Homeಕರ್ನಾಟಕಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

ಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

- Advertisement -
- Advertisement -

“ವಿಷ್ಣುವಿನ ಅವತಾರ ಭಗವಾನ್ ಬುದ್ಧ. ನಾನು ಕೂಡ ಬುದ್ಧನ ಅನುಯಾಯಿ” ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿಕೆ ನೀಡಿದ್ದು, ಈ ಕುರಿತು ವಿಡಿಯೊ ಬಿಡುಗಡೆ ಮಾಡಿದ್ದಾರೆ.

“ಬೌದ್ಧಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯರಿಗೆ ಸಲ್ಲುತ್ತದೆ” ಎಂದು ಸುಧಾ‌ಕರ್‌ ಹೇಳಿದ್ದು ಚರ್ಚೆಗೆ ಗ್ರಾಸವಾಗಿದೆ.

“ವಿಜ್ಞಾನಕ್ಕೂ ಮೊದಲು ಮಾನವ ಸಮಾಜಕ್ಕೆ ದಿಕ್ಕುದೆಸೆ ತೋರಿ ಆಚಾರ್ಯ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯ ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೂ ನೈತಿಕ ಬಲ ತುಂಬಿ ಆಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇಂದು ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಿದ್ದರೆ ಅದರ ಶ್ರೇಯ ಈ ಸಮುದಾಯಕ್ಕೆ ಸಲ್ಲಬೇಕು. ಈ ನಿಟ್ಟಿನಲ್ಲಿ ಸಾವಿರಾರು ವರ್ಷದಿಂದ ನಾಗರಿಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯವು ವಿಶೇಷ ಗೌರವ ಸ್ಥಾನವನ್ನು ಹೊಂದಿದೆ” ಎಂದು ಅವರು ಹೇಳಿದ್ದು ವಿವಿಧ ವೇದಿಕೆಗಳಲ್ಲಿ ವರದಿಯಾದ ಬಳಿಕ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ವಿಡಿಯೊ ಮೂಲಕ ಡಾ.ಸುಧಾಕರ್‌ ಸ್ಪಷ್ಟೀಕರಣ ನೀಡಿದ್ದಾರೆ.

ಡಾ.ಕೆ.ಸುಧಾಕರ್‌ ಸ್ಪಷ್ಟನೆ ಹೀಗಿದೆ:

“ಸನಾತನ ಧರ್ಮದ ಉಳಿವಿಗಾಗಿ, ಪುನರುತ್ಥಾನಕ್ಕಾಗಿ ಜಗದ್ಗುರು ಶಂಕರಾಚಾರ್ಯರ ಕೊಡುಗೆ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ನಾನು ಮಾತನಾಡುತ್ತಿರುವುದನ್ನು ತಿರುಚಿ ಬೌದ್ಧ ಮತಕ್ಕೆ, ಭಗವಾನ್ ಬುದ್ಧರಿಗೆ ಅಪಮಾನ ಎಸಗಿದ್ದೇನೆ ಎನ್ನುವಂತಹ ರೀತಿಯಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.”

“ಸನಾತನ ಹಿಂದೂ ಧರ್ಮದಲ್ಲಿ ಮಹಾ ವಿಷ್ಣುವಿನ ದಶವತಾರ ಕಲ್ಪನೆ ಇದೆ. ಮತ್ಸ್ಯಾವತಾರ, ಕೂರ್ಮಾವತಾರ, ವರಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ ಹಾಗೂ ಕಲ್ಕಿ. ಇವು ವಿಷ್ಣುವಿನ ದಶವತಾರಗಳು ಎಂಬುದು ಸಮಸ್ತ ಹಿಂದೂಗಳ ನಂಬಿಕೆ.”

“ಹಿಂದೂಗಳು ಪೂಜಿಸುವಂತಹ ನರಸಿಂಹ ದೇವರು, ರಾಮ, ಕೃಷ್ಣನಿಗೆ ಸಮನಾದ ಸ್ಥಾನವನ್ನು ನಾವು ಭಗವಾನ್‌ ಬುದ್ಧರಿಗೂ ಕೊಟ್ಟಿದ್ದೀವಿ. ಬುದ್ಧನನ್ನು ಸಾಕ್ಷಾತ್ ಮಹಾನ್ ವಿಷ್ಣುವಿನ ಅವತಾರವೆಂದು ನಂಬಿದ್ದೇವೆ. ಈ ರೀತಿಯ ನಂಬಿಕೆ ಉಳ್ಳವರು ಹಿಂದೂಗಳು.”

