Homeಎಂಟರ್ತೈನ್ಮೆಂಟ್ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

ಚಾ ಮತ್ತು ಪಂಕ್ಚರ್‌: ಬೆಕ್ಕಣ್ಣನಿಗೂ ದಾಖಲೆಗಳ ಚಿಂತೆ!

2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ... ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ..

- Advertisement -
- Advertisement -

ಬೆಕ್ಕಣ್ಣ ಯಾಕೋ ಬಲು ಬೇಜಾರಿನ ಮುಖ ಹೊತ್ತು ಮನೆಗೆ ಬಂದಿತು.

“ಏನಾತಲೇ… ಈರುಳ್ಳಿ ಇನ್ನೂ ಆಕಾಶದಾಗೆ ತೇಲಾಡಕಹತ್ತೈತಿ ಅಂತ ಬೇಜಾರಾಗಿಯೇನ್” ಅಂತ ಕೇಳಿದೆ.

‘ಅದಕ್ಯಾಕ್ ನಾ ಬೇಜಾರಾಗ್ಲಿ… ನಾ ಏನ್ ಈರುಳ್ಳಿ ತಿನ್ನಾಂವ ಅಲ್ಲ, ಹಾಲು ಕುಡಿಯಾಂವ. ಈರುಳ್ಳಿ ತಿನ್ನಾಕಿ ನೀ ಅಳಬಕು, ನಾ ಅಲ್ಲ’ ಎಂದು ಮುಗುಮ್ಮಾಗಿ ಉತ್ತರಿಸಿತು.

“ಮತ್ಯಾಕ ಹಿಂಗ ಗಡಗಿ ಮಾರಿ ಮಾಡೀ” ಎಂದು ತುಸು ಅನುನಯಿಸಿದೆ.

“ನಾ ಎಷ್ಟ್ ಬಡಕಂಡೆ… ನನ್ನೂ ಸಾಲಿಗಿ ಹಚ್ಚು, ನಾಕ್ ಅಕ್ಸರ ಕಲೀತೀನಿ ಅಂತ. ನೀ ಕೇಳಲಿಲ್ಲ…. ಪಂಕ್ಚರ್ ಅಂಗಡ್ಯಾಗ ಇಲಿ ಹಿಡಿಯೂ ಕೆಲಸಕ್ಕೆ ಹಚ್ಚಿದಿ. ಸಾಲಿ ಕಲಿತು ಏನ್ ಕಡಿತಿ, ದಗದ ಮಾಡಬಕು ಅಂತ್ಹೇಳಿ ನಾ ಮರಿ ಇದ್ದಾಗೇ ಕೆಲಸಕ್ಕೆ ಹಚ್ಚಿದಿ…ಈಗ ನೋಡು” ಎಂದು ಅಳುಮುಖ ಮಾಡಿತು.

“ಏನಾತಲೇ ಈಗ… ಮತ್ತ ಎಲ್ಲಾರೂ ಸಾಲಿ ಕಲಿತು ಶಾಣೇ ಆಗಿ, ಕಂಪ್ಯೂಟರ್ ಮುಂದ ಕುಂತ್ರ, ಪಂಕ್ಚರ್ ತಿದ್ದೋರು ಯಾರಲೇ… ಬೆಳಗ್ಗಿ ಬೆಳಗ್ಗಿ ಏನ್ ಗೋಳು ಹಚ್ಚಿ ಹೋಗಲೇ” ಎಂದು ಜಬರಿಸಿದೆ.

“ಎದೆ ಸೀಳಿದರೆ ನಾಕ್ ಅಕ್ಸರ ಇಲ್ಲದೋರು, ಪಂಕ್ಚರ್ ಅಂಗಡ್ಯಾಗ ಕೆಲಸ ಮಾಡೋರೆಲ್ಲ ಬೀದೀ ಬದಿ ಪ್ರತಿಭಟನೆ ನಡೆಸ್ಯಾರ ಅಂತ ತೇಜಣ್ಣ ವದರಾಕ ಹತ್ತಿದ್ದ…” ಸುಂಬಳ ಮೇಲೇರಿಸುತ್ತಲೇ ವಿವರಿಸಿತು.

