Homeಮುಖಪುಟಪುಲ್ವಾಮಾ ಮಾದರಿಯ ಮತ್ತೊಂದು ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೈನಿಕರು

ಪುಲ್ವಾಮಾ ಮಾದರಿಯ ಮತ್ತೊಂದು ದಾಳಿಯನ್ನು ವಿಫಲಗೊಳಿಸಿದ ಭಾರತೀಯ ಸೈನಿಕರು

ಹಣ್ಣಿನ ತೋಟದಲ್ಲಿ ಸಿಂಟೆಕ್ಸ್ ಟ್ಯಾಂಕ್ ಒಂದನ್ನು ಹೂಳಲಾಗಿತ್ತು. ಆ ನೀರಿನ ತೊಟ್ಟಿಯಲ್ಲಿ ಸುಮಾರು 52 ಕಿಲೋಗ್ರಾಂಗಳಷ್ಟು ಸ್ಫೋಟಕಗಳು, ಗುರುವಾರ ಬೆಳಿಗ್ಗೆ 8 ಗಂಟೆಗೆ ಗಡಿಕಲ್‌ನ ಕರೇವಾ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಗಿವೆ.

- Advertisement -
- Advertisement -

ಕಳೆದ ವರ್ಷದ ಪುಲ್ವಾಮ ಘಟನೆ ನಡೆದ ಹೆದ್ದಾರಿಯ ಬಳಿ 52 ಕೆ.ಜಿ ಗಳಷ್ಟು ಸ್ಫೋಟಕಗಳನ್ನು ಪತ್ತೆಹಚ್ಚಿರುವ ಭಾರತೀಯ ಸೈನಿಕರು, ಮತ್ತೊಂದು ಪುಲ್ವಾಮಾ ದಾಳಿಯನ್ನು ತಪ್ಪಿಸಿದ್ದಾರೆ.

“ಹಣ್ಣಿನ ತೋಟದಲ್ಲಿ ಸಿಂಟೆಕ್ಸ್ ಟ್ಯಾಂಕ್ ಒಂದನ್ನು ಹೂಳಲಾಗಿತ್ತು. ಆ ನೀರಿನ ತೊಟ್ಟಿಯಲ್ಲಿ ಸುಮಾರು 52 ಕಿಲೋಗ್ರಾಂಗಳಷ್ಟು ಸ್ಫೋಟಕಗಳು ಸಿಕ್ಕಿದ್ದು, ಇವು, ಗುರುವಾರ ಬೆಳಿಗ್ಗೆ 8 ಗಂಟೆಗೆ ಗಡಿಕಲ್‌ನ ಕರೇವಾ ಪ್ರದೇಶದಲ್ಲಿ ನಡೆದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಗಿವೆ. ತಲಾ 125 ಗ್ರಾಂ ಹೊಂದಿರುವ ಒಟ್ಟು 416 ಪ್ಯಾಕೆಟ್ ಸ್ಫೋಟಕಗಳಿದ್ದವು” ಎಂದು ಸೇನೆಯು ಹೇಳಿಕೆ ನಿಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸ್ಫೋಟಕಗಳನ್ನು “ಸೂಪರ್ 90” ಎಂದು ಅಧಿಕಾರಿಗಳು ಗುರುತಿಸಿದ್ದು, ಅವು ಪತ್ತೆಯಾದ ಸ್ಥಳವು ಹೆದ್ದಾರಿಗೆ ಬಹಳ ಹತ್ತಿರದಲ್ಲಿದೆ ಮತ್ತು 2019 ರ ಪುಲ್ವಾಮಾ ದಾಳಿ ಸ್ಥಳದಿಂದ 9 ಕಿ.ಮೀ. ದೂರದಲ್ಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ಬಳಿ 2019ರ ಮಾದರಿಯ ಸ್ಪೋಟಕ ದಾಳಿಯನ್ನು ವಿಫಲಗೊಳಿಸಿದ ಭದ್ರತಾ ಪಡೆ

ಕಳೆದ ವರ್ಷ ಫೆಬ್ರವರಿ 14 ರಂದು, ಸ್ಫೋಟಕಗಳನ್ನು ಹೊತ್ತ ಕಾರೊಂದು ಸಿಆರ್‌ಪಿಎಫ್ ಸೈನಿಕರಿದ್ದ ವಾಹನಕ್ಕೆ ಡಿಕ್ಕಿಹೊಡೆದ ಪರಿಣಾಮ 40 ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು. ಜೆಲಾಟಿನ್ ಸ್ಟಿಕ್‌ಗಳ ಜೊತೆಗೆ ಸುಮಾರು 35 ಕೆಜಿ ಆರ್‌ಡಿಎಕ್ಸ್ ಪ್ಲಾಸ್ಟಿಕ್ ಸ್ಫೋಟಕಗಳನ್ನು ದಾಳಿಯಲ್ಲಿ ಬಳಸಲಾಗಿತ್ತು.

ಪುಲ್ವಾಮಾ ದಾಳಿಯ ಹಿಂದಿನ ಪ್ರಮುಖ ಸಂಚುಕೋರ ಮಸೂದ್ ಅಜರ್. ಈತ ಈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದು, ಆತನ ಇಬ್ಬರು ಸಹೋದರರಾದ ರೌಫ್ ಅಜ್ಗರ್ ಮತ್ತು ಮೊಹಮ್ಮದ್ ಅಮ್ಮರ್ ಕೂಡ ಈ ಸಂಚಿನಲ್ಲಿ ಭಾಗವಹಿಸಿದ್ದರು ಎಂದು ಎಎನ್‌ಐ ಇತ್ತೀಚೆಗೆ ಚಾರ್ಜ್‌ಶೀಟ್ ಸಲ್ಲಿಸಿದೆ.

