Homeಮುಖಪುಟವಿಮಾನದಲ್ಲಿ ನಡೆದ ಘಟನೆ ಆಕಸ್ಮಿಕ, ಅದಕ್ಕಾಗಿ ‘ಕ್ಷಮೆ’ ಕೇಳಿದ್ದಾರೆ | ತೇಜಸ್ವಿ ಸೂರ್ಯ ಪರ ವಹಿಸಿದ...

ವಿಮಾನದಲ್ಲಿ ನಡೆದ ಘಟನೆ ಆಕಸ್ಮಿಕ, ಅದಕ್ಕಾಗಿ ‘ಕ್ಷಮೆ’ ಕೇಳಿದ್ದಾರೆ | ತೇಜಸ್ವಿ ಸೂರ್ಯ ಪರ ವಹಿಸಿದ ವಿಮಾನಯಾನ ಸಚಿವ

ತೇಜಸ್ವಿ ಸೂರ್ಯ ಅವರು ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಕುಚೇಷ್ಟೆ ಮಾಡಿದ್ದು, ನಿಯಮಗಳ ಗಂಭೀರ ಉಲ್ಲಂಘನೆ ಮಾಡಿದ್ದರು

- Advertisement -
- Advertisement -

ಕಳೆದ ಡಿಸೆಂಬರ್‌‌ನಲ್ಲಿ ಚೆನ್ನೈ ವಿಮಾನ ನಿಲ್ದಾಣದ ವಿಮಾನದೊಳಗಡೆ ಕುಚೇಷ್ಟೆ ಮಾಡಿದ್ದ ಸಂಸದ ತೇಜಸ್ವಿ ಸೂರ್ಯ ಅವರ ಪರವಾಗಿ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾತನಾಡಿದ್ದಾರೆ. ಘಟನೆಯು ಆಕಸ್ಮಿಕವಾಗಿ ನಡೆದಿದ್ದು, ಅದಕ್ಕಾಗಿ ಅವರು ಕ್ಷಮೆಯಾಚಿಸಿದ್ದಾರೆ ಎಂದು ಸಿಂಧಿಯಾ ಹೇಳಿದ್ದಾರೆ.

ಡಿಸೆಂಬರ್ 10 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಇಂಗ್ಲಿಷ್‌ನ ಖ್ಯಾತ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ ಈ ಬಗ್ಗೆ ವರದಿ ಮಾಡಿದ ನಂತರ ವಿಮಾನಯಾನ ಸಂಸ್ಥೆ ಇಂಡಿಗೋ ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿದೆ. ನ್ಯೂಸ್ ಮಿನಿಟ್‌ ತನ್ನ ವರದಿಯಲ್ಲಿ ತೇಜಸ್ವಿ ಸೂರ್ಯ ಅವರನ್ನು ಹೆಸರಿಸಿತ್ತೆ ವಿನಃ, ಇಂಡಿಗೋ ಹೇಳಿಕೆಯು ಯಾರನ್ನೂ ಹೆಸರಿಸಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಬಗ್ಗೆ ಮಾತನಾಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, “ಸತ್ಯಗಳನ್ನು ನೋಡುವುದು ಬಹಳ ಮುಖ್ಯ. ವಿಮಾನವು ಇನ್ನೂ ನೆಲದ ಮೇಲೆ ಇದ್ದಾಗ ಅವರು ಆಕಸ್ಮಿಕವಾಗಿ ತುರ್ತು ನಿರ್ಗಮನ ಬಾಗಿಲು ತೆರೆದಿದ್ದಾರೆ. ಇದರ ನಂತರ ಎಲ್ಲಾ ತಪಾಸಣೆಯ ನಂತರ ವಿಮಾನವನ್ನು ಟೇಕ್ ಆಫ್ ಮಾಡಲು ಅನುಮತಿಸಲಾಯಿತು. ತನ್ನ ತಪ್ಪಿಗೆ ಅವರು ಕ್ಷಮೆಯನ್ನೂ ಕೇಳಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ಬಗ್ಗೆ ಸ್ವತಃ ತೇಜಸ್ವಿ ಸೂರ್ಯ ಅವರೇ ಪೈಲಟ್ ಮತ್ತು ಸಿಬ್ಬಂದಿಗೆ ತಿಳಿಸಿದ್ದಾರೆ. ಡಿಜಿಸಿಎ ತನಿಖೆ ನಡೆಸಿದಂತೆ ಸಂಪೂರ್ಣ ಪ್ರೋಟೋಕಾಲ್ ಅನುಸರಿಸಲಾಗಿದೆ. ಎಲ್ಲಾ ತಪಾಸಣೆಯ ನಂತರವೇ ವಿಮಾನ ಹಾರಾಡಿತ್ತು. ಘಟನೆಯಿಂದ ಉಂಟಾದ ವಿಳಂಬಕ್ಕೆ ಸೂರ್ಯ ಅವರೇ ಕ್ಷಮೆಯಾಚಿಸಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

