Homeಚಳವಳಿಕೀಳು ನನ್ನ 'ಜಾತಿ' ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ...!

ಕೀಳು ನನ್ನ ‘ಜಾತಿ’ ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ…!

'ಜಾತಿ' ಕುರಿತು ಕನ್ನಡದ ಮೊದಲ ಹಿಪ್‌‌ಹಾಪ್ ರ್‍ಯಾಪ್ ಸಾಂಗ್ ಮಾಡಿರುವ ಹರೀಶ್ ಅವರು ಈಗ ಕೊರೊನಾ ಕಾಲದಲ್ಲಿ ಬಡಜನರು ಅನುಭವಿಸಿದ ಸಂಕಷ್ಟ ಹಾಗೂ ಸರ್ಕಾರದ ಕರಾಳ ನೀತಿಯ ಬಗ್ಗೆ 'ಮಾಹಾಮಾರಿ ಕಥೆ' ಎನ್ನುವ ಹಿಪ್‌‌ಹಾಪ್ ಹಾಡಿನಲ್ಲಿ ಅದ್ಭುತವಾಗಿ ಬಿಚ್ಚಿಟ್ಟಿದ್ದಾರೆ.

- Advertisement -
- Advertisement -

ನೀವು ಫೇಸ್ ಬುಕ್,ಯೂಟ್ಯೂಬ್ ಬಳಕೆದಾರರಾಗಿದ್ದರೆ ಹರೀಶ್ ಕಾಂಬಳೆ ಎನ್ನುವ ಹೆಸರಿನ ಅಕೌಂಟ್ ಇದೆ. ಹರೀಶ್ ಅವರು ವರ್ಷದ ಹಿಂದೆ ಯುಟ್ಯೂಬ್‌ಗೆ ಸೇರಿಸಿದ ಕೇವಲ ಮೂರು ನಿಮಿಷದ ಒಂದು ವಿಡಿಯೋ ತುಣುಕು ಹಾಡು ಈಗ ಎಲ್ಲೆಡೆ  ಸಕ್ಕತ್ ಸೌಂಡ್ ಮಾಡ್ತಿದೆ. ಸಾಹಿತ್ಯ ತನ್ನದೇ, ಆದರೆ ಇಂದಿನ ಯುವ ಜನತೆಯನ್ನು ಆಕರ್ಷಿಸಲು ಹೊಸ ಮ್ಯೂಸಿಕ್ ಆಯ್ದು ವಿಶಿಷ್ಟವಾಗಿ ಪ್ರಯತ್ನಿಸಿದ್ದಾರೆ.

“ನಿ ಬಿಟ್ಟು ಕೊಡು ಜಾತಿ
ನಾನು ಬಿಡುವೆ ಮೀಸಲಾತಿ
ಹೇಳು ಏಕೆ ಸುಮ್ಮನಾದೆ
ನಿನಗೆ ಇಲ್ವಾ ಮಂಜೂರಾತಿ
ರಣನೀತಿ ಪ್ರಖ್ಯಾತಿ

ಕೀಳು ನನ್ನ ಜಾತಿ ಅಲ್ಲ
ಕೀಳು ನಿನ್ನ ಬುದ್ಧಿಮಟ್ಟ
ಜಾತಿ ನಿನಗೆ ಮುಖ್ಯ”

