Homeಚಳವಳಿಕೀಳು ನನ್ನ 'ಜಾತಿ' ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ...!

ಕೀಳು ನನ್ನ ‘ಜಾತಿ’ ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ…!

'ಜಾತಿ' ಕುರಿತು ಕನ್ನಡದ ಮೊದಲ ಹಿಪ್‌‌ಹಾಪ್ ರ್‍ಯಾಪ್ ಸಾಂಗ್ ಮಾಡಿರುವ ಹರೀಶ್ ಅವರು ಈಗ ಕೊರೊನಾ ಕಾಲದಲ್ಲಿ ಬಡಜನರು ಅನುಭವಿಸಿದ ಸಂಕಷ್ಟ ಹಾಗೂ ಸರ್ಕಾರದ ಕರಾಳ ನೀತಿಯ ಬಗ್ಗೆ 'ಮಾಹಾಮಾರಿ ಕಥೆ' ಎನ್ನುವ ಹಿಪ್‌‌ಹಾಪ್ ಹಾಡಿನಲ್ಲಿ ಅದ್ಭುತವಾಗಿ ಬಿಚ್ಚಿಟ್ಟಿದ್ದಾರೆ.

- Advertisement -
- Advertisement -

ನೀವು ಫೇಸ್ ಬುಕ್,ಯೂಟ್ಯೂಬ್ ಬಳಕೆದಾರರಾಗಿದ್ದರೆ ಹರೀಶ್ ಕಾಂಬಳೆ ಎನ್ನುವ ಹೆಸರಿನ ಅಕೌಂಟ್ ಇದೆ. ಹರೀಶ್ ಅವರು ವರ್ಷದ ಹಿಂದೆ ಯುಟ್ಯೂಬ್‌ಗೆ ಸೇರಿಸಿದ ಕೇವಲ ಮೂರು ನಿಮಿಷದ ಒಂದು ವಿಡಿಯೋ ತುಣುಕು ಹಾಡು ಈಗ ಎಲ್ಲೆಡೆ  ಸಕ್ಕತ್ ಸೌಂಡ್ ಮಾಡ್ತಿದೆ. ಸಾಹಿತ್ಯ ತನ್ನದೇ, ಆದರೆ ಇಂದಿನ ಯುವ ಜನತೆಯನ್ನು ಆಕರ್ಷಿಸಲು ಹೊಸ ಮ್ಯೂಸಿಕ್ ಆಯ್ದು ವಿಶಿಷ್ಟವಾಗಿ ಪ್ರಯತ್ನಿಸಿದ್ದಾರೆ.

“ನಿ ಬಿಟ್ಟು ಕೊಡು ಜಾತಿ
ನಾನು ಬಿಡುವೆ ಮೀಸಲಾತಿ
ಹೇಳು ಏಕೆ ಸುಮ್ಮನಾದೆ
ನಿನಗೆ ಇಲ್ವಾ ಮಂಜೂರಾತಿ
ರಣನೀತಿ ಪ್ರಖ್ಯಾತಿ

ಕೀಳು ನನ್ನ ಜಾತಿ ಅಲ್ಲ
ಕೀಳು ನಿನ್ನ ಬುದ್ಧಿಮಟ್ಟ
ಜಾತಿ ನಿನಗೆ ಮುಖ್ಯ”