“ನಾನು ಸಹ ಬುದ್ಧನ ಅನುಯಾಯಿ. ನನ್ನ ಮನೆಗೆ ಭೇಟಿ ಕೊಟ್ಟರೆ ಗೊತ್ತಾಗುತ್ತದೆ ಅಥವಾ ಭೇಟಿ ಕೊಟ್ಟಿರುವಂತಹ ಪ್ರತಿಯೊಬ್ಬರೂ ನನ್ನ ಮನೆಯಲ್ಲಿರುವಂತಹ ಬುದ್ಧನ ಪ್ರತಿಮೆಗಳು, ಪುಸ್ತಕಗಳು, ಫೋಟೋಗಳನ್ನು ಗಮನಿಸಿದ್ದಾರೆಂದು ತಿಳಿದುಕೊಂಡಿದ್ದೇನೆ. ನಾನು ಎಂಬಿಬಿಎಸ್‌ ವ್ಯಾಸಂಗ ಮಾಡಿದ ಕಾಲೇಜು ಹೆಸರು ಕೂಡ ಗೌತಮ ಬುದ್ಧನ ಮತ್ತೊಂದು ಹೆಸರಿನದ್ದಾಗಿದೆ. ಸಿದ್ಧಾರ್ಥ ಮೆಡಿಕಲ್‌ ಕಾಲೇಜು ಎನ್ನುವುದು ನನ್ನ ಜೀವನ ಪರ್ಯಾಂತ ಹೆಮ್ಮೆ ಎನಿಸುವಂತಹ ವಿಷಯ.”

“ಬೌದ್ಧಮತ ಹಿಂದೂಧರ್ಮ ಎಂಬ ಹೆಮ್ಮರದ ಶಾಖೆ ಎಂಬುದು ಹಿಂದೂಗಳ ನಂಬಿಕೆ. ಹಿಂದೂ ಧರ್ಮ ಒಂದು ಪುಸ್ತಕವೋ, ಪ್ರವಾದಿಯೋ ಇರುವಂತಹ ಧರ್ಮ ಅಲ್ಲ. ಭಗವದ್ಗೀತೆಯಲ್ಲಿ ಶ್ರೀಕಷ್ಣ ‘ಸಂಭವಾಮಿ ಯುಗೇ ಯುಗೇ’ ಎಂದು.”

 – ಡಾ.ಕೆ.ಸುಧಾಕರ್‌‌, ಆರೋಗ್ಯ ಸಚಿವರು, ಕರ್ನಾಟಕ ಸರ್ಕಾರ

***

‘ಬೌದ್ಧಧರ್ಮವು ಹಿಂದೂ ಧರ್ಮದ ಭಾಗವಲ್ಲ’

ಬೌದ್ಧಧರ್ಮವನ್ನು ಹಿಂದೂ ಧರ್ಮದ ಒಂದು ಭಾಗ ಎಂದು ಅಪಪ್ರಚಾರ ಮಾಡುತ್ತಿರುವುದು ಮೊದಲಿನಿಂದಲೂ ನಡೆದು ಬಂದಿದೆ. ಹೀಗಾಗಿ ಸುಧಾಕರ್‌ ಅವರ ಹೇಳಿಕೆಗೆ ಅನೇಕರು ಕಟುವಾಗಿ ಟೀಕಿಸಿದ್ದಾರೆ.

“ಬುದ್ಧ ಸಾಮಾನ್ಯ ಮನುಷ್ಯನಾಗಿ ಬದುಕಿದ ದೊಡ್ಡ ಜ್ಞಾನಿ. ಮಾನವ ಜನಾಂಗಕ್ಕೆ ದಾರಿ ತೋರಿದ ಗುರು. ಯಾವ ವಿಷ್ಣುವಿನ ಅವತಾರವೂ ಅಲ್ಲ” ಎಂದು ಸ್ವಾಮಿ ಡಿ.ಎಸ್‌. ಪ್ರತಿಕ್ರಿಯೆ ನೀಡಿದ್ದಾರೆ.

“ಬುದ್ದದಮ್ಮ ವೈಜ್ಞಾನಿಕ ಹಿನ್ನೆಲೆ ಹೊಂದಿರುವ ಧರ್ಮ. ಈ ಧರ್ಮದಲ್ಲಿ ಮಾಟ, ಮಂತ್ರ, ತಂತ್ರ, ಮಂತ್ರ ಇಲ್ಲ. ಬುದ್ದ ಹೇಗೆ ಅವತಾರದಲ್ಲಿ ವಿಷ್ಣು ಆಗಲು ಸಾಧ್ಯ?” ಎಂದು ಶಿವಮೂರ್ತಿ ಎಂಬವರು ಪ್ರಶ್ನಿಸಿದ್ದಾರೆ.

ಕವಿ ಸಿದ್ದಲಿಂಗಯ್ಯನವರು ದಶಕಗಳ ಹಿಂದೆ ಬರೆದ ‘ಮಾತಿಗೆ ಮಾತು ಕೊಟ್ಟವನ’ ಹಾಡಿದ ಒಂದು ಸಾಲು ಹೀಗಿದೆ- “ದೇವರು ಇಲ್ಲ ಎಂದವನನ್ನು ದೇವರು ಮಾಡಿ ಬಿಟ್ಟರು. ಹತ್ತವತಾರ ಸುಳ್ಳೆಂದವನ ಹನ್ನೊಂದಕ್ಕೆ ಏರಿಸಿದರು…”


ಇದನ್ನೂ ಓದಿರಿ: ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬುದ್ಧಿಹೀನ ಅದ್ಹೇಗೆ ಬುದ್ಧನ ಅನುಯಾಯಿಯಾಗುತ್ತಾನೆ? ಕೊಳಕ ನೀಚ ಕೋಮುವಾದಿಗಳು ಮೋದಿಯ ಅನುಯಾಯಿಗಳೆನ್ನುವುದು ಸೂಕ್ತ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...