ಇದನ್ನೂ ಓದಿ: PC: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

‘ಜಾತಿ’ ಎನ್ನುವ ಶೀರ್ಷಿಕೆಯಲ್ಲಿ ಹರೀಶ್ ಅವರು ರಚಿಸಿದ ಹಾಡಿನ ಈ ಮೇಲಿನ ಸಾಲುಗಳು ಸಮಾಜದಲ್ಲಿರುವ ಅನ್ಯಾಯ, ಅತ್ಯಾಚಾರ, ದೌರ್ಜನ್ಯ, ಜಾತಿಯ ಭೀಕರತೆ ಬಿಚ್ಚಿಡುತ್ತವೆ. ಹರೀಶ್ ಅವರು ರಚಿಸಿ ಹಾಡಿರುವ ಹಾಡು ಕನ್ನಡ ಸಂಗೀತ ಕ್ಷೇತ್ರದಲ್ಲಿಯೇ ಪ್ರಪ್ರಥಮ ‘ಜಾತಿ’ Hip-hop Rap ಹಾಡು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಹರೀಶ್ ಅವರ ವಿನೂತನ ದೃಷ್ಟಿಕೋನದ ಫಲವಾಗಿ ಇಂದು ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಕಲ್ಯಾಣ ಕರ್ನಾಟಕದ ಹೆಮ್ಮೆಯ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹತ್ಯಾಳ ಎನ್ನುವ ಪುಟ್ಟ ಗ್ರಾಮದವರಾದ ಹರೀಶ್ ಕಾಂಬಳೆ ಅವರು ಮೂಲತಃ ಕೃಷಿ ಕುಟುಂಬದವರು. ಬಿ.ಎಸ್ಸಿ. ಬಿ.ಇಡ್. ಪದವಿಧರರಾದ ಹರೀಶ್ ಅವರು ಸ್ವಗ್ರಾಮದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದಾರೆ. ‘ನನಗೆ ಕಾಲೇಜು ದಿನಗಳಿಂದಲೂ ಕವಿತೆ ಬರೆಯುವುದು, ಸಂಗೀತದ ಮೇಲೆ ಹೆಚ್ಚಿನ ಹವ್ಯಾಸ ಇದೆ. ಹಾಗೇ ಬುದ್ಧ ಬಸವ ಅಂಬೇಡ್ಕರ್ ಸೇರಿದಂತೆ ಸಮಾಜದ ಉನ್ನತಿಗಾಗಿ ಶ್ರಮಿಸಿದ ಮಹಾತ್ಮರ ಪುಸ್ತಕಗಳನ್ನು ಓದುವ ಆಸಕ್ತಿ ಇದೆ’ ಎನ್ನುತ್ತಾರೆ ಹರೀಶ್.

ಹರೀಶ್ ಅವರು ಪ್ರೀತಿ – ಪ್ರೇಮ, ನಾಡು -ನುಡಿಯ ಬಗ್ಗೆ ಕವಿತೆಗಳು ಬರೆಯಲು ಹಾಡುಗಾರಿಕೆ ಮಾಡಲು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಸಮಾಜವನ್ನು ಸೂಕ್ಷ್ಮವಾಗಿ ಗೃಹಿಸಿ ‘ಕಂಡದ್ದು ಕಂಡಹಾಗೇ’ ಹೇಳುವ ಧೈರ್ಯ ಬೆಳೆಸಿಕೊಂಡಿದ್ದಾರೆ. ತಮ್ಮ ವೈಯಕ್ತಿಕ ಅನುಭವ ಜೊತೆಗೆ ಸಮಕಾಲೀನ ಸಮಾಜದ ಅವಸ್ಥೆಯ ವಿರುದ್ಧ ‘ಬಂಡಾಯ ಸಾಹಿತ್ಯ’ ರಚಿಸುವ ಮೂಲಕ ತಮ್ಮದೇ ಶೈಲಿಯ ವಿಭಿನ್ನವಾದ ಪದ ಜೋಡಣೆ, ಹಾಡುಗಾರಿಕೆಯ ಸಾಹಸ ಮಾಡುತ್ತಿದ್ದಾರೆ.

