Homeಮುಖಪುಟವಿಮಾನದಲ್ಲಿ ನಡೆದ ಘಟನೆ ಆಕಸ್ಮಿಕ, ಅದಕ್ಕಾಗಿ ‘ಕ್ಷಮೆ’ ಕೇಳಿದ್ದಾರೆ | ತೇಜಸ್ವಿ ಸೂರ್ಯ ಪರ ವಹಿಸಿದ...

ವಿಮಾನದಲ್ಲಿ ನಡೆದ ಘಟನೆ ಆಕಸ್ಮಿಕ, ಅದಕ್ಕಾಗಿ ‘ಕ್ಷಮೆ’ ಕೇಳಿದ್ದಾರೆ | ತೇಜಸ್ವಿ ಸೂರ್ಯ ಪರ ವಹಿಸಿದ ವಿಮಾನಯಾನ ಸಚಿವ

ತೇಜಸ್ವಿ ಸೂರ್ಯ ಅವರು ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಕುಚೇಷ್ಟೆ ಮಾಡಿದ್ದು, ನಿಯಮಗಳ ಗಂಭೀರ ಉಲ್ಲಂಘನೆ ಮಾಡಿದ್ದರು

- Advertisement -
- Advertisement -

ಕಳೆದ ಡಿಸೆಂಬರ್‌‌ನಲ್ಲಿ ಚೆನ್ನೈ ವಿಮಾನ ನಿಲ್ದಾಣದ ವಿಮಾನದೊಳಗಡೆ ಕುಚೇಷ್ಟೆ ಮಾಡಿದ್ದ ಸಂಸದ ತೇಜಸ್ವಿ ಸೂರ್ಯ ಅವರ ಪರವಾಗಿ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾತನಾಡಿದ್ದಾರೆ. ಘಟನೆಯು ಆಕಸ್ಮಿಕವಾಗಿ ನಡೆದಿದ್ದು, ಅದಕ್ಕಾಗಿ ಅವರು ಕ್ಷಮೆಯಾಚಿಸಿದ್ದಾರೆ ಎಂದು ಸಿಂಧಿಯಾ ಹೇಳಿದ್ದಾರೆ.

ಡಿಸೆಂಬರ್ 10 ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಇಂಗ್ಲಿಷ್‌ನ ಖ್ಯಾತ ಸುದ್ದಿ ಮಾಧ್ಯಮ ದಿ ನ್ಯೂಸ್ ಮಿನಿಟ್‌ ಈ ಬಗ್ಗೆ ವರದಿ ಮಾಡಿದ ನಂತರ ವಿಮಾನಯಾನ ಸಂಸ್ಥೆ ಇಂಡಿಗೋ ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿದೆ. ನ್ಯೂಸ್ ಮಿನಿಟ್‌ ತನ್ನ ವರದಿಯಲ್ಲಿ ತೇಜಸ್ವಿ ಸೂರ್ಯ ಅವರನ್ನು ಹೆಸರಿಸಿತ್ತೆ ವಿನಃ, ಇಂಡಿಗೋ ಹೇಳಿಕೆಯು ಯಾರನ್ನೂ ಹೆಸರಿಸಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆ ಬಗ್ಗೆ ಮಾತನಾಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, “ಸತ್ಯಗಳನ್ನು ನೋಡುವುದು ಬಹಳ ಮುಖ್ಯ. ವಿಮಾನವು ಇನ್ನೂ ನೆಲದ ಮೇಲೆ ಇದ್ದಾಗ ಅವರು ಆಕಸ್ಮಿಕವಾಗಿ ತುರ್ತು ನಿರ್ಗಮನ ಬಾಗಿಲು ತೆರೆದಿದ್ದಾರೆ. ಇದರ ನಂತರ ಎಲ್ಲಾ ತಪಾಸಣೆಯ ನಂತರ ವಿಮಾನವನ್ನು ಟೇಕ್ ಆಫ್ ಮಾಡಲು ಅನುಮತಿಸಲಾಯಿತು. ತನ್ನ ತಪ್ಪಿಗೆ ಅವರು ಕ್ಷಮೆಯನ್ನೂ ಕೇಳಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ಬಗ್ಗೆ ಸ್ವತಃ ತೇಜಸ್ವಿ ಸೂರ್ಯ ಅವರೇ ಪೈಲಟ್ ಮತ್ತು ಸಿಬ್ಬಂದಿಗೆ ತಿಳಿಸಿದ್ದಾರೆ. ಡಿಜಿಸಿಎ ತನಿಖೆ ನಡೆಸಿದಂತೆ ಸಂಪೂರ್ಣ ಪ್ರೋಟೋಕಾಲ್ ಅನುಸರಿಸಲಾಗಿದೆ. ಎಲ್ಲಾ ತಪಾಸಣೆಯ ನಂತರವೇ ವಿಮಾನ ಹಾರಾಡಿತ್ತು. ಘಟನೆಯಿಂದ ಉಂಟಾದ ವಿಳಂಬಕ್ಕೆ ಸೂರ್ಯ ಅವರೇ ಕ್ಷಮೆಯಾಚಿಸಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

