Homeಎಂಟರ್ತೈನ್ಮೆಂಟ್ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ... ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ..

- Advertisement -
- Advertisement -

ಬೆಕ್ಕಣ್ಣ ಯಾಕೋ ಬಲು ಬೇಜಾರಿನ ಮುಖ ಹೊತ್ತು ಮನೆಗೆ ಬಂದಿತು.

“ಏನಾತಲೇ… ಈರುಳ್ಳಿ ಇನ್ನೂ ಆಕಾಶದಾಗೆ ತೇಲಾಡಕಹತ್ತೈತಿ ಅಂತ ಬೇಜಾರಾಗಿಯೇನ್” ಅಂತ ಕೇಳಿದೆ.

‘ಅದಕ್ಯಾಕ್ ನಾ ಬೇಜಾರಾಗ್ಲಿ… ನಾ ಏನ್ ಈರುಳ್ಳಿ ತಿನ್ನಾಂವ ಅಲ್ಲ, ಹಾಲು ಕುಡಿಯಾಂವ. ಈರುಳ್ಳಿ ತಿನ್ನಾಕಿ ನೀ ಅಳಬಕು, ನಾ ಅಲ್ಲ’ ಎಂದು ಮುಗುಮ್ಮಾಗಿ ಉತ್ತರಿಸಿತು.

“ಮತ್ಯಾಕ ಹಿಂಗ ಗಡಗಿ ಮಾರಿ ಮಾಡೀ” ಎಂದು ತುಸು ಅನುನಯಿಸಿದೆ.

“ನಾ ಎಷ್ಟ್ ಬಡಕಂಡೆ… ನನ್ನೂ ಸಾಲಿಗಿ ಹಚ್ಚು, ನಾಕ್ ಅಕ್ಸರ ಕಲೀತೀನಿ ಅಂತ. ನೀ ಕೇಳಲಿಲ್ಲ…. ಪಂಕ್ಚರ್ ಅಂಗಡ್ಯಾಗ ಇಲಿ ಹಿಡಿಯೂ ಕೆಲಸಕ್ಕೆ ಹಚ್ಚಿದಿ. ಸಾಲಿ ಕಲಿತು ಏನ್ ಕಡಿತಿ, ದಗದ ಮಾಡಬಕು ಅಂತ್ಹೇಳಿ ನಾ ಮರಿ ಇದ್ದಾಗೇ ಕೆಲಸಕ್ಕೆ ಹಚ್ಚಿದಿ…ಈಗ ನೋಡು” ಎಂದು ಅಳುಮುಖ ಮಾಡಿತು.

“ಏನಾತಲೇ ಈಗ… ಮತ್ತ ಎಲ್ಲಾರೂ ಸಾಲಿ ಕಲಿತು ಶಾಣೇ ಆಗಿ, ಕಂಪ್ಯೂಟರ್ ಮುಂದ ಕುಂತ್ರ, ಪಂಕ್ಚರ್ ತಿದ್ದೋರು ಯಾರಲೇ… ಬೆಳಗ್ಗಿ ಬೆಳಗ್ಗಿ ಏನ್ ಗೋಳು ಹಚ್ಚಿ ಹೋಗಲೇ” ಎಂದು ಜಬರಿಸಿದೆ.

“ಎದೆ ಸೀಳಿದರೆ ನಾಕ್ ಅಕ್ಸರ ಇಲ್ಲದೋರು, ಪಂಕ್ಚರ್ ಅಂಗಡ್ಯಾಗ ಕೆಲಸ ಮಾಡೋರೆಲ್ಲ ಬೀದೀ ಬದಿ ಪ್ರತಿಭಟನೆ ನಡೆಸ್ಯಾರ ಅಂತ ತೇಜಣ್ಣ ವದರಾಕ ಹತ್ತಿದ್ದ…” ಸುಂಬಳ ಮೇಲೇರಿಸುತ್ತಲೇ ವಿವರಿಸಿತು.

“ಅಂವನ ಕಾರು ಪಂಕ್ಚರ್ ಆದಾಗ ಐಟಿ ಸೆಲ್‍ ವಳಗ ಕುತ್ತೋರು ಬಂದು ತಿದ್ದತಾರೇನು… ಮತ್ತ ಅವನಿಗೆ ವೋಟು ಹಾಕಿದೋರು ಬರೀ ಪಿಎಚ್‍ಡಿ ಮಂದಿ, ಕಂಪ್ಯೂಟರ್ ಕಲಿತ ಮಂದಿ ಅಷ್ಟೇ ಏನು…ನಿನಗ ಗೊತೈತಿಲ್ಲೋ, 2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ… ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ… ಚಾ ಮಾರೂದು ಎಷ್ಟ್ ವಳ್ಳೆ ಕೆಲಸನೋ ಪಂಕ್ಚರ್ ತಿದ್ದೂದೂ ಅಷ್ಟೇ ವಳ್ಳೆ ಕೆಲಸ” ನಾನು ಇಷ್ಟುದ್ದ ಹೇಳಿ ಸಮಾಧಾನಿಸಲು ಯತ್ನಿಸಿದೆ.

“ಆದ್ರ ಚಾ ಮಾರೂ ಮಂದೀನೆ ಬ್ಯಾರೆ ಅಂತ, ಪಂಕ್ಚರ್ ತಿದ್ದೂ ಮಂದೀನೆ ಬ್ಯಾರೆ ಅಂತ. ನನಗೇನ್ ಅಷ್ಟ್ ತಿಳಿಯಂಗಿಲ್ಲ  ಅಂತ ಮಾಡೀಯೇನ್. ಹೋಗ್ಲಿ, ನನ್ನುವು ಎಲ್ಲಾ ಡಾಕ್ಯುಮೆಂಟ್ಸ್ ಸರಿ ಇಟ್ಟೀಯಿಲ್ಲೋ… ಆಮ್ಯಾಗೆ ನಿನ್ ಮುತ್ತಜ್ಜಿ ಎಲ್ಲಿಂದ ಬಂದಾಳ ಅಂತ್ಲೇ ಗೊತ್ತಿಲ್ಲ, ನೀ  ಬ್ಯಾರೆ ಪಂಕ್ಚರ್ ಅಂಗಡಿ ಮಂದಿ ಜೋಡಿ ಕೆಲಸ ಮಾಡಾಂವ, ನೀ ಹಿಂದೂಸ್ಥಾನದಂವ ಅಲ್ಲ ಅಂತೆಲ್ಲ ಹೇಳಿ ಕ್ಯಾಂಪಿಗೆ ಕಳಿಸಬ್ಯಾಡ್ರಿ” ಎನ್ನುತ್ತ ಮನೆಯಲ್ಲಿ ತನ್ನ ಡಾಕ್ಯುಮೆಂಟ್ಸ್ ಹುಡುಕತೊಡಗಿತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...