ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚಾಗಿ, ದೇಶ ವಿರೋಧಿ, ಬಡವರ ವಿರೋಧಿ ಶಕ್ತಿಗಳು ನಮ್ಮ ದೇಶದಲ್ಲಿ ದ್ವೇಷ ಮತ್ತು ಹಿಂಸೆಯ ವಿಷವನ್ನು ಹರಡುತ್ತಿವೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ.
“ಸ್ವಾತಂತ್ರ್ಯ ಬಂದ 75 ವರ್ಷಗಳ ನಂತರ ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯಕ್ಕೆ ಸಿಲುಕಿದೆ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳು ಹಾಳಾಗಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವವು ತೊಂದರೆಗೊಳಗಾಗುತ್ತದೆ ಎಂದು ಭಾರತದ ಸ್ಥಾಪಕ ಪಿತಾಮಹರು ಊಹಿಸಿರಲಿಲ್ಲ” ಎಂದು ಅವರು ಹೇಳಿದರು.
ಇದನ್ನೂ ಓದಿ: ಅಪರಾಧದ ಮರುವ್ಯಾಖ್ಯಾನ; ಪ್ರಭುತ್ವ, ಪ್ರತಿರೋಧ ಮತ್ತು ಪ್ರಜಾಪ್ರಭುತ್ವ
ಚತ್ತೀಸ್ಘಡದ ಮುಂದಿನ ಹೊಸ ರಾಜಧಾನಿ ನವ ರಾಯಪುರದಲ್ಲಿ ಹೊಸ ಚತ್ತೀಸ್ಘಡ ಅಸೆಂಬ್ಲಿ ಕಟ್ಟಡದ ಅಡಿಪಾಯ ಹಾಕುವ ಸಮಾರಂಭವನ್ನು ಉದ್ದೇಶಿಸಿ ಮಾತನಾಡುವಾಗ ಈ ಮೇಲಿನ ಹೇಳಿಕೆ ನೀಡಿದ್ದಾರೆ.
कांग्रेस अध्यक्षा श्रीमती सोनिया गांधी ने छत्तीसगढ़ के नए विधानसभा भवन के भूमि पूजन के शुभ अवसर पर छत्तीसगढ़ की जनता को हार्दिक शुभकामनाएं दी। pic.twitter.com/ByVIp2H2fl
— Congress (@INCIndia) August 29, 2020
“ಕಳೆದ ಕೆಲವು ವರ್ಷಗಳಿಂದ ನಮ್ಮ ದೇಶವನ್ನು ಹಳಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ನಮ್ಮ ಪ್ರಜಾಪ್ರಭುತ್ವದ ಮುಂದೆ ಹೊಸ ಸವಾಲುಗಳು ಬಂದಿವೆ. ಇಂದು ದೇಶವು ಅಡ್ಡಹಾದಿಯಲ್ಲಿದೆ” ಎಂದು ಅವರು ತಿಳಿಸಿದ್ದಾರೆ.
“ಬಡ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳು ಜನರನ್ನು ಪರಸ್ಪರರ ವಿರುದ್ಧ ಹೋರಾಡುವಂತೆ, ಆಳುವವರು ದ್ವೇಷ ಮತ್ತು ಹಿಂಸೆಯ ವಿಷವನ್ನು ಹರಡುತ್ತಿದ್ದಾರೆ” ಎಂದು ಅವರು ಹೇಳಿದರು.
ಇದನ್ನೂ ಓದಿ: ತುರ್ತು ಪರಿಸ್ಥಿತಿ ಹೇರಿಕೆಯ ನೆನಪು: ಇಂದು ಪ್ರಜಾಪ್ರಭುತ್ವಗಳು ಸಾಯುವ ಬಗೆ ಬದಲಾಗಿದೆ