PC: Harish Kamble/Facebook

ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಕಾಯಕ ಭೂಮಿಯ ನೆಲದವರಾದ ಹರೀಶ್ ಅವರಿಗೆ ಶರಣರ ‘ವಚನ ಕ್ರಾಂತಿ’ಯ ಬಗ್ಗೆ ಬಹಳ ಹೆಮ್ಮೆ ಇದೆ. ‘ಅಂದು ಶೋಷಣೆಗೆ ಒಳಪಟ್ಟ ಅನೇಕ ಶ್ರಮಿಕ ವರ್ಗದವರು ಮುಂದೆ ವಚನಕಾರರಾಗಿ ಅಸಮಾನತೆ, ಶೋಷಣೆ ಸಮಾಜದ ವಿರುದ್ಧ ದನಿಯಾಗಿ ಸಮ ಸಮಾಜ ಸ್ಥಾಪನೆಗೆ ಮುಂದಾಗಿದರು. ಅಂತಹ ಮಹಾನ್ ಶರಣರ ವಚನ ಚಳವಳಿಯ ಆಶಯ ಮತ್ತು ಸಿದ್ಧಾಂತವನ್ನು ಮತ್ತೆ ಮುನ್ನೆಲೆಗೆ ತರಬಯಸುವ ತುಡಿತ ನನ್ನದಾಗಿದೆ, ಹಾಗಾಗಿಯೇ ಈ ಒಂದು ಚಿಕ್ಕ ಪ್ರಯತ್ನಕ್ಕೆ ಕೈ ಹಾಕಿರುವೆ’ ಎಂದು ಹರೀಶ್ ತಮ್ಮ ಸಾಮಾಜಿಕ ಬದ್ಧತೆಯ ನುಡಿಗಳು ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ

ಹರೀಶ್ ಅವರು ‘ಜಾತಿ’ ಎನ್ನುವ ಹಿಪ್ ಹಾಪ್ ರ್‍ಯಾಪ್‌ ಹಾಡು ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದರು. ಆದರೆ ಹೆಚ್ಚು ಪ್ರಚಾರ ದೊರಕಲಿಲ್ಲ. ಆದರೆ ಈಗ ಯುಟ್ಯೂಬ್ ನಲ್ಲಿ ಹೆಚ್ಚು ಜನರು ಸ್ವೀಕರಿಸುತ್ತಿದ್ದಾರೆ. ಈಗ ಎಲ್ಲೆಡೆ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಇದನ್ನು ವಿರೋಧಿಸಿ ಬೆದರಿಕೆ ಕರೆಗಳು ಕೂಡಾ ಮಾಡತೊಡಗಿದ್ದಾರೆ. ಆದರೆ ಹರೀಶ್ ಅದಕ್ಕೆಲ್ಲ ತಲೆಕೆಡಿಸಿಕೊಂಡವರಲ್ಲ, “ಅವರಿಗೆ ಮೊದಲು ‘ನೀ ಬಿಡು ನಿನ್ನ ಜಾತಿ’ ಆಮೇಲೆ ನನ್ನ ಬಗ್ಗೆ ಮಾತನಾಡಿ ಎಂದು ಪ್ರೀತಿಯಿಂದಲೇ ಉತ್ತರಿಸಿ ಸುಮ್ಮನಾದೆ” ಎಂದು ಹೇಳುತ್ತಾರೆ.

