Homeಎಂಟರ್ತೈನ್ಮೆಂಟ್ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ... ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ..

- Advertisement -
- Advertisement -

ಬೆಕ್ಕಣ್ಣ ಯಾಕೋ ಬಲು ಬೇಜಾರಿನ ಮುಖ ಹೊತ್ತು ಮನೆಗೆ ಬಂದಿತು.

“ಏನಾತಲೇ… ಈರುಳ್ಳಿ ಇನ್ನೂ ಆಕಾಶದಾಗೆ ತೇಲಾಡಕಹತ್ತೈತಿ ಅಂತ ಬೇಜಾರಾಗಿಯೇನ್” ಅಂತ ಕೇಳಿದೆ.

‘ಅದಕ್ಯಾಕ್ ನಾ ಬೇಜಾರಾಗ್ಲಿ… ನಾ ಏನ್ ಈರುಳ್ಳಿ ತಿನ್ನಾಂವ ಅಲ್ಲ, ಹಾಲು ಕುಡಿಯಾಂವ. ಈರುಳ್ಳಿ ತಿನ್ನಾಕಿ ನೀ ಅಳಬಕು, ನಾ ಅಲ್ಲ’ ಎಂದು ಮುಗುಮ್ಮಾಗಿ ಉತ್ತರಿಸಿತು.

“ಮತ್ಯಾಕ ಹಿಂಗ ಗಡಗಿ ಮಾರಿ ಮಾಡೀ” ಎಂದು ತುಸು ಅನುನಯಿಸಿದೆ.

“ನಾ ಎಷ್ಟ್ ಬಡಕಂಡೆ… ನನ್ನೂ ಸಾಲಿಗಿ ಹಚ್ಚು, ನಾಕ್ ಅಕ್ಸರ ಕಲೀತೀನಿ ಅಂತ. ನೀ ಕೇಳಲಿಲ್ಲ…. ಪಂಕ್ಚರ್ ಅಂಗಡ್ಯಾಗ ಇಲಿ ಹಿಡಿಯೂ ಕೆಲಸಕ್ಕೆ ಹಚ್ಚಿದಿ. ಸಾಲಿ ಕಲಿತು ಏನ್ ಕಡಿತಿ, ದಗದ ಮಾಡಬಕು ಅಂತ್ಹೇಳಿ ನಾ ಮರಿ ಇದ್ದಾಗೇ ಕೆಲಸಕ್ಕೆ ಹಚ್ಚಿದಿ…ಈಗ ನೋಡು” ಎಂದು ಅಳುಮುಖ ಮಾಡಿತು.

“ಏನಾತಲೇ ಈಗ… ಮತ್ತ ಎಲ್ಲಾರೂ ಸಾಲಿ ಕಲಿತು ಶಾಣೇ ಆಗಿ, ಕಂಪ್ಯೂಟರ್ ಮುಂದ ಕುಂತ್ರ, ಪಂಕ್ಚರ್ ತಿದ್ದೋರು ಯಾರಲೇ… ಬೆಳಗ್ಗಿ ಬೆಳಗ್ಗಿ ಏನ್ ಗೋಳು ಹಚ್ಚಿ ಹೋಗಲೇ” ಎಂದು ಜಬರಿಸಿದೆ.

“ಎದೆ ಸೀಳಿದರೆ ನಾಕ್ ಅಕ್ಸರ ಇಲ್ಲದೋರು, ಪಂಕ್ಚರ್ ಅಂಗಡ್ಯಾಗ ಕೆಲಸ ಮಾಡೋರೆಲ್ಲ ಬೀದೀ ಬದಿ ಪ್ರತಿಭಟನೆ ನಡೆಸ್ಯಾರ ಅಂತ ತೇಜಣ್ಣ ವದರಾಕ ಹತ್ತಿದ್ದ…” ಸುಂಬಳ ಮೇಲೇರಿಸುತ್ತಲೇ ವಿವರಿಸಿತು.

“ಅಂವನ ಕಾರು ಪಂಕ್ಚರ್ ಆದಾಗ ಐಟಿ ಸೆಲ್‍ ವಳಗ ಕುತ್ತೋರು ಬಂದು ತಿದ್ದತಾರೇನು… ಮತ್ತ ಅವನಿಗೆ ವೋಟು ಹಾಕಿದೋರು ಬರೀ ಪಿಎಚ್‍ಡಿ ಮಂದಿ, ಕಂಪ್ಯೂಟರ್ ಕಲಿತ ಮಂದಿ ಅಷ್ಟೇ ಏನು…ನಿನಗ ಗೊತೈತಿಲ್ಲೋ, 2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ… ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ… ಚಾ ಮಾರೂದು ಎಷ್ಟ್ ವಳ್ಳೆ ಕೆಲಸನೋ ಪಂಕ್ಚರ್ ತಿದ್ದೂದೂ ಅಷ್ಟೇ ವಳ್ಳೆ ಕೆಲಸ” ನಾನು ಇಷ್ಟುದ್ದ ಹೇಳಿ ಸಮಾಧಾನಿಸಲು ಯತ್ನಿಸಿದೆ.

“ಆದ್ರ ಚಾ ಮಾರೂ ಮಂದೀನೆ ಬ್ಯಾರೆ ಅಂತ, ಪಂಕ್ಚರ್ ತಿದ್ದೂ ಮಂದೀನೆ ಬ್ಯಾರೆ ಅಂತ. ನನಗೇನ್ ಅಷ್ಟ್ ತಿಳಿಯಂಗಿಲ್ಲ  ಅಂತ ಮಾಡೀಯೇನ್. ಹೋಗ್ಲಿ, ನನ್ನುವು ಎಲ್ಲಾ ಡಾಕ್ಯುಮೆಂಟ್ಸ್ ಸರಿ ಇಟ್ಟೀಯಿಲ್ಲೋ… ಆಮ್ಯಾಗೆ ನಿನ್ ಮುತ್ತಜ್ಜಿ ಎಲ್ಲಿಂದ ಬಂದಾಳ ಅಂತ್ಲೇ ಗೊತ್ತಿಲ್ಲ, ನೀ  ಬ್ಯಾರೆ ಪಂಕ್ಚರ್ ಅಂಗಡಿ ಮಂದಿ ಜೋಡಿ ಕೆಲಸ ಮಾಡಾಂವ, ನೀ ಹಿಂದೂಸ್ಥಾನದಂವ ಅಲ್ಲ ಅಂತೆಲ್ಲ ಹೇಳಿ ಕ್ಯಾಂಪಿಗೆ ಕಳಿಸಬ್ಯಾಡ್ರಿ” ಎನ್ನುತ್ತ ಮನೆಯಲ್ಲಿ ತನ್ನ ಡಾಕ್ಯುಮೆಂಟ್ಸ್ ಹುಡುಕತೊಡಗಿತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...