Homeಮುಖಪುಟವಿಮಾನದಲ್ಲಿ ನಡೆದ ಘಟನೆ ಆಕಸ್ಮಿಕ, ಅದಕ್ಕಾಗಿ ‘ಕ್ಷಮೆ’ ಕೇಳಿದ್ದಾರೆ | ತೇಜಸ್ವಿ ಸೂರ್ಯ ಪರ ವಹಿಸಿದ...

ವಿಮಾನದಲ್ಲಿ ನಡೆದ ಘಟನೆ ಆಕಸ್ಮಿಕ, ಅದಕ್ಕಾಗಿ ‘ಕ್ಷಮೆ’ ಕೇಳಿದ್ದಾರೆ | ತೇಜಸ್ವಿ ಸೂರ್ಯ ಪರ ವಹಿಸಿದ ವಿಮಾನಯಾನ ಸಚಿವ

ತೇಜಸ್ವಿ ಸೂರ್ಯ ಅವರು ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಕುಚೇಷ್ಟೆ ಮಾಡಿದ್ದು, ನಿಯಮಗಳ ಗಂಭೀರ ಉಲ್ಲಂಘನೆ ಮಾಡಿದ್ದರು

- Advertisement -
- Advertisement -

ಕಳೆದ ಡಿಸೆಂಬರ್‌‌ನಲ್ಲಿ ಚೆನ್ನೈ ವಿಮಾನ ನಿಲ್ದಾಣದ ವಿಮಾನದೊಳಗಡೆ ಕುಚೇಷ್ಟೆ ಮಾಡಿದ್ದ ಸಂಸದ ತೇಜಸ್ವಿ ಸೂರ್ಯ ಅವರ ಪರವಾಗಿ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾತನಾಡಿದ್ದಾರೆ. ಘಟನೆಯು ಆಕಸ್ಮಿಕವಾಗಿ ನಡೆದಿದ್ದು, ಅದಕ್ಕಾಗಿ ಅವರು ಕ್ಷಮೆಯಾಚಿಸಿದ್ದಾರೆ ಎಂದು ಸಿಂಧಿಯಾ ಹೇಳಿದ್ದಾರೆ.

ಡಿಸೆಂಬರ್ 10 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಇಂಗ್ಲಿಷ್‌ನ ಖ್ಯಾತ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ ಈ ಬಗ್ಗೆ ವರದಿ ಮಾಡಿದ ನಂತರ ವಿಮಾನಯಾನ ಸಂಸ್ಥೆ ಇಂಡಿಗೋ ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿದೆ. ನ್ಯೂಸ್ ಮಿನಿಟ್‌ ತನ್ನ ವರದಿಯಲ್ಲಿ ತೇಜಸ್ವಿ ಸೂರ್ಯ ಅವರನ್ನು ಹೆಸರಿಸಿತ್ತೆ ವಿನಃ, ಇಂಡಿಗೋ ಹೇಳಿಕೆಯು ಯಾರನ್ನೂ ಹೆಸರಿಸಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಬಗ್ಗೆ ಮಾತನಾಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, “ಸತ್ಯಗಳನ್ನು ನೋಡುವುದು ಬಹಳ ಮುಖ್ಯ. ವಿಮಾನವು ಇನ್ನೂ ನೆಲದ ಮೇಲೆ ಇದ್ದಾಗ ಅವರು ಆಕಸ್ಮಿಕವಾಗಿ ತುರ್ತು ನಿರ್ಗಮನ ಬಾಗಿಲು ತೆರೆದಿದ್ದಾರೆ. ಇದರ ನಂತರ ಎಲ್ಲಾ ತಪಾಸಣೆಯ ನಂತರ ವಿಮಾನವನ್ನು ಟೇಕ್ ಆಫ್ ಮಾಡಲು ಅನುಮತಿಸಲಾಯಿತು. ತನ್ನ ತಪ್ಪಿಗೆ ಅವರು ಕ್ಷಮೆಯನ್ನೂ ಕೇಳಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ಬಗ್ಗೆ ಸ್ವತಃ ತೇಜಸ್ವಿ ಸೂರ್ಯ ಅವರೇ ಪೈಲಟ್ ಮತ್ತು ಸಿಬ್ಬಂದಿಗೆ ತಿಳಿಸಿದ್ದಾರೆ. ಡಿಜಿಸಿಎ ತನಿಖೆ ನಡೆಸಿದಂತೆ ಸಂಪೂರ್ಣ ಪ್ರೋಟೋಕಾಲ್ ಅನುಸರಿಸಲಾಗಿದೆ. ಎಲ್ಲಾ ತಪಾಸಣೆಯ ನಂತರವೇ ವಿಮಾನ ಹಾರಾಡಿತ್ತು. ಘಟನೆಯಿಂದ ಉಂಟಾದ ವಿಳಂಬಕ್ಕೆ ಸೂರ್ಯ ಅವರೇ ಕ್ಷಮೆಯಾಚಿಸಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

