Homeಚಳವಳಿಕೀಳು ನನ್ನ 'ಜಾತಿ' ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ...!

ಕೀಳು ನನ್ನ ‘ಜಾತಿ’ ಅಲ್ಲ, ಕೀಳು ನಿನ್ನ ಬುದ್ಧಿಮಟ್ಟ…!

'ಜಾತಿ' ಕುರಿತು ಕನ್ನಡದ ಮೊದಲ ಹಿಪ್‌‌ಹಾಪ್ ರ್‍ಯಾಪ್ ಸಾಂಗ್ ಮಾಡಿರುವ ಹರೀಶ್ ಅವರು ಈಗ ಕೊರೊನಾ ಕಾಲದಲ್ಲಿ ಬಡಜನರು ಅನುಭವಿಸಿದ ಸಂಕಷ್ಟ ಹಾಗೂ ಸರ್ಕಾರದ ಕರಾಳ ನೀತಿಯ ಬಗ್ಗೆ 'ಮಾಹಾಮಾರಿ ಕಥೆ' ಎನ್ನುವ ಹಿಪ್‌‌ಹಾಪ್ ಹಾಡಿನಲ್ಲಿ ಅದ್ಭುತವಾಗಿ ಬಿಚ್ಚಿಟ್ಟಿದ್ದಾರೆ.

- Advertisement -
- Advertisement -

ನೀವು ಫೇಸ್ ಬುಕ್,ಯೂಟ್ಯೂಬ್ ಬಳಕೆದಾರರಾಗಿದ್ದರೆ ಹರೀಶ್ ಕಾಂಬಳೆ ಎನ್ನುವ ಹೆಸರಿನ ಅಕೌಂಟ್ ಇದೆ. ಹರೀಶ್ ಅವರು ವರ್ಷದ ಹಿಂದೆ ಯುಟ್ಯೂಬ್‌ಗೆ ಸೇರಿಸಿದ ಕೇವಲ ಮೂರು ನಿಮಿಷದ ಒಂದು ವಿಡಿಯೋ ತುಣುಕು ಹಾಡು ಈಗ ಎಲ್ಲೆಡೆ  ಸಕ್ಕತ್ ಸೌಂಡ್ ಮಾಡ್ತಿದೆ. ಸಾಹಿತ್ಯ ತನ್ನದೇ, ಆದರೆ ಇಂದಿನ ಯುವ ಜನತೆಯನ್ನು ಆಕರ್ಷಿಸಲು ಹೊಸ ಮ್ಯೂಸಿಕ್ ಆಯ್ದು ವಿಶಿಷ್ಟವಾಗಿ ಪ್ರಯತ್ನಿಸಿದ್ದಾರೆ.

“ನಿ ಬಿಟ್ಟು ಕೊಡು ಜಾತಿ
ನಾನು ಬಿಡುವೆ ಮೀಸಲಾತಿ
ಹೇಳು ಏಕೆ ಸುಮ್ಮನಾದೆ
ನಿನಗೆ ಇಲ್ವಾ ಮಂಜೂರಾತಿ
ರಣನೀತಿ ಪ್ರಖ್ಯಾತಿ

ಕೀಳು ನನ್ನ ಜಾತಿ ಅಲ್ಲ
ಕೀಳು ನಿನ್ನ ಬುದ್ಧಿಮಟ್ಟ
ಜಾತಿ ನಿನಗೆ ಮುಖ್ಯ”

