Homeಎಂಟರ್ತೈನ್ಮೆಂಟ್ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ... ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ..

- Advertisement -
- Advertisement -

ಬೆಕ್ಕಣ್ಣ ಯಾಕೋ ಬಲು ಬೇಜಾರಿನ ಮುಖ ಹೊತ್ತು ಮನೆಗೆ ಬಂದಿತು.

“ಏನಾತಲೇ… ಈರುಳ್ಳಿ ಇನ್ನೂ ಆಕಾಶದಾಗೆ ತೇಲಾಡಕಹತ್ತೈತಿ ಅಂತ ಬೇಜಾರಾಗಿಯೇನ್” ಅಂತ ಕೇಳಿದೆ.

‘ಅದಕ್ಯಾಕ್ ನಾ ಬೇಜಾರಾಗ್ಲಿ… ನಾ ಏನ್ ಈರುಳ್ಳಿ ತಿನ್ನಾಂವ ಅಲ್ಲ, ಹಾಲು ಕುಡಿಯಾಂವ. ಈರುಳ್ಳಿ ತಿನ್ನಾಕಿ ನೀ ಅಳಬಕು, ನಾ ಅಲ್ಲ’ ಎಂದು ಮುಗುಮ್ಮಾಗಿ ಉತ್ತರಿಸಿತು.

“ಮತ್ಯಾಕ ಹಿಂಗ ಗಡಗಿ ಮಾರಿ ಮಾಡೀ” ಎಂದು ತುಸು ಅನುನಯಿಸಿದೆ.

“ನಾ ಎಷ್ಟ್ ಬಡಕಂಡೆ… ನನ್ನೂ ಸಾಲಿಗಿ ಹಚ್ಚು, ನಾಕ್ ಅಕ್ಸರ ಕಲೀತೀನಿ ಅಂತ. ನೀ ಕೇಳಲಿಲ್ಲ…. ಪಂಕ್ಚರ್ ಅಂಗಡ್ಯಾಗ ಇಲಿ ಹಿಡಿಯೂ ಕೆಲಸಕ್ಕೆ ಹಚ್ಚಿದಿ. ಸಾಲಿ ಕಲಿತು ಏನ್ ಕಡಿತಿ, ದಗದ ಮಾಡಬಕು ಅಂತ್ಹೇಳಿ ನಾ ಮರಿ ಇದ್ದಾಗೇ ಕೆಲಸಕ್ಕೆ ಹಚ್ಚಿದಿ…ಈಗ ನೋಡು” ಎಂದು ಅಳುಮುಖ ಮಾಡಿತು.

“ಏನಾತಲೇ ಈಗ… ಮತ್ತ ಎಲ್ಲಾರೂ ಸಾಲಿ ಕಲಿತು ಶಾಣೇ ಆಗಿ, ಕಂಪ್ಯೂಟರ್ ಮುಂದ ಕುಂತ್ರ, ಪಂಕ್ಚರ್ ತಿದ್ದೋರು ಯಾರಲೇ… ಬೆಳಗ್ಗಿ ಬೆಳಗ್ಗಿ ಏನ್ ಗೋಳು ಹಚ್ಚಿ ಹೋಗಲೇ” ಎಂದು ಜಬರಿಸಿದೆ.

“ಎದೆ ಸೀಳಿದರೆ ನಾಕ್ ಅಕ್ಸರ ಇಲ್ಲದೋರು, ಪಂಕ್ಚರ್ ಅಂಗಡ್ಯಾಗ ಕೆಲಸ ಮಾಡೋರೆಲ್ಲ ಬೀದೀ ಬದಿ ಪ್ರತಿಭಟನೆ ನಡೆಸ್ಯಾರ ಅಂತ ತೇಜಣ್ಣ ವದರಾಕ ಹತ್ತಿದ್ದ…” ಸುಂಬಳ ಮೇಲೇರಿಸುತ್ತಲೇ ವಿವರಿಸಿತು.

“ಅಂವನ ಕಾರು ಪಂಕ್ಚರ್ ಆದಾಗ ಐಟಿ ಸೆಲ್‍ ವಳಗ ಕುತ್ತೋರು ಬಂದು ತಿದ್ದತಾರೇನು… ಮತ್ತ ಅವನಿಗೆ ವೋಟು ಹಾಕಿದೋರು ಬರೀ ಪಿಎಚ್‍ಡಿ ಮಂದಿ, ಕಂಪ್ಯೂಟರ್ ಕಲಿತ ಮಂದಿ ಅಷ್ಟೇ ಏನು…ನಿನಗ ಗೊತೈತಿಲ್ಲೋ, 2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ… ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ… ಚಾ ಮಾರೂದು ಎಷ್ಟ್ ವಳ್ಳೆ ಕೆಲಸನೋ ಪಂಕ್ಚರ್ ತಿದ್ದೂದೂ ಅಷ್ಟೇ ವಳ್ಳೆ ಕೆಲಸ” ನಾನು ಇಷ್ಟುದ್ದ ಹೇಳಿ ಸಮಾಧಾನಿಸಲು ಯತ್ನಿಸಿದೆ.

“ಆದ್ರ ಚಾ ಮಾರೂ ಮಂದೀನೆ ಬ್ಯಾರೆ ಅಂತ, ಪಂಕ್ಚರ್ ತಿದ್ದೂ ಮಂದೀನೆ ಬ್ಯಾರೆ ಅಂತ. ನನಗೇನ್ ಅಷ್ಟ್ ತಿಳಿಯಂಗಿಲ್ಲ  ಅಂತ ಮಾಡೀಯೇನ್. ಹೋಗ್ಲಿ, ನನ್ನುವು ಎಲ್ಲಾ ಡಾಕ್ಯುಮೆಂಟ್ಸ್ ಸರಿ ಇಟ್ಟೀಯಿಲ್ಲೋ… ಆಮ್ಯಾಗೆ ನಿನ್ ಮುತ್ತಜ್ಜಿ ಎಲ್ಲಿಂದ ಬಂದಾಳ ಅಂತ್ಲೇ ಗೊತ್ತಿಲ್ಲ, ನೀ  ಬ್ಯಾರೆ ಪಂಕ್ಚರ್ ಅಂಗಡಿ ಮಂದಿ ಜೋಡಿ ಕೆಲಸ ಮಾಡಾಂವ, ನೀ ಹಿಂದೂಸ್ಥಾನದಂವ ಅಲ್ಲ ಅಂತೆಲ್ಲ ಹೇಳಿ ಕ್ಯಾಂಪಿಗೆ ಕಳಿಸಬ್ಯಾಡ್ರಿ” ಎನ್ನುತ್ತ ಮನೆಯಲ್ಲಿ ತನ್ನ ಡಾಕ್ಯುಮೆಂಟ್ಸ್ ಹುಡುಕತೊಡಗಿತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...