“ಡಿಸೆಂಬರ್ 10, 2022 ರಂದು ಚೆನ್ನೈನಿಂದ ತಿರುಚಿರಾಪಳ್ಳಿಗೆ 6E 7339 ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಆಕಸ್ಮಿಕವಾಗಿ ತುರ್ತು ನಿರ್ಗಮನವನ್ನು ತೆರೆದರು. ಈ ಕ್ರಮಕ್ಕಾಗಿ ಆ ಪ್ರಯಾಣಿಕ ತಕ್ಷಣವೇ ಕ್ಷಮೆಯಾಚಿಸಿದರು. ನಿಯಮಗಳ ಪ್ರಕಾರ, ವಿಮಾನವು ಕಡ್ಡಾಯ ಎಂಜಿನಿಯರಿಂಗ್ ತಪಾಸಣೆಗೆ ಒಳಗಾಯಿತು. ಹೀಗಾಗಿ ವಿಮಾನವು ಪ್ರಯಾಣಿಸಲು ವಿಳಂಬವಾಯಿತು” ಎಂದು ಇಂಡಿಗೋ ಏರ್‌ಲೈನ್ ಹೇಳಿದೆ.

ತುರ್ತು ಬಾಗಿಲು ತೆರೆದ ಕಾರಣಕ್ಕೆ ವಿಮಾನದಲ್ಲಿದ್ದ ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ, ನಂತರ ಸಂಪೂರ್ಣ ತಪಾಸಣೆಗೆ ಒಳಗಾಗಬೇಕಾಗಿತ್ತು. ಹೀಗಾಗಿ ವಿಮಾನವೂ ಪ್ರಯಾಣವೂ ಎರಡು ಗಂಟೆಗಳ ಕಾಲ ವಿಳಂಬವಾಗಿದೆ ಎಂದು ವರದಿಯಾಗಿದೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನಗಳನ್ನು ತೆರೆದ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಯು ಪೊಲೀಸ್ ದೂರು ದಾಖಲಿಸಿರುವ ಘಟನೆ ಈ ಹಿಂದೆ ಹಲವು ಬಾರಿ ನಡೆದಿತ್ತು. ಆದರೆ ತೇಜಸ್ವಿ ಸೂರ್ಯ ಪ್ರಕರಣದಲ್ಲಿ ಘಟನೆ ನಡೆದು ಒಂದು ತಿಂಗಳು ಕಳೆದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾನು ಎಸಗಿದ ಕಿಡಿಗೇಡಿತನದ ಬಗ್ಗೆ ನಂತರ ಸಂಸದ ತೇಜಸ್ವಿ ಸೂರ್ಯ ಅವರು ಲಿಖಿತ ಕ್ಷಮಾಪಣೆ ಪತ್ರವನ್ನು ಬರೆದಿದ್ದಾರೆ ಎಂದು ವರದಿಯಾಗಿದೆ. ಆದರೂ ವಿಮಾನಯಾನ ಸಂಸ್ಥೆಯ ಅವರ ವಿರುದ್ಧ ಯಾವುದೇ ಹೆಚ್ಚಿನ ತನಿಖೆಯನ್ನು ನಡೆಸದೆ, ಅದೇ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಸಂಸದನ ಕುಚೇಷ್ಠೆಯ ಸುದ್ದಿ ವೈರಲ್ ಆಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.

ಏರ್‌ಕ್ರಾಫ್ಟ್ ನಿಯಮ, 1937 ರ ಷರತ್ತು 22 (ಬಿ) ಪ್ರಕಾರ, ವಿಮಾನದ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶಕ್ಕಾಗಿ ಹಾಗೂ ವಿಮಾನದಲ್ಲಿ ಉತ್ತಮ ಕ್ರಮ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವ ಉದ್ದೇಶಕ್ಕಾಗಿ ವಿಮಾನದಲ್ಲಿ ಪ್ರಯಾಣಿಸುವ ಯಾವುದೇ ವ್ಯಕ್ತಿ, ಪೈಲಟ್-ಇನ್-ಕಮಾಂಡ್ ಪರವಾಗಿ ಸಿಬ್ಬಂದಿ ನೀಡಿದ ಕಾನೂನುಬದ್ಧ ಸೂಚನೆಯನ್ನು ಅನುಸರಿಸಲು ನಿರಾಕರಿಸಬಾರದು.

ಷರತ್ತು 23(1)(ಬಿ), ಯಾವುದೇ ಆಸ್ತಿಗೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಅಥವಾ ನಾಶಪಡಿಸುವ ಮೂಲಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅಥವಾ ಉತ್ತಮ ಸುವ್ಯವಸ್ಥೆ – ಶಿಸ್ತಿಗೆ ಅಪಾಯವನ್ನುಂಟುಮಾಡುವ ಆಕ್ರಮಣ ಮತ್ತು ಇತರ ಕೃತ್ಯಗಳ ಕುರಿತು ಮಾತನಾಡುತ್ತದೆ.

