Homeಮುಖಪುಟಪುಲ್ವಾಮಾ ಮಾದರಿಯ ಮತ್ತೊಂದು ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೈನಿಕರು

ಪುಲ್ವಾಮಾ ಮಾದರಿಯ ಮತ್ತೊಂದು ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೈನಿಕರು

ಹಣ್ಣಿನ ತೋಟದಲ್ಲಿ ಸಿಂಟೆಕ್ಸ್ ಟ್ಯಾಂಕ್ ಒಂದನ್ನು ಹೂಳಲಾಗಿತ್ತು. ಆ ನೀರಿನ ತೊಟ್ಟಿಯಲ್ಲಿ ಸುಮಾರು 52 ಕಿಲೋಗ್ರಾಂಗಳಷ್ಟು ಸ್ಫೋಟಕಗಳು, ಗುರುವಾರ ಬೆಳಿಗ್ಗೆ 8 ಗಂಟೆಗೆ ಗಡಿಕಲ್‌ನ ಕರೇವಾ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಗಿವೆ.

- Advertisement -
- Advertisement -

ಕಳೆದ ವರ್ಷದ ಪುಲ್ವಾಮ ಘಟನೆ ನಡೆದ ಹೆದ್ದಾರಿಯ ಬಳಿ 52 ಕೆ.ಜಿ ಗಳಷ್ಟು ಸ್ಫೋಟಕಗಳನ್ನು ಪತ್ತೆಹಚ್ಚಿರುವ ಭಾರತೀಯ ಸೈನಿಕರು, ಮತ್ತೊಂದು ಪುಲ್ವಾಮಾ ದಾಳಿಯನ್ನು ತಪ್ಪಿಸಿದ್ದಾರೆ.

“ಹಣ್ಣಿನ ತೋಟದಲ್ಲಿ ಸಿಂಟೆಕ್ಸ್ ಟ್ಯಾಂಕ್ ಒಂದನ್ನು ಹೂಳಲಾಗಿತ್ತು. ಆ ನೀರಿನ ತೊಟ್ಟಿಯಲ್ಲಿ ಸುಮಾರು 52 ಕಿಲೋಗ್ರಾಂಗಳಷ್ಟು ಸ್ಫೋಟಕಗಳು ಸಿಕ್ಕಿದ್ದು, ಇವು, ಗುರುವಾರ ಬೆಳಿಗ್ಗೆ 8 ಗಂಟೆಗೆ ಗಡಿಕಲ್‌ನ ಕರೇವಾ ಪ್ರದೇಶದಲ್ಲಿ ನಡೆದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಗಿವೆ. ತಲಾ 125 ಗ್ರಾಂ ಹೊಂದಿರುವ ಒಟ್ಟು 416 ಪ್ಯಾಕೆಟ್ ಸ್ಫೋಟಕಗಳಿದ್ದವು” ಎಂದು ಸೇನೆಯು ಹೇಳಿಕೆ ನಿಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸ್ಫೋಟಕಗಳನ್ನು “ಸೂಪರ್ 90” ಎಂದು ಅಧಿಕಾರಿಗಳು ಗುರುತಿಸಿದ್ದು, ಅವು ಪತ್ತೆಯಾದ ಸ್ಥಳವು ಹೆದ್ದಾರಿಗೆ ಬಹಳ ಹತ್ತಿರದಲ್ಲಿದೆ ಮತ್ತು 2019 ರ ಪುಲ್ವಾಮಾ ದಾಳಿ ಸ್ಥಳದಿಂದ 9 ಕಿ.ಮೀ. ದೂರದಲ್ಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ಬಳಿ 2019ರ ಮಾದರಿಯ ಸ್ಪೋಟಕ ದಾಳಿಯನ್ನು ವಿಫಲಗೊಳಿಸಿದ ಭದ್ರತಾ ಪಡೆ

ಕಳೆದ ವರ್ಷ ಫೆಬ್ರವರಿ 14 ರಂದು, ಸ್ಫೋಟಕಗಳನ್ನು ಹೊತ್ತ ಕಾರೊಂದು ಸಿಆರ್‌ಪಿಎಫ್ ಸೈನಿಕರಿದ್ದ ವಾಹನಕ್ಕೆ ಡಿಕ್ಕಿಹೊಡೆದ ಪರಿಣಾಮ 40 ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು. ಜೆಲಾಟಿನ್ ಸ್ಟಿಕ್‌ಗಳ ಜೊತೆಗೆ ಸುಮಾರು 35 ಕೆಜಿ ಆರ್‌ಡಿಎಕ್ಸ್ ಪ್ಲಾಸ್ಟಿಕ್ ಸ್ಫೋಟಕಗಳನ್ನು ದಾಳಿಯಲ್ಲಿ ಬಳಸಲಾಗಿತ್ತು.

ಪುಲ್ವಾಮಾ ದಾಳಿಯ ಹಿಂದಿನ ಪ್ರಮುಖ ಸಂಚುಕೋರ ಮಸೂದ್ ಅಜರ್. ಈತ ಈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದು, ಆತನ ಇಬ್ಬರು ಸಹೋದರರಾದ ರೌಫ್ ಅಜ್ಗರ್ ಮತ್ತು ಮೊಹಮ್ಮದ್ ಅಮ್ಮರ್ ಕೂಡ ಈ ಸಂಚಿನಲ್ಲಿ ಭಾಗವಹಿಸಿದ್ದರು ಎಂದು ಎಎನ್‌ಐ ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದೆ.