ಇದನ್ನೂ ಓದಿ: PC: ಬ್ರಾಹ್ಮಣ್ಯದ ವಿರೋಧ ಮತ್ತು ಜಾತಿ ವಾಸ್ತವದ ಪ್ರಶ್ನೆಗೆ ಒಂದು ಉತ್ತರ

‘ಜಾತಿ’ ಎನ್ನುವ ಶೀರ್ಷಿಕೆಯಲ್ಲಿ ಹರೀಶ್ ಅವರು ರಚಿಸಿದ ಹಾಡಿನ ಈ ಮೇಲಿನ ಸಾಲುಗಳು ಸಮಾಜದಲ್ಲಿರುವ ಅನ್ಯಾಯ, ಅತ್ಯಾಚಾರ, ದೌರ್ಜನ್ಯ, ಜಾತಿಯ ಭೀಕರತೆ ಬಿಚ್ಚಿಡುತ್ತವೆ. ಹರೀಶ್ ಅವರು ರಚಿಸಿ ಹಾಡಿರುವ ಹಾಡು ಕನ್ನಡ ಸಂಗೀತ ಕ್ಷೇತ್ರದಲ್ಲಿಯೇ ಪ್ರಪ್ರಥಮ ‘ಜಾತಿ’ Hip-hop Rap ಹಾಡು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಹರೀಶ್ ಅವರ ವಿನೂತನ ದೃಷ್ಟಿಕೋನದ ಫಲವಾಗಿ ಇಂದು ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಕಲ್ಯಾಣ ಕರ್ನಾಟಕದ ಹೆಮ್ಮೆಯ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹತ್ಯಾಳ ಎನ್ನುವ ಪುಟ್ಟ ಗ್ರಾಮದವರಾದ ಹರೀಶ್ ಕಾಂಬಳೆ ಅವರು ಮೂಲತಃ ಕೃಷಿ ಕುಟುಂಬದವರು. ಬಿ.ಎಸ್ಸಿ. ಬಿ.ಇಡ್. ಪದವಿಧರರಾದ ಹರೀಶ್ ಅವರು ಸ್ವಗ್ರಾಮದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದಾರೆ. ‘ನನಗೆ ಕಾಲೇಜು ದಿನಗಳಿಂದಲೂ ಕವಿತೆ ಬರೆಯುವುದು, ಸಂಗೀತದ ಮೇಲೆ ಹೆಚ್ಚಿನ ಹವ್ಯಾಸ ಇದೆ. ಹಾಗೇ ಬುದ್ಧ ಬಸವ ಅಂಬೇಡ್ಕರ್ ಸೇರಿದಂತೆ ಸಮಾಜದ ಉನ್ನತಿಗಾಗಿ ಶ್ರಮಿಸಿದ ಮಹಾತ್ಮರ ಪುಸ್ತಕಗಳನ್ನು ಓದುವ ಆಸಕ್ತಿ ಇದೆ’ ಎನ್ನುತ್ತಾರೆ ಹರೀಶ್.

ಹರೀಶ್ ಅವರು ಪ್ರೀತಿ – ಪ್ರೇಮ, ನಾಡು -ನುಡಿಯ ಬಗ್ಗೆ ಕವಿತೆಗಳು ಬರೆಯಲು ಹಾಡುಗಾರಿಕೆ ಮಾಡಲು ಹೆಚ್ಚು ತಲೆಕೆಡಿಸಿಕೊಂಡವರಲ್ಲ. ಸಮಾಜವನ್ನು ಸೂಕ್ಷ್ಮವಾಗಿ ಗೃಹಿಸಿ ‘ಕಂಡದ್ದು ಕಂಡಹಾಗೇ’ ಹೇಳುವ ಧೈರ್ಯ ಬೆಳೆಸಿಕೊಂಡಿದ್ದಾರೆ. ತಮ್ಮ ವೈಯಕ್ತಿಕ ಅನುಭವ ಜೊತೆಗೆ ಸಮಕಾಲೀನ ಸಮಾಜದ ಅವಸ್ಥೆಯ ವಿರುದ್ಧ ‘ಬಂಡಾಯ ಸಾಹಿತ್ಯ’ ರಚಿಸುವ ಮೂಲಕ ತಮ್ಮದೇ ಶೈಲಿಯ ವಿಭಿನ್ನವಾದ ಪದ ಜೋಡಣೆ, ಹಾಡುಗಾರಿಕೆಯ ಸಾಹಸ ಮಾಡುತ್ತಿದ್ದಾರೆ.