ಸಂಸದರು ತುರ್ತು ನಿರ್ಗಮನದ ಬಾಗಿಲು ತೆರೆದಾಗ ಪ್ರಯಾಣಿಕರು ಭಯಭೀತರಾಗಿದ್ದರು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ. “ಅದೃಷ್ಟವಶಾತ್ ವಿಮಾನವು ನೆಲದ ಮೇಲೆ ಇದ್ದಾಗ ಇದು ಸಂಭವಿಸಿದೆ. ಈ ರೀತಿಯ ಘಟನೆ ವಿಮಾನ ಹಾರಾಡುತ್ತಾ ಇರಬೇಕಾದರೆ ಏನಾದರೂ ಸಂಭವಿಸಿದ್ದರೆ, ಪರಿಸ್ಥಿತಿ ನಿಜವಾಗಿಯೂ ಕೆಟ್ಟದಾಗಿರುತ್ತಿತ್ತು” ಎಂದು ವಿಮಾನಯಾನ ಸಿಬ್ಬಂದಿ ನಮಗೆ ಹೇಳಿದರು ಎಂದು ಪ್ರಯಾಣಿಕ ಹೇಳಿದ್ದಾರೆ. “ವಿಮಾನದಲ್ಲಿ ಗಾಲಿಕುರ್ಚಿಯ ಸಹಾಯದಿಂದ ಓಡಾಡುವ ಸಾಕಷ್ಟು ವಯಸ್ಸಾದ ಪ್ರಯಾಣಿಕರು ಇದ್ದರು” ಎಂದು ಅವರು ಹೇಳಿದ್ದಾರೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನ ಬಾಗಿಲನ್ನು ತೆರೆದ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯ ದೂರಿನ ಆಧಾರದ ಮೇಲೆ ಪೊಲೀಸರು ಈ ಹಿಂದೆ ಪ್ರಕರಣದ ದಾಖಲಿಸಿದ ಉದಾಹರಣೆಗಳಿವೆ. ಏಪ್ರಿಲ್ 2019 ರಲ್ಲಿ, ಬೆಂಗಳೂರು-ಲಕ್ನೋ ವಿಮಾನದಲ್ಲಿ ತುರ್ತು ನಿರ್ಗಮನದ ಬಳಿ ಕುಳಿತಿದ್ದ ಮೊದಲ ಬಾರಿಗೆ ವಿಮಾನಯಾನ ಮಾಡುವ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ಬಾಗಿಲನ್ನು ಕಿಟಕಿ ಎಂದು ತಪ್ಪಾಗಿ ಗ್ರಹಿಸಿ ಅದನ್ನು ತೆರೆದಿದ್ದರು. ನಂತರ ಅವರನ್ನು ಕೆಳಗಿಳಿಸಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಕರೆದೊಯ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಫೆಬ್ರವರಿ 2017 ರಲ್ಲಿ, ಮುಂಬೈನಿಂದ ಚಂಡೀಗಢಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ವಿಮಾನ ಟೇಕ್-ಆಫ್ ಮಾಡುವ ಮೊದಲು ತೆರೆದಿದ್ದರು. ಘಟನೆಯ ಹಿನ್ನಲೆ ಇಂಡಿಗೋ ಏರ್‌ಲೈನ್ಸ್ ನೀಡಿದ ದೂರಿನ ಆಧಾರದ ಮೇಲೆ ಇತರ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾಗಿತ್ತು.

“ವಿಮಾನದ ತುರ್ತು ನಿರ್ಗಮನವನ್ನು ತೆರೆಯುವುದು ಗಂಭೀರ ಉಲ್ಲಂಘನೆಯಾಗಿದೆ ಮತ್ತು ಇದು ಪ್ರಕರಣ ದಾಖಲಿಸಬಹುದಾದ ಘಟನೆಯಾಗಿದೆ” ಎಂದು ವಾಯುಯಾನ ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ಅವರು ಹೇಳಿದ್ದಾರೆ.

“ತುರ್ತು ನಿರ್ಗಮನ ಬಾಗಿಲನ್ನು ಮತ್ತೆ ಹೊಂದಿಸಬೇಕಾಗಿರುವುದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು ಮತ್ತು ದೂರು ಸಲ್ಲಿಸಬೇಕು. ಈ ಬಗ್ಗೆ ಡಿಜಿಸಿಎಗೆ ವರದಿ ಸಲ್ಲಿಸಬೇಕಿತ್ತು. ಪ್ರಯಾಣಿಕ ಕ್ಷಮೆಯಾಚಿಸಿದ ಕಾರಣ ಅಥವಾ ಅವರು ವಿಐಪಿ ಆಗಿರುವ ಕಾರಣ ಅದನ್ನು ಮುಚ್ಚಿಡಬಹುದಾದ ವಿಷಯವಲ್ಲ” ಎಂದು ಮೋಹನ್ ರಂಗನಾಥನ್ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕುಚೇಷ್ಠೆ; ಒಂದು ತಿಂಗಳ ನಂತರ ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...