ಇದನ್ನೂ ಓದಿ: PC: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

‘ಜಾತಿ’ ಎನ್ನುವ ಶೀರ್ಷಿಕೆಯಲ್ಲಿ ಹರೀಶ್ ಅವರು ರಚಿಸಿದ ಹಾಡಿನ ಈ ಮೇಲಿನ ಸಾಲುಗಳು ಸಮಾಜದಲ್ಲಿರುವ ಅನ್ಯಾಯ, ಅತ್ಯಾಚಾರ, ದೌರ್ಜನ್ಯ, ಜಾತಿಯ ಭೀಕರತೆ ಬಿಚ್ಚಿಡುತ್ತವೆ. ಹರೀಶ್ ಅವರು ರಚಿಸಿ ಹಾಡಿರುವ ಹಾಡು ಕನ್ನಡ ಸಂಗೀತ ಕ್ಷೇತ್ರದಲ್ಲಿಯೇ ಪ್ರಪ್ರಥಮ ‘ಜಾತಿ’ Hip-hop Rap ಹಾಡು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಹರೀಶ್ ಅವರ ವಿನೂತನ ದೃಷ್ಟಿಕೋನದ ಫಲವಾಗಿ ಇಂದು ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಕಲ್ಯಾಣ ಕರ್ನಾಟಕದ ಹೆಮ್ಮೆಯ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹತ್ಯಾಳ ಎನ್ನುವ ಪುಟ್ಟ ಗ್ರಾಮದವರಾದ ಹರೀಶ್ ಕಾಂಬಳೆ ಅವರು ಮೂಲತಃ ಕೃಷಿ ಕುಟುಂಬದವರು. ಬಿ.ಎಸ್ಸಿ. ಬಿ.ಇಡ್. ಪದವಿಧರರಾದ ಹರೀಶ್ ಅವರು ಸ್ವಗ್ರಾಮದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದಾರೆ. ‘ನನಗೆ ಕಾಲೇಜು ದಿನಗಳಿಂದಲೂ ಕವಿತೆ ಬರೆಯುವುದು, ಸಂಗೀತದ ಮೇಲೆ ಹೆಚ್ಚಿನ ಹವ್ಯಾಸ ಇದೆ. ಹಾಗೇ ಬುದ್ಧ ಬಸವ ಅಂಬೇಡ್ಕರ್ ಸೇರಿದಂತೆ ಸಮಾಜದ ಉನ್ನತಿಗಾಗಿ ಶ್ರಮಿಸಿದ ಮಹಾತ್ಮರ ಪುಸ್ತಕಗಳನ್ನು ಓದುವ ಆಸಕ್ತಿ ಇದೆ’ ಎನ್ನುತ್ತಾರೆ ಹರೀಶ್.

ಹರೀಶ್ ಅವರು ಪ್ರೀತಿ – ಪ್ರೇಮ, ನಾಡು -ನುಡಿಯ ಬಗ್ಗೆ ಕವಿತೆಗಳು ಬರೆಯಲು ಹಾಡುಗಾರಿಕೆ ಮಾಡಲು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಸಮಾಜವನ್ನು ಸೂಕ್ಷ್ಮವಾಗಿ ಗೃಹಿಸಿ ‘ಕಂಡದ್ದು ಕಂಡಹಾಗೇ’ ಹೇಳುವ ಧೈರ್ಯ ಬೆಳೆಸಿಕೊಂಡಿದ್ದಾರೆ. ತಮ್ಮ ವೈಯಕ್ತಿಕ ಅನುಭವ ಜೊತೆಗೆ ಸಮಕಾಲೀನ ಸಮಾಜದ ಅವಸ್ಥೆಯ ವಿರುದ್ಧ ‘ಬಂಡಾಯ ಸಾಹಿತ್ಯ’ ರಚಿಸುವ ಮೂಲಕ ತಮ್ಮದೇ ಶೈಲಿಯ ವಿಭಿನ್ನವಾದ ಪದ ಜೋಡಣೆ, ಹಾಡುಗಾರಿಕೆಯ ಸಾಹಸ ಮಾಡುತ್ತಿದ್ದಾರೆ.

