Homeಮುಖಪುಟಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ

ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ

- Advertisement -
- Advertisement -

ಭಾರತೀಯ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರ ದೌರ್ಜನ್ಯ ನಡೆಸಿದ ಬಳಿಕ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (ಐಒಸಿ)ಯು ಮಾತನಾಡಿದ್ದು, ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದೆ.

”ಕುಸ್ತಿಪಟುಗಳ ಆರೋಪಗಳನ್ನು ಸ್ಥಳೀಯ ಕಾನೂನಿಗೆ ಅನುಗುಣವಾಗಿ ನಿಷ್ಪಕ್ಷಪಾತ, ಕ್ರಿಮಿನಲ್ ತನಿಖೆಯ ಮೂಲಕ ಕ್ರಮ ಜರುಗಿಸಬೇಕು ಎಂದು IOC ಒತ್ತಾಯಿಸುತ್ತದೆ” ಎಂದು IOC ವಕ್ತಾರರು ಸ್ಪೋರ್ಟ್‌ಸ್ಟಾರ್‌ಗೆ ತಿಳಿಸಿದರು.

”ಆರೋಪಿಯ ವಿರುದ್ಧ ತನಿಖೆ ನಡೆಸಿ ನಿರ್ಧಿಷ್ಟ ಕ್ರಮ ಜರುಗಿಸುವ ಜೊತೆಗೆ ಹೆಚ್ಚಿನ ಕ್ರಮಗಳನ್ನು ಅನುಸರಿಸಬೇಕು. ಈ ಪ್ರಕ್ರಿಯೆಯ ಉದ್ದಕ್ಕೂ ಈ ಕ್ರೀಡಾಪಟುಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಸರಿಯಾಗಿ ಪರಿಗಣಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಮತ್ತು ಈ ತನಿಖೆಯನ್ನು ತ್ವರಿತವಾಗಿ ಮುಕ್ತಾಯಗೊಳಿಸಬೇಕು” ಎಂದು ಹೇಳಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧ ಪೊಲೀಸ್ ಕ್ರಮವನ್ನು ಖಂಡಿಸಿದ ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (UWW), ಸಿಂಗ್ ವಿರುದ್ಧ ಸರಿಯಾದ ತನಿಖೆ ನಡೆಯುತ್ತಿಲ್ಲ ಎಂದು ನಿರಾಶೆ ವ್ಯಕ್ತಪಡಿಸಿದ ನಂತರ IOC ಹೇಳಿಕೆ ಬಂದಿದೆ.

”ಭಾರತದಲ್ಲಿ ಕುಸ್ತಿ ಕ್ರೀಡೆಯ ಆಡಳಿತಕ್ಕೆ ಸಂಬಂಧಿಸಿದಂತೆ ಈ ಸಮಸ್ಯೆಯನ್ನು ಪರಿಹರಿಸಲು UWW ಅನ್ನು ಸಮರ್ಥ ಕ್ರೀಡಾ ಪ್ರಾಧಿಕಾರವಾಗಿ IOC ಬೆಂಬಲಿಸುತ್ತದೆ. ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷರು ಪ್ರಸ್ತುತ ಉಸ್ತುವಾರಿ ವಹಿಸುವುದಿಲ್ಲ ಎಂದು ಯುಡಬ್ಲ್ಯೂಡಬ್ಲ್ಯು ನಮಗೆ ತಿಳಿಸಿದೆ” ಎಂದು ಐಒಸಿ ವಕ್ತಾರರು ಸ್ಪೋರ್ಟ್‌ಸ್ಟಾರ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಓಡಿಹೋದ ಕೇಂದ್ರ ಸಚಿವೆ: ‘ತೀಕ್ಷ್ಣ ಪ್ರತಿಕ್ರಿಯೆ’ ಎಂದು ಕಾಂಗ್ರೆಸ್ ಲೇವಡಿ

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಗೆ ಕ್ರೀಡಾಪಟುಗಳನ್ನು ರಕ್ಷಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಐಒಸಿ ಒತ್ತಾಯಿಸಿತು.

ಮಂಗಳವಾರ, ಕುಸ್ತಿಪಟುಗಳು ತಮ್ಮ ದೂರುಗಳ ಬಗ್ಗೆ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಪ್ರತಿಭಟನೆಯ ಸಂಕೇತವಾಗಿ ಒಲಿಂಪಿಕ್ಸ್ ಮತ್ತು ಇತರ ಉನ್ನತ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಗೆದ್ದಿದ್ದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಯೋಜಿಸಿದ್ದರು. ಆದರೆ ರೈತ ಮುಖಂಡ ನರೇಶ್ ಟಿಕಾಯತ್ ಅವರು ಮನವೊಲಿಸಿ ಅದನ್ನು ತಡೆದರು.

ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಮ್ಯಾನ್‌ಹ್ಯಾಂಡ್ ಮಾಡಿ ಬಂಧಿಸಿದರು ಮತ್ತು ಜಂತರ್ ಮಂತರ್‌ನಲ್ಲಿ ಅವರ ಪ್ರತಿಭಟನೆಗೆ ನಿರ್ಬಂಧ ಹೇರಿದರು. ಜಂತರ್ ಮಂತರ್‌ಗೆ ಹಿಂತಿರುಗಲು ಬಿಡುವುದಿಲ್ಲ ಎಂದು ಪೊಲೀಸರು ಹೇಳಿದ್ದು, ಕುಸ್ತಿಪಟುಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಅಂತರಾಷ್ಟ್ರೀಯ ಖಂಡನೆಗಳು ಹರಿದುಬರುತ್ತಿದ್ದರೂ, ಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧದ ಕ್ರಮದ ಬಗ್ಗೆ ಕೇಂದ್ರ ಸರ್ಕಾರ ಏನನ್ನೂ ಹೇಳಿಲ್ಲ. ಬದಲಾಗಿ, ಲೈಂಗಿಕ ಕಿರುಕುಳದ ಆರೋಪಿ ಸಿಂಗ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...