ಇದನ್ನೂ ಓದಿ: ಪುಲ್ವಾಮ ದಾಳಿ: ಬರೋಬ್ಬರಿ 18 ತಿಂಗಳ ನಂತರ ಚಾರ್ಜ್‌ಶೀಟ್‌ ಸಲ್ಲಿಸಿದ ಎನ್‌‌ಐಎ

ಮೊಹಮ್ಮದ್ ಉಮರ್ ಫಾರೂಕ್ ಈ ಪ್ರಕರಣದ ಪ್ರಮುಖ ಸಂಚುಕೋರ ಎಂದು ಅದು ತಿಳಿಸಿದೆ. ಈತನೆ ಆರ್‌ಡಿಎಕ್ಸ್ ಸ್ಫೋಟಕಗಳನ್ನ ಪಾಕಿಸ್ತಾನದ ಗಡಿಯಿಂದ ಕಾಶ್ಮೀರಕ್ಕೆ ತಂದಿದ್ದು, ದಾಳಿಗೆ ಬೇಕಾಗಿದ್ದ ಐಇಡಿ ಬಾಂಬ್‌ಗಳನ್ನು ಸ್ಥಳೀಯವಾಗಿ ತಯಾರಿಸಲು ಈತನ ಪಾತ್ರ ಇದೆ ಎನ್ನಲಾಗಿದೆ.

13,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಜೈಶ್ ಭಯೋತ್ಪಾದಕರು ಮತ್ತೊಂದು ದಾಳಿ ನಡೆಸಲು ಯೋಜಿಸಿದ್ದಾರೆ ಮತ್ತು ಫಿಡಾಯೀನ್ ಅಥವಾ ಆತ್ಮಾಹುತಿ ಬಾಂಬರ್‌ಗಳನ್ನು ಸಹ ಸಿದ್ಧಪಡಿಸಿದ್ದಾರೆ ಎಂದು ತಿಳಿಸಿತ್ತು. ಆದರೆ ಬಾಲಕೋಟ್‌ನಲ್ಲಿ ಭಾರತದ ವಾಯುದಾಳಿಯಿಂದ ಅದಕ್ಕೆ ತಡೆಯೊಡ್ಡಿದರು.

ಅದಾಗ್ಯೂ, ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿತ್ತು. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಾಹುತಿ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು ಎಂದು ಕೆಲವು ಆರೋಪಗಳು ಕೇಳಿಬಂದಿದೆ.

ಇದನ್ನೂ ಓದಿ: ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ ವರ್ಷ ತುಂಬಿದ ಸಂದರ್ಭದಲ್ಲಿ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರಕ್ಕೆ 3 ಪ್ರಶ್ನೆಗಳನ್ನು ಕೇಳಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ “ಇಂದು ನಾವು ಪುಲ್ವಾಮಾ ದಾಳಿಯಲ್ಲಿ ನಮ್ಮ 40 ಸಿಆರ್‌ಪಿಎಫ್ ಹುತಾತ್ಮರನ್ನು ನೆನಪಿಸಿಕೊಳ್ಳುತ್ತಾ, ಕೆಲವು ಪ್ರಶ್ನೆಗಳನ್ನು ಕೇಳೋಣ:

1. ದಾಳಿಯಿಂದ ಹೆಚ್ಚು ಲಾಭ ಪಡೆದವರು ಯಾರು?

2. ದಾಳಿಯ ವಿಚಾರಣೆಯ ಫಲಿತಾಂಶ ಏನು?

3. ಭದ್ರತಾ ಲೋಪ ಎಸಗುವ ಮೂಲಕ ದಾಳಿಗೆ ಅವಕಾಶ ನೀಡಿದ್ದಕ್ಕಾಗಿ ಬಿಜೆಪಿ ಸರ್ಕಾರದಲ್ಲಿ ಯಾರು ಹೊಣೆಗಾರರಾಗಿದ್ದಾರೆ?” ಎಂದು ಪ್ರಶ್ನೆ ಮಾಡಿದ್ದರು.

ಅಷ್ಟೇ ಅಲ್ಲದೆ, ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಮತ್ತು ಫೆಬ್ರುವರಿ 7ರಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲ ನೀಡಿದ ಅಂಕಿಅಂಶಗಳ ಪ್ರಕಾರ, 2014-18ರ ಅವಧಿಯಲ್ಲಿ ಸೈನಿಕರ ಹತ್ಯೆ, ನಾಗರಿಕರ ಹತ್ಯೆ ಪ್ರಮಾಣ ಏರಿಕೆಯಾಗಿದೆ. 2014-18ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 1,708 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಹಾಗೆಯೇ ಉಗ್ರ ನುಸುಳುವಿಕೆ ಪ್ರಮಾಣವೂ ಹೆಚ್ಚಿದೆ ಎಂಬುದು ಗಮನಹರಿಸಬೇಕಾದ ಅಂಶವಾಗಿದೆ.


ಇದನ್ನೂ ಓದಿ: ಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ ‘ಪಾಲಿಸಿ’ಯೇ ಕಾರಣ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...