PC: Harish Kamble/Facebook

ಹನ್ನೆರಡನೆಯ ಶತಮಾನದ ಬಸವಾದಿ ಶರಣರ ಕಾಯಕ ಭೂಮಿಯ ನೆಲದವರಾದ ಹರೀಶ್ ಅವರಿಗೆ ಶರಣರ ‘ವಚನ ಕ್ರಾಂತಿ’ಯ ಬಗ್ಗೆ ಬಹಳ ಹೆಮ್ಮೆ ಇದೆ. ‘ಅಂದು ಶೋಷಣೆಗೆ ಒಳಪಟ್ಟ ಅನೇಕ ಶ್ರಮಿಕ ವರ್ಗದವರು ಮುಂದೆ ವಚನಕಾರರಾಗಿ ಅಸಮಾನತೆ, ಶೋಷಣೆ ಸಮಾಜದ ವಿರುದ್ಧ ದನಿಯಾಗಿ ಸಮ ಸಮಾಜ ಸ್ಥಾಪನೆಗೆ ಮುಂದಾಗಿದರು. ಅಂತಹ ಮಹಾನ್ ಶರಣರ ವಚನ ಚಳವಳಿಯ ಆಶಯ ಮತ್ತು ಸಿದ್ಧಾಂತವನ್ನು ಮತ್ತೆ ಮುನ್ನೆಲೆಗೆ ತರಬಯಸುವ ತುಡಿತ ನನ್ನದಾಗಿದೆ, ಹಾಗಾಗಿಯೇ ಈ ಒಂದು ಚಿಕ್ಕ ಪ್ರಯತ್ನಕ್ಕೆ ಕೈ ಹಾಕಿರುವೆ’ ಎಂದು ಹರೀಶ್ ತಮ್ಮ ಸಾಮಾಜಿಕ ಬದ್ಧತೆಯ ನುಡಿಗಳು ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ

ಹರೀಶ್ ಅವರು ‘ಜಾತಿ’ ಎನ್ನುವ ಹಿಪ್ ಹಾಪ್ ರ್‍ಯಾಪ್‌ ಹಾಡು ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದರು. ಆದರೆ ಹೆಚ್ಚು ಪ್ರಚಾರ ದೊರಕಲಿಲ್ಲ. ಆದರೆ ಈಗ ಯುಟ್ಯೂಬ್ ನಲ್ಲಿ ಹೆಚ್ಚು ಜನರು ಸ್ವೀಕರಿಸುತ್ತಿದ್ದಾರೆ. ಈಗ ಎಲ್ಲೆಡೆ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಇದನ್ನು ವಿರೋಧಿಸಿ ಬೆದರಿಕೆ ಕರೆಗಳು ಕೂಡಾ ಮಾಡತೊಡಗಿದ್ದಾರೆ. ಆದರೆ ಹರೀಶ್ ಅದಕ್ಕೆಲ್ಲ ತಲೆಕೆಡಿಸಿಕೊಂಡವರಲ್ಲ, “ಅವರಿಗೆ ಮೊದಲು ‘ನೀ ಬಿಡು ನಿನ್ನ ಜಾತಿ’ ಆಮೇಲೆ ನನ್ನ ಬಗ್ಗೆ ಮಾತನಾಡಿ ಎಂದು ಪ್ರೀತಿಯಿಂದಲೇ ಉತ್ತರಿಸಿ ಸುಮ್ಮನಾದೆ” ಎಂದು ಹೇಳುತ್ತಾರೆ.