PC: Harish Kamble/Facebook

ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಕಾಯಕ ಭೂಮಿಯ ನೆಲದವರಾದ ಹರೀಶ್ ಅವರಿಗೆ ಶರಣರ ‘ವಚನ ಕ್ರಾಂತಿ’ಯ ಬಗ್ಗೆ ಬಹಳ ಹೆಮ್ಮೆ ಇದೆ. ‘ಅಂದು ಶೋಷಣೆಗೆ ಒಳಪಟ್ಟ ಅನೇಕ ಶ್ರಮಿಕ ವರ್ಗದವರು ಮುಂದೆ ವಚನಕಾರರಾಗಿ ಅಸಮಾನತೆ, ಶೋಷಣೆ ಸಮಾಜದ ವಿರುದ್ಧ ದನಿಯಾಗಿ ಸಮ ಸಮಾಜ ಸ್ಥಾಪನೆಗೆ ಮುಂದಾಗಿದರು. ಅಂತಹ ಮಹಾನ್ ಶರಣರ ವಚನ ಚಳವಳಿಯ ಆಶಯ ಮತ್ತು ಸಿದ್ಧಾಂತವನ್ನು ಮತ್ತೆ ಮುನ್ನೆಲೆಗೆ ತರಬಯಸುವ ತುಡಿತ ನನ್ನದಾಗಿದೆ, ಹಾಗಾಗಿಯೇ ಈ ಒಂದು ಚಿಕ್ಕ ಪ್ರಯತ್ನಕ್ಕೆ ಕೈ ಹಾಕಿರುವೆ’ ಎಂದು ಹರೀಶ್ ತಮ್ಮ ಸಾಮಾಜಿಕ ಬದ್ಧತೆಯ ನುಡಿಗಳು ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ

ಹರೀಶ್ ಅವರು ‘ಜಾತಿ’ ಎನ್ನುವ ಹಿಪ್ ಹಾಪ್ ರ್‍ಯಾಪ್‌ ಹಾಡು ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದರು. ಆದರೆ ಹೆಚ್ಚು ಪ್ರಚಾರ ದೊರಕಲಿಲ್ಲ. ಆದರೆ ಈಗ ಯುಟ್ಯೂಬ್ ನಲ್ಲಿ ಹೆಚ್ಚು ಜನರು ಸ್ವೀಕರಿಸುತ್ತಿದ್ದಾರೆ. ಈಗ ಎಲ್ಲೆಡೆ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಇದನ್ನು ವಿರೋಧಿಸಿ ಬೆದರಿಕೆ ಕರೆಗಳು ಕೂಡಾ ಮಾಡತೊಡಗಿದ್ದಾರೆ. ಆದರೆ ಹರೀಶ್ ಅದಕ್ಕೆಲ್ಲ ತಲೆಕೆಡಿಸಿಕೊಂಡವರಲ್ಲ, “ಅವರಿಗೆ ಮೊದಲು ‘ನೀ ಬಿಡು ನಿನ್ನ ಜಾತಿ’ ಆಮೇಲೆ ನನ್ನ ಬಗ್ಗೆ ಮಾತನಾಡಿ ಎಂದು ಪ್ರೀತಿಯಿಂದಲೇ ಉತ್ತರಿಸಿ ಸುಮ್ಮನಾದೆ” ಎಂದು ಹೇಳುತ್ತಾರೆ.