“ಡಿಸೆಂಬರ್ 10, 2022 ರಂದು ಚೆನ್ನೈನಿಂದ ತಿರುಚಿರಾಪಳ್ಳಿಗೆ 6E 7339 ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಆಕಸ್ಮಿಕವಾಗಿ ತುರ್ತು ನಿರ್ಗಮನವನ್ನು ತೆರೆದರು. ಈ ಕ್ರಮಕ್ಕಾಗಿ ಆ ಪ್ರಯಾಣಿಕ ತಕ್ಷಣವೇ ಕ್ಷಮೆಯಾಚಿಸಿದರು. ನಿಯಮಗಳ ಪ್ರಕಾರ, ವಿಮಾನವು ಕಡ್ಡಾಯ ಎಂಜಿನಿಯರಿಂಗ್ ತಪಾಸಣೆಗೆ ಒಳಗಾಯಿತು. ಹೀಗಾಗಿ ವಿಮಾನವು ಪ್ರಯಾಣಿಸಲು ವಿಳಂಬವಾಯಿತು” ಎಂದು ಇಂಡಿಗೋ ಏರ್‌ಲೈನ್ ಹೇಳಿದೆ.

ತುರ್ತು ಬಾಗಿಲು ತೆರೆದ ಕಾರಣಕ್ಕೆ ವಿಮಾನದಲ್ಲಿದ್ದ ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ, ನಂತರ ಸಂಪೂರ್ಣ ತಪಾಸಣೆಗೆ ಒಳಗಾಗಬೇಕಾಗಿತ್ತು. ಹೀಗಾಗಿ ವಿಮಾನವೂ ಪ್ರಯಾಣವೂ ಎರಡು ಗಂಟೆಗಳ ಕಾಲ ವಿಳಂಬವಾಗಿದೆ ಎಂದು ವರದಿಯಾಗಿದೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನಗಳನ್ನು ತೆರೆದ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಯು ಪೊಲೀಸ್ ದೂರು ದಾಖಲಿಸಿರುವ ಘಟನೆ ಈ ಹಿಂದೆ ಹಲವು ಬಾರಿ ನಡೆದಿತ್ತು. ಆದರೆ ತೇಜಸ್ವಿ ಸೂರ್ಯ ಪ್ರಕರಣದಲ್ಲಿ ಘಟನೆ ನಡೆದು ಒಂದು ತಿಂಗಳು ಕಳೆದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾನು ಎಸಗಿದ ಕಿಡಿಗೇಡಿತನದ ಬಗ್ಗೆ ನಂತರ ಸಂಸದ ತೇಜಸ್ವಿ ಸೂರ್ಯ ಅವರು ಲಿಖಿತ ಕ್ಷಮಾಪಣೆ ಪತ್ರವನ್ನು ಬರೆದಿದ್ದಾರೆ ಎಂದು ವರದಿಯಾಗಿದೆ. ಆದರೂ ವಿಮಾನಯಾನ ಸಂಸ್ಥೆಯ ಅವರ ವಿರುದ್ಧ ಯಾವುದೇ ಹೆಚ್ಚಿನ ತನಿಖೆಯನ್ನು ನಡೆಸದೆ, ಅದೇ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಸಂಸದನ ಕುಚೇಷ್ಠೆಯ ಸುದ್ದಿ ವೈರಲ್ ಆಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.

ಏರ್‌ಕ್ರಾಫ್ಟ್ ನಿಯಮ, 1937 ರ ಷರತ್ತು 22 (ಬಿ) ಪ್ರಕಾರ, ವಿಮಾನದ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶಕ್ಕಾಗಿ ಹಾಗೂ ವಿಮಾನದಲ್ಲಿ ಉತ್ತಮ ಕ್ರಮ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವ ಉದ್ದೇಶಕ್ಕಾಗಿ ವಿಮಾನದಲ್ಲಿ ಪ್ರಯಾಣಿಸುವ ಯಾವುದೇ ವ್ಯಕ್ತಿ, ಪೈಲಟ್-ಇನ್-ಕಮಾಂಡ್ ಪರವಾಗಿ ಸಿಬ್ಬಂದಿ ನೀಡಿದ ಕಾನೂನುಬದ್ಧ ಸೂಚನೆಯನ್ನು ಅನುಸರಿಸಲು ನಿರಾಕರಿಸಬಾರದು.

ಷರತ್ತು 23(1)(ಬಿ), ಯಾವುದೇ ಆಸ್ತಿಗೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಅಥವಾ ನಾಶಪಡಿಸುವ ಮೂಲಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅಥವಾ ಉತ್ತಮ ಸುವ್ಯವಸ್ಥೆ – ಶಿಸ್ತಿಗೆ ಅಪಾಯವನ್ನುಂಟುಮಾಡುವ ಆಕ್ರಮಣ ಮತ್ತು ಇತರ ಕೃತ್ಯಗಳ ಕುರಿತು ಮಾತನಾಡುತ್ತದೆ.