“ಡಿಸೆಂಬರ್ 10, 2022 ರಂದು ಚೆನ್ನೈನಿಂದ ತಿರುಚಿರಾಪಳ್ಳಿಗೆ 6E 7339 ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಆಕಸ್ಮಿಕವಾಗಿ ತುರ್ತು ನಿರ್ಗಮನವನ್ನು ತೆರೆದರು. ಈ ಕ್ರಮಕ್ಕಾಗಿ ಆ ಪ್ರಯಾಣಿಕ ತಕ್ಷಣವೇ ಕ್ಷಮೆಯಾಚಿಸಿದರು. ನಿಯಮಗಳ ಪ್ರಕಾರ, ವಿಮಾನವು ಕಡ್ಡಾಯ ಎಂಜಿನಿಯರಿಂಗ್ ತಪಾಸಣೆಗೆ ಒಳಗಾಯಿತು. ಹೀಗಾಗಿ ವಿಮಾನವು ಪ್ರಯಾಣಿಸಲು ವಿಳಂಬವಾಯಿತು” ಎಂದು ಇಂಡಿಗೋ ಏರ್‌ಲೈನ್ ಹೇಳಿದೆ.

ತುರ್ತು ಬಾಗಿಲು ತೆರೆದ ಕಾರಣಕ್ಕೆ ವಿಮಾನದಲ್ಲಿದ್ದ ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ, ನಂತರ ಸಂಪೂರ್ಣ ತಪಾಸಣೆಗೆ ಒಳಗಾಗಬೇಕಾಗಿತ್ತು. ಹೀಗಾಗಿ ವಿಮಾನವೂ ಪ್ರಯಾಣವೂ ಎರಡು ಗಂಟೆಗಳ ಕಾಲ ವಿಳಂಬವಾಗಿದೆ ಎಂದು ವರದಿಯಾಗಿದೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನಗಳನ್ನು ತೆರೆದ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಯು ಪೊಲೀಸ್ ದೂರು ದಾಖಲಿಸಿರುವ ಘಟನೆ ಈ ಹಿಂದೆ ಹಲವು ಬಾರಿ ನಡೆದಿತ್ತು. ಆದರೆ ತೇಜಸ್ವಿ ಸೂರ್ಯ ಪ್ರಕರಣದಲ್ಲಿ ಘಟನೆ ನಡೆದು ಒಂದು ತಿಂಗಳು ಕಳೆದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾನು ಎಸಗಿದ ಕಿಡಿಗೇಡಿತನದ ಬಗ್ಗೆ ನಂತರ ಸಂಸದ ತೇಜಸ್ವಿ ಸೂರ್ಯ ಅವರು ಲಿಖಿತ ಕ್ಷಮಾಪಣೆ ಪತ್ರವನ್ನು ಬರೆದಿದ್ದಾರೆ ಎಂದು ವರದಿಯಾಗಿದೆ. ಆದರೂ ವಿಮಾನಯಾನ ಸಂಸ್ಥೆಯ ಅವರ ವಿರುದ್ಧ ಯಾವುದೇ ಹೆಚ್ಚಿನ ತನಿಖೆಯನ್ನು ನಡೆಸದೆ, ಅದೇ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಸಂಸದನ ಕುಚೇಷ್ಠೆಯ ಸುದ್ದಿ ವೈರಲ್ ಆಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.

ಏರ್‌ಕ್ರಾಫ್ಟ್ ನಿಯಮ, 1937 ರ ಷರತ್ತು 22 (ಬಿ) ಪ್ರಕಾರ, ವಿಮಾನದ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶಕ್ಕಾಗಿ ಹಾಗೂ ವಿಮಾನದಲ್ಲಿ ಉತ್ತಮ ಕ್ರಮ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವ ಉದ್ದೇಶಕ್ಕಾಗಿ ವಿಮಾನದಲ್ಲಿ ಪ್ರಯಾಣಿಸುವ ಯಾವುದೇ ವ್ಯಕ್ತಿ, ಪೈಲಟ್-ಇನ್-ಕಮಾಂಡ್ ಪರವಾಗಿ ಸಿಬ್ಬಂದಿ ನೀಡಿದ ಕಾನೂನುಬದ್ಧ ಸೂಚನೆಯನ್ನು ಅನುಸರಿಸಲು ನಿರಾಕರಿಸಬಾರದು.

ಷರತ್ತು 23(1)(ಬಿ), ಯಾವುದೇ ಆಸ್ತಿಗೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಅಥವಾ ನಾಶಪಡಿಸುವ ಮೂಲಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅಥವಾ ಉತ್ತಮ ಸುವ್ಯವಸ್ಥೆ – ಶಿಸ್ತಿಗೆ ಅಪಾಯವನ್ನುಂಟುಮಾಡುವ ಆಕ್ರಮಣ ಮತ್ತು ಇತರ ಕೃತ್ಯಗಳ ಕುರಿತು ಮಾತನಾಡುತ್ತದೆ.