“ಅಂವನ ಕಾರು ಪಂಕ್ಚರ್ ಆದಾಗ ಐಟಿ ಸೆಲ್‍ ವಳಗ ಕುತ್ತೋರು ಬಂದು ತಿದ್ದತಾರೇನು… ಮತ್ತ ಅವನಿಗೆ ವೋಟು ಹಾಕಿದೋರು ಬರೀ ಪಿಎಚ್‍ಡಿ ಮಂದಿ, ಕಂಪ್ಯೂಟರ್ ಕಲಿತ ಮಂದಿ ಅಷ್ಟೇ ಏನು…ನಿನಗ ಗೊತೈತಿಲ್ಲೋ, 2011 ಸೆನ್ಸಸ್ ಪ್ರಕಾರ ಬೆಂಗಳೂರು ದಕ್ಷಿಣದಾಗೆ 63 ಸಾವಿರ ಮಂದಿ ಅನಕ್ಷರಸ್ಥರು ಅದಾರ… ಅವನಿಗೆ ವೋಟು ಹಾಕಿದವ್ರಲ್ಲಿ ಒಂದ್ ಹತ್ ಪರ್ಸೆಂಟಾದ್ರೂ ಎದೆ ಸೀಳಿದ್ರ ಒಂದ್ ಅಕ್ಸರ ಇಲ್ಲದೋರೆ ಅದಾರ. ಅಂವ ಮಂಗ್ಯಾನಂಥಂವ ಹೇಳ್ತಾನ ಅಂತ ನೀನೂ ಅಳ್ತೀಯಲ್ಲಲ್ಲೇ… ಚಾ ಮಾರೂದು ಎಷ್ಟ್ ವಳ್ಳೆ ಕೆಲಸನೋ ಪಂಕ್ಚರ್ ತಿದ್ದೂದೂ ಅಷ್ಟೇ ವಳ್ಳೆ ಕೆಲಸ” ನಾನು ಇಷ್ಟುದ್ದ ಹೇಳಿ ಸಮಾಧಾನಿಸಲು ಯತ್ನಿಸಿದೆ.

“ಆದ್ರ ಚಾ ಮಾರೂ ಮಂದೀನೆ ಬ್ಯಾರೆ ಅಂತ, ಪಂಕ್ಚರ್ ತಿದ್ದೂ ಮಂದೀನೆ ಬ್ಯಾರೆ ಅಂತ. ನನಗೇನ್ ಅಷ್ಟ್ ತಿಳಿಯಂಗಿಲ್ಲ  ಅಂತ ಮಾಡೀಯೇನ್. ಹೋಗ್ಲಿ, ನನ್ನುವು ಎಲ್ಲಾ ಡಾಕ್ಯುಮೆಂಟ್ಸ್ ಸರಿ ಇಟ್ಟೀಯಿಲ್ಲೋ… ಆಮ್ಯಾಗೆ ನಿನ್ ಮುತ್ತಜ್ಜಿ ಎಲ್ಲಿಂದ ಬಂದಾಳ ಅಂತ್ಲೇ ಗೊತ್ತಿಲ್ಲ, ನೀ  ಬ್ಯಾರೆ ಪಂಕ್ಚರ್ ಅಂಗಡಿ ಮಂದಿ ಜೋಡಿ ಕೆಲಸ ಮಾಡಾಂವ, ನೀ ಹಿಂದೂಸ್ಥಾನದಂವ ಅಲ್ಲ ಅಂತೆಲ್ಲ ಹೇಳಿ ಕ್ಯಾಂಪಿಗೆ ಕಳಿಸಬ್ಯಾಡ್ರಿ” ಎನ್ನುತ್ತ ಮನೆಯಲ್ಲಿ ತನ್ನ ಡಾಕ್ಯುಮೆಂಟ್ಸ್ ಹುಡುಕತೊಡಗಿತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...