ಸಮಾಜದಲ್ಲಿ ಹೆಚ್ಚು ಹೆಚ್ಚು ಪ್ರಜ್ಞಾವಂತಿಕೆ ಬೆಳೆಯಬೇಕು, ಸಮಾನತೆ ಜಾರಿಯಾಗಬೇಕಾದರೆ ನಮಗೆ ಭಾರತದ ಸಂವಿಧಾನ ಮೂಲ ಅಸ್ತ್ರವಾಗಿದೆ. ಪ್ರಸ್ತುತ ಭಾರತದಲ್ಲಿ ಸಂವಿಧಾನದ ಒಂದೊಂದು ಹಕ್ಕುಗಳು ದಿನದಿಂದ ದಿನಕ್ಕೆ ರೆಕ್ಕೆ ಮುರಿದುಕೊಳ್ಳುತ್ತಿವೆ. ಇದು ತುಂಬಾ ಅಪಾಯಕಾರಿ ಬೆಳವಣಿಗೆ ಎನ್ನಬಹುದು. ಈ ಕುರಿತು ಇಂದಿನ ಯುವ ಜನತೆ ಎಚ್ಚೆತ್ತುಕೊಳ್ಳುವುದು ತೀರ ಅಗತ್ಯವಿದೆ. ಜಾತ್ಯತೀತ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು
ಜಾತಿ ಧರ್ಮಗಳೇ ಮೇಲುಗೈ ಸಾಧಿಸುತ್ತಿವೆ. ಆದ್ದರಿಂದ ಎಲ್ಲದಕ್ಕೂ ಪರಿಹಾರ ಇರುವುದು ಸಂವಿಧಾನ ಅಂಶಗಳಲ್ಲ ಎಂದು ಹರೀಶ್ ತಮ್ಮ ಮನದಾಳದ ಮಾತುಗಳು ಹಂಚಿಕೊಳ್ಳುತ್ತಾರೆ.

‘ಜಾತಿ’ ಕುರಿತು ಕನ್ನಡದ ಮೊದಲ ಹಿಪ್‌‌ಹಾಪ್ ರ್‍ಯಾಪ್ ಸಾಂಗ್ ಮಾಡಿರುವ ಹರೀಶ್ ಅವರು ಈಗ ಕೊರೊನಾ ಕಾಲದಲ್ಲಿ ಬಡಜನರು ಅನುಭವಿಸಿದ ಸಂಕಷ್ಟ ಹಾಗೂ ಸರ್ಕಾರದ ಕರಾಳ ನೀತಿಯ ಬಗ್ಗೆ ‘ಮಾಹಾಮಾರಿ ಕಥೆ‘ ಎನ್ನುವ ಹಿಪ್‌‌ಹಾಪ್ ಹಾಡಿನಲ್ಲಿ ಅದ್ಭುತವಾಗಿ ಬಿಚ್ಚಿಟ್ಟಿದ್ದಾರೆ. ಇನ್ನು ‘ರಾಜನೀತಿ‘ ಎನ್ನುವ ಮತ್ತೊಂದು ಹಿಪ್‌‌ಹಾಪ್ ಹಾಡು ಕೆಲವು ದಿನಗಳಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.

ಕೇವಲ ದಲಿತರ ಜೊತೆ ಸಹಪಂಕ್ತಿ ಭೋಜನ ಏರ್ಪಡಿಸಿ ಚಿತ್ರಾನ್ನ ಸೇವಿಸಿದರೆ ಮಾತ್ರಕ್ಕೆ ಜಾತಿ ತಾರತಮ್ಯ, ಅಸ್ಪೃಶ್ಯತೆ ಹೋಗಲಾಡಿಸಲು ಖಂಡಿತ ಸಾಧ್ಯವಿಲ್ಲ. ಅಸ್ಪೃಶ್ಯರ ಜೊತೆಗೆ ಹೆಚ್ಚೆಚ್ಚು ಒಳಗೊಳ್ಳುವಿಕೆಗೆ ಎಲ್ಲರೂ ಮುಂದಾಗಬೇಕು, ಅಸಮಾನತೆ ಬಿಟ್ಟು ಸಮಾನತೆ ಸಮಾಜ ಕಟ್ಟಲು ಒಳಮನಸ್ಸು ಪರಿವರ್ತನೆ ಮಾಡಿಕೊಳ್ಳಬೇಕು, ಅವಾಗಲೇ ಜಾತಿ ತಾರತಮ್ಯ ತೊಲಗಬಹುದು, ‘ಪರಿವರ್ತನೆ ಜಗದ ನಿಯಮ’ ಎನ್ನುವ ಭರವಸೆದೊಂದಿಗೆ ನನ್ನ ಹೋರಾಟ ಮುಂದುವರಿಯುತ್ತದೆ ಎನ್ನುತ್ತಾರೆ ಹರೀಶ್.