ಸಂಸದರು ತುರ್ತು ನಿರ್ಗಮನದ ಬಾಗಿಲು ತೆರೆದಾಗ ಪ್ರಯಾಣಿಕರು ಭಯಭೀತರಾಗಿದ್ದರು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ. “ಅದೃಷ್ಟವಶಾತ್ ವಿಮಾನವು ನೆಲದ ಮೇಲೆ ಇದ್ದಾಗ ಇದು ಸಂಭವಿಸಿದೆ. ಈ ರೀತಿಯ ಘಟನೆ ವಿಮಾನ ಹಾರಾಡುತ್ತಾ ಇರಬೇಕಾದರೆ ಏನಾದರೂ ಸಂಭವಿಸಿದ್ದರೆ, ಪರಿಸ್ಥಿತಿ ನಿಜವಾಗಿಯೂ ಕೆಟ್ಟದಾಗಿರುತ್ತಿತ್ತು” ಎಂದು ವಿಮಾನಯಾನ ಸಿಬ್ಬಂದಿ ನಮಗೆ ಹೇಳಿದರು ಎಂದು ಪ್ರಯಾಣಿಕ ಹೇಳಿದ್ದಾರೆ. “ವಿಮಾನದಲ್ಲಿ ಗಾಲಿಕುರ್ಚಿಯ ಸಹಾಯದಿಂದ ಓಡಾಡುವ ಸಾಕಷ್ಟು ವಯಸ್ಸಾದ ಪ್ರಯಾಣಿಕರು ಇದ್ದರು” ಎಂದು ಅವರು ಹೇಳಿದ್ದಾರೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನ ಬಾಗಿಲನ್ನು ತೆರೆದ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯ ದೂರಿನ ಆಧಾರದ ಮೇಲೆ ಪೊಲೀಸರು ಈ ಹಿಂದೆ ಪ್ರಕರಣದ ದಾಖಲಿಸಿದ ಉದಾಹರಣೆಗಳಿವೆ. ಏಪ್ರಿಲ್ 2019 ರಲ್ಲಿ, ಬೆಂಗಳೂರು-ಲಕ್ನೋ ವಿಮಾನದಲ್ಲಿ ತುರ್ತು ನಿರ್ಗಮನದ ಬಳಿ ಕುಳಿತಿದ್ದ ಮೊದಲ ಬಾರಿಗೆ ವಿಮಾನಯಾನ ಮಾಡುವ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ಬಾಗಿಲನ್ನು ಕಿಟಕಿ ಎಂದು ತಪ್ಪಾಗಿ ಗ್ರಹಿಸಿ ಅದನ್ನು ತೆರೆದಿದ್ದರು. ನಂತರ ಅವರನ್ನು ಕೆಳಗಿಳಿಸಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಕರೆದೊಯ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಫೆಬ್ರವರಿ 2017 ರಲ್ಲಿ, ಮುಂಬೈನಿಂದ ಚಂಡೀಗಢಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ವಿಮಾನ ಟೇಕ್-ಆಫ್ ಮಾಡುವ ಮೊದಲು ತೆರೆದಿದ್ದರು. ಘಟನೆಯ ಹಿನ್ನಲೆ ಇಂಡಿಗೋ ಏರ್‌ಲೈನ್ಸ್ ನೀಡಿದ ದೂರಿನ ಆಧಾರದ ಮೇಲೆ ಇತರ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾಗಿತ್ತು.

“ವಿಮಾನದ ತುರ್ತು ನಿರ್ಗಮನವನ್ನು ತೆರೆಯುವುದು ಗಂಭೀರ ಉಲ್ಲಂಘನೆಯಾಗಿದೆ ಮತ್ತು ಇದು ಪ್ರಕರಣ ದಾಖಲಿಸಬಹುದಾದ ಘಟನೆಯಾಗಿದೆ” ಎಂದು ವಾಯುಯಾನ ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ಅವರು ಹೇಳಿದ್ದಾರೆ.

“ತುರ್ತು ನಿರ್ಗಮನ ಬಾಗಿಲನ್ನು ಮತ್ತೆ ಹೊಂದಿಸಬೇಕಾಗಿರುವುದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು ಮತ್ತು ದೂರು ಸಲ್ಲಿಸಬೇಕು. ಈ ಬಗ್ಗೆ ಡಿಜಿಸಿಎಗೆ ವರದಿ ಸಲ್ಲಿಸಬೇಕಿತ್ತು. ಪ್ರಯಾಣಿಕ ಕ್ಷಮೆಯಾಚಿಸಿದ ಕಾರಣ ಅಥವಾ ಅವರು ವಿಐಪಿ ಆಗಿರುವ ಕಾರಣ ಅದನ್ನು ಮುಚ್ಚಿಡಬಹುದಾದ ವಿಷಯವಲ್ಲ” ಎಂದು ಮೋಹನ್ ರಂಗನಾಥನ್ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕುಚೇಷ್ಠೆ; ಒಂದು ತಿಂಗಳ ನಂತರ ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...