ಸಮಾಜದಲ್ಲಿ ಹೆಚ್ಚು ಹೆಚ್ಚು ಪ್ರಜ್ಞಾವಂತಿಕೆ ಬೆಳೆಯಬೇಕು, ಸಮಾನತೆ ಜಾರಿಯಾಗಬೇಕಾದರೆ ನಮಗೆ ಭಾರತದ ಸಂವಿಧಾನ ಮೂಲ ಅಸ್ತ್ರವಾಗಿದೆ. ಪ್ರಸ್ತುತ ಭಾರತದಲ್ಲಿ ಸಂವಿಧಾನದ ಒಂದೊಂದು ಹಕ್ಕುಗಳು ದಿನದಿಂದ ದಿನಕ್ಕೆ ರೆಕ್ಕೆ ಮುರಿದುಕೊಳ್ಳುತ್ತಿವೆ. ಇದು ತುಂಬಾ ಅಪಾಯಕಾರಿ ಬೆಳವಣಿಗೆ ಎನ್ನಬಹುದು. ಈ ಕುರಿತು ಇಂದಿನ ಯುವ ಜನತೆ ಎಚ್ಚೆತ್ತುಕೊಳ್ಳುವುದು ತೀರ ಅಗತ್ಯವಿದೆ. ಜಾತ್ಯತೀತ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು
ಜಾತಿ ಧರ್ಮಗಳೇ ಮೇಲುಗೈ ಸಾಧಿಸುತ್ತಿವೆ. ಆದ್ದರಿಂದ ಎಲ್ಲದಕ್ಕೂ ಪರಿಹಾರ ಇರುವುದು ಸಂವಿಧಾನ ಅಂಶಗಳಲ್ಲ ಎಂದು ಹರೀಶ್ ತಮ್ಮ ಮನದಾಳದ ಮಾತುಗಳು ಹಂಚಿಕೊಳ್ಳುತ್ತಾರೆ.

‘ಜಾತಿ’ ಕುರಿತು ಕನ್ನಡದ ಮೊದಲ ಹಿಪ್‌‌ಹಾಪ್ ರ್‍ಯಾಪ್ ಸಾಂಗ್ ಮಾಡಿರುವ ಹರೀಶ್ ಅವರು ಈಗ ಕೊರೊನಾ ಕಾಲದಲ್ಲಿ ಬಡಜನರು ಅನುಭವಿಸಿದ ಸಂಕಷ್ಟ ಹಾಗೂ ಸರ್ಕಾರದ ಕರಾಳ ನೀತಿಯ ಬಗ್ಗೆ ‘ಮಾಹಾಮಾರಿ ಕಥೆ‘ ಎನ್ನುವ ಹಿಪ್‌‌ಹಾಪ್ ಹಾಡಿನಲ್ಲಿ ಅದ್ಭುತವಾಗಿ ಬಿಚ್ಚಿಟ್ಟಿದ್ದಾರೆ. ಇನ್ನು ‘ರಾಜನೀತಿ‘ ಎನ್ನುವ ಮತ್ತೊಂದು ಹಿಪ್‌‌ಹಾಪ್ ಹಾಡು ಕೆಲವು ದಿನಗಳಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.

ಕೇವಲ ದಲಿತರ ಜೊತೆ ಸಹಪಂಕ್ತಿ ಭೋಜನ ಏರ್ಪಡಿಸಿ ಚಿತ್ರಾನ್ನ ಸೇವಿಸಿದರೆ ಮಾತ್ರಕ್ಕೆ ಜಾತಿ ತಾರತಮ್ಯ, ಅಸ್ಪೃಶ್ಯತೆ ಹೋಗಲಾಡಿಸಲು ಖಂಡಿತ ಸಾಧ್ಯವಿಲ್ಲ. ಅಸ್ಪೃಶ್ಯರ ಜೊತೆಗೆ ಹೆಚ್ಚೆಚ್ಚು ಒಳಗೊಳ್ಳುವಿಕೆಗೆ ಎಲ್ಲರೂ ಮುಂದಾಗಬೇಕು, ಅಸಮಾನತೆ ಬಿಟ್ಟು ಸಮಾನತೆ ಸಮಾಜ ಕಟ್ಟಲು ಒಳಮನಸ್ಸು ಪರಿವರ್ತನೆ ಮಾಡಿಕೊಳ್ಳಬೇಕು, ಅವಾಗಲೇ ಜಾತಿ ತಾರತಮ್ಯ ತೊಲಗಬಹುದು, ‘ಪರಿವರ್ತನೆ ಜಗದ ನಿಯಮ’ ಎನ್ನುವ ಭರವಸೆದೊಂದಿಗೆ ನನ್ನ ಹೋರಾಟ ಮುಂದುವರಿಯುತ್ತದೆ ಎನ್ನುತ್ತಾರೆ ಹರೀಶ್.

