿಕ ಹಿನ್ನೆಲೆ ಹೊಂದಿರುವ ಧರ್ಮ. ಈ ಧರ್ಮದಲ್ಲಿ ಮಾಟ, ಮಂತ್ರ, ತಂತ್ರ, ಮಂತ್ರ ಇಲ್ಲ. ಬುದ್ದ ಹೇಗೆ ಅವತಾರದಲ್ಲಿ ವಿಷ್ಣು ಆಗಲು ಸಾಧ್ಯ?” ಎಂದು ಶಿವಮೂರ್ತಿ ಎಂಬವರು ಪ್ರಶ್ನಿಸಿದ್ದಾರೆ.

ಕವಿ ಸಿದ್ದಲಿಂಗಯ್ಯನವರು ದಶಕಗಳ ಹಿಂದೆ ಬರೆದ ‘ಮಾತಿಗೆ ಮಾತು ಕೊಟ್ಟವನ’ ಹಾಡಿದ ಒಂದು ಸಾಲು ಹೀಗಿದೆ- “ದೇವರು ಇಲ್ಲ ಎಂದವನನ್ನು ದೇವರು ಮಾಡಿ ಬಿಟ್ಟರು. ಹತ್ತವತಾರ ಸುಳ್ಳೆಂದವನ ಹನ್ನೊಂದಕ್ಕೆ ಏರಿಸಿದರು…”


ಇದನ್ನೂ ಓದಿರಿ: ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬುದ್ಧಿಹೀನ ಅದ್ಹೇಗೆ ಬುದ್ಧನ ಅನುಯಾಯಿಯಾಗುತ್ತಾನೆ? ಕೊಳಕ ನೀಚ ಕೋಮುವಾದಿಗಳು ಮೋದಿಯ ಅನುಯಾಯಿಗಳೆನ್ನುವುದು ಸೂಕ್ತ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...