ಇದನ್ನೂ ಓದಿ: ಭಾರತದ ಜಾತಿ ವೃಕ್ಷದ ವಿಷಕಾರಿ ಹಣ್ಣು ಖೈರ್ಲಾಂಜಿಯನ್ನು ಮರೆಯಬಾರದು

ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟದ ಕಥಾ ಆಧಾರಿತ ‘ಮಹಾನಾಯಕ’ ಧಾರವಾಹಿ ನಾವು ವಿರೋಧಿಸುವ ಬದಲು ಪ್ರೀತಿ ಹಾಗೂ ಹೆಮ್ಮೆಯಿಂದ ಸ್ವೀಕರಿಸಬೇಕಾಗಿದೆ. ಕನ್ನಡದಲ್ಲಿ ಇದೊಂದು ಅಪರೂಪ ಧಾರವಾಹಿ, ದೇಶದಲ್ಲಿ ಜಾತಿ ಧರ್ಮದ ಹೆಸರಿನಲ್ಲಿ ಕೊಲೆ, ಅತ್ಯಾಚಾರ, ದೌರ್ಜನ್ಯಗಳ ಪ್ರಮಾಣ ದಿನಕಳೆದಂತೆ ಹೆಚ್ಚಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ‘ಮಹಾನಾಯಕ’ ಧಾರವಾಹಿ ಸಮಾಜದಲ್ಲಿ ಬೆಳಕಾಗಿ ಹಲವು ಮನಸ್ಸುಗಳು ಪರಿವರ್ತನೆಗೊಳ್ಳಲಿ ಎಂದು ಆಶಿಸುತ್ತಾರೆ.

ಹರೀಶ್ ಕಾಂಬಳೆ ಅವರು ಮುಂದಿನ ದಿನಗಳಲ್ಲಿ ಕಿರುತೆರೆ, ಸಿನಿಮಾ, ಸಂಗೀತ ಕ್ಷೇತ್ರದಲ್ಲಿ ಅವಕಾಶ ದೊರೆತರೆ ತಮ್ಮ ವಿಶಿಷ್ಟ ಸಂಗೀತ ಕಲೆ ಪ್ರದರ್ಶಿಸುವ ಇಚ್ಛಾಶಕ್ತಿ ಹೊಂದಿದ್ದಾರೆ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗದ ಸಂಘ ಸಂಸ್ಥೆಗಳು ಹರೀಶ್ ಅವರ ಕಲೆಯನ್ನು ಗೌರವಿಸಿ ಪ್ರೋತ್ಸಾಹಿಸುತ್ತಿವೆ. ಬಡತನದಲ್ಲಿ ಹುಟ್ಟಿ ಬೆಳೆದ ಹರೀಶ್ ಅವರು ಸ್ವಯಂ ಪ್ರಯತ್ನದಿಂದಲೇ ಈ ಕಲೆಯನ್ನು ಕಲಿತುಕೊಂಡಿರುವುದು ಇನ್ನೊಂದು ವಿಶಿಷ್ಟ ಎನ್ನಬಹುದು.