ಸಮಾಜದಲ್ಲಿ ಹೆಚ್ಚು ಹೆಚ್ಚು ಪ್ರಜ್ಞಾವಂತಿಕೆ ಬೆಳೆಯಬೇಕು, ಸಮಾನತೆ ಜಾರಿಯಾಗಬೇಕಾದರೆ ನಮಗೆ ಭಾರತದ ಸಂವಿಧಾನ ಮೂಲ ಅಸ್ತ್ರವಾಗಿದೆ. ಪ್ರಸ್ತುತ ಭಾರತದಲ್ಲಿ ಸಂವಿಧಾನದ ಒಂದೊಂದು ಹಕ್ಕುಗಳು ದಿನದಿಂದ ದಿನಕ್ಕೆ ರೆಕ್ಕೆ ಮುರಿದುಕೊಳ್ಳುತ್ತಿವೆ. ಇದು ತುಂಬಾ ಅಪಾಯಕಾರಿ ಬೆಳವಣಿಗೆ ಎನ್ನಬಹುದು. ಈ ಕುರಿತು ಇಂದಿನ ಯುವ ಜನತೆ ಎಚ್ಚೆತ್ತುಕೊಳ್ಳುವುದು ತೀರ ಅಗತ್ಯವಿದೆ. ಜಾತ್ಯತೀತ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂದು
ಜಾತಿ ಧರ್ಮಗಳೇ ಮೇಲುಗೈ ಸಾಧಿಸುತ್ತಿವೆ. ಆದ್ದರಿಂದ ಎಲ್ಲದಕ್ಕೂ ಪರಿಹಾರ ಇರುವುದು ಸಂವಿಧಾನ ಅಂಶಗಳಲ್ಲ ಎಂದು ಹರೀಶ್ ತಮ್ಮ ಮನದಾಳದ ಮಾತುಗಳು ಹಂಚಿಕೊಳ್ಳುತ್ತಾರೆ.

‘ಜಾತಿ’ ಕುರಿತು ಕನ್ನಡದ ಮೊದಲ ಹಿಪ್‌‌ಹಾಪ್ ರ್‍ಯಾಪ್ ಸಾಂಗ್ ಮಾಡಿರುವ ಹರೀಶ್ ಅವರು ಈಗ ಕೊರೊನಾ ಕಾಲದಲ್ಲಿ ಬಡಜನರು ಅನುಭವಿಸಿದ ಸಂಕಷ್ಟ ಹಾಗೂ ಸರ್ಕಾರದ ಕರಾಳ ನೀತಿಯ ಬಗ್ಗೆ ‘ಮಾಹಾಮಾರಿ ಕಥೆ‘ ಎನ್ನುವ ಹಿಪ್‌‌ಹಾಪ್ ಹಾಡಿನಲ್ಲಿ ಅದ್ಭುತವಾಗಿ ಬಿಚ್ಚಿಟ್ಟಿದ್ದಾರೆ. ಇನ್ನು ‘ರಾಜನೀತಿ‘ ಎನ್ನುವ ಮತ್ತೊಂದು ಹಿಪ್‌‌ಹಾಪ್ ಹಾಡು ಕೆಲವು ದಿನಗಳಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.

ಕೇವಲ ದಲಿತರ ಜೊತೆ ಸಹಪಂಕ್ತಿ ಭೋಜನ ಏರ್ಪಡಿಸಿ ಚಿತ್ರಾನ್ನ ಸೇವಿಸಿದರೆ ಮಾತ್ರಕ್ಕೆ ಜಾತಿ ತಾರತಮ್ಯ, ಅಸ್ಪೃಶ್ಯತೆ ಹೋಗಲಾಡಿಸಲು ಖಂಡಿತ ಸಾಧ್ಯವಿಲ್ಲ. ಅಸ್ಪೃಶ್ಯರ ಜೊತೆಗೆ ಹೆಚ್ಚೆಚ್ಚು ಒಳಗೊಳ್ಳುವಿಕೆಗೆ ಎಲ್ಲರೂ ಮುಂದಾಗಬೇಕು, ಅಸಮಾನತೆ ಬಿಟ್ಟು ಸಮಾನತೆ ಸಮಾಜ ಕಟ್ಟಲು ಒಳಮನಸ್ಸು ಪರಿವರ್ತನೆ ಮಾಡಿಕೊಳ್ಳಬೇಕು, ಅವಾಗಲೇ ಜಾತಿ ತಾರತಮ್ಯ ತೊಲಗಬಹುದು, ‘ಪರಿವರ್ತನೆ ಜಗದ ನಿಯಮ’ ಎನ್ನುವ ಭರವಸೆದೊಂದಿಗೆ ನನ್ನ ಹೋರಾಟ ಮುಂದುವರಿಯುತ್ತದೆ ಎನ್ನುತ್ತಾರೆ ಹರೀಶ್.