ಇದನ್ನೂ ಓದಿ: ಭಾರತದ ಜಾತಿ ವೃಕ್ಷದ ವಿಷಕಾರಿ ಹಣ್ಣು ಖೈರ್ಲಾಂಜಿಯನ್ನು ಮರೆಯಬಾರದು

ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟದ ಕಥಾ ಆಧಾರಿತ ‘ಮಹಾನಾಯಕ’ ಧಾರವಾಹಿ ನಾವು ವಿರೋಧಿಸುವ ಬದಲು ಪ್ರೀತಿ ಹಾಗೂ ಹೆಮ್ಮೆಯಿಂದ ಸ್ವೀಕರಿಸಬೇಕಾಗಿದೆ. ಕನ್ನಡದಲ್ಲಿ ಇದೊಂದು ಅಪರೂಪ ಧಾರವಾಹಿ, ದೇಶದಲ್ಲಿ ಜಾತಿ ಧರ್ಮದ ಹೆಸರಿನಲ್ಲಿ ಕೊಲೆ, ಅತ್ಯಾಚಾರ, ದೌರ್ಜನ್ಯಗಳ ಪ್ರಮಾಣ ದಿನಕಳೆದಂತೆ ಹೆಚ್ಚಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ‘ಮಹಾನಾಯಕ’ ಧಾರವಾಹಿ ಸಮಾಜದಲ್ಲಿ ಬೆಳಕಾಗಿ ಹಲವು ಮನಸ್ಸುಗಳು ಪರಿವರ್ತನೆಗೊಳ್ಳಲಿ ಎಂದು ಆಶಿಸುತ್ತಾರೆ.

ಹರೀಶ್ ಕಾಂಬಳೆ ಅವರು ಮುಂದಿನ ದಿನಗಳಲ್ಲಿ ಕಿರುತೆರೆ, ಸಿನಿಮಾ, ಸಂಗೀತ ಕ್ಷೇತ್ರದಲ್ಲಿ ಅವಕಾಶ ದೊರೆತರೆ ತಮ್ಮ ವಿಶಿಷ್ಟ ಸಂಗೀತ ಕಲೆ ಪ್ರದರ್ಶಿಸುವ ಇಚ್ಛಾಶಕ್ತಿ ಹೊಂದಿದ್ದಾರೆ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗದ ಸಂಘ ಸಂಸ್ಥೆಗಳು ಹರೀಶ್ ಅವರ ಕಲೆಯನ್ನು ಗೌರವಿಸಿ ಪ್ರೋತ್ಸಾಹಿಸುತ್ತಿವೆ. ಬಡತನದಲ್ಲಿ ಹುಟ್ಟಿ ಬೆಳೆದ ಹರೀಶ್ ಅವರು ಸ್ವಯಂ ಪ್ರಯತ್ನದಿಂದಲೇ ಈ ಕಲೆಯನ್ನು ಕಲಿತುಕೊಂಡಿರುವುದು ಇನ್ನೊಂದು ವಿಶಿಷ್ಟ ಎನ್ನಬಹುದು.