ಸಂಸದರು ತುರ್ತು ನಿರ್ಗಮನದ ಬಾಗಿಲು ತೆರೆದಾಗ ಪ್ರಯಾಣಿಕರು ಭಯಭೀತರಾಗಿದ್ದರು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ. “ಅದೃಷ್ಟವಶಾತ್ ವಿಮಾನವು ನೆಲದ ಮೇಲೆ ಇದ್ದಾಗ ಇದು ಸಂಭವಿಸಿದೆ. ಈ ರೀತಿಯ ಘಟನೆ ವಿಮಾನ ಹಾರಾಡುತ್ತಾ ಇರಬೇಕಾದರೆ ಏನಾದರೂ ಸಂಭವಿಸಿದ್ದರೆ, ಪರಿಸ್ಥಿತಿ ನಿಜವಾಗಿಯೂ ಕೆಟ್ಟದಾಗಿರುತ್ತಿತ್ತು” ಎಂದು ವಿಮಾನಯಾನ ಸಿಬ್ಬಂದಿ ನಮಗೆ ಹೇಳಿದರು ಎಂದು ಪ್ರಯಾಣಿಕ ಹೇಳಿದ್ದಾರೆ. “ವಿಮಾನದಲ್ಲಿ ಗಾಲಿಕುರ್ಚಿಯ ಸಹಾಯದಿಂದ ಓಡಾಡುವ ಸಾಕಷ್ಟು ವಯಸ್ಸಾದ ಪ್ರಯಾಣಿಕರು ಇದ್ದರು” ಎಂದು ಅವರು ಹೇಳಿದ್ದಾರೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನ ಬಾಗಿಲನ್ನು ತೆರೆದ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯ ದೂರಿನ ಆಧಾರದ ಮೇಲೆ ಪೊಲೀಸರು ಈ ಹಿಂದೆ ಪ್ರಕರಣದ ದಾಖಲಿಸಿದ ಉದಾಹರಣೆಗಳಿವೆ. ಏಪ್ರಿಲ್ 2019 ರಲ್ಲಿ, ಬೆಂಗಳೂರು-ಲಕ್ನೋ ವಿಮಾನದಲ್ಲಿ ತುರ್ತು ನಿರ್ಗಮನದ ಬಳಿ ಕುಳಿತಿದ್ದ ಮೊದಲ ಬಾರಿಗೆ ವಿಮಾನಯಾನ ಮಾಡುವ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ಬಾಗಿಲನ್ನು ಕಿಟಕಿ ಎಂದು ತಪ್ಪಾಗಿ ಗ್ರಹಿಸಿ ಅದನ್ನು ತೆರೆದಿದ್ದರು. ನಂತರ ಅವರನ್ನು ಕೆಳಗಿಳಿಸಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಕರೆದೊಯ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಫೆಬ್ರವರಿ 2017 ರಲ್ಲಿ, ಮುಂಬೈನಿಂದ ಚಂಡೀಗಢಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ವಿಮಾನ ಟೇಕ್-ಆಫ್ ಮಾಡುವ ಮೊದಲು ತೆರೆದಿದ್ದರು. ಘಟನೆಯ ಹಿನ್ನಲೆ ಇಂಡಿಗೋ ಏರ್‌ಲೈನ್ಸ್ ನೀಡಿದ ದೂರಿನ ಆಧಾರದ ಮೇಲೆ ಇತರ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾಗಿತ್ತು.

“ವಿಮಾನದ ತುರ್ತು ನಿರ್ಗಮನವನ್ನು ತೆರೆಯುವುದು ಗಂಭೀರ ಉಲ್ಲಂಘನೆಯಾಗಿದೆ ಮತ್ತು ಇದು ಪ್ರಕರಣ ದಾಖಲಿಸಬಹುದಾದ ಘಟನೆಯಾಗಿದೆ” ಎಂದು ವಾಯುಯಾನ ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ಅವರು ಹೇಳಿದ್ದಾರೆ.

“ತುರ್ತು ನಿರ್ಗಮನ ಬಾಗಿಲನ್ನು ಮತ್ತೆ ಹೊಂದಿಸಬೇಕಾಗಿರುವುದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು ಮತ್ತು ದೂರು ಸಲ್ಲಿಸಬೇಕು. ಈ ಬಗ್ಗೆ ಡಿಜಿಸಿಎಗೆ ವರದಿ ಸಲ್ಲಿಸಬೇಕಿತ್ತು. ಪ್ರಯಾಣಿಕ ಕ್ಷಮೆಯಾಚಿಸಿದ ಕಾರಣ ಅಥವಾ ಅವರು ವಿಐಪಿ ಆಗಿರುವ ಕಾರಣ ಅದನ್ನು ಮುಚ್ಚಿಡಬಹುದಾದ ವಿಷಯವಲ್ಲ” ಎಂದು ಮೋಹನ್ ರಂಗನಾಥನ್ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕುಚೇಷ್ಠೆ; ಒಂದು ತಿಂಗಳ ನಂತರ ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...