PC: Harish Kamble/Facebook

ಇದನ್ನೂ ಓದಿ: ಜಾತಿಪದ್ಧತಿಯ ಕಡುವಿರೋಧಿ, ಹೋರಾಟಗಾರ ಸುಧೀರ್ ಧಾವ್ಳೆ

ಅಮೇರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ನಡೆದ ಹೋರಾಟದ ಸಂದರ್ಭದಲ್ಲಿ ಮೊಟ್ಟ ಮೊದಲು ಹಿಪ್‌ಹಾಪ್ ಹಾಡುಗಳು ಹುಟ್ಟು ಪಡೆದಿವೆ. ನಂತರದ ದಿನಗಳಲ್ಲಿ ವಿಶ್ವದಾದ್ಯಂತ ವ್ಯಾಪಿಸಿ ಹೆಚ್ಚು ಪ್ರಸಿ‌ದ್ಧಿ ಪಡೆದಿವೆ. ವಿಶೇಷವಾಗಿ ಅತೀ ಹೆಚ್ಚು ಯುವಜನತೆ ಇಷ್ಟ ಪಡುವ ಹಿಪ್‌ಹಾಪ್ ಹಾಡುಗಳಿಗೆ ಭಾರೀ ಡಿಮ್ಯಾಂಡ್ ಇದೆ. ಇದಕ್ಕೆ ಭಾರತವೂ ಹೊರತಾಗಿಲ್ಲ, ನನಗೂ ಮೊದಲಿನಿಂದಲೂ ತುಂಬಾ ಇಷ್ಟ ಪಡುವ ಸಂಗೀತವಾಗಿದೆ. ಹೀಗಾಗಿ ದೇಶದ ಭವಿಷ್ಯ ರೂಪಿಸುವ ಯುವಜನಾಂಗದ ಪ್ರಿಯವಾದ ಹಿಪ್‌ಹಾಪ್ ಮ್ಯೂಸಿಕ್ ನಾನು ನನ್ನ ‘ಜಾತಿ’ ಹಾಡಿಗೆ ಆಯ್ಕೆ ಮಾಡಿಕೊಂಡು ಪ್ರಯತ್ನಿಸಿದ್ದೇನೆ.

ಹರೀಶ್ ಕಾಂಬಳೆ ಅವರಿಗಿರುವ ಸಾಮಾಜಿಕ ತುಡಿತ ನಿಜಕ್ಕೂ ಮೆಚ್ಚಬೇಕು. ಅವರ ಉದ್ದೇಶ ಹಾಗೂ ಗುರಿಗಳಿಗೆ ನಾವೆಲ್ಲರೂ ಪ್ರೋತ್ಸಾಹಿಸಬೇಕಾಗಿದೆ. ಹಿಪ್‌ಹಾಪ್ ರ್‍ಯಾಪ್‌ ಸಾಂಗ್‌ನಲ್ಲಿ ಅಡಗಿರುವ ಸಮಾಜದ ಚಿಂತನೆ ಬಗ್ಗೆ ನಾವೆಲ್ಲರೂ ಸೂಕ್ಷ್ಮವಾಗಿ ಗ್ರಹಿಸಬೇಕಿದೆ. ಸಮ ಸಮಾಜದ ಪರಿಕಲ್ಪನೆ ಹೊತ್ತು ‘ಎಲೆಮರೆ ಕಾಯಿಯಂತೆ’ ತಮ್ಮ ನಿಸ್ವಾರ್ಥ ಕಲೆಯನ್ನು ಸಂಗೀತ ಲೋಕಕ್ಕೆ ಅರ್ಪಿಸುತ್ತಿರುವ ಪ್ರತಿಭಾವಂತ ಯುವಕ ಹರೀಶ್ ಕಾಂಬಳೆ ಕಾರ್ಯಕ್ಕೆ ಬೆಂಬಲಿಸಿ, ಹಾರೈಸೋಣ.‌‌!!

ಹರೀಶ್ ಕಾಂಬಳೆ ಅವರ ಯುಟ್ಯೂಬ್ ಚಾನಲ್‌ಗೆ ಹೋಗಿ ಅವರಿಗೊಂದು ಶುಭಾಶಯ ಹೇಳಲು ಇಲ್ಲಿ ಕ್ಲಿಕ್‌ ಮಾಡಿ. ಹಾಗೂ ಅವರ ಫೇಸ್‌ಬುಕ್‌ಗೆ ಇಲ್ಲಿ ಕ್ಲಿಕ್ ಮಾಡಿ ತಲುಪಬಹುದು.

-ಬಾಲಾಜಿ ಕುಂಬಾರ, ಚಟ್ನಾಳ

ಇದನ್ನೂ ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...