Homeಎಂಟರ್ತೈನ್ಮೆಂಟ್ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ... ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ..

- Advertisement -
- Advertisement -

ಬೆಕ್ಕಣ್ಣ ಯಾಕೋ ಬಲು ಬೇಜಾರಿನ ಮುಖ ಹೊತ್ತು ಮನೆಗೆ ಬಂದಿತು.

“ಏನಾತಲೇ… ಈರುಳ್ಳಿ ಇನ್ನೂ ಆಕಾಶದಾಗೆ ತೇಲಾಡಕಹತ್ತೈತಿ ಅಂತ ಬೇಜಾರಾಗಿಯೇನ್” ಅಂತ ಕೇಳಿದೆ.

‘ಅದಕ್ಯಾಕ್ ನಾ ಬೇಜಾರಾಗ್ಲಿ… ನಾ ಏನ್ ಈರುಳ್ಳಿ ತಿನ್ನಾಂವ ಅಲ್ಲ, ಹಾಲು ಕುಡಿಯಾಂವ. ಈರುಳ್ಳಿ ತಿನ್ನಾಕಿ ನೀ ಅಳಬಕು, ನಾ ಅಲ್ಲ’ ಎಂದು ಮುಗುಮ್ಮಾಗಿ ಉತ್ತರಿಸಿತು.

“ಮತ್ಯಾಕ ಹಿಂಗ ಗಡಗಿ ಮಾರಿ ಮಾಡೀ” ಎಂದು ತುಸು ಅನುನಯಿಸಿದೆ.

“ನಾ ಎಷ್ಟ್ ಬಡಕಂಡೆ… ನನ್ನೂ ಸಾಲಿಗಿ ಹಚ್ಚು, ನಾಕ್ ಅಕ್ಸರ ಕಲೀತೀನಿ ಅಂತ. ನೀ ಕೇಳಲಿಲ್ಲ…. ಪಂಕ್ಚರ್ ಅಂಗಡ್ಯಾಗ ಇಲಿ ಹಿಡಿಯೂ ಕೆಲಸಕ್ಕೆ ಹಚ್ಚಿದಿ. ಸಾಲಿ ಕಲಿತು ಏನ್ ಕಡಿತಿ, ದಗದ ಮಾಡಬಕು ಅಂತ್ಹೇಳಿ ನಾ ಮರಿ ಇದ್ದಾಗೇ ಕೆಲಸಕ್ಕೆ ಹಚ್ಚಿದಿ…ಈಗ ನೋಡು” ಎಂದು ಅಳುಮುಖ ಮಾಡಿತು.

“ಏನಾತಲೇ ಈಗ… ಮತ್ತ ಎಲ್ಲಾರೂ ಸಾಲಿ ಕಲಿತು ಶಾಣೇ ಆಗಿ, ಕಂಪ್ಯೂಟರ್ ಮುಂದ ಕುಂತ್ರ, ಪಂಕ್ಚರ್ ತಿದ್ದೋರು ಯಾರಲೇ… ಬೆಳಗ್ಗಿ ಬೆಳಗ್ಗಿ ಏನ್ ಗೋಳು ಹಚ್ಚಿ ಹೋಗಲೇ” ಎಂದು ಜಬರಿಸಿದೆ.

“ಎದೆ ಸೀಳಿದರೆ ನಾಕ್ ಅಕ್ಸರ ಇಲ್ಲದೋರು, ಪಂಕ್ಚರ್ ಅಂಗಡ್ಯಾಗ ಕೆಲಸ ಮಾಡೋರೆಲ್ಲ ಬೀದೀ ಬದಿ ಪ್ರತಿಭಟನೆ ನಡೆಸ್ಯಾರ ಅಂತ ತೇಜಣ್ಣ ವದರಾಕ ಹತ್ತಿದ್ದ…” ಸುಂಬಳ ಮೇಲೇರಿಸುತ್ತಲೇ ವಿವರಿಸಿತು.

“ಅಂವನ ಕಾರು ಪಂಕ್ಚರ್ ಆದಾಗ ಐಟಿ ಸೆಲ್‍ ವಳಗ ಕುತ್ತೋರು ಬಂದು ತಿದ್ದತಾರೇನು… ಮತ್ತ ಅವನಿಗೆ ವೋಟು ಹಾಕಿದೋರು ಬರೀ ಪಿಎಚ್‍ಡಿ ಮಂದಿ, ಕಂಪ್ಯೂಟರ್ ಕಲಿತ ಮಂದಿ ಅಷ್ಟೇ ಏನು…ನಿನಗ ಗೊತೈತಿಲ್ಲೋ, 2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ… ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ… ಚಾ ಮಾರೂದು ಎಷ್ಟ್ ವಳ್ಳೆ ಕೆಲಸನೋ ಪಂಕ್ಚರ್ ತಿದ್ದೂದೂ ಅಷ್ಟೇ ವಳ್ಳೆ ಕೆಲಸ” ನಾನು ಇಷ್ಟುದ್ದ ಹೇಳಿ ಸಮಾಧಾನಿಸಲು ಯತ್ನಿಸಿದೆ.

“ಆದ್ರ ಚಾ ಮಾರೂ ಮಂದೀನೆ ಬ್ಯಾರೆ ಅಂತ, ಪಂಕ್ಚರ್ ತಿದ್ದೂ ಮಂದೀನೆ ಬ್ಯಾರೆ ಅಂತ. ನನಗೇನ್ ಅಷ್ಟ್ ತಿಳಿಯಂಗಿಲ್ಲ  ಅಂತ ಮಾಡೀಯೇನ್. ಹೋಗ್ಲಿ, ನನ್ನುವು ಎಲ್ಲಾ ಡಾಕ್ಯುಮೆಂಟ್ಸ್ ಸರಿ ಇಟ್ಟೀಯಿಲ್ಲೋ… ಆಮ್ಯಾಗೆ ನಿನ್ ಮುತ್ತಜ್ಜಿ ಎಲ್ಲಿಂದ ಬಂದಾಳ ಅಂತ್ಲೇ ಗೊತ್ತಿಲ್ಲ, ನೀ  ಬ್ಯಾರೆ ಪಂಕ್ಚರ್ ಅಂಗಡಿ ಮಂದಿ ಜೋಡಿ ಕೆಲಸ ಮಾಡಾಂವ, ನೀ ಹಿಂದೂಸ್ಥಾನದಂವ ಅಲ್ಲ ಅಂತೆಲ್ಲ ಹೇಳಿ ಕ್ಯಾಂಪಿಗೆ ಕಳಿಸಬ್ಯಾಡ್ರಿ” ಎನ್ನುತ್ತ ಮನೆಯಲ್ಲಿ ತನ್ನ ಡಾಕ್ಯುಮೆಂಟ್ಸ್ ಹುಡುಕತೊಡಗಿತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...