ಇದನ್ನೂ ಓದಿ: ಪುಲ್ವಾಮ ದಾಳಿ: ಬರೋಬ್ಬರಿ 18 ತಿಂಗಳ ನಂತರ ಚಾರ್ಜ್‌ಶೀಟ್‌ ಸಲ್ಲಿಸಿದ ಎನ್‌‌ಐಎ

ಮೊಹಮ್ಮದ್ ಉಮರ್ ಫಾರೂಕ್ ಈ ಪ್ರಕರಣದ ಪ್ರಮುಖ ಸಂಚುಕೋರ ಎಂದು ಅದು ತಿಳಿಸಿದೆ. ಈತನೆ ಆರ್‌ಡಿಎಕ್ಸ್ ಸ್ಫೋಟಕಗಳನ್ನ ಪಾಕಿಸ್ತಾನದ ಗಡಿಯಿಂದ ಕಾಶ್ಮೀರಕ್ಕೆ ತಂದಿದ್ದು, ದಾಳಿಗೆ ಬೇಕಾಗಿದ್ದ ಐಇಡಿ ಬಾಂಬ್‌ಗಳನ್ನು ಸ್ಥಳೀಯವಾಗಿ ತಯಾರಿಸಲು ಈತನ ಪಾತ್ರ ಇದೆ ಎನ್ನಲಾಗಿದೆ.

13,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಜೈಶ್ ಭಯೋತ್ಪಾದಕರು ಮತ್ತೊಂದು ದಾಳಿ ನಡೆಸಲು ಯೋಜಿಸಿದ್ದಾರೆ ಮತ್ತು ಫಿಡಾಯೀನ್ ಅಥವಾ ಆತ್ಮಾಹುತಿ ಬಾಂಬರ್‌ಗಳನ್ನು ಸಹ ಸಿದ್ಧಪಡಿಸಿದ್ದಾರೆ ಎಂದು ತಿಳಿಸಿತ್ತು. ಆದರೆ ಬಾಲಕೋಟ್‌ನಲ್ಲಿ ಭಾರತದ ವಾಯುದಾಳಿಯಿಂದ ಅದಕ್ಕೆ ತಡೆಯೊಡ್ಡಿದರು.

ಅದಾಗ್ಯೂ, ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿತ್ತು. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಾಹುತಿ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು ಎಂದು ಕೆಲವು ಆರೋಪಗಳು ಕೇಳಿಬಂದಿದೆ.

ಇದನ್ನೂ ಓದಿ: ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ ವರ್ಷ ತುಂಬಿದ ಸಂದರ್ಭದಲ್ಲಿ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರಕ್ಕೆ 3 ಪ್ರಶ್ನೆಗಳನ್ನು ಕೇಳಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ “ಇಂದು ನಾವು ಪುಲ್ವಾಮಾ ದಾಳಿಯಲ್ಲಿ ನಮ್ಮ 40 ಸಿಆರ್‌ಪಿಎಫ್ ಹುತಾತ್ಮರನ್ನು ನೆನಪಿಸಿಕೊಳ್ಳುತ್ತಾ, ಕೆಲವು ಪ್ರಶ್ನೆಗಳನ್ನು ಕೇಳೋಣ:

1. ದಾಳಿಯಿಂದ ಹೆಚ್ಚು ಲಾಭ ಪಡೆದವರು ಯಾರು?

2. ದಾಳಿಯ ವಿಚಾರಣೆಯ ಫಲಿತಾಂಶ ಏನು?

3. ಭದ್ರತಾ ಲೋಪ ಎಸಗುವ ಮೂಲಕ ದಾಳಿಗೆ ಅವಕಾಶ ನೀಡಿದ್ದಕ್ಕಾಗಿ ಬಿಜೆಪಿ ಸರ್ಕಾರದಲ್ಲಿ ಯಾರು ಹೊಣೆಗಾರರಾಗಿದ್ದಾರೆ?” ಎಂದು ಪ್ರಶ್ನೆ ಮಾಡಿದ್ದರು.

ಅಷ್ಟೇ ಅಲ್ಲದೆ, ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಮತ್ತು ಫೆಬ್ರುವರಿ 7ರಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲ ನೀಡಿದ ಅಂಕಿಅಂಶಗಳ ಪ್ರಕಾರ, 2014-18ರ ಅವಧಿಯಲ್ಲಿ ಸೈನಿಕರ ಹತ್ಯೆ, ನಾಗರಿಕರ ಹತ್ಯೆ ಪ್ರಮಾಣ ಏರಿಕೆಯಾಗಿದೆ. 2014-18ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 1,708 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಹಾಗೆಯೇ ಉಗ್ರ ನುಸುಳುವಿಕೆ ಪ್ರಮಾಣವೂ ಹೆಚ್ಚಿದೆ ಎಂಬುದು ಗಮನಹರಿಸಬೇಕಾದ ಅಂಶವಾಗಿದೆ.


ಇದನ್ನೂ ಓದಿ: ಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ ‘ಪಾಲಿಸಿ’ಯೇ ಕಾರಣ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...