ಇದನ್ನೂ ಓದಿ: ಭಾರತದ ಜಾತಿ ವೃಕ್ಷದ ವಿಷಕಾರಿ ಹಣ್ಣು ಖೈರ್ಲಾಂಜಿಯನ್ನು ಮರೆಯಬಾರದು

ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟದ ಕಥಾ ಆಧಾರಿತ ‘ಮಹಾನಾಯಕ’ ಧಾರವಾಹಿ ನಾವು ವಿರೋಧಿಸುವ ಬದಲು ಪ್ರೀತಿ ಹಾಗೂ ಹೆಮ್ಮೆಯಿಂದ ಸ್ವೀಕರಿಸಬೇಕಾಗಿದೆ. ಕನ್ನಡದಲ್ಲಿ ಇದೊಂದು ಅಪರೂಪ ಧಾರವಾಹಿ, ದೇಶದಲ್ಲಿ ಜಾತಿ ಧರ್ಮದ ಹೆಸರಿನಲ್ಲಿ ಕೊಲೆ, ಅತ್ಯಾಚಾರ, ದೌರ್ಜನ್ಯಗಳ ಪ್ರಮಾಣ ದಿನಕಳೆದಂತೆ ಹೆಚ್ಚಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ‘ಮಹಾನಾಯಕ’ ಧಾರವಾಹಿ ಸಮಾಜದಲ್ಲಿ ಬೆಳಕಾಗಿ ಹಲವು ಮನಸ್ಸುಗಳು ಪರಿವರ್ತನೆಗೊಳ್ಳಲಿ ಎಂದು ಆಶಿಸುತ್ತಾರೆ.

ಹರೀಶ್ ಕಾಂಬಳೆ ಅವರು ಮುಂದಿನ ದಿನಗಳಲ್ಲಿ ಕಿರುತೆರೆ, ಸಿನಿಮಾ, ಸಂಗೀತ ಕ್ಷೇತ್ರದಲ್ಲಿ ಅವಕಾಶ ದೊರೆತರೆ ತಮ್ಮ ವಿಶಿಷ್ಟ ಸಂಗೀತ ಕಲೆ ಪ್ರದರ್ಶಿಸುವ ಇಚ್ಛಾಶಕ್ತಿ ಹೊಂದಿದ್ದಾರೆ. ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗದ ಸಂಘ ಸಂಸ್ಥೆಗಳು ಹರೀಶ್ ಅವರ ಕಲೆಯನ್ನು ಗೌರವಿಸಿ ಪ್ರೋತ್ಸಾಹಿಸುತ್ತಿವೆ. ಬಡತನದಲ್ಲಿ ಹುಟ್ಟಿ ಬೆಳೆದ ಹರೀಶ್ ಅವರು ಸ್ವಯಂ ಪ್ರಯತ್ನದಿಂದಲೇ ಈ ಕಲೆಯನ್ನು ಕಲಿತುಕೊಂಡಿರುವುದು ಇನ್ನೊಂದು ವಿಶಿಷ್ಟ ಎನ್ನಬಹುದು.