PC: Harish Kamble/Facebook

ಇದನ್ನೂ ಓದಿ: ಜಾತಿಪದ್ಧತಿಯ ಕಡುವಿರೋಧಿ, ಹೋರಾಟಗಾರ ಸುಧೀರ್ ಧಾವ್ಳೆ

ಅಮೇರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ನಡೆದ ಹೋರಾಟದ ಸಂದರ್ಭದಲ್ಲಿ ಮೊಟ್ಟ ಮೊದಲು ಹಿಪ್‌ಹಾಪ್ ಹಾಡುಗಳು ಹುಟ್ಟು ಪಡೆದಿವೆ. ನಂತರದ ದಿನಗಳಲ್ಲಿ ವಿಶ್ವದಾದ್ಯಂತ ವ್ಯಾಪಿಸಿ ಹೆಚ್ಚು ಪ್ರಸಿ‌ದ್ಧಿ ಪಡೆದಿವೆ. ವಿಶೇಷವಾಗಿ ಅತೀ ಹೆಚ್ಚು ಯುವಜನತೆ ಇಷ್ಟ ಪಡುವ ಹಿಪ್‌ಹಾಪ್ ಹಾಡುಗಳಿಗೆ ಭಾರೀ ಡಿಮ್ಯಾಂಡ್ ಇದೆ. ಇದಕ್ಕೆ ಭಾರತವೂ ಹೊರತಾಗಿಲ್ಲ, ನನಗೂ ಮೊದಲಿನಿಂದಲೂ ತುಂಬಾ ಇಷ್ಟ ಪಡುವ ಸಂಗೀತವಾಗಿದೆ. ಹೀಗಾಗಿ ದೇಶದ ಭವಿಷ್ಯ ರೂಪಿಸುವ ಯುವಜನಾಂಗದ ಪ್ರಿಯವಾದ ಹಿಪ್‌ಹಾಪ್ ಮ್ಯೂಸಿಕ್ ನಾನು ನನ್ನ ‘ಜಾತಿ’ ಹಾಡಿಗೆ ಆಯ್ಕೆ ಮಾಡಿಕೊಂಡು ಪ್ರಯತ್ನಿಸಿದ್ದೇನೆ.

ಹರೀಶ್ ಕಾಂಬಳೆ ಅವರಿಗಿರುವ ಸಾಮಾಜಿಕ ತುಡಿತ ನಿಜಕ್ಕೂ ಮೆಚ್ಚಬೇಕು. ಅವರ ಉದ್ದೇಶ ಹಾಗೂ ಗುರಿಗಳಿಗೆ ನಾವೆಲ್ಲರೂ ಪ್ರೋತ್ಸಾಹಿಸಬೇಕಾಗಿದೆ. ಹಿಪ್‌ಹಾಪ್ ರ್‍ಯಾಪ್‌ ಸಾಂಗ್‌ನಲ್ಲಿ ಅಡಗಿರುವ ಸಮಾಜದ ಚಿಂತನೆ ಬಗ್ಗೆ ನಾವೆಲ್ಲರೂ ಸೂಕ್ಷ್ಮವಾಗಿ ಗ್ರಹಿಸಬೇಕಿದೆ. ಸಮ ಸಮಾಜದ ಪರಿಕಲ್ಪನೆ ಹೊತ್ತು ‘ಎಲೆಮರೆ ಕಾಯಿಯಂತೆ’ ತಮ್ಮ ನಿಸ್ವಾರ್ಥ ಕಲೆಯನ್ನು ಸಂಗೀತ ಲೋಕಕ್ಕೆ ಅರ್ಪಿಸುತ್ತಿರುವ ಪ್ರತಿಭಾವಂತ ಯುವಕ ಹರೀಶ್ ಕಾಂಬಳೆ ಕಾರ್ಯಕ್ಕೆ ಬೆಂಬಲಿಸಿ, ಹಾರೈಸೋಣ.‌‌!!

ಹರೀಶ್ ಕಾಂಬಳೆ ಅವರ ಯುಟ್ಯೂಬ್ ಚಾನಲ್‌ಗೆ ಹೋಗಿ ಅವರಿಗೊಂದು ಶುಭಾಶಯ ಹೇಳಲು ಇಲ್ಲಿ ಕ್ಲಿಕ್‌ ಮಾಡಿ. ಹಾಗೂ ಅವರ ಫೇಸ್‌ಬುಕ್‌ಗೆ ಇಲ್ಲಿ ಕ್ಲಿಕ್ ಮಾಡಿ ತಲುಪಬಹುದು.

-ಬಾಲಾಜಿ ಕುಂಬಾರ, ಚಟ್ನಾಳ

ಇದನ್ನೂ ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...