Homeಎಂಟರ್ತೈನ್ಮೆಂಟ್ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ... ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ..

- Advertisement -
- Advertisement -

ಬೆಕ್ಕಣ್ಣ ಯಾಕೋ ಬಲು ಬೇಜಾರಿನ ಮುಖ ಹೊತ್ತು ಮನೆಗೆ ಬಂದಿತು.

“ಏನಾತಲೇ… ಈರುಳ್ಳಿ ಇನ್ನೂ ಆಕಾಶದಾಗೆ ತೇಲಾಡಕಹತ್ತೈತಿ ಅಂತ ಬೇಜಾರಾಗಿಯೇನ್” ಅಂತ ಕೇಳಿದೆ.

‘ಅದಕ್ಯಾಕ್ ನಾ ಬೇಜಾರಾಗ್ಲಿ… ನಾ ಏನ್ ಈರುಳ್ಳಿ ತಿನ್ನಾಂವ ಅಲ್ಲ, ಹಾಲು ಕುಡಿಯಾಂವ. ಈರುಳ್ಳಿ ತಿನ್ನಾಕಿ ನೀ ಅಳಬಕು, ನಾ ಅಲ್ಲ’ ಎಂದು ಮುಗುಮ್ಮಾಗಿ ಉತ್ತರಿಸಿತು.

“ಮತ್ಯಾಕ ಹಿಂಗ ಗಡಗಿ ಮಾರಿ ಮಾಡೀ” ಎಂದು ತುಸು ಅನುನಯಿಸಿದೆ.

“ನಾ ಎಷ್ಟ್ ಬಡಕಂಡೆ… ನನ್ನೂ ಸಾಲಿಗಿ ಹಚ್ಚು, ನಾಕ್ ಅಕ್ಸರ ಕಲೀತೀನಿ ಅಂತ. ನೀ ಕೇಳಲಿಲ್ಲ…. ಪಂಕ್ಚರ್ ಅಂಗಡ್ಯಾಗ ಇಲಿ ಹಿಡಿಯೂ ಕೆಲಸಕ್ಕೆ ಹಚ್ಚಿದಿ. ಸಾಲಿ ಕಲಿತು ಏನ್ ಕಡಿತಿ, ದಗದ ಮಾಡಬಕು ಅಂತ್ಹೇಳಿ ನಾ ಮರಿ ಇದ್ದಾಗೇ ಕೆಲಸಕ್ಕೆ ಹಚ್ಚಿದಿ…ಈಗ ನೋಡು” ಎಂದು ಅಳುಮುಖ ಮಾಡಿತು.

“ಏನಾತಲೇ ಈಗ… ಮತ್ತ ಎಲ್ಲಾರೂ ಸಾಲಿ ಕಲಿತು ಶಾಣೇ ಆಗಿ, ಕಂಪ್ಯೂಟರ್ ಮುಂದ ಕುಂತ್ರ, ಪಂಕ್ಚರ್ ತಿದ್ದೋರು ಯಾರಲೇ… ಬೆಳಗ್ಗಿ ಬೆಳಗ್ಗಿ ಏನ್ ಗೋಳು ಹಚ್ಚಿ ಹೋಗಲೇ” ಎಂದು ಜಬರಿಸಿದೆ.

“ಎದೆ ಸೀಳಿದರೆ ನಾಕ್ ಅಕ್ಸರ ಇಲ್ಲದೋರು, ಪಂಕ್ಚರ್ ಅಂಗಡ್ಯಾಗ ಕೆಲಸ ಮಾಡೋರೆಲ್ಲ ಬೀದೀ ಬದಿ ಪ್ರತಿಭಟನೆ ನಡೆಸ್ಯಾರ ಅಂತ ತೇಜಣ್ಣ ವದರಾಕ ಹತ್ತಿದ್ದ…” ಸುಂಬಳ ಮೇಲೇರಿಸುತ್ತಲೇ ವಿವರಿಸಿತು.

“ಅಂವನ ಕಾರು ಪಂಕ್ಚರ್ ಆದಾಗ ಐಟಿ ಸೆಲ್‍ ವಳಗ ಕುತ್ತೋರು ಬಂದು ತಿದ್ದತಾರೇನು… ಮತ್ತ ಅವನಿಗೆ ವೋಟು ಹಾಕಿದೋರು ಬರೀ ಪಿಎಚ್‍ಡಿ ಮಂದಿ, ಕಂಪ್ಯೂಟರ್ ಕಲಿತ ಮಂದಿ ಅಷ್ಟೇ ಏನು…ನಿನಗ ಗೊತೈತಿಲ್ಲೋ, 2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ… ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ… ಚಾ ಮಾರೂದು ಎಷ್ಟ್ ವಳ್ಳೆ ಕೆಲಸನೋ ಪಂಕ್ಚರ್ ತಿದ್ದೂದೂ ಅಷ್ಟೇ ವಳ್ಳೆ ಕೆಲಸ” ನಾನು ಇಷ್ಟುದ್ದ ಹೇಳಿ ಸಮಾಧಾನಿಸಲು ಯತ್ನಿಸಿದೆ.

“ಆದ್ರ ಚಾ ಮಾರೂ ಮಂದೀನೆ ಬ್ಯಾರೆ ಅಂತ, ಪಂಕ್ಚರ್ ತಿದ್ದೂ ಮಂದೀನೆ ಬ್ಯಾರೆ ಅಂತ. ನನಗೇನ್ ಅಷ್ಟ್ ತಿಳಿಯಂಗಿಲ್ಲ  ಅಂತ ಮಾಡೀಯೇನ್. ಹೋಗ್ಲಿ, ನನ್ನುವು ಎಲ್ಲಾ ಡಾಕ್ಯುಮೆಂಟ್ಸ್ ಸರಿ ಇಟ್ಟೀಯಿಲ್ಲೋ… ಆಮ್ಯಾಗೆ ನಿನ್ ಮುತ್ತಜ್ಜಿ ಎಲ್ಲಿಂದ ಬಂದಾಳ ಅಂತ್ಲೇ ಗೊತ್ತಿಲ್ಲ, ನೀ  ಬ್ಯಾರೆ ಪಂಕ್ಚರ್ ಅಂಗಡಿ ಮಂದಿ ಜೋಡಿ ಕೆಲಸ ಮಾಡಾಂವ, ನೀ ಹಿಂದೂಸ್ಥಾನದಂವ ಅಲ್ಲ ಅಂತೆಲ್ಲ ಹೇಳಿ ಕ್ಯಾಂಪಿಗೆ ಕಳಿಸಬ್ಯಾಡ್ರಿ” ಎನ್ನುತ್ತ ಮನೆಯಲ್ಲಿ ತನ್ನ ಡಾಕ್ಯುಮೆಂಟ್ಸ್ ಹುಡುಕತೊಡಗಿತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...