PC: Harish Kamble/Facebook

ಇದನ್ನೂ ಓದಿ: ಜಾತಿಪದ್ಧತಿಯ ಕಡುವಿರೋಧಿ, ಹೋರಾಟಗಾರ ಸುಧೀರ್ ಧಾವ್ಳೆ

ಅಮೇರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ನಡೆದ ಹೋರಾಟದ ಸಂದರ್ಭದಲ್ಲಿ ಮೊಟ್ಟ ಮೊದಲು ಹಿಪ್‌ಹಾಪ್ ಹಾಡುಗಳು ಹುಟ್ಟು ಪಡೆದಿವೆ. ನಂತರದ ದಿನಗಳಲ್ಲಿ ವಿಶ್ವದಾದ್ಯಂತ ವ್ಯಾಪಿಸಿ ಹೆಚ್ಚು ಪ್ರಸಿ‌ದ್ಧಿ ಪಡೆದಿವೆ. ವಿಶೇಷವಾಗಿ ಅತೀ ಹೆಚ್ಚು ಯುವಜನತೆ ಇಷ್ಟ ಪಡುವ ಹಿಪ್‌ಹಾಪ್ ಹಾಡುಗಳಿಗೆ ಭಾರೀ ಡಿಮ್ಯಾಂಡ್ ಇದೆ. ಇದಕ್ಕೆ ಭಾರತವೂ ಹೊರತಾಗಿಲ್ಲ, ನನಗೂ ಮೊದಲಿನಿಂದಲೂ ತುಂಬಾ ಇಷ್ಟ ಪಡುವ ಸಂಗೀತವಾಗಿದೆ. ಹೀಗಾಗಿ ದೇಶದ ಭವಿಷ್ಯ ರೂಪಿಸುವ ಯುವಜನಾಂಗದ ಪ್ರಿಯವಾದ ಹಿಪ್‌ಹಾಪ್ ಮ್ಯೂಸಿಕ್ ನಾನು ನನ್ನ ‘ಜಾತಿ’ ಹಾಡಿಗೆ ಆಯ್ಕೆ ಮಾಡಿಕೊಂಡು ಪ್ರಯತ್ನಿಸಿದ್ದೇನೆ.

ಹರೀಶ್ ಕಾಂಬಳೆ ಅವರಿಗಿರುವ ಸಾಮಾಜಿಕ ತುಡಿತ ನಿಜಕ್ಕೂ ಮೆಚ್ಚಬೇಕು. ಅವರ ಉದ್ದೇಶ ಹಾಗೂ ಗುರಿಗಳಿಗೆ ನಾವೆಲ್ಲರೂ ಪ್ರೋತ್ಸಾಹಿಸಬೇಕಾಗಿದೆ. ಹಿಪ್‌ಹಾಪ್ ರ್‍ಯಾಪ್‌ ಸಾಂಗ್‌ನಲ್ಲಿ ಅಡಗಿರುವ ಸಮಾಜದ ಚಿಂತನೆ ಬಗ್ಗೆ ನಾವೆಲ್ಲರೂ ಸೂಕ್ಷ್ಮವಾಗಿ ಗ್ರಹಿಸಬೇಕಿದೆ. ಸಮ ಸಮಾಜದ ಪರಿಕಲ್ಪನೆ ಹೊತ್ತು ‘ಎಲೆಮರೆ ಕಾಯಿಯಂತೆ’ ತಮ್ಮ ನಿಸ್ವಾರ್ಥ ಕಲೆಯನ್ನು ಸಂಗೀತ ಲೋಕಕ್ಕೆ ಅರ್ಪಿಸುತ್ತಿರುವ ಪ್ರತಿಭಾವಂತ ಯುವಕ ಹರೀಶ್ ಕಾಂಬಳೆ ಕಾರ್ಯಕ್ಕೆ ಬೆಂಬಲಿಸಿ, ಹಾರೈಸೋಣ.‌‌!!

ಹರೀಶ್ ಕಾಂಬಳೆ ಅವರ ಯುಟ್ಯೂಬ್ ಚಾನಲ್‌ಗೆ ಹೋಗಿ ಅವರಿಗೊಂದು ಶುಭಾಶಯ ಹೇಳಲು ಇಲ್ಲಿ ಕ್ಲಿಕ್‌ ಮಾಡಿ. ಹಾಗೂ ಅವರ ಫೇಸ್‌ಬುಕ್‌ಗೆ ಇಲ್ಲಿ ಕ್ಲಿಕ್ ಮಾಡಿ ತಲುಪಬಹುದು.

-ಬಾಲಾಜಿ ಕುಂಬಾರ, ಚಟ್ನಾಳ

ಇದನ್ನೂ ಓದಿ: ಮೇಲ್ಜಾತಿ ದೌರ್ಜನ್ಯವನ್ನು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ತಂದ ಕಾರಂಚೇಡು ದಲಿತರ ಹತ್ಯಾಕಾಂಡಕ್ಕೆ 35 ವರ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...